
ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಅಂಕುಶ ಹಾಕಿ; ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ
ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವನ್ನು ನಿಷೇಧಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಸಂಚಲನ ಸೃಷ್ಟಿಸಿದೆ.ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪ್ರಿಯಾಂಕ್ ಖರ್ಗೆ ಈ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.
ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್… pic.twitter...







