Saturday, August 15

ವಿದೇಶ

ಸಾವಿನಲ್ಲೂ ಮಾನವೀಯತೆ; ಪ್ರಯಾಣಿಕರ ಜೀವ ಉಳಿಸಿ ಕೊನೆಯುಸಿರೆಳೆದ KSRTC ಚಾಲಕ

ಸಾವಿನಲ್ಲೂ ಮಾನವೀಯತೆ; ಪ್ರಯಾಣಿಕರ ಜೀವ ಉಳಿಸಿ ಕೊನೆಯುಸಿರೆಳೆದ KSRTC ಚಾಲಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ ರಾಜೀವ್ ಬೀರಸಾಲ ಎಂಬವರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ.56 ವರ್ಷ ವಯಸ್ಸಿನ ರಾಜೀವ್ ಬೀರಸಾಲ ಅವರು KSRTC ಬಸ್ಸಿನಲ್ಲಿ ಚಾಲಕ- ಕಂ-ನಿರ್ವಾಹಕ ಹುದ್ದೆಯಲ್ಲಿದ್ದರು. ಇವರು ಹರಿಹರ ಘಟಕದ 'ರಾಜಹಂಸ' ಬಸ್ಸಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಗಳೂರು - ದಾವಣಗೆರೆ ಮಾರ್ಗದಲ್ಲಿ ಕಾರ್ಯಚರಣೆಯಲ್ಲಿದ್ದಾಗ ನೆಲಮಂಗಲ ಟೋಲ್ ಹತ್ತಿರ ವಾಹನ ಚಾಲನೆ ಮಾಡುತ್ತಿದ್ದಾಗ ರಾಜೀವ್ ಬೀರಸಾಲ ಅವರಿಗೆ ಹೃದಯಾಘಾತವಾಗಿದೆ. ಆದರೂ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ, ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ಪಕ್ಕಕ್ಕೆ ನಿಲ್ಲಿಸಿ, ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ. ಪ್ರಯಾಣಿಕರ ಜೀವದ ಬಗ್ಗೆ ಕಾಳಜಿ ತೋರಿದ ಈ ಚಾಲಕ ನೆಲಮಂಗಲ ಆಸ್ಪತ್ರೆಯಲ್ಲಿ ಮರಣ ಕೊನೆಯುಸಿರೆಳೆದಿದ್ದಾರೆ.ಚಾಲಕನ ಅಕಾಲಿಕ ನಿಧಾನ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತ ಚಾಲಕರ ಆತ್ಮಕ್ಕೆ ಶಾಂತಿ ಕೋರಿರುವ ಅವರು, ಮೃತನ ಕುಟುಂಬದವರಿಗೆ ಸಾಂತ್ವನ ತಿಳಿಸಿ, ಅತೀ ಶೀಘ್ರದಲ್ಲಿಯೇ...
ಅಂತರರಾಷ್ಟ್ರೀಯ ಗುಣಮಟ್ಟದ ಸೇವೆ ಒದಗಿಸುತ್ತಿರುವ ನೆಫ್ರೋ ಸಂಸ್ಥೆಗೆ NABH ಮಾನ್ಯತೆ

ಅಂತರರಾಷ್ಟ್ರೀಯ ಗುಣಮಟ್ಟದ ಸೇವೆ ಒದಗಿಸುತ್ತಿರುವ ನೆಫ್ರೋ ಸಂಸ್ಥೆಗೆ NABH ಮಾನ್ಯತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೂತ್ರಶಾಸ್ತ್ರ ವಿಭಾಗದಲ್ಲಿ ಅತ್ಯಾಧುನಿಕ ಸೇವೆ ಒದಗಿಸುತ್ತಿರುವ ಸರ್ಕಾರದ ಸೂಪರ್‌ ಸ್ಪೆಷಾಲಿಟಿ ನೆಫ್ರೋ-ಮೂತ್ರ ಶಾಸ್ತ್ರ ಸಂಸ್ಥೆ (INU) ಮತ್ತೊಂದು ಮೈಲುಗಲ್ಲು ದಾಟಿದೆ.ಆಸ್ಪತ್ರೆಗಳು ಮತ್ತು ಆರೋಗ್ಯ ಸೇವೆ ಒದಗಿಸುವವರಿಗೆ ರಾಷ್ಟ್ರೀಯ ಮಾನ್ಯತಾ ಮಂಡಳಿಯ (NABH) ಮಾನ್ಯತೆಯನ್ನು ಪಡೆಯುವ ಮೂಲಕ ನೆಫ್ರೋ ಸಂಸ್ಥೆಯು ವಿಶೇಷ ಸ್ಥಾನ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಂತರ ಈ ಸ್ಥಾನಮಾನ ಪಡೆದ ಎರಡನೇ ಸಂಸ್ಥೆಯಾಗಿದೆ.ನೆಫ್ರೋ ಸಂಸ್ಥೆಗೆ NABH ಮಾನ್ಯತೆ ಸಿಕ್ಕಿರುವ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ಸಂತಸ ವ್ಯಕ್ತಪಡಿಸಿದ್ದಾರೆ.ಈ ಮಾನ್ಯತೆ ಪಡೆದ ಆಸ್ಪತ್ರೆಗಳು ರೋಗಿಗಳ ಸುರಕ್ಷತೆ ಮತ್ತು ಆರೈಕೆಯಲ್ಲಿ ಜಾಗತಿಕ ಮಾನದಂಡಗಳನ್ನು ಅನುಸರಿಸುತ್ತದೆ. ಆರೋಗ್ಯ ಆರೈಕೆ ಗುಣಮಟ್ಟ ಸೊಸೈಟಿ (ISQua) ಸೇರಿದಂತೆ ಹಲವು ಅಂತರರಾಷ್ಟ್ರೀಯ ಸಂಸ್ಥೆಗಳು ನೀಡುವ ಗುಣಮಟ್ಟದ ಸರ್ಟಿಫಿಕೇಟ್‌ ಪಡೆದುಕೊಂಡಿದೆ. ರೋಗಿಯ ಸುರಕ್ಷತೆ, ಆರೈಕೆಯ ಗುಣಮಟ್ಟ, ಸೋಂಕು ನಿಯಂತ್ರಣ, ಮೂಲಸೌಕರ್ಯ ಮತ್ತ...
ಬಿಡದಿ, ಬೈರಮಂಗಲ,ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಅಕ್ರಮ; ರೈತರ ರೊಚ್ಚು

ಬಿಡದಿ, ಬೈರಮಂಗಲ,ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಅಕ್ರಮ; ರೈತರ ರೊಚ್ಚು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್‌ ಸರ್ಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ. ಪ್ರತಿ ದಿನ 6 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗಿ ಕೆಎಂಎಫ್‌ಗೆ ತಲುಪುತ್ತಿದೆ. 3 ಸಾವಿರಕ್ಕೂ ಅಧಿಕ ರೈತರು ಹಾಗೂ ಕಾರ್ಮಿಕರು ಕೃಷಿಯನ್ನು ನಂಬಿಕೊಂಡಿದ್ದಾರೆ. ಇಷ್ಟು ಫಲವತ್ತಾದ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡು ಸೈಟುಗಳನ್ನು ನೀಡಲಾಗುತ್ತಿದೆ ಎಂದರು.ಹೌಸಿಂಗ್‌ ಬೋರ್ಡ್‌ನಿಂದ 560 ಎಕರೆ ಜಮೀನು ಸ್ವಾಧೀನಕ್ಕೆ ಪಡೆದು ಸೈಟುಗಳನ್ನು ನಿರ್ಮಿಸಿದೆ. ಆದರೂ ಇಲ್ಲಿ ಯಾರೂ ಮನೆಗಳನ್ನು ನಿರ್ಮಿಸಿಲ್ಲ. ಕೆಂಪೇಗೌಡ ಬಡಾವಣೆ, ಶಿವರಾಮ ಕಾರಂತ ಬಡಾವಣೆಗಳಲ್ಲೇ ಖಾಲಿ ಇದೆ. ಇ...
ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯ ಬ್ಯಾನರ್ ಅಡಿಯಲ್ಲಿ ಬಿಜೆಪಿ ಆಯೋಜಿಸಿದ್ದ ದುಂಡುಮೇಜು ಸಭೆಯಲ್ಲಿ, ಜಾತಿ ಜನಗಣತಿ (ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ) ಕುರಿತು ಏಳು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ. ಸೋಮಣ್ಣ, ಜೊತೆಗೆ ಪ್ರಭಾಕರ್ ಕೋರೆ, ವಿಜಯ್ ಸಂಕೇಶ್ವರ್ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಂಡಿದ್ದರು.ಸಭೆಯ ನಿರ್ಣಯ ಪ್ರಕಾರ, ಮತಾಂತರಗೊಂಡವರಿಗೆ ಮೀಸಲು ನೀಡಲಾದ ಉಪಜಾತಿ ಸಂಕೇತಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಲಿಂಗಾಯತ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಸೇರಿ ಒಟ್ಟು 47 ಉಪಜಾತಿಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಲಾಯಿತು."ಈ...
ಸಮೀಕ್ಷೆಯ ನೆಪದಲ್ಲಿ ಜಾತಿ-ಉಪ ಜಾತಿ ಹೆಸರಲ್ಲಿ ಸಮಾಜ ಒಡೆಯುವ ನೀಚತನ; ವಿಜಯೇಂದ್ರ ಆಕ್ರೋಶ

ಸಮೀಕ್ಷೆಯ ನೆಪದಲ್ಲಿ ಜಾತಿ-ಉಪ ಜಾತಿ ಹೆಸರಲ್ಲಿ ಸಮಾಜ ಒಡೆಯುವ ನೀಚತನ; ವಿಜಯೇಂದ್ರ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯ ಬ್ಯಾನರ್ ಅಡಿಯಲ್ಲಿ ಬಿಜೆಪಿ ಆಯೋಜಿಸಿದ್ದ ದುಂಡುಮೇಜು ಸಭೆಯಲ್ಲಿ, ಜಾತಿ ಜನಗಣತಿ (ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ) ಕುರಿತು ಏಳು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ. ಸೋಮಣ್ಣ, ಜೊತೆಗೆ ಪ್ರಭಾಕರ್ ಕೋರೆ, ವಿಜಯ್ ಸಂಕೇಶ್ವರ್ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಂಡಿದ್ದರು.ಸಭೆಯ ನಿರ್ಣಯ ಪ್ರಕಾರ, ಮತಾಂತರಗೊಂಡವರಿಗೆ ಮೀಸಲು ನೀಡಲಾದ ಉಪಜಾತಿ ಸಂಕೇತಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಲಿಂಗಾಯತ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಸೇರಿ ಒಟ್ಟು 47 ಉಪಜಾತಿಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಲಾಯಿತು."ಈ...
ಹಿಂದುಳಿದ ವರ್ಗಗಳ ಆಯೋಗಕ್ಕೆ ಎಲ್ಲಾ ಸಮುದಾಯಗಳ ಗಣತಿ ನಡೆಸುವ ಅಧಿಕಾರವಿಲ್ಲ: ಬೊಮ್ಮಾಯಿ

ಹಿಂದುಳಿದ ವರ್ಗಗಳ ಆಯೋಗಕ್ಕೆ ಎಲ್ಲಾ ಸಮುದಾಯಗಳ ಗಣತಿ ನಡೆಸುವ ಅಧಿಕಾರವಿಲ್ಲ: ಬೊಮ್ಮಾಯಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಾದ್ಯಂತ ಮನೆ ಮನೆಗೆ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕಾರ್ಯವನ್ನು ವಹಿಸಲಾಗಿರುವ ಹಿಂದುಳಿದ ವರ್ಗಗಳ ಆಯೋಗಕ್ಕೆ ಎಲ್ಲಾ ಸಮುದಾಯಗಳ ಗಣತಿಯನ್ನು ಕೈಗೊಳ್ಳುವ ಅಧಿಕಾರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಂಗಳವಾರ ಪ್ರಮುಖ ನಾಯಕರ ಸಭೆಯ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ದೇಶಾದ್ಯಂತ ಅಧಿಕೃತವಾಗಿ ಜಾತಿ ಗಣತಿಯನ್ನು ಕೈಗೊಳ್ಳುವುದಾಗಿ ಕೇಂದ್ರವು ಈಗಾಗಲೇ ಘೋಷಿಸಿದೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಯು ರಾಜ್ಯದ ಜನರನ್ನು ವಂಚಿಸುತ್ತಿದೆ. ಅವರು 15 ದಿನಗಳಲ್ಲಿ 1.5 ಕೋಟಿ ಮನೆಗಳನ್ನು ಸಮೀಕ್ಷೆ ಮಾಡುವ ಗುರಿಯನ್ನು ಹೊಂದಿದ್ದಾರೆ ಮತ್ತು ಪ್ರತಿ ಮನೆಯು 60 ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ. ಇದಕ್ಕೆ ಉತ್ತರಿಸಲು ಎಷ್ಟು ಸಮಯ ಬೇಕಾಗುತ್ತದೆ? ಇದು ಅಸಾಧ್ಯವಾದ ಕೆಲಸ ಎಂದರು.ರಾಜ್ಯ ಸರ್ಕಾರವು ಜಾತಿ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ಹಿಂದುಳಿದ ವರ್ಗ ಆಯೋಗಕ್ಕೆ ನೀಡಿದೆ. ಆಯೋಗವು ಜಾತಿ ಜನಗಣತಿ ನಡೆಸುವ ಅಧಿಕಾರವನ್ನು ಹೊಂದಿ...
ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು; ಹೈಕೋರ್ಟ್‌ ತೀರ್ಪು

ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು; ಹೈಕೋರ್ಟ್‌ ತೀರ್ಪು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದ ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧು ಎಂದು ಘೋಷಿಸಿದೆ. ಮಹತ್ವದ ತೀರ್ಪು ಪ್ರಕಟಿಸಿರುವ ಹೈಕೋರ್ಟ್, ಮತಗಳ ಮರು ಎಣಿಕೆ ಮಾಡುವಂತೆ ನಿರ್ದೇಶನ ನೀಡಿದೆ.2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಂಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಅವರ ವಿರುದ್ಧ ಕೇವಲ 248 ಮತಗಳ ಅಂತರದಿಂದ ಗೆದ್ದಿದ್ದರು. ಹೀಗಾಗಿ ಮತ ಎಣಿಕೆ ವೇಳೆ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಆರೋಪಿಸಿದ್ದರು. ಈ ಸಂಬಂಧದ ತಕರಾರು ಕುರಿತಂತೆ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ನಂಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅವರ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ ಎಂಬ ಆರೋಪವನ್ನೂ ಗಂಭೀರವಾಗಿ ಪರಿಗಣಿಸಿದೆ. ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಕ್ರಮಕ್ಕೆ ಸೂಚಿಸಿ ನಾಲ್ಕು ವಾರದಲ್ಲಿ ಮರು ಮತ ಎಣಿಕೆ ನಡೆಸಲು ಆದೇಶಿಸಿದೆ....
ಲಂಚಾವತಾರ; ಮೂವರು ವೈದ್ಯರ ಅಮಾನತು

ಲಂಚಾವತಾರ; ಮೂವರು ವೈದ್ಯರ ಅಮಾನತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಮಂಜಪ್ಪ ಸಿ.ಎನ್, ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಶೋಕ್ ಸೆಲ್ಕೆ ಅವರನ್ನು ಅಮಾನತುಗೊಳಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್ ಆದೇಶ ಹೊರಡಿಸಿದ್ದಾರೆ.‌ಲಂಚ ಸ್ವೀಕಾರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಬಿಐ ಈಗಾಗಲೇ ಎಫ್‌ಐಆರ್‌ ದಾಖಲಿಸಿದೆ ಎಂದು ವರದಿ ಮಾಡಿದೆ. ಈ ಕುರಿತು ಸಿಬಿಐ ಇಲಾಖೆಗೆ ಈ-ಮೇಲ್‌ ಮೂಲಕ ಮಾಹಿತಿ ರವಾನಿಸಿದೆ.ಈ ಹಿನ್ನೆಲೆಯಲ್ಲಿ ಈ ಮೂವರ ಅಮಾನತಿಗೆ ಇಲಾಖೆಯ ನಿಯ...
ಎಂ.ಎಸ್.ಪಿ ಯಡಿ ತಕ್ಷಣ ಹೆಸರು, ಉದ್ದು, ಶೇಂಗಾ ಖರೀದಿಗೆ ಕೇಂದ್ರಕ್ಕೆ ಎನ್. ಚಲುವರಾಸ್ವಾಮಿ ಮನವಿ.

ಎಂ.ಎಸ್.ಪಿ ಯಡಿ ತಕ್ಷಣ ಹೆಸರು, ಉದ್ದು, ಶೇಂಗಾ ಖರೀದಿಗೆ ಕೇಂದ್ರಕ್ಕೆ ಎನ್. ಚಲುವರಾಸ್ವಾಮಿ ಮನವಿ.

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಬೆಂಬಲಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು‌ ಮಾತನಾಡಿದರು. ಬೆಲೆ ಬೆಂಬಲ ಯೋಜನೆ (PSS) ಪ್ರಸ್ತುತ ಹೆಸರುಕಾಳು, ಉದ್ದು, ಸೂರ್ಯಕಾಂತಿ, ಸೋಯಾಬೀನ್ ಮತ್ತು ಶೇಂಗಾ ಬೆಲೆಗಳು ಕನಿಷ್ಠ ಬೆಂಬಲ ಬೆಲೆಗಿಂತ (MSP) ಕಡಿಮೆ ಇದೆ. ಇದರಿಂದ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಸಂಗ್ರಹಿಸಲು ಅನುಮೋದನೆ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದರು.ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಬೆಂಬಲ ಮತ್ತು ಸಹಕಾರ ನೀಡುತ್ತಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇವೆ. ರೈತರ ಪರವಾಗಿ SMAM, RKVY...
ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ.

ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ.

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಚಿಕ್ಕಮಗಳೂರು: ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವುಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ಶಿಕ್ಷಣ ಜ್ಞಾನಕಷ್ಟೇ ದಾರಿಯಾಗಿದೆ. ಸಾಮನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರೂ ತೊಡಗುವುದಕ್ಕೂ ವ್ಯತ್ಯಾಸವಿದೆ ಎಂದರು.ಕಿರು ಉದ್ದಿಮೆ ನಡೆಸುವ ರೈತರಿಗೆ, ಹಾಗೂ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಒಟ್ಟು 15 ಲಕ್ಷ ರೂಪಾಯಿ ಸಬ್ಸಡಿಯಲ್ಲಿ 9 ಲಕ್ಷ ಸಬ್ಸಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರೂಪಾಯಿ ಸಬ್ಸಿಡಿಯನ್ನು ಮಾತ್ರ ಕೇಂದ್ರ ಸರ್ಕಾರ ಭರಿಸುತ್ತಿದೆ. ಇದು ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಮಾತ...