Friday, August 14

ವಿದೇಶ

ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ; ಸಿಎಂ ಸ್ಪಷ್ಟನೆ

ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ; ಸಿಎಂ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ - ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ ಆಯೋಜಿಸಿದ್ದ 'ಅಶೋಕ ಜನ - ಮನ 2025' ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ, ಆಶಿಕ್ ರೈ ಅವರ ಜನಪರ ಸೇವೆಯನ್ನು ಕೊಡಾಡಿದರು.ಈ ಸಂದರ್ಭದಲ್ಲಿ RSS ನಿಷೇಧ ಕುರಿತ ಬಿಜೆಪಿ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಾಲಾ - ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದರು. ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ? ಎಂದು ಪ್ರಶ್ನಿಸಿದರು.2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ...
ಶೈಕ್ಷಣಿಕ ವೇಳಾಪಟ್ಟಿಗೆ ಅಡ್ಡಿಯಾಗದಿರಲು ಜಾತಿ ಸಮೀಕ್ಷೆಯಿಂದ ಶಿಕ್ಷಕಶಿಕ್ಷಕರಿಗೆ ವಿನಾಯಿತಿ

ಶೈಕ್ಷಣಿಕ ವೇಳಾಪಟ್ಟಿಗೆ ಅಡ್ಡಿಯಾಗದಿರಲು ಜಾತಿ ಸಮೀಕ್ಷೆಯಿಂದ ಶಿಕ್ಷಕಶಿಕ್ಷಕರಿಗೆ ವಿನಾಯಿತಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ಕಾರ್ಯವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಸೆಪ್ಟೆಂಬರ್ 22ರಂದು ಆರಂಭವಾದ ಈ ಸಮೀಕ್ಷೆ ಮೂಲತಃ ಅಕ್ಟೋಬರ್ 7ರೊಳಗೆ ಪೂರ್ಣಗೊಳ್ಳಬೇಕಿತ್ತು. ಆದರೆ ದಸರಾ ರಜೆ ಹಾಗೂ ಮಧ್ಯಾವಧಿ ತೊಂದರೆಗಳಿಂದಾಗಿ ಸರ್ಕಾರ ಕಾರ್ಯಾವಧಿಯನ್ನು ಮುಂದೂಡಿದೆ. ಈಗ ಶಿಕ್ಷಕರನ್ನು ಗಣತಿ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದ್ದು, ಸರ್ಕಾರಿ ನೌಕರರನ್ನು ಸಮೀಕ್ಷೆ ಪೂರ್ಣಗೊಳಿಸುವ ಕಾರ್ಯಕ್ಕೆ ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಡಿಕೆಶಿ ಭಾನುವಾರ ತಿಳಿಸಿದ್ದಾರೆ.“ಬೆಂಗಳೂರು ದಕ್ಷಿಣ, ಬೀದರ್ ಮತ್ತು ಧಾರವಾಡ ಹೊರತುಪಡಿಸಿ, ಬಹುತೇಕ ಜಿಲ್ಲೆಗಳಲ್ಲಿ 90 ಶೇಕಡಾ ವ್ಯಾಪ್ತಿ ಸಾಧಿಸಲಾಗಿದೆ. ಬೆಂಗಳೂರಿನಲ್ಲಿ 67 ಶೇಕಡಾ ಪ್ರತಿಕ್ರಿಯೆ ದೊರೆತಿದ್ದು, ಸುಮಾರು 20 ಶೇಕಡಾ ನಾಗರಿಕರು ತಮ್ಮ ಮಾಹಿತಿಯನ್ನು ನೀಡಿಲ್ಲ,” ಎಂದು ಶಿವಕುಮಾರ್ ತಿಳಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹಿರಿಯ ಸಚಿವರು, ಅಧಿಕಾರಿಗಳು ಹಾಗ...
ಅತಿವೃಷ್ಟಿ ಸಂಕಷ್ಟ; ಬಸವಕಲ್ಯಾಣದಲ್ಲಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ

ಅತಿವೃಷ್ಟಿ ಸಂಕಷ್ಟ; ಬಸವಕಲ್ಯಾಣದಲ್ಲಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬಸವಕಲ್ಯಾಣ: ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಹಾಗೂ ರಾಜಕೀಯ ವಿಚಾರಗಳಲ್ಲಿ ಕೇಂದ್ರೀಕೃತವಾಗಿದೆ ಎಂಬ ಆರೋಪ ಕೇಳಿ ಬಂದಿದೆ.ಈ ನಡುವೆ ಭಾನುವಾರ ಬಸವಕಲ್ಯಾಣದಲ್ಲಿ ಸಂತ್ರಸ್ತ ರೈತರು ಹಾಗೂ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದಿಂದ ತಕ್ಷಣದ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಕೆಲವರು ಅರೆಬೆತ್ತಲೆ ತೊಡಗಿಸಿಕೊಂಡು ಸರ್ಕಾರದ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಶಾಸಕ ಶರಣು ಸಲಗಾರ್, ಬಿಜೆಪಿ ಜಿಲ್ಲಾ ಮತ್ತು ರೈತ ಮೋರ್ಚಾ ಪದಾಧಿಕಾರಿಗಳು, ರೈತ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು....
RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ; ಜನತಂತ್ರದ ವಿಜಯ ಎಂದ ಬಿಜೆಪಿ

RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ; ಜನತಂತ್ರದ ವಿಜಯ ಎಂದ ಬಿಜೆಪಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ಹೈಕೋರ್ಟ್ ಪೀಠದ ಆದೇಶವನ್ನು ಸ್ವಾಗತಿಸಿರುವ ಅವರು, ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ಕಾಂಗ್ರೆಸ್ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ ಎಂದು ಬಣ್ಣಿಸಿದ್ದಾರೆ.ಚಿತ್ತಾಪುರದಲ್ಲಿ RSS ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ ಎಂದು ವಿಜಯೇಂದ್ರ ಸಾಮಾಜಿಕ ಮಾಧ್ಯಮ "X'ನಲ್ಲಿ ಪ್ರತಿಕ್ರಿಯಿಸಿದ್ದಾರೆ.ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ, ಆದರೆ ಕಾನೂನು ...
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

ಪ್ರಮುಖ ಸುದ್ದಿ, ವಿದೇಶ
ಕಲಬುರಗಿ: RSS ನಿರ್ಬಂಧಿಸಲು ಹೊರಟ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ RSSನ ಶತಾಬ್ದಿ ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ ನವೆಂಬರ್​​ 2ರಂದು ಪಥಸಂಚಲನಕ್ಕೆ ಅನುಮತಿ ನೀಡಿದೆ.ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಕುರಿತಂತೆ ಭಾನುವಾರ ನಡೆಸಿದ ಹೈಕೋರ್ಟ್ ಪೀಠ, ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಪಥಸಂಚಲನ ಮಾರ್ಗ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿ ರುವ ಹೈಕೋರ್ಟ್, ವಿಚಾರಣೆಯನ್ನು ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.ಚಿತ್ತಾಪುರದಲ್ಲಿ ಭಾನುವಾರ RSS ​ ಪಥ ಸಂಚಲನಕ್ಕೆ ಸ್ಥಳೀಯ ತಹಶೀಲ್ದಾರ್​ ನಾಗಯ್ಯ ಹಿರೇಮಠ ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಆರ್​​ಎಸ್​ಎಸ್​ ಪ್ರಮುಖರು ಕಲಬುರಗಿ ಹೈಕೋರ್ಟ್ ...
‘ನಾನು ಮೂಲಭೂತವಾದದ ವಿರೋಧಿಯೇ ಹೊರತು ಧರ್ಮಶ್ರದ್ದೆಯ ವಿರೋಧಿಯಲ್ಲ’

‘ನಾನು ಮೂಲಭೂತವಾದದ ವಿರೋಧಿಯೇ ಹೊರತು ಧರ್ಮಶ್ರದ್ದೆಯ ವಿರೋಧಿಯಲ್ಲ’

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: RSS ನಂತಹ ಸಂಘಟನೆಗಳನ್ನು ನಿಗ್ರಹಿಸಿದಾಗ ಮೂಲಭೂತವಾದವನ್ನು ನಿಗ್ರಹಿಸಿದಂತಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. RSS ನಿಷೇಧ ಕುರಿತ ತಮ್ಮ ಸಮರ್ಥಿಸಿ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, 'ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ' ಎಂದಿದ್ದಾರೆ.'ಯಾವುದೇ ಒಂದು ಸಂಸ್ಥೆ ಅಥವಾ ಸಂಘಟನೆ ತಾವು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಆದರೆ RSS ತಮ್ಮದು ಧಾರ್ಮಿಕ ಸಂಘಟನೆಯಲ್ಲ ಎನ್ನುತ್ತದೆ, ಧರ್ಮದ ಹೆಸರಲ್ಲಿ ಅವಾಂತರ ಸೃಷ್ಟಿಸುತ್ತದೆ.ತಮ್ಮದು ರಾಜಕೀಯ ಸಂಘಟನೆಯಲ್ಲ ಎನ್ನುತ್ತದೆ, ನೇರಾನೇರಾ ರಾಜಕೀಯ ಮಾಡುತ್ತದೆ. ಹೀಗೆ ಇವರು ನಡೆನುಡಿಗಳೇ ನಿಗೂಢ' ಎಂದು ಅವರು ವಿಶ್ಲೇಷಿಸಿದ್ದಾರೆ. ಆರ್ಎಸ್ಎಸ್ ನಂತಹ ಸಂಘಟನೆಗಳನ್ನು ನಿಗ್ರಹಿಸಿದಾಗ ಮೂಲಭೂತವಾದವನ್ನು ನಿಗ್ರಹಿಸಿದಂತಾಗುತ್ತದೆ.ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ.ಯಾವುದೇ ಒಂದು ಸಂಸ್ಥೆ ಅಥವಾ ಸಂಘಟನೆ ತಾವು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎ...
ಉತ್ತರ ಕೋರಿಯಾದ ಕಿಂಗ್ ರೀತಿ ಸಿದ್ದು ಸರ್ಕಾರದಿಂದಲೂ ಸರ್ವಾಧಿಕಾರ; ವಿಜಯೇಂದ್ರ

ಉತ್ತರ ಕೋರಿಯಾದ ಕಿಂಗ್ ರೀತಿ ಸಿದ್ದು ಸರ್ಕಾರದಿಂದಲೂ ಸರ್ವಾಧಿಕಾರ; ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಿತ್ತಾಪುರದಲ್ಲಿ ಸಂವಿಧಾನದ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಕಸಿಯಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಸಂಭ್ರಮಾಚರಣೆಗೆ ತಹಸೀಲ್ದಾರರ ಮೂಲಕ 12 ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿಲ್ಲವೆಂದು ಅನುಮತಿ ನಿರಾಕರಿಸಿರುವ ಪರಿ ಉತ್ತರ ಕೋರಿಯಾದ ತಿಕ್ಕಲು ಸರ್ವಾಧಿಕಾರಿ ಕಿಂಗ್ ಜಾಂಗ್ ಉನ್ ಆಡಳಿತ ವೈಖರಿಯನ್ನು ನೆನಪಿಸುತ್ತಿದೆ ಎಂದು ವಿಜಯೇಂದ್ರ ಬಣ್ಣಿಸಿದ್ದಾರೆ.ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ಕರಾಳ ಇತಿಹಾಸ ಅತ್ಯಂತ ಪ್ರಿಯವಾಗಿರುವಂತಿದೆ, ಈ ಕಾರಣಕ್ಕಾಗಿಯೇ ಕಲಬುರಗಿ ಜಿಲ್ಲೆಯಲ್ಲಿ ತುರ್ತುಪರಿಸ್ಥಿತಿ ನೆನಪಿಸುವ ರೀತಿಯ ಆಡಳಿತವನ್ನು ಜಾರಿಗೆ ತರಲು ಹೊರಟಿದ್ದಾರೆ, ಇದಕ್ಕಾಗಿ ಚಿತ್ತಾಪುರವನ್ನು ಚಿಮ್ಮುವ ಹಲಗೆಯಂತೆ ಪ್ರಯೋಗಿಸುತ್ತಿದ್ದಾರೆ ಎಂದವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಪ್ರತಿಕ್ರಿಯಿಸಿದ್ದಾರೆ.ಡಾ.ಬಾಬಾ ಸಾಹೇಬ್ ಅವರು ರಚಿಸಿದ ಸಂವಿಧಾನದ ಆ...
ರಾಜ್ಯದಲ್ಲಿ 422 ವೈದ್ಯಕೀಯ ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ: ಡಾ. ಶರಣ್ ಪ್ರಕಾಶ್ ಪಾಟೀಲ್

ರಾಜ್ಯದಲ್ಲಿ 422 ವೈದ್ಯಕೀಯ ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ: ಡಾ. ಶರಣ್ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
ಬೆಂಗಳೂರು, ಆ.18: ರಾಜ್ಯಕ್ಕೆ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಕುರಿತು ಮಾಹಿತಿ ನೀಡಿದರು. ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.ಪ್ರೀ ಕ್ಲೀನಿಕಲ್‌, ಪ್ಯಾರಾ ಕ್ಲೀನಿಕಲ್‌ ಮತ್ತು ಕ್ಲೀನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳ ಹೆಚ್ಚಳ ಮಾಡಲಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.ಪೀಡಿಯಾಟ್ರಿಕ್ಸ್‌, ಅನಸ್ತೇಸಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂ...
ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ; ಸಿದ್ದರಾಮಯ್ಯ

ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ; ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಂಘ ಪರಿವಾರ ಮತ್ತು ಆರ್.ಎಸ್.ಎಸ್ ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ಹಿಂದೆಯೂ ವಿರೋಧಿಸಿದ್ದರು, ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿದ ಅವರು, ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದರು.ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ "ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ" ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾ...
RSS ಚಟುವಟಿಕೆ ನಿಷೇಧ: ಬಿಜೆಪಿಯೇ ಜಾರಿಗೆ ತಂದಿತ್ತು, ಈಗ ಅನುಷ್ಠಾನಕ್ಕೆ ಬಂದಿದೆ; ಶರಣಪ್ರಕಾಶ ಪಾಟೀಲ್

RSS ಚಟುವಟಿಕೆ ನಿಷೇಧ: ಬಿಜೆಪಿಯೇ ಜಾರಿಗೆ ತಂದಿತ್ತು, ಈಗ ಅನುಷ್ಠಾನಕ್ಕೆ ಬಂದಿದೆ; ಶರಣಪ್ರಕಾಶ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ವಿದ್ಯಮಾನಗಳ ಕುರಿತಾಗಿಯೂ ಸಚಿವರು ಪ್ರತಿಕ್ರಿಯೆ ನೀಡಿದ ಶರಣಪ್ರಕಾಶ ಪಾಟೀಲ್, 'ನಮ್ಮ ಸರ್ಕಾರ ಜಾರಿಗೆ ಈ ನಿಷೇಧ ಹೇರಿಲ್ಲ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದೆಯಷ್ಟೇ. ಮಾಡಲು ಕೆಲಸವಿಲ್ಲದ ಬಿಜೆಪಿಯವರು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ' ಎಂದು ತಿರುಗೇಟು ನೀಡಿದರು.ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್‌ ನಿಷೇಧ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ.ಎಲ್ಲರೂ ಅವರ ಮಾತನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಸರ್ಕಾರಿ ಅಧೀನದ ಸ್ಥಳಗಳಲ್ಲಿ, ಶಾ...