Sunday, August 16

ವಿದೇಶ

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಸೆಪ್ಟೆಂಬರ್‌ನಲ್ಲಿ ಲೋಕಾರ್ಪಣೆ:

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ನಾಗರಿಕರ ಬಹುದಿನಗಳ ಕನಸಾದ ವೈದ್ಯಕೀಯ ಕಾಲೇಜು ಮುಂದಿನ ತಿಂಗಳು ಲೋಕಾರ್ಪಣೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಸಚಿವರು ಈ ಮಾಹಿತಿ ನೀಡಿದರು.433.94 ಕೋಟಿ ರೂ. ವೆಚ್ಚದಲ್ಲಿ ಈ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಮಂಜೂರಾತಿ ನೀಡಿ ಕಾಮಗಾರಿ ಆರಂಭಿಸಲಾಗಿತ್ತು. ಅದೀಗ ಶೇಕಡ 95ರಷ್ಟು ಪೂರ್ಣಗೊಂಡಿದ್ದು, ಉಳಿದ ಸಣ್ಣಪುಟ ಕೆಲಸಗಳು ಮುಂದಿನ ಕೆಲವೇ ದಿನಗಳಲ್ಲಿ ಮುಗಿಯಲಿದೆ ಎಂದರು.ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಈ ವೈದ್ಯಕೀಯ ಕಾಲೇಜಿನ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈಗಾಗಲೇ ನೀಡಿರುವ ಉತ್ತರದಲ್ಲಿ ಸ್ಪಷ್ಟಪಡಿಸಿದ್ದೇನೆ ಎಂದು ಸಚಿವರು ತಿಳಿಸಿದರು.ಈಗಾಗಲೇ ಸ್ಥಳೀಯ ಶಾಸಕರೊಂದಿಗೆ ಎರಡು ಮೂರು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದು ಡಾ. ಪಾಟೀಲ್‌ ಹೇಳಿದರು.ಸೂಪರ...
ಕರ್ನಾಟಕ ಆಶಾ ಕಾರ್ಯಕರ್ತೆಯರ ಹೋರಾಟ.. 3 ದಿನವೂ ಶಕ್ತಿ ಪ್ರದರ್ಶನ

ಕರ್ನಾಟಕ ಆಶಾ ಕಾರ್ಯಕರ್ತೆಯರ ಹೋರಾಟ.. 3 ದಿನವೂ ಶಕ್ತಿ ಪ್ರದರ್ಶನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿಗಳ ಜನವರಿ ಜಾರಿಗಾಗಿ ಒತ್ತಾಯಿಸಿ ಕರ್ನಾಟಕದ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14 ರವರೆಗೆ ಮೂರು ದಿನಗಳ, ಅಹೋರಾತ್ರಿ, ಜಿಲ್ಲಾ ಮಟ್ಟದ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರದ ಪ್ರೋತ್ಸಾಹ ಧನ ಸೇರಿದಂತೆ ಕನಿಷ್ಠ ₹10,000 ಮಾಸಿಕ ಗೌರವಧನ ಮತ್ತು ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಅನುಗುಣವಾಗಿ ₹1,000 ವೇತನ ಹೆಚ್ಚಳ ಮಾಡಬೇಕೆಂದು ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.ಗ್ರಾಮೀಣ ಮತ್ತು ಕೊಳೆಗೇರಿ ಆರೋಗ್ಯ ಸೇವೆಗೆ ಮೊದಲ ಸಂಪರ್ಕ ಬಿಂದುವಾಗಿದ್ದ ಆಶಾ ಕಾರ್ಯಕರ್ತರು, ಭರವಸೆಗಳ ಹೊರತಾಗಿಯೂ ನಿರಾಶೆಗೊಂಡಿದ್ದಾರೆ ಎಂದು ಹೇಳುತ್ತಾರೆ. ಜನವರಿಯಲ್ಲಿ ಬೆಂಗಳೂರಿನಲ್ಲಿ 40,000 ಸದಸ್ಯರು ಪ್ರತಿಭಟನೆ ನಡೆಸಿದರು, ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 2025 ರಿಂದ ಪರಿಷ್ಕೃತ ಗೌರವಧನ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಪ್ರೋತ್ಸಾಹ ಧನ ಮತ್ತು ಕೊರತೆಗಳ ಪಾವತಿಗೆ ಭರವಸೆ ನೀಡಿದ್ದರು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘ ನೆನಪಿಸಿಕೊಂಡಿದೆ.ಆದಾಗ್ಯೂ, ಏಳು ತಿಂಗಳ ನಂತರ, ಯಾವುದೇ ಔಪಚಾರಿಕ ಆದೇಶವನ್ನು ಹೊರ...

ಸಿನಿ ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪು

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿ ಮತ್ತೆ ಜೈಲುಪಾಲು. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ.ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ನೇತೃತ್ವದ ಪೀಠವು, “ಆರೋಪಿ ಎಷ್ಟೇ ಪ್ರಭಾವಿ ಇದ್ದರೂ ಕಾನೂನಿಗಿಂತ ಮೇಲಲ್ಲ” ಎಂದು ಸ್ಪಷ್ಟ ಸಂದೇಶ ನೀಡಿದೆ.2023ರ ಜೂನ್ 9ರಂದು ಚರಂಡಿಯಲ್ಲಿ ಪತ್ತೆಯಾದ 33 ವರ್ಷದ ರೇಣುಕಸ್ವಾಮಿ ಶವಪತ್ತೆಯಾಗಿತ್ತು. ಈ ಪ್ರಕರಣದಲ್ಲಿ, ನಟ ದರ್ಶನ್ ಅವರನ್ನು ಜೂನ್ 11ರಂದು ಬಂಧಿಸಲಾಗಿತ್ತು. ಪವಿತ್ರಾ ಗೌಡರನ್ನು ಮೊದಲ ಹಾಗೂ ದರ್ಶನ್ ಅವರನ್ನು ಎರಡನೇ ಆರೋಪಿಗಳೆಂದು ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು.ಮೊದಲು ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದರೂ, ಹೈಕೋರ್ಟ್ ಅನುಮೋದಿಸಿತ್ತು. ಸರ್ಕಾರ ಆ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು.ಅದೇ ವೇಳೆ, ಆರೋಪಿಗಳಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕಲ್ಪಿಸಬಾರದೆ...

ಜಾಗತಿಕ ಶಿಕ್ಷಣ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ.ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ - 2025 ಅನ್ನು ಆಯೋಜಿಸಿದೆ.ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ.ಈ ಕುರಿತು ಮಾಹಿತಿ ಹಂಚಿಕೊಂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್, 'ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗ...
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಬಗ್ಗೆ ಸಿಬಿಐ ತನಿಖೆ ನಡೆಯಲಿ, ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಬಿಜೆಪಿ

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಬಗ್ಗೆ ಸಿಬಿಐ ತನಿಖೆ ನಡೆಯಲಿ, ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಬಿಜೆಪಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಇತ್ತೀಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರು ಭಾಗಿಯಾಗಿರುವುದಕ್ಕೆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ಕೇಂದ್ರ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ.ವಿಧಾನಸಭೆಯಲ್ಲಿ ಮಾತನಾಡಿದ ಅಶೋಕ, ಘಟನೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಸೂಕ್ಷ್ಮತೆ ಇದ್ದರೆ, ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದರು. “ಕಾಲ್ತುಳಿತ ಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತೆಗೆದುಕೊಳ್ಳಬೇಕು. ಅದರೊಂದಿಗೆ, ಅವರು ರಾಜೀನಾಮೆ ನೀಡಬೇಕು ಮತ್ತು ಈ ವಿಷಯದಲ್ಲಿ ಸಿಬಿಐ ತನಿಖೆ ನಡೆಸಬೇಕು” ಎಂದು ಅವರು ಆಗ್ರಹಿಸಿದರು. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ನಿಯಮಗಳನ್ನು ರೂಪಿಸಬೇಕು ಮತ್ತು ಸದನ ಸಮಿತಿಯನ್ನು ನೇಮಿಸಬೇಕು. ದುಃಖಿತ ಪೋಷಕರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಹೇಳಿದರು...
ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡಿರುವ ಕೆ.ಎನ್. ರಾಜಣ್ಣ, ತಮ್ಮ ವಜಾ ಹಿಂದೆ “ಅತಿದೊಡ್ಡ ಷಡ್ಯಂತ್ರ” ಅಡಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. “ನನ್ನ ವಜಾ ಹಿಂದೆ ಪಿತೂರಿ ಇದೆ. ಯಾರು, ಏನು ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಶೀಘ್ರವೇ ಬಯಲು ಮಾಡುತ್ತೇನೆ,” ಎಂದು ರಾಜಣ್ಣ ಎಚ್ಚರಿಕೆ ನೀಡಿದರು. “ಇದು ಹೈಕಮಾಂಡ್ ನಿರ್ಧಾರ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ,” ಎಂದೂ ಅವರು ಸ್ಪಷ್ಟಪಡಿಸಿದರು....
ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪಕ್ಷದ ನಾಯಕರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಆದರೆ, ಕಾಂಗ್ರೆಸ್ ಒಳಗಿನಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣ ಭಿನ್ನ ಚಿತ್ರಣವನ್ನೇ ನೀಡುತ್ತಿದೆ.ಇತ್ತೀಚಿನ ದಿನಗಳಲ್ಲಿ ನಾಯಕತ್ವ ಬದಲಾವಣೆಯ ಕುರಿತು, ಜೊತೆಗೆ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ನೀಡಿದ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ಹೇಳಿಕೆಗಳನ್ನು ರಾಜಣ್ಣ ಮಾಡುತ್ತಿದ್ದರು.ಈ ಹಿನ್ನೆಲೆಯಲ್ಲಿ, ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದು, ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ..

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ರಾಜಕಾರಣ ಇಂದು ಅಚ್ಚರಿಯ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸುತ್ತಾ ಬಂದಿರುವ ಸಚಿವ ಕೆ.ಎನ್.ರಾಜಣ್ಣ ಅವರು ರಾಜೀನಾಮೆ ನೀಡಿ ಸಿದ್ದರಾಮಯ್ಯನವರ ಸಂಪುಟದಿಂದ ಹೊರ ನಡೆದಿದ್ದಾರೆ.ರಾಹುಲ್ ಗಾಂಧಿ ನೀಡಿದ್ದ ಮತಗಳ್ಳತನ ಆರೋಪ ಬಗ್ಗೆ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದ ರಾಜಣ್ಣ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.ಸಹಕಾರ ಸಚಿವ ಕೆಎನ್ ರಾಜಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದ್ದು, ಈ ಬಗ್ಗೆ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಈ ಸಂದರ್ಭದಲ್ಲಿ ಸದನದಲ್ಲಿ ಗದ್ದಲ ಉಂಟಾಯಿತು. ಆ ವೇಳೆ ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ ಈ ಬಗ್ಗೆ ಮುಖ್ಯಮಂತ್ರಿಯವರು ಹೇಳಿಕೆ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಸಿಎಂ ಆಪ್ತ ಮೂಲಗಳ ಹೇಳಿಕೆ: ಕೆ.ಎನ್.ರಾಜಣ್ಣ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ಕಚೇ...
ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡಿ,ಕಲಾಗ್ರಾಮವಾಗಿ ಅಭಿವೃದ್ಧಿಪಡಿಸಿ; ಶೋಭಾ ಕರಂದ್ಲಾಜೆ ಆಗ್ರಹ

ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡಿ,ಕಲಾಗ್ರಾಮವಾಗಿ ಅಭಿವೃದ್ಧಿಪಡಿಸಿ; ಶೋಭಾ ಕರಂದ್ಲಾಜೆ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡುವುದಲ್ಲದೇ, ಅದನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾಗ್ರಾಮವಾಗಿ ಅಭಿವೃದ್ಧಿಪಡಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಸಂಬಂಧ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯ ಅವ್ರಿಗೆ ಪಾತ್ರ ಬರೆದಿದ್ದಾರೆ. ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರುನಾಡಿನ ಮನೆಮನಗಳೂ ಮಾತನಾಡುತ್ತವೆ.‌ ಎಲ್ಲರ‌ ಮನೆಮಾತಾದ ಅಂತಹ ಅದ್ಭುತ ನಟಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದ, ಅವರ ಸಮಾಧಿಸ್ಥಳವನ್ನು ಉಳಿಸಿಕೊಳ್ಳಲಾಗದ ಸ್ಥಿತಿಗೆ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ ಎಂದವರು ಪಾತ್ರದಲ್ಲಿ ಹೇಳಿದ್ದಾರೆ.ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ, ಅಸಂಖ್ಯಾತ ಅಭಿಮಾನಿಗಳಿಗೂ ಹಾಗೂ ಅವರ ಅಪೂರ್ವ ಸಾಧನೆಗಳಿಗೂ ಅನ್ಯಾಯ ಮಾಡಿರುವುದು ಅತ್ಯಂತ ನೋವುಂಟುಮಾಡಿದೆ ಎಂದಿದ್ದಾರೆ.ಆ ನಿಟ್ಟಿನಲ್ಲಿ, ಡಾ. ವಿಷ್ಣುವರ್ಧನ್ ಅವರ ಸಮಾಧ...
ಆರ್.ವಿ ರಸ್ತೆ–ಬೊಮ್ಮಸಂದ್ರ ಹಳದಿ ಮಾರ್ಗ ಮೆಟ್ರೋ ರೈಲು ಸೇವೆಗೆ ಮೋದಿ ಚಾಲನೆ

ಆರ್.ವಿ ರಸ್ತೆ–ಬೊಮ್ಮಸಂದ್ರ ಹಳದಿ ಮಾರ್ಗ ಮೆಟ್ರೋ ರೈಲು ಸೇವೆಗೆ ಮೋದಿ ಚಾಲನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದಕ್ಷಿಣ ಬೆಂಗಳೂರಿನ ಆರ್.ವಿ. ರಸ್ತೆಯಿಂದ ಪಶ್ಚಿಮದ ಬೊಮ್ಮಸಂದ್ರವರೆಗಿನ ಬಹುನಿರೀಕ್ಷಿತ ‘ಹಳದಿ ಮಾರ್ಗ’ ಮೆಟ್ರೋ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು. ಒಟ್ಟು 19.15 ಕಿ.ಮೀ ಉದ್ದ, 16 ನಿಲ್ದಾಣಗಳನ್ನು ಒಳಗೊಂಡಿರುವ ಈ ಮಾರ್ಗವನ್ನು ₹7,160 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ರತಿ ದಿನ ಸుమಾರು 8 ಲಕ್ಷ ಪ್ರಯಾಣಿಕರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದರು.ನಿಲ್ದಾಣಗಳ ಪಟ್ಟಿ: ಆರ್.ವಿ ರಸ್ತೆ (ಹಸಿರು ಮಾರ್ಗ ಸಂಪರ್ಕ), ರಾಗಿಗುಡ್ಡ, ಜಯದೇವ ಆಸ್ಪತ್ರೆ (ಭವಿಷ್ಯದಲ್ಲಿ ನೇರಳೆ ಮಾರ್ಗ ಸಂಪರ್ಕ), ಬಿಟಿಎಂ ಲೇಔಟ್, ಕೇಂದ್ರ ರೇಷ್ಮೆ ಮಂಡಳಿ, ಎಚ್‌ಎಸ್‌ಆರ್ ಲೇಔಟ್, ಆಕ್ಸ್‌ಫರ್ಡ್ ಕಾಲೇಜು, ಹೊಂಗಸಂದ್ರ, ಕೂಡ್ಲು ಗೇಟ್, ಸಿಂಗಸಂದ್ರ, ಹೊಸ ರೋಡ್, ಎಲೆಕ್ಟ್ರಾನಿಕ್ ಸಿಟಿ–1, ಕೋನಪ್ಪನ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ, ಬೊಮ್ಮಸಂದ್ರ.ಸಂಚಾರ ದಟ್ಟಣೆ ಕಡಿತದ ನಿರೀಕ್ಷೆ: ಹೊಸ ಮಾರ್ಗವು ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಎಲೆಕ್ಟ...