Friday, August 14

ವಿದೇಶ

ಗ್ರಾಮಗಳ ಬೆಳವಣಿಗೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ಗ್ರಾಮಗಳ ಬೆಳವಣಿಗೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳನ್ನು ನಿರ್ಮಿಸಲು ನಿಯಮಗಳ ಸುತ್ತೋಲೆಯನ್ನು ಸರ್ಕಾರ ಹೊರಡಿಸಿದೆ.ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಗಳು, ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಬಡಾವಣೆ ನಕ್ಷೆಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳಲು ಅಭಿವೃದ್ಧಿದಾರರು ನಮೂನೆ-1ರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಗೆ ಸಲ್ಲಿಸಬೇಕು.ವಿನ್ಯಾಸ ನಕ್ಷೆಯ ಪ್ರಕಾರ ಬಡಾವಣೆಯ ಮಾಲೀಕರು ಸಂಬಂಧಿಸಿದ ಗ್ರಾಮ ಪಂಚಾಯತಿಗೆ ವಿನ್ಯಾಸ ನಕ್ಷೆಯ ಪ್ರಕಾರ ರಸ್ತೆಗಳ ಅಗಲೀಕರಣಕ್ಕೆ ಮೀಸಲಿರಿಸಿದ ರಸ್ತೆಗಳು ಸೇರಿದಂತೆ ರಸ್ತೆಗಳು, ಪಾರ್ಕ್ಗಳು, ವಾಹನ ನಿಲ್ದಾಣಗಳು, ನಾಗರೀಕ ಸೌಲಭ್ಯದ ಪ್ರದೇಶಗಳ...

ನೀವು ನಾಳೆ ಅಪ್ಪಿ ತಪ್ಪಿ ಮುಖ್ಯಮಂತ್ರಿ ಆದರೆ ರಾಜ್ಯವನ್ನು ಹೇಗೆ ಮುನ್ನಡೆಸುತ್ತೀರಿ? ಡಿಕೆಶಿಗೆ ಅಶೋಕ್ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಲನಚಿತ್ರ ಕಲಾವಿದರಿಗೆ ನಟ್ಟು ಬೋಲ್ಟು ಟೈಟು ಮಾಡ್ತೀನಿ ಅನ್ನೋ ಧಮ್ಕಿ ಹಾಕೋಕೆ ಧೈರ್ಯ ಇದೆ. ಸಿಎಂ ಪುತ್ರ ಯತೀಂದ್ರ ಅವರಿಗೆ ಒಂದು ನೋಟೀಸು ಕೊಡೋ ಧೈರ್ಯನೂ ಡಿಸಿಎಂ ಡಿ.ಕೆ.ಶಿವಕುಮಾರ್'ಗೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.ಶಾಸಕರಿಗೆ ತಗ್ಗಿ-ಬಗ್ಗಿ ನಡೀಬೇಕು ಅಂತ ಧಮ್ಕಿ ಹಾಕೋ ಧೈರ್ಯ ಇದೆ. ಕಾರ್ಯಕರ್ತರಿಗೆ "ನಿಮ್ಮ ಛತ್ರಿ ಬುದ್ಧಿ ಗೊತ್ತು" ಅಂತ ಆವಾಜ್ ಹಾಕೋಕೆ ಧೈರ್ಯ ಇದೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರಿಗೆ ಒಂದು ನೋಟೀಸು ಕೊಡೋ ಧೈರ್ಯನೂ ಡಿಸಿಎಂ ಡಿ.ಕೆ.ಶಿವಕುಮಾರ್'ಗೆ ಇಲ್ಲವೇ ಎಂದು ಅಶೋಕ್ ಸಾಮಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.'ಎಲ್ಲದಕ್ಕೂ ಡೆಲ್ಲಿ ಹೈಕಮಾಂಡ್ ಕಡೆ ಮುಖ ಮಾಡುವ ನೀವು ನಾಳೆ ಅಪ್ಪಿ ತಪ್ಪಿ ಮುಖ್ಯಮಂತ್ರಿ ಆದರೆ ರಾಜ್ಯವನ್ನು ಹೇಗೆ ಮುನ್ನಡೆಸುತ್ತೀರಿ ಡಿ.ಕೆ.ಶಿವಕುಮಾರ್ ಅವರೇ?' ಎಂದು 'X'ನಲ್ಲಿ ಪ್ರಶ್ನಿಸಿರುವ ಅಶೋಕ್, ದಿವಂಗತ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ಆಗಿದ್ದರೂ ಸೋನಿಯಾ ಗಾಂಧಿ ಅವರೇ ತಮ್ಮ ಕೈಯಲ್ಲಿ ಕೀಲಿ ಇಟ್ಟುಕೊಂಡಿದ್ದಂತೆ, ಅಕಸ್ಮಾತ್ ತಾವು ಮ...
ನ್ಯಾ.ಸಂತೋಷ್ ಹೆಗ್ಡೆ RSS ವಕ್ತಾರರೇ? ರಮೇಶ್ ಬಾಬು ಪ್ರಶ್ನೆ

ನ್ಯಾ.ಸಂತೋಷ್ ಹೆಗ್ಡೆ RSS ವಕ್ತಾರರೇ? ರಮೇಶ್ ಬಾಬು ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: RSS ಮೇಲಿನ ನಿರ್ಬಂಧ ಕುರಿತ ಖಾಸಗಿ ಚಾನೆಲ್ ಗೆ ಸಂದರ್ಶನ ನೀಡಿರುವ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. RSS ಬ್ಯಾನ್ ಮಾಡುವುದಾದರೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬಹುದಲ್ಲವೇ ಎಂಬ ನ್ಯಾಯಮೂರ್ತಿ ಸಂತೋಷ ಹೆಗ್ಡೆಯವರ ಹೇಳಿಕೆಯು ಅವರ ದ್ವಂದ್ವ ವ್ಯಕ್ತಿತ್ವವನ್ನು ತೋರಿಸಿದಂತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ರಮೇಶ್ ಪ್ರತಿಕ್ರಿಯಿಸಿದ್ದಾರೆ.ವಕೀಲರೂ ಆದ ರಮೇಶ್ ಬಾಬು ಶನಿವಾರ ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿ ಗಮನಸೆಳೆಯಿತು. ಸ್ವತಂತ್ರ ಪೂರ್ವದಲ್ಲಿ ಎರಡು ಬಾರಿ ಮತ್ತು ಸ್ವತಂತ್ರಾ ನಂತರ ಮೂರು ಬಾರಿ ಬ್ಯಾನ್ ಗೆ ಒಳಗಾಗಿದ್ದ ಸಂಘ ಪರಿವಾರದ ಪರವಾಗಿ ಸಮರ್ಥ ವಕ್ತಾರರಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ಸಂತೋಷ ಹೆಗ್ಡೆಯವರು ವಹಿಸಿಕೊಂಡಂತಿದೆ ಎಂದು ಟೀಕಿಸಿದರು.ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಮೇಲೆ ಹಲ್ಲೆಗೆ ಯತ್ನಿಸಿದ ಸನಾತನಿಗಳ ಮೇಲೆ ಧ್ವನಿ ಎತ್ತದ ಸಂತೋಷ ಹೆಗ್ಡೆ, ಖಾಸಗಿ ಚಾನೆಲ್ ಮುಂದೆ RSS ಪರವಾಗಿ ಪೈಪೋಟಿಗೆ ಬಿದ್ದು ಸಮರ್ಥನೆಗೆ ಮುಂದಾಗಿರುವುದು ವ್...
ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ಆಗ್ರಹ

ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಳಗಾವಿ: ರಾಣಿ ಚೆನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಕೂಡ ನಮ್ಮ ಸರ್ಕಾರವೇ. ಹಲವು ಮಹಾನ್ ವ್ಯಕ್ತಿಗಳ ಜಯಂತಿಯನ್ನು ಆಚರಣೆಗೆ ತಂದಿದ್ದು ಕೂಡ ನಾವೆ. ಇದು ನಮ್ಮ‌ ಸಂಸ್ಕೃತಿ ಎಂದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಅವರು ಸ್ಮರಿಸಿದರು.1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ಸಿದ್ದರಾಮಯ್ಯ ಹೇಳಿದರು. ...
ವಂಚಕ ಸಂಬಂಧಿ ಪರ ಬ್ಯಾಟಿಂಗ್; ಸಿದ್ದು ಆಪ್ತನನ್ನು ಸೆಟಲ್‌ಮೆಂಟ್‌ ಸಚಿವ ಎಂದ ಜೆಡಿಎಸ್

ವಂಚಕ ಸಂಬಂಧಿ ಪರ ಬ್ಯಾಟಿಂಗ್; ಸಿದ್ದು ಆಪ್ತನನ್ನು ಸೆಟಲ್‌ಮೆಂಟ್‌ ಸಚಿವ ಎಂದ ಜೆಡಿಎಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ವಂಚಕ ಸಂಬಂಧಿಗೆ ಸಹಾಯ ಮಾಡಲು ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ವಂಚನೆ ಪ್ರಕರಣದಲ್ಲಿ ತಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಅವರು, ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ಜೆಡಿಎಸ್ ಪಕ್ಷ ಆರೋಪಿಸಿದೆ. ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆಯುವ ಸಚಿವ @BZZameerAhmedK ನಿಮಗೆ ನಾಚಿಕೆಯಾಗಬೇಕು !ರಾಜ್ಯದ ರೈತರಿಗೆ ವಂಚಿಸಿರುವ ನಿಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವುದು ಅಕ್ಷಮ್ಯ. ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ,… pic.twitter.com/rNrq8xNbTV— Janata Dal Secular (@JanataDal_S) October 25, 2025ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಫೋನೋ ಆಡಿಯೋವನ್...
‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ಹಿಟ್ ಅಂಡ್ ರನ್ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಕನ್ನಡ ನಟಿ ಮತ್ತು ಬಿಗ್ ಬಾಸ್ ಕನ್ನಡ ಸ್ಪರ್ಧಿ ದಿವ್ಯಾ ಸುರೇಶ್ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯಲ್ಲಿ ಮೂವತ್ನಾಲ್ಕು ವರ್ಷದ ಅನಿತಾ ಅವರ ಕಾಲಿನ ಮೂಳೆ ಮುರಿತಕ್ಕೊಳಗಾಗಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ ಇಬ್ಬರು ಸವಾರರು ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. Weeks after a late-night hit-and-run accident in Bengaluru, the city traffic police on Friday identified ex Bigg Boss Kannada contestant Divya Suresh as the alleged driver of the car involved in the accident that left three people injured. The accident took place near Nithya… pic.twitter.com/ucoigQ6FWn— Karnataka Portfolio (@karnatakaportf) October 24, 2025ದಿವ್ಯಾ ಸುರೇಶ್ ಪ್ರಸ್ತುತ ಒಂದು ಪ್...
ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಅದರಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಅವರು ಅಕ್ರೋಶ ವ್ಯಕ್ತಪಡಿಸಿರುವ ವೈಖರಿ ಗಮನಸೆಳೆದಿದೆ. ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ. ನೂರು ವರ್ಷಗಳಿಂದ ದೇಶಕ್ಕಾಗಿ ಮತ್ತು ಸಮಾಜಕ್ಕಾಗಿ ಕೆಲಸ ಮಾಡಿರುವ… pic.twitter.com/oP5sHqdPU7— BJP Karnataka (@BJP4Karnataka) October 24, 2025'ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ' ಎಂದು ಛಲವಾದಿ ನಾರಾಯಣ...
ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧಾರ

ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಗುರಿಯೊಂದಿಗೆ ಕೈಗೊಂಡಿರುವ ಈ ಕ್ರಮದಡಿ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವುದು, ಅವರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಹಾಗೂ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವುದು ಸಂಘಗಳ ಪ್ರಮುಖ ಉದ್ದೇಶವಾಗಲಿದೆ.“ಗೃಹಲಕ್ಷ್ಮಿಯರಿಗೆ ಆರ್ಥಿಕ ಬಲ – ಸ್ವ ಉದ್ಯೋಗಕ್ಕೆ ಬೆಂಬಲ” ಎಂಬ ಆಶಯದೊಂದಿಗೆ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣದ ನವ ಅಧ್ಯಾಯವನ್ನು ಆರಂಭಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಗುರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ "ಗೃಹಲಕ್ಷ್ಮಿ ಯೋಜನೆ"ಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸುವ ಮಹತ್ವದ ನಿರ್ಣ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ? ಯತೀಂದ್ರ ಹೇಳಿಕೆ ಬಗ್ಗೆ ಡಿಕೆಶಿ ಸ್ಪಷ್ಟನೆ ಹೀಗಿದೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ? ಯತೀಂದ್ರ ಹೇಳಿಕೆ ಬಗ್ಗೆ ಡಿಕೆಶಿ ಸ್ಪಷ್ಟನೆ ಹೀಗಿದೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ವೈಜ್ಞಾನಿಕ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ನಾಯಕತ್ವ ವಹಿಸಬಹುದು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ.ಯತೀಂದ್ರರ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ, ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, 'ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯೇ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ' ಎಂದಿದ್ದಾರೆ.ರಾಜ್ಯ ನಾಯಕತ್ವ ಬದಲಾವಣೆಯ ಕುರಿತಂತೆ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಂತ್ರಾಲಯ ಪ್ರವಾಸದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, “ಯತೀಂದ್ರ ಏನು ಹೇಳಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ” ಎಂದರು.“ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು ಪಕ್ಷದ ಅಧ್ಯಕ್ಷನೂ,...
‘ನೀವು ಮರೆತಿದ್ದರೆ, ಈ ವೀಡಿಯೊದಲ್ಲಿನ ಚರ್ಚೆನ್ನು ಮತ್ತೊಮ್ಮೆ ನೋಡಿ’; ಪ್ರಿಯಾಂಕ್’ಗೆ ಐಶ್ವರ್ಯ ಟಾಂಗ್

‘ನೀವು ಮರೆತಿದ್ದರೆ, ಈ ವೀಡಿಯೊದಲ್ಲಿನ ಚರ್ಚೆನ್ನು ಮತ್ತೊಮ್ಮೆ ನೋಡಿ’; ಪ್ರಿಯಾಂಕ್’ಗೆ ಐಶ್ವರ್ಯ ಟಾಂಗ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಆರೆಸ್ಸೆಸ್ ಬಿಜೆಪಿ ನಾಯಕರನ್ನು ಟೀಕಿಸುವ ಆತುರದಲ್ಲಿ ದಿವಂಗತ ಅನಂತ್ ಕುಮಾರ್ ಅವರ ಹಳೆಯ ವೀಡಿಯೋವನ್ನು ವೈರಲ್ ಮಾಡಿದ ಸಚಿವ ಪ್ರಿಯಾಂಕ್ ವಿರುದ್ಧ ಐಶ್ವರ್ಯ ಅನಂತಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. 'Priank Kharge, this is a new low for you too' ಎನ್ನುತ್ತಾ ಕಟುವಾಗಿ ಟೀಕಿಸಿರುವ ಐಶ್ವರ್ಯ, 'ಆರ್‌ಎಸ್‌ಎಸ್‌ಗೆ ಮಸಿ ಬಳಿಯುವ ನಿಮ್ಮ ವಿಫಲ ಪ್ರಯತ್ನದ ನಂತರ, ನೀವು ಈಗ ಕರ್ನಾಟಕಕ್ಕಾಗಿ ಅನಂತಕುಮಾರ್ ಜಿ ಅವರ ಕೆಲಸವನ್ನು ನಿಮ್ಮ ಸ್ವಂತ ಪಕ್ಷದ ನಾಯಕರು ಸಹ ಮೆಚ್ಚಿದ್ದಾರೆ. ಆದಷ್ಟೇ ನೀವು ಮರೆತಿದ್ದೀರಿ' ಎಂದು ಚಿವುಟಿದ್ದಾರೆ.'ನೀವು ಮರೆತಿದ್ದರೆ, ಈ ವೀಡಿಯೊದಲ್ಲಿನ ಚರ್ಚೆಯು ನಿಮ್ಮ ಪಕ್ಷದ ಹೈಕಮಾಂಡ್‌ನ ಮೊದಲಕ್ಷರಗಳನ್ನು ಹೊಂದಿದ್ದ ಕಾಂಗ್ರೆಸ್ ಸಿಎಂ ಬಗ್ಗೆ ಒಬ್ಬ ಕುಖ್ಯಾತರ ಡೈರಿಯ ಬಗ್ಗೆ ಮತ್ತು ಅವರಿಗೆ ನೀಡಲಾದ ದೊಡ್ಡ ಪ್ರಮಾಣದ ಲಂಚದ ಬಗ್ಗೆ ಎಂಬುದನ್ನು ನಿಮಗೆ ನೆನಪಿಸುತ್ತೇನೆ ಎಂದು ಐಶ್ವರ್ಯ ಎದಿರೇಟು ನೀಡಿದ್ದಾರೆ.'ನಿಮ್ಮ ಟ್ವೀಟ್ ನಿಮ್ಮ ಸ್ವಂತ ನಾಯಕರನ್ನು ಕಾಡಲು ಮತ್ತೆ ಬರುತ್ತದೆ. ಸತ್ಯವು ತನ್ನನ್ನು ತಾನೇ ಬಹಿರಂಗಪಡಿಸಿಕೊಳ್ಳುವ ಪ್...