
ಜನರು ದೀಪಾವಳಿ ಆಚರಣೆಯಿಂದ ವಂಚಿತರಾಗಬಾರದು; ಊರಿಗೆ ತೆರಳಲು 2500 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸುಮಾರು 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಹಲವು ದಿನಗಳ ರಜೆಯ ನಡುವೆ ದೀಪಾವಳಿ ಸಂಭ್ರಮಿಸಲು ಊರುಗಳಿಗೆ ತೆರಳುವ ಮಂದಿಗೆ ಅನುಕೂಲವಾಗುವಂತೆ ನಿಗಮವು ಈ ಹೆಚ್ಚುವರಿ ಬಸ್ ಸೌಕರ್ಯ ಮಾಡಿದೆ.ಬೆಂಗಳೂರು ಸಹಿತ ರಾಜ್ಯದ ನಗರಗಳಲ್ಲಿ ನೆಲೆಸಿರುವ ಮಂದಿ ದೀಪಗಳ ಹಬ್ಬದಲ್ಲಿ ಪಾಲ್ಗೊಳ್ಳುವುದರಿಂದ ವಂಚಿತರಾಗಬಾರದೆಂಬ ಹಿನ್ನೆಲೆಯಲ್ಲಿ ಪ್ರತೀವರ್ಷದಂತೆ ಈಬಾರಿಯೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 17.10.2025 ರಿಂದ 20.10.2025 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 22.10.2025 ಹಾಗೂ 26.10.2025ರಂದು ವಿಶೇಷ ವಾಹನಗಳನ್...








