Saturday, August 15

ವಿದೇಶ

ಕ್ರೈಸ್ತ ಜಾತಿ ಎಡವಟ್ಟು ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ; CSS ಸ್ವಾಗತ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊಮ್ಮುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಜಾಣ್ಮೆಯ ನಿರ್ಧಾರ ಕೈಗೊಂಡಿದ್ದಾರೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಮನವಿ ಸಲ್ಲಿಸಿದ ಬೆನ್ನಲ್ಲೇ, ಕ್ರಿಶ್ಚಿಯನ್ ಜಾತಿಗಳ ಮುಂದಿದ್ದ ಹಿಂದೂ ಹೆಸರುಗಳನ್ನೂ ಕೈಬಿಡಬೇಕೆಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.ಸಿಎಂ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೂಕ್ತ ತಿದ್ದುಪಡಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಕ್ರೈಸ್ತ ಜಾತಿ ವಿವಾದಕ್ಕೆ ತೆರೆ ಎಳೆದ ಸಿಎಂ ನಿರ್ಧಾರವನ್ನು ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಸ್ವಾಗತಿಸಿದ್ದಾರೆ.ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್...
ಹಾರೋಗೇರಿಯಲ್ಲಿ ಪಂಚಮಸಾಲಿ ಶಕ್ತಿ ಪ್ರದರ್ಶನ; ಪ್ರತಿಜ್ಞಾ ಕ್ರಾಂತಿ ರಾಲಿಯಲ್ಲಿ ಜನಸಾಗರ

ಹಾರೋಗೇರಿಯಲ್ಲಿ ಪಂಚಮಸಾಲಿ ಶಕ್ತಿ ಪ್ರದರ್ಶನ; ಪ್ರತಿಜ್ಞಾ ಕ್ರಾಂತಿ ರಾಲಿಯಲ್ಲಿ ಜನಸಾಗರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಯಭಾಗ: ಹಾರೋಗೇರಿ ತಾಲ್ಲೂಕಿನಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಯೋಜಿಸಲಾಗಿದ್ದ 8ನೇ ಹಂತದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ರ್ಯಾಲಿ ಮತ್ತು ಮೀಸಲಾತಿ ಚಳುವಳಿಯಲ್ಲಿ ಹತ್ತುಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಇದರೊಂದಿಗೆ ರಾಯಭಾಗ ತಾಲ್ಲೂಕಿನ 54 ಹಳ್ಳಿಗಳಲ್ಲಿ ಶ್ರಾವಣ ಮಾರ್ಗಸೂಚಿ ಪ್ರಕಾರ ಜರುಗಿದ ಕುಡಲಸಂಗಮ ಧಾರ್ಮಿಕ ಕಾರ್ಯಕ್ರಮವೂ ಯಶಸ್ವಿಯಾಗಿ ಸಮಾರೋಪಗೊಂಡಿತು.ಸೆ.20ರಂದು ಹಾರೋಗೇರಿಯಲ್ಲಿ ನಡೆದ ತಾಲೂಕು ಮಟ್ಟದ ರ್ಯಾಲಿ ಬೆಳಿಗ್ಗೆ 11 ಗಂಟೆಗೆ ಹಾರೋಗೇರಿ ಕ್ರಾಸ್‌ನಿಂದ ಆರಂಭವಾಗಿ ಚನ್ನವೃಷಬೆಂದ್ರಲೀಲಾಮಠದವರೆಗೆ ನಡೆಯಿತು. ಈ ಬೃಹತ್ ಮೆರವಣಿಗೆಯಲ್ಲಿ ಲಿಂಗಾಯತ ಪಂಚಮಸಾಲಿ ಪಥಸಂಚಲನದ ಸಾವಿರಾರು ಯುವಕರು ಬೈಕ್ ಮೇಲೆ ಭಾಗವಹಿಸಿದ್ದರು, ಜೊತೆಗೆ ಚೆನ್ನಮ್ಮನ ಬಳಗದ ರೊಟ್ಟಿ ಬುತ್ತಿ ಮೆರವಣಿಗೆಯೂ ನಡೆಯಿತು.ವಿಜಯಪುರ ಶಾಸಕ ಬಸವನ ಗೌಡ ಪಾಟೀಲ್ ಯಾತ್ನಾಳ್, ಸಂಸದ ಈರಣ್ಣ ಕಡಾಡಿ, ಶಾಸಕ ಸಿದ್ದು ಸವದಿ, ಇಂಚಗೇರಿ ಸಂಪ್ರದಾಯ ಶಶಿಕಾಂತ ಗುರೂಜಿ, ಕಾಂಗ್ರೆಸ್ ಮುಖಂಡ ಗೋಕಾಕ್ ಮಹಾಂತೇಶ ಕಡಾಡಿ, ತಾಲೂಕು ಅಧ್ಯಕ್ಷ ಶಿವಬಸವ ಕಾಪ್ಸೆ, ಜಿಲ್ಲಾ ರೈತ ಘಟಕದ ಅಧ್ಯಕ್ಷ ಸುರೇಶ್ ಹೊಸಪ...
ಬೆಳಗಾವಿಯಲ್ಲಿ ತಿರುಪತಿ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ಎಸ್‌ ನರೇಶ್‌ಕುಮಾರ್‌

ಬೆಳಗಾವಿಯಲ್ಲಿ ತಿರುಪತಿ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ಎಸ್‌ ನರೇಶ್‌ಕುಮಾರ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ
ಬೆಂಗಳೂರು: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯರಾದ ಎಸ್‌ ನರೇಶ್‌ ಕುಮಾರ್‌ ತಿಳಿಸಿದ್ದಾರೆ.ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದರು.16.09.2025 ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಲಾಯಿತು. ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಲ್ಲಿ ಇರುವಂತೆ ಬೆಳಗಾವಿಯಲ್ಲೂ ದೇವಸ್ಥಾನ ನಿರ್ಮಿಸುವುದರಿಂದ ಆಭಾಗದ ಭಕ್ತಾದಿಗಳಿಗೆ ಅನುಕೂಲವಾಗಲಿದೆ ಎಂದರು.ಪ್ರತಿ ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ, ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ...
ಬೆಂಗಳೂರಿನಲ್ಲಿ 14,795 ರಸ್ತೆ ಗುಂಡಿಗಳು, ಈ ಪೈಕಿ 8,046 ಗುಂಡಿಗಳು ಮುಚ್ಚಲು ಬಾಕಿ; ಸಿದ್ದರಾಮಯ್ಯ

ಬೆಂಗಳೂರಿನಲ್ಲಿ 14,795 ರಸ್ತೆ ಗುಂಡಿಗಳು, ಈ ಪೈಕಿ 8,046 ಗುಂಡಿಗಳು ಮುಚ್ಚಲು ಬಾಕಿ; ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಮಗಾರಿಯಿಂದಾಗಿ ಬೆಂಗಳೂರು ನಗರದ ರಸ್ತೆಗಳು ಹಾಳಾಗಿದ್ದು ಸಾರ್ವಜನಿಕರ ಆಕ್ರೋಶ ಸ್ಫೋಟಗೊಂಡಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ಸರಣಿ ವರದಿಗಳು ಬಿತ್ತರವಾಗುತ್ತಿದ್ದಂತೆಯೇ ಎಚ್ಛೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಸೂಚನೆಗಳನ್ನು ನೀಡಿದ್ದಾರೆ.ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ ಎಂದಿರುವ ಸಿಎಂ, ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್ ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ...
ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ; ಸಿದ್ದು ಸರ್ಕಾರದ ವಿರುದ್ಧ ಆಕ್ರೋಶ ಸ್ಫೋಟ

ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ; ಸಿದ್ದು ಸರ್ಕಾರದ ವಿರುದ್ಧ ಆಕ್ರೋಶ ಸ್ಫೋಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ
ಬೆಂಗಳೂರು: ರಾಜ್ಯದ ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳ ಕುರಿತಂತೆ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ.ಗಣೇಶ ಚತುರ್ಥಿಯನ್ನು ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ ಈಗ ನವರಾತ್ರಿ, ದೀಪಾವಳಿಯ ಸಂಭ್ರಮವನ್ನೂ ಹಾಳು ಮಾಡಲು ಮುಂದಾಗಿದೆ. ʼಎʼ ದರ್ಜೆಯ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯ ದರವನ್ನು ಏರಿಸುವ ಮೂಲಕ ಹಿಂದೂ ಧರ್ಮೀಯರ ಮೇಲೆ ತನ್ನ ಅಸಹನೆಯನ್ನು ತೋರಿಸಿದೆ ಎಂದು ಬಿಜೆಪಿ ದೂರಿದೆ.ಹಿಂದೂಗಳು ಸುಮ್ಮನಿದ್ದಾರೆ, ಏನು ಮಾಡಿದರೂ ನಡೆಯುತ್ತದೆ ಎಂದು ಸಿದ್ದರಾಮಯ್ಯ ಸರ್ಕಾರ ಅಹಂಭಾವ ಪ್ರದರ್ಶಿಸುತ್ತಿದೆ. ಕಟೀಲು ದೇವಸ್ಥಾನವೊಂದರಲ್ಲೇ ಅತಿಹೆಚ್ಚು ಜನರು ಭಕ್ತಿಯಿಂದ ಸಮರ್ಪಿಸುವ ಹೂವಿನ ಪೂಜೆಯ ದರವನ್ನು ಬರೋಬ್ಬರಿ 184% ಹೆಚ್ಚಳ ಮಾಡಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಆಶ್ಲೇಷ ಪೂಜೆ, ನಾಗಪ್ರತಿಷ್ಠೆ ಸೇವೆಗಳ ಸೇವಾ ದರವನ್ನೂ ಹೆಚ್ಚಿಸಿರುವುದು ಸರ್ಕಾರದ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನ...
ಕೌಶಲ್ಯ, ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಬದ್ಧ

ಕೌಶಲ್ಯ, ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಬದ್ಧ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಹಲವಾರು ಮಾಹಿತಿ ನೀಡಿದರು. ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನವೆಂಬರ್ 4 ರಿಂದ 6 ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.“ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸ...
ಬೆಂಗಳೂರಿಗೆ ಅಪಖ್ಯಾತಿ; ಈ ಅಪಮಾನಕ್ಕೆ ಸಿಎಂ-ಡಿಸಿಎಂ ಹೊಣೆಗಾರರು ಎಂದ ಹೆಚ್ಡಿಕೆ

ಬೆಂಗಳೂರಿಗೆ ಅಪಖ್ಯಾತಿ; ಈ ಅಪಮಾನಕ್ಕೆ ಸಿಎಂ-ಡಿಸಿಎಂ ಹೊಣೆಗಾರರು ಎಂದ ಹೆಚ್ಡಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಎಂದವರು ಪ್ರಶ್ನಿಸಿದ್ದಾರೆ.ಸಾಮಾಜಿಕ ಮಾಧ್ಯಮ 'X'ನಲ್ಲಿ ಬೆಂಗಳೂರು ನಗರದ ಪರಿಸ್ಥಿತಿ ಬಗ್ಗೆ ತಮ್ಮದೇ ಶಾಲಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರ...
ಕ್ರಿಶ್ಚಿಯನ್ ಸೇವಾ ಸಂಘ (CSS) ಪತ್ರದ ಸಂಚಲನ; ಹೀಗಿದೆ ಶಾಜಿ ಸಲಹೆ

ಕ್ರಿಶ್ಚಿಯನ್ ಸೇವಾ ಸಂಘ (CSS) ಪತ್ರದ ಸಂಚಲನ; ಹೀಗಿದೆ ಶಾಜಿ ಸಲಹೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ.ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಅವರು, ರಾಜ್ಯ ಸರ್ಕಾರದ ನಡೆ ವಿರೋಧಿಸಿ ಸಿಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಮುಖ್ಯ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಆಯುಕ್ತರಿಗೆ ಪತ್ರ ಬರೆ ಬೆಳವಣಿಗೆ ಗಮನಸೆಳೆದಿದೆ.ಸಂವಿಧಾನದ ಆಶಯಗಳನ್ನು ಗೌರವಿಸುವ ಬಗ್ಗೆ ಭರವಸೆ ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ರಾಜ್ಯವನ್ನು 'ಸರ್ವ ಜನಾಂಗಗಳ ಶಾಂತಿಯ ತೋಟ'ವನ್ನಾಗಿ ಮಾಡುವ ಭರವಸೆಯನ್ನು ನೀಡಿತ್ತು. ಆದರೆ, ...
ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ

ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಲಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ–2025ರಲ್ಲಿ ಪಾಲ್ಗೊಳ್ಳುವ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ನೀಡುವುದಾಗಿ ರಾಜ್ಯ ಸರ್ಕಾರ ಬುಧವಾರ ಘೋಷಿಸಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 10ರವರೆಗೆ ನಡೆಯುವ ಈ ಸಮೀಕ್ಷೆಯಲ್ಲಿ ಆಶಾ ಕಾರ್ಯಕರ್ತೆಯರು ಶೇ.90ರಷ್ಟು ಮನೆಗಳಿಗೆ ಭೇಟಿ ನೀಡಿ ಜಾಗೃತಿ ಅಭಿಯಾನ ಅಪ್ಲಿಕೇಶನ್ ಮೂಲಕ ಯೂಎಚ್‌ಐಡಿ ಸಂಖ್ಯೆ ಹಾಗೂ ಮೊಬೈಲ್ ನಂಬರನ್ನು ಸಂಗ್ರಹಿಸುವ ಜವಾಬ್ದಾರಿ ಹೊಂದಿರುತ್ತಾರೆ. ಈ ಕಾರ್ಯಕ್ಕೆ ಅಗತ್ಯವಿರುವ ಮೊತ್ತವನ್ನು ಹಿಂದುಳಿದ ವರ್ಗಗಳ ಆಯೋಗದ ಬಜೆಟ್ ಶೀರ್ಷಿಕೆಯಡಿ ಬಿಡುಗಡೆ ಮಾಡಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ವಿತರಿಸಲಾಗುತ್ತದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ವೇತನ ಸಂಬಂಧಿ ಬೇಡಿಕೆಗಳನ್ನು ಇಂದಿಗೂ ಸರ್ಕಾರ ಪೂರೈಸಿಲ್ಲ. ಇಂತಹ ಸಂದರ್ಭದಲ್ಲಿ ಹೆಚ್ಚುವರಿ ಹೊರೆ ವಹಿಸುವುದು ಅನ್ಯಾಯ” ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಆರೋಪಿಸಿದ್ದಾರೆ. “ಸರ್ಕಾರ...
ಅಕ್ರಮ ನಿವೇಶನ ಹಂಚಿಕೆ ಪ್ರಕರಣ: ಮುಡಾ ಮಾಜಿ ಆಯುಕ್ತರಿಗೆ 9 ದಿನಗಳ ಇಡಿ ವಶ

ಅಕ್ರಮ ನಿವೇಶನ ಹಂಚಿಕೆ ಪ್ರಕರಣ: ಮುಡಾ ಮಾಜಿ ಆಯುಕ್ತರಿಗೆ 9 ದಿನಗಳ ಇಡಿ ವಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಂಧಿತರಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಒಂಬತ್ತು ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದಿದೆ.ಹಣ ವರ್ಗಾವಣೆ ಮತ್ತು ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ಮಂಗಳವಾರ ಇಡಿ ಅಧಿಕಾರಿಗಳು ದಿನೇಶ್ ಕುಮಾರ್ ಅವರನ್ನು ಬಂಧಿಸಿದ್ದರು. ವಿಚಾರಣೆ ನಂತರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ಒಂದು ದಿನ ಕಸ್ಟಡಿಗೆ ಪಡೆದಿದ್ದ ಇಡಿ, ಬುಧವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿತು. ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಮತ್ತಷ್ಟು ದಿನ ತಮ್ಮ ವಶಕ್ಕೆ ಒಪ್ಪಿಸುವಂತೆ ಇಡಿ ಮನವಿ ಮಾಡಿತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆದೇಶ ಮಾಡಿದೆ....