
ರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ‘ಶಕ್ತಿ’ ನೀಡಿದ ಗ್ಯಾರೆಂಟಿ.. ಅಧ್ಯಯನ ವರದಿಯ ಹೈಲೈಟ್ಸ್ ಹೀಗಿದೆ.
ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಜಾರಿಗೆ ತಂದ ಕರ್ನಾಟಕ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು ಕರ್ನಾಟಕದಲ್ಲಿ ಪರಿಣಾಮಕಾರಿ ಬದಲಾವಣೆಯನ್ನು ತಂದಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ (ಸಂವಹನ) ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ.
Our statement on a new study led by @tarauk evaluating the impact of Karnataka’s guarantee schemes on the empowerment of women pic.twitter.com/hz1BNPlLnE— Jairam Ramesh (@Jairam_Ramesh) October 3, 2025ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಯಶೋಗಾಥೆ ಕುರಿತಂತೆ ಮಾಧ್ಯಮ ಹೇಳಿಕೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಜೈರಾಮ್ ರಮೇಶ್, ನಾಲ್ಕು ಖ್ಯಾತ ಸಂಶೋಧನೆ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಒಳಗೊಂಡ ಸ್ವತಂತ್ರ ಅಧ್ಯಯನದ ಹೊಸ ವರದಿಯು ಈ ಖಾತರಿಗಳ ಫಲಿತಾಂಶಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುತ್ತದೆ ಎಂದಿದ್ದಾರೆ. ಅದರಲ್ಲೂ ಶಕ್ತಿ ಯೋಜನೆಯಿಂದಾಗಿ ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣ ಕಡಿಮೆಯಾಗಿದೆ ಎಂದು ಅವರು ಬೊಟ್ಟು ಮಾಡಿದ್ದಾರೆ.ಅಧ್ಯಯನದ ಹೊಸ ವರದಿಯ ಮು...








