Sunday, August 16

ವಿದೇಶ

ಮುಡಿಪು ಬಳಿ ಬ್ರಹ್ಮಶ್ರೀ ನಿಲಯ ಉದ್ಘಾಟನೆ; ಆಮಂತ್ರಣ ಪತ್ರಿಕೆ ಬಿಡುಗಡೆ

ಮುಡಿಪು ಬಳಿ ಬ್ರಹ್ಮಶ್ರೀ ನಿಲಯ ಉದ್ಘಾಟನೆ; ಆಮಂತ್ರಣ ಪತ್ರಿಕೆ ಬಿಡುಗಡೆ

ರಾಜ್ಯ, ವಿದೇಶ
ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮುಡಿಪು ವಲಯ ವತಿಯಿಂದ ಅಕ್ಟೊಬರ್ 12, ಭಾನುವಾರದಂದು ನಡೆಯಲಿರುವ ಬ್ರಹ್ಮಶ್ರೀ ನಿಲಯ ಉದ್ಘಾಟನೆ ಹಿನ್ನೆಲೆಯಲ್ಲಿ, ಪ್ರತಿಭಾವಂತ ಸಾಧಕರಿಗೆ ಸನ್ಮಾನ, ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್ 31 ರಂದು ಬಿಡುಗಡೆ ಮಾಡಲಾಯಿತು.ಮಂಗಳೂರು ಸಮೀಪದ ಹೂ ಹಾಕುವ ಕಲ್ಲು ಸನ್ನಿಧಿಯಲ್ಲಿ ಸಮಾರಂಭ ನೆರವೇರಿತು. ಸುಮಾರು 13 ವರ್ಷಗಳಿಂದ ಟಾರ್ಪಲ್ ಇನ್ ಹೊದಿಕೆಯ ಮನೆಯಲ್ಲಿ ಜೀವನ ನಡೆಸುತ್ತಿದ್ದ ಕಡುಕುಟುಂಬದ ಸಂಸಾರಕ್ಕೆ ಬಿಲ್ಲವ ವೇದಿಕೆ ಒಂದು ಸುಸಜ್ಜಿತ ಮನೆಯನ್ನು ನಿರ್ಮಾಣ ಮಾಡಿ ಕೊಟ್ಟಿತ್ತು. ಈ ಮನೆಯ ಹಸ್ತಾಂತರ ಕಾರ್ಯಕ್ರಮ ಕೂಡಾ12.10.2025 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದಂತಹ ಬಿಕೆ ಹರಿಪ್ರಸಾದ್, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶಾಸಕರಾದ ಸುನಿಲ್ ಕುಮಾರ್ ಕಾರ್ಕಳ ಹಾಗೂ ವಿಧಾನಸಭಾಧ್ಯಕ್ಷ ಯುಟಿ ಖಾದರ್, ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷ ಜಯ ರಾಜ ಕುದ್ರೋಳಿ, ಕೋಶಾಧಿಕಾರಿ ಪದ್ಮರಾಜ್ ಆರ್., ಬಿಜೆಪಿಯ ಜಿಲ್ಲ...
ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಮೂರ್ತಿಗಳ ಸಹಿ ಅಭಿಯಾನ ‘ಅನುಚಿತ’: ಕಿರಣ್ ರಿಜಿಜು

ಅಮಿತ್ ಶಾ ವಿರುದ್ಧ ನಿವೃತ್ತ ನ್ಯಾಯಮೂರ್ತಿಗಳ ಸಹಿ ಅಭಿಯಾನ ‘ಅನುಚಿತ’: ಕಿರಣ್ ರಿಜಿಜು

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಆರಂಭಿಸಿದ ಸಹಿ ಅಭಿಯಾನವನ್ನು ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು “ಅನುಚಿತ, ಅಸಂವಿಧಾನಿಕ” ಎಂದು ಟೀಕಿಸಿದ್ದಾರೆ.“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಸಂಸದೀಯ ವ್ಯವಸ್ಥೆ” ಎಂಬ ವಿಷಯದ ಕುರಿತಂತೆ ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಉಪರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಾರಂಭವಾದ ಸಹಿ ಅಭಿಯಾನವು ಸಂಪೂರ್ಣವಾಗಿ ರಾಜಕೀಯ ವಿಷಯವಾಗಿದ್ದು, ನಿವೃತ್ತ ನ್ಯಾಯಾಧೀಶರ ನಡೆ ದೇಶಕ್ಕೆ ತಪ್ಪು ಸಂದೇಶ ನೀಡುತ್ತದೆ ಎಂದು ರಿಜಿಜು ಅಭಿಪ್ರಾಯಪಟ್ಟರು. “ಅವರು ಹುದ್ದೆಯಲ್ಲಿ ಇದ್ದಾಗಲೂ ಸೈದ್ಧಾಂತಿಕವಾಗಿ ಪಕ್ಷಪಾತ ಹೊಂದಿದ್ದಿರಬಹುದು” ಎಂದು ವ್ಯಂಗ್ಯವಾಡಿದರು.ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದನ್ನು ಖಂಡಿಸಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಅವರು ತೆರೆದ ಟೀಕೆಗೆ ಒಳಪಡಿಸಿದರ...

ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡಾ. ಶರಣಪ್ರಕಾಶ್‌ ಪಾಟೀಲ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ ಈ ಕ್ಷೇತ್ರ ಹೆಚ್ಚು ತಲುಪದಿರುವುದು ಆತಂಕದ ವಿಷಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಉತ್ತಮ ಯೋಜನೆ ರೂಪಿಸಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ತಿಳಿಸಿದ್ದಾರೆಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿರುವ ಡಾ. ಎಸ್‌. ರಾಮಚಂದ್ರ ಆಡಿಟೋರಿಯಂನಲ್ಲಿ ಇಂಡಿಯನ್‌ ಡೆಂಟಲ್‌ ಅಸೋಸಿಯೇಷನ್‌ ಆಯೋಜಿಸಿದ ಡೆಂಟಿಸ್ಟ್‌ ಶೃಂಗಸಭೆ-2025 ರಲ್ಲಿ ಸಚಿವರು ಭಾಷಣ ಮಾಡಿದರು.ದಂತವೈದ್ಯಕೀಯ ಎನ್ನುವುದು ಅತ್ಯಂತ ಸೂಕ್ಷ್ಮ ಮತ್ತು ನಿಖರತೆ ಹೆಚ್ಚು ಕೋರುವ ವಿಷಯವಾಗಿದೆ. ದಂತ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಹಲ್ಲು ನೋವು ಬಂದರೆ ಅದನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ಇದು ಎಲ್ಲರಿಗೂ ಅನುಭವಕ್ಕೆ ಬಂದಿರಬಹುದು. ಇದಕ್ಕೆ ಚಿಕಿತ್ಸೆ ನೀಡುವ ದಂತ...
ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ

ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತಿಯಾದ ಬಳಿಕ ಡಿಜಿಪಿ ಹಾಗೂ ಐಜಿಪಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು.ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಡಾ. ಸಲೀಂ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ತಕ್ಷಣ ನಿಯಮಿತ ಡಿಜಿಪಿ ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ....
ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ, ಕಾಂಗ್ರೆಸ್‌ಗೆ ನಾಡಹಬ್ಬ ಎಂದರೆ ವೋಟಿನ ಡಬ್ಬ ಬಿಜೆಪಿಯಿಂದ ಹೋರಾಟ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ, ಕಾಂಗ್ರೆಸ್‌ಗೆ ನಾಡಹಬ್ಬ ಎಂದರೆ ವೋಟಿನ ಡಬ್ಬ ಬಿಜೆಪಿಯಿಂದ ಹೋರಾಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು,: ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈ ಕುರಿತು ಜನತೆಗೆ ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈಗ ಅವರೇ ಹೋರಾಟಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ ಪರವಾಗಿ ಅವರು ಹೇಗೆ ಹೋರಾಡುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಇದರಿಂದಾಗಿ ಕಾಂಗ್ರೆಸ್‌ ಮಾಡುತ್ತಿರುವ ಹೋರಾಟ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಮೇಲೆ ಮಾಡಿರುವ ಸುಳ್ಳು ಎಂದು ಸಾಬೀತಾಗಿದೆ. ಮತಗಳ್ಳತನ ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ ಎಂದು ತಿಳಿದುಬಂದಿದೆ. ಸಿ.ಎಂ.ಇಬ್ರಾಹಿಂ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿಸಿದ್ದೇನೆಂದು ಹೇಳಿದ್ದಾರೆ. ಈ ಬಗ್ಗೆ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು.ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿ ಬಿಹಾರ ಚುನಾವಣೆಗೆ ಹೋದರೆ, ಸಿಎಂ ಸಿದ್ದರಾಮಯ್ಯ ತಂಡ ಬೇರೆ ಕಡೆ ಚುನಾವಣೆಗೆ ಹೋಗಿದೆ. ಡಿ.ಕೆ.ಶಿವಕುಮಾರ್‌ ಬಂಡೆಯಂತೆ ಆಗುತ್ತಿದ್ದಾರೆ. ...

ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, “ರಾಜ್ಯದ ಮೂರು ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ಈ ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬಂದುದರಿಂದ ಹಿಂದೂಗಳಿಗೆ ಸೇರಿದ ಆಸ್ತಿ ಅಲ್ಲವೇ? ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಹಿಂದೂ ಸಮುದಾಯದವಲ್ಲ ಎಂದರೆ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಹಿಂದೂಗಳ ಅಪಮಾನ ಮಾಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಿಡಿಕಾರಿದ್ದಾರೆ. ರಾಜ್ಯದ 3 ಸಾವಿರಕ್ಕಿಂತಲೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ವಹಿಸಲಾಗಿದೆ. ಮುಜರಾಯಿ ವ್ಯಾಪ್ತಿಯಲ್ಲಿ ಇದ್ದ ಮಾತ್ರಕ್ಕೆ ಹಿಂದೂ ದೇವಸ್ಥಾನಗಳು ಹಿಂದೂಗಳ ಆಸ್ತಿಯಲ್ಲವೇ? ಈ ಮೂಲಕ ರಾಜ್ಯದ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ಸಿಗರೇ, ಹಿಂದೂಗಳ ಅಪ...
ರಾಹುಲ್ ಗಾಂಧಿಯನ್ನು ತಣ್ಣಗಾಗಿಸಲು ಡಿಕೆಶಿ ಕ್ಷಮೆ; ಬಿಜೆಪಿ ಟೀಕೆ

ರಾಹುಲ್ ಗಾಂಧಿಯನ್ನು ತಣ್ಣಗಾಗಿಸಲು ಡಿಕೆಶಿ ಕ್ಷಮೆ; ಬಿಜೆಪಿ ಟೀಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಗಮನಸೆಳೆದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 'ಮಾತೃ ಭೂಮಿಗಿಂತ ಕಾಂಗ್ರೆಸ್ ದೊಡ್ಡದಲ್ಲ' ಎಂದು ತೋರಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದ್ದಾರೆ.'ನಮಸ್ತೇ ಸದಾ ವತ್ಸಲೇ ಮಾತೃಭೂಮಿ...' ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆ ಮಾತೃಭೂಮಿಗೆ ಧನ್ಯತೆ ಸಮರ್ಪಿಸುವ ಸಂಕೇತವನ್ನು ರವಾನಿಸುತ್ತದೆ, ರಾಷ್ಟ್ರಭಕ್ತಿ ಪ್ರೇರೇಪಿಸುತ್ತದೆ, ಇದು ಸಂಘಟನೆಯ ಗೀತೆಯಷ್ಟೇ ಅಲ್ಲ ದೇಶಭಕ್ತಿಯ ಬದ್ಧತೆಯನ್ನು ಜಗತ್ತಿಗೇ ಸಾರಿ ಹೇಳುವ ಗೀತೆ ಎಂದು ವಿಜಯೇಂದ್ರ ಹೇಳಿದ್ದಾರೆ.ನಮ್ಮನ್ನು ಹೆರುವ ತಾಯಿಗೆ ಮಡಿಲ ಆಸರೆ ನೀಡುವವಳು ಭೂಮಿತಾಯಿ. ಈ ಹಿನ್ನಲೆಯಲ್ಲಿಯೇ 'ಮಾತೃ ಭೂಮಿ' ಎಂದು ಜನ್ಮದಾತೆಯಷ್ಟೇ ಜನ್ಮಭೂಮಿಯನ್ನು ಆರಾಧಿಸುತ್ತೇವೆ, ತಾಯ್ನೆಲಕ್ಕಾಗಿ ನಮ್ಮನ್ನೇ ಸಮರ್ಪಿಸಿಕೊಳ್ಳುವಷ್ಟು ಭಾವುಕರಾಗುತ್ತೇವೆ. ಜನನಿ, ಜನ್ಮ ಭೂಮಿ ಮಹತ್ವ ತಿಳಿಸಿಕೊಟ್ಟು ರಾಷ್ಟ್ರ ಭಕ್ತಿ ಪಡಿಮೂಡಿಸುವ RSS ಪ್ರಾರ್ಥನೆ ಬಗ್ಗೆ ಕಾಂಗ್ರೆಸ್ಸಿಗರಿಗೆ ಮೊದಲಿನಿಂದಲ...
ಗ್ಯಾರೆಂಟಿ ಹೆಸರಲ್ಲಿ ಕೈ ಕಾರ್ಯಕರ್ತರಿಗೆ 50 -60 ಸಾವಿರ ರೂ ಸಂಬಳ;  ರಾಜ್ಯದ ಬೊಕ್ಕಸ ಬರಿದು?

ಗ್ಯಾರೆಂಟಿ ಹೆಸರಲ್ಲಿ ಕೈ ಕಾರ್ಯಕರ್ತರಿಗೆ 50 -60 ಸಾವಿರ ರೂ ಸಂಬಳ; ರಾಜ್ಯದ ಬೊಕ್ಕಸ ಬರಿದು?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಯಿಂದ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಕಾಟು ಟೀಕೆ ಮಾಡಿರುವ ಜೆಡಿಎಸ್, ಹಿಮಾಚಲ ಪ್ರದೇಶ, ತೆಲಂಗಾಣ ಬಳಿಕ ಮುಂದಿನ ಸರದಿ ಕರ್ನಾಟಕ ಎಂದು ವಿಶ್ಲೇಷಿಸಿದೆ.ತೆಲಂಗಾಣದಲ್ಲೂ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಸರ್ಕಾರ ಈಗ ಸಂಪೂರ್ಣ ದಿವಾಳಿಯಾಗಿ ಬಿಟ್ಟಿದೆ ಏನು ಜೆಡಿಎಸ್ ಪಕ್ಷ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ.ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿಹೊಡೆದು, ಆ ದುಡ್ಡಲ್ಲಿ ಸರ್ಕಾರ ರಚಿಸಿದ್ದ ತೆಲಂಗಾಣ ಕಾಂಗ್ರೆಸ್‌ ಇಂದು, ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ನಯಾಪೈಸೆ ಇಲ್ಲವಾಗಿದೆ. ಭಿಕ್ಷೆ ಬೇಡಿದರೂ ಒಂದು ರೂ. ಸಿಗುತ್ತಿಲ್ಲ. ಸರ್ಕಾರದ ಬೊಕ್ಕಸವೂ ಬತ್ತಿಹೋಗಿದೆ. ಅಡಮಾನವಿಟ್ಟು ಹಣ ಪಡೆಯಲು 1 ಇಂಚು ಜಾಗವೂ ಸಹ ಸರ್ಕಾರದ ಬಳಿ ಇಲ್ಲ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.ಕರ್ನಾಟಕದ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ.ಶಿವಕುಮಾರ್ ಗ್ಯಾರಂಟಿ ಅನುಷ್ಠಾನ ಸಮಿತಿ ...
ಡಿಕೆಶಿಗೆ ಸ್ವಾಭಿಮಾನ ಇದ್ದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಬಿಸಾಕಬೇಕಿತ್ತು; ಅಶೋಕ್

ಡಿಕೆಶಿಗೆ ಸ್ವಾಭಿಮಾನ ಇದ್ದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಬಿಸಾಕಬೇಕಿತ್ತು; ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿಧಾನಸಭೆಯಲ್ಲಿ ಆರೆಸ್ಸೆಸ್ ಪ್ರಾರ್ಥನೆ ಗೀತೆ ಹಾಡಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿರುವ ಬೆಳವಣಿಗೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಬೇಸರ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆಶಿ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ."ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ.ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. 'ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತ...
KPTCL ಹಾಗೂ ಎಸ್ಕಾಂಗಳ ಅಧಿಕಾರಿ, ನೌಕರರಿಗೆ ಬೋನಸ್/ಅನುಗ್ರಹ ಭತ್ಯೆ; ರಾಜ್ಯ ಸರ್ಕಾರದ ಆದೇಶ

KPTCL ಹಾಗೂ ಎಸ್ಕಾಂಗಳ ಅಧಿಕಾರಿ, ನೌಕರರಿಗೆ ಬೋನಸ್/ಅನುಗ್ರಹ ಭತ್ಯೆ; ರಾಜ್ಯ ಸರ್ಕಾರದ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ಅಧಿಕಾರಿ/ನೌಕರರಿಗೆ 2024-25 ನೇ ಹಣಕಾಸು ವರ್ಷಕ್ಕೆ ಬೋನಸ್/ಅನುಗ್ರಹ ಪೂರ್ವಕವನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿ, ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ:ಆಇ 339 ವೆಚ್ಚ-1/2025 2:26.08.2025 ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಪ್ರಸ್ತಾವನೆಯನ್ನು ಪರಿಗಣಿಸಿ ,ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳ ನೌಕರರಿಗೆ 2024-25ನೇ ಆರ್ಥಿಕ ವರ್ಷಕ್ಕೆ ಕನಿಷ್ಟ ತಲಾ ರೂ.7,000/- ರಂತೆ ಅನುಗ್ರಹ ಭತ್ಯೆಯನ್ನು (Ex-gratia) ನೀಡಬೇಕೆಂದು ಸೂಚಿಸಿದ್ದಾರೆ.ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ನಿಗಮಗಳ ಆಂತರಿಕ ಸಂಪನ್ಮೂಲಗಳಿಂದ ಭರಿಸುವ ಷರತ್ತಿಗೊಳಪಟ್ಟು ಉಲ್ಲೇಖಿತ (2)ರ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯ ಸಹಮತಿ ನೀಡಲಾಗಿದೆ ಎಂದು ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ವಿನೋದ್ ಕುಮಾ‌ರ್ ಡಿ.ಎಂ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾ...