Sunday, August 16

ವಿದೇಶ

RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಹುಬ್ಬಳ್ಳಿ: “ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಇಲ್ಲದಿದ್ದರೆ ಇವತ್ತಿಗೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು” ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “RSS ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಅವರಿಗೇ ಸಂಘದ ಬಗ್ಗೆ ಏನು ಅರಿವು ಇದೆ?” ಎಂದು ಪ್ರಶ್ನಿಸಿದರು.“ಶತಮಾನಗಳ ಇತಿಹಾಸ ಹೊಂದಿರುವ ಶಿಸ್ತಿನ ಸಂಘಟನೆ ಇದಾಗಿದೆ. ದೇಶದಲ್ಲಿ ಹಿಂದೂ ಸಮುದಾಯದ ಏಕತೆ ಹಾಗೂ ಸಂಸ್ಕೃತಿಯ ಉಳಿವಿಗೆ ಸಂಘವೇ ಆಧಾರ. ಕಾಂಗ್ರೆಸ್ ನಾಯಕರು, ವಿಶೇಷವಾಗಿ ಖರ್ಗೆ ಹಾಗೂ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹಾಗೂ RSS ವಿರುದ್ಧ ಕೆಟ್ಟ ಪದಗಳನ್ನು ಬಳಸುತ್ತಿದ್ದಾರೆ. ಧಾನ್ಯರಾಗಬೇಕೆಂದು ಬಯಸುವವರು ಇಂತಹ ಮಟ್ಟಕ್ಕೆ ಇಳಿಯಬಾರದು,” ಎಂದು ಶೆಟ್ಟರ್ ವಾಗ್ದಾಳಿ ನಡೆಸಿದರು.“ಕಾಂಗ್ರೆಸ್‌ ಪಕ್ಷದ ನಾಯಕರಿಗೆ RSS ವಿರುದ್ಧ ದ್ವೇಷ ಹರಡುವುದೇ ಈಗ ಕೆಲಸವಾಗಿದೆ. ಮುಸ್ಲಿಂ ಸಮುದಾಯದ ಮತ ಲಾಭಕ್ಕಾಗಿ ಸಂಘದ ವಿರುದ್ಧ ಟೀಕಿಸುತ್ತಿದ್ದಾರೆ. ...
RSS ಧ್ಯೇಯ ಹಾಗೂ ಕಾರ್ಯಕ್ರಮದಲ್ಲಿ ಜಾತಿಗಳ ನಡುವೆ ಅಂತರಕ್ಕೆ ಅವಕಾಶವಿಲ್ಲ; ಕಾಂಗ್ರೆಸ್ಸಿನ ‘ಭಾಗಿಧಾರಿ ಸಮಾವೇಶ’ ಬಗ್ಗೆ ವಿಜಯೇಂದ್ರ ಟೀಕೆ

RSS ಧ್ಯೇಯ ಹಾಗೂ ಕಾರ್ಯಕ್ರಮದಲ್ಲಿ ಜಾತಿಗಳ ನಡುವೆ ಅಂತರಕ್ಕೆ ಅವಕಾಶವಿಲ್ಲ; ಕಾಂಗ್ರೆಸ್ಸಿನ ‘ಭಾಗಿಧಾರಿ ಸಮಾವೇಶ’ ಬಗ್ಗೆ ವಿಜಯೇಂದ್ರ ಟೀಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಆರೆಸ್ಸೆಸ್-ಬಿಜೆಪಿಯನ್ನು ವಿಷಕಾರಕ ಎಂದಿದ್ದ ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಯಲ್ಲಿ ಶುಕ್ರವಾರ ನಡೆದ 'ಭಾಗಿಧಾರಿ ಸಮಾವೇಶ'ದಲ್ಲಿ ನಿಂತು ಹಿಂದುಳಿದ ಸಮುದಾಯಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.1956 ರಲ್ಲಿ OBC ಸಮುದಾಯಗಳಿಗೆ ಮೀಸಲಾತಿ ನೀಡಲು ಶಿಫಾರಸು ಮಾಡಿದ್ದ ಕಾಕಾ ಕಾಲೇಲ್ಕರ್ ವರದಿಯನ್ನು ಹೊಸಕಿ ಹಾಕಿ ಹಿಂದುಳಿದವರ ಭವಿಷ್ಯಕ್ಕೆ ವಿಷ ಹಾಕಿದ್ದು ನಿಮ್ಮ ಪಂಡಿತ್ ಜವಾಹರ್ ಲಾಲ್ ನೆಹರು ಅವರು ಎಂಬುದನ್ನು ನೀವು ಮರೆತುಬಿಟ್ಟಿರಾ? ಎಂದು ವಿಜಯೇಂದ್ರ ಅವರು ಎಐಸಿಸಿ ಅಧ್ಯಕ್ಷರನ್ನು ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ಪಕ್ಷದ 39 ವರ್ಷಗಳ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹಿಂದುಳಿದವರಿಗೆ ಮೀಸಲಾತಿ ಏಕೆ ನೀಡಲಿಲ್ಲ? ಕರ್ನಾಟಕದಲ್ಲಿ ಹಿಂದುಳಿದವರ ಬದುಕಿಗೆ ಬೆಳಕಾಗಲು ಮೀಸಲಾತಿ ಜಾರಿಗೊಳಿಸಿದ ಡಿ. ದೇವರಾಜ ಅರಸರ ರಾಜಕೀಯ ಬದುಕಿಗೆ ನಿಮ್ಮ ಸಮ್ಮುಖದಲ್ಲೇ ವಿಷ ಹಾಕಿದ್ದು ನಿಮ್ಮ ಕಾಂಗ್ರೆಸ್ ನ ಅಂದಿನ ಅಧಿನಾಯಕಿ ಇಂದಿರಾ ಗಾಂಧಿ ಯವರು ಎಂಬುದನ್ನು ಇಷ್ಟು ಬೇಗ ಮರೆತುಬಿಟ್ಟಿರಾ? ಅಷ್ಟ...
ಪರಿಷತ್, ಮಂಡಳಿ–ನಿಗಮಗಳಿಗೆ ನೇಮಕ ಪ್ರಕ್ರಿಯೆಗೆ ಅಂತಿಮ ರೂಪ: ಶೀಘ್ರವೇ ಹೆಸರು ಘೋಷಣೆ

ಪರಿಷತ್, ಮಂಡಳಿ–ನಿಗಮಗಳಿಗೆ ನೇಮಕ ಪ್ರಕ್ರಿಯೆಗೆ ಅಂತಿಮ ರೂಪ: ಶೀಘ್ರವೇ ಹೆಸರು ಘೋಷಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ 29 ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರ ಪಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಗುರುವಾರ ಸಂಜೆ ಅಂತಿಮ ರೂಪ ನೀಡಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ಈ ಪಟ್ಟಿಯ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.ಈ ಕುರಿತು ಸುಳಿವು ನೀಡಿರುವ ಸಿಎಂ ಸಿದ್ದರಾಮಯ್ಯ, "ನಾನು ಮತ್ತು ಶಿವಕುಮಾರ್‌ ನಮ್ಮ ಶಿಫಾರಸುಗಳನ್ನು ನೀಡಿದ್ದಾರೆವು. ಹೈಕಮಾಂಡ್‌ ಅಂತಿಮ ತೀರ್ಮಾನ ಕೈಗೊಳ್ಳಲಿದೆ" ಎಂದು ಸ್ಪಷ್ಟಪಡಿಸಿದರು.ಆಗಸ್ಟ್ 11ರಂದು ನಡೆಯಲಿರುವ ವಿಧಾನಸಭೆಯ ಜಂಟಿ ಅಧಿವೇಶನಕ್ಕೂ ಮುನ್ನ ನಾಲ್ವರು ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನವಾಗುತ್ತದೆಯೇ ಎಂಬ ಪ್ರಶ್ನೆಗೆ ಅವರು, "ಬಹುಶಃ ಆಗಬಹುದು" ಎಂದು ಪ್ರತಿಕ್ರಿಯಿಸಿದರು. ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಪ್ರಕ್ರಿಯೆ ಮಧ್ಯೆ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರ ಹೆಸರಿನ ಕುರಿತು ಹೈಕಮಾಂಡ್‌ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿರುವುದರಿಂದ ಈಗಾಗಲೇ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಬದಲಾವಣೆ ಸಾ...
ಕಾಂಗ್ರೆಸ್ಸಿನ 9 ಲೋಕಸಭಾ ಸೀಟ್ ಗೆಲುವಿನಲ್ಲಿ ಯಾವುದೋ ಷಡ್ಯಂತ್ರ: ಸಿ.ಟಿ.ರವಿ ಆರೋಪ

ಕಾಂಗ್ರೆಸ್ಸಿನ 9 ಲೋಕಸಭಾ ಸೀಟ್ ಗೆಲುವಿನಲ್ಲಿ ಯಾವುದೋ ಷಡ್ಯಂತ್ರ: ಸಿ.ಟಿ.ರವಿ ಆರೋಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 9 ಲೋಕಸಭಾ ಸೀಟ್ ಗೆಲ್ಲುವಲ್ಲಿ ಯಾವುದೋ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.ಇಲ್ಲಿನ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಷಡ್ಯಂತ್ರ ಮೀರಿ ಎನ್‍ಡಿಎ 19 ಸೀಟ್ ಗೆದ್ದಿದ್ದು ಅದು ಪ್ರಜಾಪ್ರಭುತ್ವದ ಗೆಲುವು. ಇಲ್ಲದೇ ಇದ್ದರೆ, ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ಗೆಲ್ಲಲು ಹೇಗೆ ಸಾಧ್ಯವಾಗುತ್ತಿತ್ತು ಎಂದು ಪ್ರಶ್ನೆಯನ್ನು ಮುಂದಿಟ್ಟರು.ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕೋಡಿ, ದಾವಣಗೆರೆ, ಚಾಮರಾಜನಗರ, ಹಾಸನದಲ್ಲಿ ಕಾಂಗ್ರೆಸ್ ಗೆಲ್ಲಬೇಕಾದರೆ ಚುನಾವಣಾ ಅಕ್ರಮ ನಡೆಸಿಯೇ ಗೆದ್ದಿದ್ದಾರೆ ಅನಿಸುತ್ತದೆ. ಕಾಂಗ್ರೆಸ್ಸಿನವರೇ ಚುನಾವಣಾ ಅಕ್ರಮ ನಡೆಸಿದ್ದಾರೆಂಬ ಅನುಮಾನ ತಮ್ಮದು ಎಂದು ನುಡಿದರು. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ಆಗಬೇಕೆಂದು ಒತ್ತಾಯಿಸಿದರು. ಮುಖ್ಯಮಂತ್ರಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು ಚುನಾವಣಾ ಮತದಾರರ ಪಟ್ಟಿ...
ಶೋಭಾ ಕರಂದ್ಲಾಜೆ ನಿರ್ಲಕ್ಷ್ಯ ತೋರಿಕೆ: ರಾಜ್ಯದ ಹಿತಕ್ಕೆ ಧ್ವನಿ ಎತ್ತಲಿಲ್ಲ ಎಂದು ಕೆಪಿಸಿಸಿ ವಾಗ್ದಾಳಿ

ಶೋಭಾ ಕರಂದ್ಲಾಜೆ ನಿರ್ಲಕ್ಷ್ಯ ತೋರಿಕೆ: ರಾಜ್ಯದ ಹಿತಕ್ಕೆ ಧ್ವನಿ ಎತ್ತಲಿಲ್ಲ ಎಂದು ಕೆಪಿಸಿಸಿ ವಾಗ್ದಾಳಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ ನಡೆಯುತ್ತಿರುವ ಅನ್ಯಾಯದ ವಿರುದ್ಧ ರಾಜ್ಯದ ಐವರು ಕೇಂದ್ರ ಸಚಿವರಲ್ಲಿ ಯಾರೊಬ್ಬರೂ ಧ್ವನಿ ಎತ್ತಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಗುರುವಾರ ತೀವ್ರ ಟೀಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿಕಾರಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಬಾಬು , ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಹಾಗೂ ಕೇಂದ್ರದ ಮಂತ್ರಿಗಳು ಇದರ ವಿರುದ್ಧ ಧ್ವನಿ ಎತ್ತಬೇಕಾಗಿತ್ತು. ಕರ್ನಾಟಕದಿಂದ ಐವರು ಕೇಂದ್ರ ಸಚಿವರಾಗಿದ್ದಾರೆ. ರಾಜ್ಯದ ವಿಚಾರ ಬಂದಾಗ ಇವರುಗಳು ಧ್ವನಿ ಎತ್ತುತ್ತಿಲ್ಲ. ಶೋಭಾ ಕರಂದ್ಲಾಜೆ ಅವರು ಕಾರ್ಮಿಕ ಹಾಗೂ ಸಣ್ಣ ಕೈಗಾರಿಕೆ ಎರಡು ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಧಾರ್ಮಿಕ ವಿಚಾರವಾಗಿ ಬೆಂಕಿ ಹಚ್ಚಲು ಸಿಕ್ಕ ಎಲ್ಲಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಿದ್ದಾರೆ...
ಸಸಕಿ ಯೋಜನೆ, ಪ್ರಸಾದ್ ಯೋಜನೆ: ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ ಸರ್ಕಾರ ಅಸ್ತು

ಸಸಕಿ ಯೋಜನೆ, ಪ್ರಸಾದ್ ಯೋಜನೆ: ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ ಸರ್ಕಾರ ಅಸ್ತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಯೆಲ್ಲಮ್ಮ ಬೆಟ್ಟಗಳ 215.37 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗೆ ಸರ್ಕಾರ ಅನುಮೋದನೆ ನೀಡಲಾಗಿದೆಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಈ ಕುರಿತಂತೆ ಮಾಧ್ಯಮಗಳಿಗೆ ವಿವರ ಒದಗಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಯೆಲ್ಲಮ್ಮ ಬೆಟ್ಟಗಳ 215.37 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.ಇದು ಸಸಕಿ ಯೋಜನೆ (ರೂ. 100 ಕೋಟಿ), ಪ್ರಸಾದ್ ಯೋಜನೆ (ರೂ. 18 ಕೋಟಿ), ರೇಣುಕಾ ಯೆಲ್ಲಮ್ಮ ದೇವಾಲಯ ಅಭಿವೃದ್ಧಿ ಪ್ರಾಧಿಕಾರ (ರೂ. 97 ಕೋಟಿ), ಮತ್ತು ಪ್ರವಾಸೋದ್ಯಮ ಇಲಾಖೆ (ರೂ. 15 ಕೋಟಿ) ಗಳನ್ನು ಕೆಟಿಪಿಪಿ ಕಾಯ್ದೆಯಡಿ ಡಿಪಿಎಆರ್ ಮೂಲಕ ಕೆಟಿಪಿಎಆರ್ ಅಡಿಯಲ್ಲಿ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು....
ಈ ಬಾರಿ ವಿವಿಧ ಜೈಲುಗಳಲ್ಲಿರುವ 46 ಕೈದಿಗಳಿಗೆ ಬಿಡುಗಡೆ ಭಾಗ್ಯ

ಈ ಬಾರಿ ವಿವಿಧ ಜೈಲುಗಳಲ್ಲಿರುವ 46 ಕೈದಿಗಳಿಗೆ ಬಿಡುಗಡೆ ಭಾಗ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಗಳ ಜೈಲುಗಳಲ್ಲಿರುವ 46 ಜೀವಾವಧಿ ಶಿಕ್ಷೆಗೊಳಗಾದವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಈ ಕುರಿತಂತೆ ಮಾಧ್ಯಮಗಳಿಗೆ ವಿವರ ಒದಗಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಶಿಫಾರಸುಗಳ ಆಧಾರದ ಮೇಲೆ ವಿವಿಧ ಜೈಲುಗಳಲ್ಲಿರುವ 46 ಜೀವಾವಧಿ ಶಿಕ್ಷೆಗೊಳಗಾದವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ತಿಳಿಸಿದರು.ಹೆಚ್ಚುವರಿಯಾಗಿ, ಸಂವಿಧಾನದ 161 ನೇ ವಿಧಿಯ ಅಡಿಯಲ್ಲಿ ಕೇಂದ್ರ ಗೃಹ ಸಚಿವಾಲಯದಿಂದ ಅನುಮೋದನೆ ಪಡೆದ ನಂತರ ಮೂವರು ಅಪರಾಧಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.ದು ಎಂದು ಸಚಿವ ಪಾಟೀಲ್ ತಿಳಿಸಿದರು....
ಕರ್ನಾಟಕದಲ್ಲಿ ಮತದಾರರ ಪಟ್ಟಿ ಅಕ್ರಮ ನಡೆದಿಲ್ಲ ಎಂದ ಚುನಾವಣಾ  ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿ ಅಕ್ರಮ ನಡೆದಿಲ್ಲ ಎಂದ ಚುನಾವಣಾ ಆಯೋಗ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಚುನಾವಣಾ ವಂಚನೆ ಆರೋಪವನ್ನು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ತಳ್ಳಿಹಾಕಿದ್ದಾರೆ. ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಸಿದ್ಧಪಡಿಸಲಾಗಿದೆ ಮತ್ತು ಪ್ರತಿಗಳನ್ನು ಮಾನ್ಯತೆ ಪಡೆದ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.“ಭಾರತೀಯ ಚುನಾವಣಾ ಆಯೋಗವು ಈಗಾಗಲೇ ತಿಳಿಸಿದಂತೆ, ಮತದಾರರ ಪಟ್ಟಿಯನ್ನು ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿದೆ. 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಮೊದಲು ಕೈಗೆತ್ತಿಕೊಂಡ ವಿಶೇಷ ಸಾರಾಂಶ ಪರಿಷ್ಕರಣೆ-2024 ರ ಸಮಯದಲ್ಲಿ, ಎಲ್ಲಾ 224 ವಿಧಾನಸಭಾ ಕ್ಷೇತ್ರಗಳ ಕರಡು ಮತ್ತು ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಸೇರಿದಂತೆ ಎಲ್ಲಾ ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಒದಗಿಸಲಾಗಿದೆ, ”ಎಂದು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ವಿ. ಅನ್ಬುಕುಮಾರ್ ಗುರುವಾರ ಸ್ಪಷ್ಟಪಡಿಸಿದ್ದಾರೆ.ಪಟ್ಟಿಗಳ ಕರಡು ಮತ್ತು ಅಂತಿಮ ಪ್ರಕಟಣೆಯ ನಡುವೆ, ಸುಮಾರು 9.17 ಲಕ್ಷ ಹ...
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ: ಮುಂಬರುವ ವಿಧಾನಸಭೆಯಲ್ಲಿ ಮಂಡಿಸಲು ಸಚಿವ ಸಂಪುಟ ತೀರ್ಮಾನ

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ: ಮುಂಬರುವ ವಿಧಾನಸಭೆಯಲ್ಲಿ ಮಂಡಿಸಲು ಸಚಿವ ಸಂಪುಟ ತೀರ್ಮಾನ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಾಲ್ಯ ವಿವಾಹ ತಡೆಯಲು ಕಾನೂನನ್ನು ಮತ್ತಷ್ಟು ಬಿಗಿಗೊಳಿಸಲು ರಾಜ್ಯಸರ್ಕಾರ ಮುಂದಾಗಿದೆ.ಬಾಲ್ಯ ವಿವಾಹವನ್ನು ಶಿಕ್ಷಾರ್ಹ ಅಪರಾಧವೆಂದು ಸರ್ಕಾರ ಘೋಷಿಸಿದ್ದು, ಈ ಸಂಬಂಧ ಮಸೂದೆಯನ್ನು ಮುಂಬರುವ ವಿಧಾನಸಭೆಯಲ್ಲಿ ಮಂಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಈ ಕುರಿತಂತೆ ಮಾಧ್ಯಮಗಳಿಗೆ ವಿವರ ಒದಗಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಮಸೂದೆ, 2025 ಅನ್ನು ಸಚಿವ ಸಂಪುಟ ಅನುಮೋದಿಸಿದೆ ಎಂದು ತಿಳಿಸಿದರು. ಇದು ಬಾಲ್ಯ ವಿವಾಹವನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ಪ್ರಸ್ತಾಪವನ್ನು ಹೊಂದಿದೆ. ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದವರು ಪ್ರಕಟಿಸಿದರು.ಶಿಫಾರಸುಗಳ ಆಧಾರದ ಮೇಲೆ ವಿವಿಧ ರಾಜ್ಯಗಳ ಜೈಲುಗಳಲ್ಲಿರುವ 46 ಜೀವಾವಧಿ ಶಿಕ್ಷೆಗೊಳಗಾದವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ. ಹೆಚ್ಚುವರಿಯಾಗಿ, ಸಂವಿಧಾನದ 161 ನೇ...
ಮೈಸೂರು ದಸರಾ: ಗಜಪಯಣದ ಮೊದಲ ಪಟ್ಟಿಯಲ್ಲಿ ಈ ಆನೆಗಳು

ಮೈಸೂರು ದಸರಾ: ಗಜಪಯಣದ ಮೊದಲ ಪಟ್ಟಿಯಲ್ಲಿ ಈ ಆನೆಗಳು

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಜಗದ್ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಗಳಿಗೆ ತಯಾರಿ ನಡೆಯುತ್ತಿದೆ. ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಮೊದಲ ಹಂತದಲ್ಲಿ ಆಯ್ಕೆಯಾದ 9 ಆನೆಗಳ ಪಟ್ಟಿಯನ್ನು ಇಂದು ಅವರು ಬಿಡುಗಡೆ ಮಾಡಿದರು. ಆ.4 ರಂದು ಗಜಪಯಣಕ್ಕೆ ಚಾಲನೆ!ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಾಗುತ್ತದೆ.ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಮೊದಲ ಹಂತದಲ್ಲಿ ಆಯ್ಕೆಯಾದ 9 ಆನೆಗಳ ಪಟ್ಟಿಯನ್ನು ಇಂದು ಬಿಡುಗಡೆ… pic.twitter.com/Y7FJMtqZqt— Eshwar Khandre (@eshwar_khandre) July 24, 2025ಅಭಿಮನ್ಯು, ಭೀಮ, ಕಂಜನ್, ಧನಂಜಯ, ಪ್ರಶಾಂತ್, ಮಹೇಂದ್ರ, ಏಕಲವ್ಯ, ಕಾವೇರಿ...