Monday, August 17

ವಿದೇಶ

ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ: ಎನ್ ಚಲುವರಾಯಸ್ವಾಮಿ

ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ: ಎನ್ ಚಲುವರಾಯಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.ಅವರು ಇಂದು ಕೆ‌.ಆರ್.ಎಸ್ ನ ಕಾವೇರಿ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು. ಇದು ಉತ್ತಮ ಸಮಯವಾಗಿದ್ದು, ತಾಲ್ಲೂಕುಗಳ ಕೊನೆಯ ಭಾಗದಲ್ಲಿರುವ ಕೆರೆಗಳಿಗೆ ನೀರು ತುಂಬುವಂತೆ ನೋಡಿಕೊಳ್ಳಿ ಎಂದರು.ಕೆ.ಆರ್.ಎಸ್ ಜಲಾಶಯ ತುಂಬಿದ್ದು, ರೈತರು, ಜನಪ್ರತಿನಿಧಿಗಳು ಹಾಗೂ ಸಂಘಟನೆಗಳಿಂದ ಕೃಷಿ ಪದ್ಧತಿಗೆ ನೀರು ಸಿಗುತ್ತಿಲ್ಲ ಎಂಬ ದೂರು ಬಾರದಂತೆ ನೋಡಿಕೊಂಡು ಎಚ್ಚರಿಕೆಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.ಕೆರೆಗಳಿಂದ ಹೂಳು ತೆಗೆಯುವ ಕೆಲಸ ಹಾಗೂ‌ ಕೆರೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಇಲ್ಲ. ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅನುದಾನ ಪಡೆದು ಕೆರೆಗಳ ನಿರ್ವಹಣೆಯ ಕಾಮಗಾರಿಗಳನ್ನು ನಡೆಸಿ ಎಂದರು.ರೈತರ ಪರವಾಗಿ ಸದಾ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತದೆ. ಮುಂಗಾರು ಬೆ...
ಸಿದ್ದರಾಮಯ್ಯ ಆರ್ ಕಾಂಗ್ರೆಸ್ ಶಾಸಕರ ಪ್ರಶ್ನೆಗಳಿಗೆ ಮೊದಲು ಉತ್ತರಿಸಲಿ; ವಿಜಯೇಂದ್ರ ಸವಾಲ್

ಸಿದ್ದರಾಮಯ್ಯ ಆರ್ ಕಾಂಗ್ರೆಸ್ ಶಾಸಕರ ಪ್ರಶ್ನೆಗಳಿಗೆ ಮೊದಲು ಉತ್ತರಿಸಲಿ; ವಿಜಯೇಂದ್ರ ಸವಾಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರು ರ್ಯಾಲಿಯಲ್ಲಿ ನವೆಂಬರ್‌ನಲ್ಲಿ ಅಥವಾ ಅದಕ್ಕೂ ಮೊದಲು ರಾಜಕೀಯ ಕ್ರಾಂತಿಯ ಬಗ್ಗೆ ತಮ್ಮ ಭಾಷಣಗಳಲ್ಲಿ ಸುಳಿವು ನೀಡಿದ್ದಾರೆ ಎಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಕಾಂಗ್ರೆಸ್ ಪಕ್ಷವು ಶನಿವಾರ 'ಸಾಧನಾ ಸಮಾವೇಶ' ನಡೆಸಿತು. ಈ ಬಗ್ಗೆ ಭಾನುವಾರ ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ, "ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬುದರ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಚರ್ಚೆಗಳು ನಡೆಯುತ್ತಿವೆ. ಆಡಳಿತ ಪಕ್ಷದೊಳಗೆ ಕುದುರೆ ವ್ಯಾಪಾರ ಜೋರಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ" ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಅವರ ಪಕ್ಷದ ಶಾಸಕರೇ ತಿರುಗಿಬಿದ್ದ ನಂತರವೇ ಅವರು 50 ಕೋಟಿ ರೂ.ಗಳನ್ನು ನೀಡಲು ನಿರ್ಧರಿಸಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಆದಾಗ್ಯೂ, ಈ ಶಾಸಕರಿಗೆ ಇನ್ನು ಮುಂದೆ ಮುಖ್ಯಮಂತ್ರಿಯ ಮೇಲೆ ವಿಶ್ವಾಸವಿಲ್ಲ ಎಂಬುದು ಸ್ಪಷ್ಟವಾಗಿದೆ. ಪರಿಣಾಮ...
ಜಿಎಸ್‌ಟಿಯಿಂದ ರಾಜ್ಯದ ವ್ಯಾಪಾರಿಗಳನ್ನು ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯ ಕ್ರಮ; ಡಿಕೆಶಿ ಅಭಯ

ಜಿಎಸ್‌ಟಿಯಿಂದ ರಾಜ್ಯದ ವ್ಯಾಪಾರಿಗಳನ್ನು ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯ ಕ್ರಮ; ಡಿಕೆಶಿ ಅಭಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದ ಜಿಎಸ್‌ಟಿಯಿಂದಾಗಿ ಕರ್ನಾಟಕದ ಸಣ್ಣ ವ್ಯಾಪಾರಿಗಳು ಮತ್ತು ಬೀದಿ ವ್ಯಾಪಾರಿಗಳು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಹೇಳಿದ್ದಾರೆ.ಸರ್ಕಾರದ ಸವಲತ್ತುಗಳನ್ನು ಜನರಿಗೆ ವಿತರಿಸಲು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “40 ಲಕ್ಷ ರೂ.ಗಿಂತ ಹೆಚ್ಚಿನ ವ್ಯವಹಾರ ನಡೆಸುತ್ತಿರುವ ಎಲ್ಲರಿಗೂ ನೋಟಿಸ್ ನೀಡಲಾಗುತ್ತಿದೆ ಮತ್ತು ತೆಂಗಿನಕಾಯಿ ಮಾರಾಟಗಾರರು, ತರಕಾರಿ ಮಾರಾಟಗಾರರು ಇತ್ಯಾದಿಗಳಿಗೆ ನೋಟಿಸ್ ನೀಡಲಾಗುತ್ತಿದೆ. ಇದು ಕೇಂದ್ರ ಸರ್ಕಾರದ ಸಾಧನೆ. ವ್ಯಾಪಾರಿಗಳು ಚಿಂತಿಸಬೇಕಾಗಿಲ್ಲ, ಅವರ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ' ಎಂದರು.“ಕಳೆದ ಎರಡು ವರ್ಷಗಳಿಂದ ನಾವು ಕೇಂದ್ರಕ್ಕೆ ನಿಧಿಗಾಗಿ ಹಲವಾರು ಮನವಿಗಳನ್ನು ಮಾಡಿದ್ದೇವೆ, ಆದರೆ ಬಿಜೆಪಿ ಸಂಸದರಲ್ಲಿ ಯಾರೂ ರಾಜ್ಯದ ಪರವಾಗಿ ಮಾತನಾಡುತ್ತಿಲ್ಲ. ಅವರಿಗೆ ರಾಜ್ಯದ ಬಡವರ ಬಗ್ಗೆ ಕಾಳಜಿ ಇಲ್ಲ. ಕರ್ನಾಟಕವು ಕೇಂದ್ರಕ್ಕೆ ನೀಡುವ ಪ್ರತಿ 100 ರೂ.ಗೆ ತೆರಿಗೆ ರೂಪದಲ್ಲಿ ಕ...
‘ಡಿಕೆಶಿಯನ್ನು ಎಂದೂ ಅವಮಾನಿಸಿಲ್ಲ’: ಸಿಎಂ ಸಿದ್ದರಾಮಯ್ಯ

‘ಡಿಕೆಶಿಯನ್ನು ಎಂದೂ ಅವಮಾನಿಸಿಲ್ಲ’: ಸಿಎಂ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಮೈಸೂರಿನಲ್ಲಿ ನಡೆದ ‘ಸಾಧನಾ ಸಮಾವೇಶ’ ರ್ಯಾಲಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವಮಾನಿಸಿದ್ದಾರೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸಹೋದ್ಯೋಗಿ ಶಿವಕುಮಾರ್ ಅವರನ್ನು ಎಂದಿಗೂ ಅವಮಾನಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.“ಸರ್ಕಾರದ ಸಾಧನೆಗಳ ಬಗ್ಗೆ ಸುಳ್ಳುಗಳನ್ನು ಹರಡುತ್ತಿರುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಯಾವಾಗಲೂ ಚರ್ಚೆಗೆ ಸಿದ್ಧರಿದ್ದೇವೆ” ಎಂದು ಕಬಿನಿ ಜಲಾಶಯದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಭಾನುವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಉಪಮುಖ್ಯಮಂತ್ರಿ ಶಿವಕುಮಾರ್ ಅವರನ್ನು ಅವಮಾನಿಸಿದ್ದಾರೆ ಎಂಬ ಬಿಜೆಪಿಯ ಟೀಕೆಗೆ ಮತ್ತಷ್ಟು ಪ್ರತಿಕ್ರಿಯಿಸಿದ ಅವರು, “ಒಂದು ಸಮಾರಂಭದಲ್ಲಿ ಉಪಸ್ಥಿತರಿರುವವರನ್ನು ಸ್ವಾಗತಿಸುವುದು ವಾಡಿಕೆ. ಆ ಕ್ಷಣದಲ್ಲಿ ಶಿವಕುಮಾರ್ ಹಾಜರಿಲ್ಲದ ಕಾರಣ, ನಾನು ಅವರ ಹೆಸರನ್ನು ಉಲ್ಲೇಖಿಸಲಿಲ್ಲ. ಆದ್ದರಿಂದ ಇಲ್ಲಿ ಅವಮಾನದ ಪ್ರಶ್ನೆಯೇ ಇಲ್ಲ” ಎಂದರು....
ಜಿಎಸ್‌ಟಿ ಗೊಂದಲ: ಸಣ್ಣ ವ್ಯಾಪಾರಿಗಳ ರಕ್ಷಣೆಗಾಗಿ ಬಿಜೆಪಿ ಸಹಾಯವಾಣಿ ಆರಂಭ

ಜಿಎಸ್‌ಟಿ ಗೊಂದಲ: ಸಣ್ಣ ವ್ಯಾಪಾರಿಗಳ ರಕ್ಷಣೆಗಾಗಿ ಬಿಜೆಪಿ ಸಹಾಯವಾಣಿ ಆರಂಭ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಿಎಸ್‌ಟಿ ವಿಚಾರವಾಗಿ ರಾಜ್ಯದಲ್ಲಿ ಉಂಟಾದ ಗೊಂದಲದ ಹಿನ್ನೆಲೆ, ಸಣ್ಣ ಮತ್ತು ಬೀದಿ ವ್ಯಾಪಾರಿಗಳ ಹಿತಾಸಕ್ತಿಯ ರಕ್ಷಣೆಗೆ ಕರ್ನಾಟಕ ಬಿಜೆಪಿ ಸಹಾಯವಾಣಿ ಆರಂಭಿಸಲು ನಿರ್ಧರಿಸಿದ್ದು, ಈ ಸಹಾಯವಾಣಿ ಜುಲೈ 21ರಿಂದ ಕಾರ್ಯನಿರ್ವಹಿಸಲಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.88842 45123 ಈ ನಂಬರಿನಲ್ಲಿ ಲಭ್ಯವಿರುವ ಸಹಾಯವಾಣಿ ಮೂಲಕ ವ್ಯಾಪಾರಿಗಳು ತಮ್ಮ ಸಮಸ್ಯೆಗಳನ್ನು ಹಾಗೂ ಗೊಂದಲಗಳನ್ನು ತಿಳಿಸಬಹುದಾಗಿದೆ.“ನೋಟಿಸ್‌ಗಳ ಮೂಲಕ ವ್ಯಾಪಾರಿಗಳಿಗೆ ಭಯದ ವಾತಾವರಣ” ರಾಜ್ಯ ಸರ್ಕಾರ ಬೀದಿ ವ್ಯಾಪಾರಿಗಳು ಹಾಗೂ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್ ಜಾರಿ ಮಾಡಿರುವುದು ಭಯ ಮತ್ತು ಗೊಂದಲ ಉಂಟುಮಾಡಿದೆ ಎಂದು ಆರೋಪಿಸಿದ ನಾರಾಯಣಸ್ವಾಮಿ, “ವ್ಯಾಪಾರಿಗಳು ತೆರಿಗೆ ವಂಚಕರು ಅಲ್ಲ. ಆದರೆ ಅವರು ನಿಯಮಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ. ಈ ಬಗ್ಗೆಯೇ ಸರ್ಕಾರ ಜಾಗೃತಿ ಮೂಡಿಸಬೇಕಿತ್ತು” ಎಂದು ಟೀಕಿಸಿದರು.ರಾಜ್ಯ ಸರ್ಕಾರ, ತೆರಿಗೆಗೆ ಒಳಪಡುವ ಆದಾಯದ ಪ್ರಮಾಣ ಏನು ಎಂಬುದರ ಬಗ್ಗೆ ಸ್ಪಷ್ಟತೆ ...

BBMP ವಿಭಜನೆ ಅಧಿಕಾರ ವಿಕೇಂದ್ರೀಕರಣಕ್ಕೆ ಹೊಸ ಹೆಜ್ಜೆ? ಸಾರ್ವಜನಿಕರ ಅಭಿಪ್ರಾಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು ಐದು ಪ್ರತ್ಯೇಕ ಮಹಾನಗರ ಪಾಲಿಕೆಗಳಾಗಿ ವಿಭಜಿಸಲು ಅಧಿಕೃತ ಆದೇಶ ಹೊರಡಿಸಿದೆ. ನೂತನವಾಗಿ ರಚನೆಯಾಗಲಿರುವ ಈ ಐದು ಪಾಲಿಕೆಗಳು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಸರ್ಕಾರ ಪ್ರಕಟಿಸಿದೆ.ಐದು ಹೊಸ ಪಾಲಿಕೆಗಳ ವಿವರ: ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ ಬೆಂಗಳೂರು ಉತ್ತರ ಮಹಾನಗರ ಪಾಲಿಕೆ ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ ಬೆಂಗಳೂರು ಪೂರ್ವ ಮಹಾನಗರ ಪಾಲಿಕೆBBMPಯ ಕೇಂದ್ರ ಕಚೇರಿಯನ್ನು ಆಗಸ್ಟ್ 10ರೊಳಗೆ GBA ಕೇಂದ್ರ ಕಚೇರಿಯಾಗಿ ಪರಿವರ್ತನೆ ಮಾಡಲಾಗುವುದು. ಅಗಸ್ಟ್ 11ರಿಂದ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಈ ಹೊಸ ಪಾಲಿಕೆಗಳ ರಚನೆಗೆ ಸಂಬಂಧಿಸಿದ ವಿಧೇಯಕದ ಕುರಿತು ಚರ್ಚಿಸಿ, ಬಿಲ್ ಪಾಸಾಗುವ ಸಾಧ್ಯತೆಯಿದೆ....
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದಲಿತರಿಗೆ ನೀಡಲಿ; ರಮೇಶ್ ಬಾಬು ಸವಾಲ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದಲಿತರಿಗೆ ನೀಡಲಿ; ರಮೇಶ್ ಬಾಬು ಸವಾಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಜೆಪಿಯವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರಿಂದ ರಾಜೀನಾಮೆ ಕೊಡಿಸಿ ದಲಿತ ನಾಯಕರನ್ನು ಕೂರಿಸಲಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸವಾಲು ಹಾಕಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ರಮೇಶ್ ಬಾಬು, ರಾಜ್ಯದಲ್ಲಿ ವಿಜಯೇಂದ್ರ ಅವರು ರಾಜ್ಯಮಟ್ಟದಲ್ಲಿ ಹಾಗೂ ರಾಷ್ಟ್ರಮಟ್ಟದಲ್ಲಿ ಜೆ.ಪಿ.ನಡ್ಡಾ ಅವರು 14ನೇ ಅಧ್ಯಕ್ಷರು.‌ ಈ ವಿಜಯೇಂದ್ರ ಅವರು ಮಲ್ಲಿಕಾರ್ಜುನ ‌ಖರ್ಗೆ‌ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿ‌ ಎಂದು ತಮ್ಮ ರಾಜಕೀಯ ಎಳಸುತನವನ್ನ ಪ್ರದರ್ಶನ ಮಾಡಿದ್ದಾರೆ‌‌. ಎಂದು ಟೀಕಿಸಿದರು.ಅವರ ತಂದೆ ಯಡಿಯೂರಪ್ಪ ಅವರಿಂದ ರಾಜಕೀಯ ಕಲಿತಿದ್ದಾರೆ. ಒಳ್ಳೆ ಭವಿಷ್ಯವಿದೆ ಎಂದು ನನಗೆ ಅನಿಸಿತ್ತು.‌ ಆದರೆ ಅವರ ಇತ್ತೀಚಿನ ಹೇಳಿಕೆಗಳನ್ನು ನೋಡುತ್ತಿದ್ದರೆ ಭೌದ್ದಿಕ ದಿವಾಳಿತನವನ್ನ ಪ್ರದರ್ಶಿಸುತ್ತಿವೆ. ಅವರ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ದೆಹಲಿ‌ ದಂಡಯಾತ್ರೆಯನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅನಿವಾರ್ಯವಾಗಿ ರಾಜಕೀಯ ನಿವೃತ್ತಿ...
‘ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ, ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ’; ಸಿಎಂ ಪಂಥಾಹ್ವಾನ

‘ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ, ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ’; ಸಿಎಂ ಪಂಥಾಹ್ವಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ. ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ. ಅವರು ನನ್ನ ಈ ಸವಾಲು ಸ್ವೀಕರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.ಮೈಸೂರಿನಲ್ಲಿ ಶನಿವಾರ 2,578 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಾಗೂ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ ಎಂದರು.ಬಿಜೆಪಿ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದರೆ, ಜೆಡಿಎಸ್‌ನ ಕುಮಾರ...
ಪ್ರತಿ ಮನೆಯಲ್ಲೂ ಪೊಲೀಸ್: ಕರ್ನಾಟಕದ ವಿಶಿಷ್ಟ ಪ್ರಯೋಗಕ್ಕೆ ಚಾಲನೆ

ಪ್ರತಿ ಮನೆಯಲ್ಲೂ ಪೊಲೀಸ್: ಕರ್ನಾಟಕದ ವಿಶಿಷ್ಟ ಪ್ರಯೋಗಕ್ಕೆ ಚಾಲನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: “ನಮ್ಮ ಪೊಲೀಸರು ಜನಸ್ನೇಹಿಯಾಗಿರಬೇಕು. ಜನರು ಅವರನ್ನು ತಮ್ಮ ಮನೆಯವನಂತೆ ನೋಡಬೇಕು,” ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದ್ದಾರೆ. ಶುಕ್ರವಾರ ‘ಪ್ರತಿ ಮನೆಯಲ್ಲೂ ಪೊಲೀಸ್’ ಎಂಬ ಉದ್ದೇಶಪೂರ್ಣ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ಅವರು ಬೆಂಗಳೂರಿನ ಗೋವಿಂದರಾಜನಗರದಲ್ಲಿ ಚಾಲನೆ ನೀಡಿದರು.ಕಾರ್ಯಕ್ರಮಕ್ಕಾಗಿ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಅಧಿಕೃತ ಕೈಪಿಡಿಯನ್ನು ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, “ಇದು ದೇಶದ ಮೊದಲ ಹೆಜ್ಜೆಯಾಗಿದೆ. ಇಂತಹ ಕಾರ್ಯಕ್ರಮವನ್ನು ಇನ್ನೆಲ್ಲೂ ಜಾರಿಗೆ ತರಲಾಗಿಲ್ಲ. ಇದು ಮಾದರಿಯ ಉಪಕ್ರಮವಾಗಲಿದೆ” ಎಂದರು.“ಬೀಟ್ ಪೊಲೀಸ್‌ಗಳು ಮನೆಗಳಿಗೆ ಭೇಟಿ ನೀಡುವ ಮೂಲಕ, ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ ಪರಿಹಾರಕ್ಕಾಗಿ ಕ್ರಮ ಕೈಗೊಳ್ಳುವ ಬಗೆಗೆ ಯೋಜನೆ ರೂಪಿಸಲಾಗಿದೆ. ಶಂಕಾಸ್ಪದ ಚಟುವಟಿಕೆಗಳು, ಮಕ್ಕಳ ಸಮಸ್ಯೆಗಳು ಅಥವಾ ಮಾದಕ ದ್ರವ್ಯಗಳ ಕುರಿತ ಮಾಹಿತಿಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಈ ಮಾಹಿತಿಯು ಡಿಜಿಟಲ್ ರೂಪದಲ್ಲಿ ದಾಖಲಾಗಿ, ಕ್ರಮಬದ್ಧವಾಗಿ ಬಳಕೆಯಾಗಲಿದೆ,” ಎಂದರು.ಟ್ಯಾಬ್ಲೆಟ್, ಡೇಟಾ ಸಂಗ್ರಹ ಮತ್ತು ...
ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ; ಪ್ರಮುಖ ಮಸೂದೆಗಳಿಗೆ ತಯಾರಿ

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ; ಪ್ರಮುಖ ಮಸೂದೆಗಳಿಗೆ ತಯಾರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 11 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ ನ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವರು.ಈ ಬಾರಿ ಅಧಿವೇಶನವು ರಾಜಕೀಯವಾಗಿ ತೀವ್ರ ಚರ್ಚೆಗೆ ಕಾರಣವಾಗುವ ಸಾಧ್ಯತೆ ಹೊಂದಿದ್ದು, ಸರ್ಕಾರದ ನಿರ್ಧಾನಗಳನ್ನು ಗುರಿಯಾಗಿಸಿ ವಿಪಕ್ಷಗಳು ಉಗ್ರ ರಣತಂತ್ರ ರೂಪಿಸುತ್ತಿವೆ.ಐಪಿಎಲ್ ವಿಜಯೋತ್ಸವ ಸಂದರ್ಭ ನಡೆದ ಕಾಲ್ತುಳಿತ ಪ್ರಕರಣ, ನೂತನ ಜಾತಿ ಗಣತಿ ಕುರಿತ ಸರ್ಕಾರದ ನಿರ್ಧಾರ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದ ಸಮೀಕ್ಷೆಯಲ್ಲಿನ ಅಸಮಾನತೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ದಪ್ಪ ಧ್ವನಿ ಎತ್ತಲಿವೆ.ಪ್ರಮುಖ ಮಸೂದೆಗಳ ಮಂಡನೆ ನಿರೀಕ್ಷೆ ಅಧಿವೇಶನದಲ್ಲಿ ‘ಕರ್ನಾಟಕ ರೋಹಿತ್ ವೇಮುಲಾ ಮಸೂದೆ’, ‘ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ ನಿಷೇಧ ಮಸೂದೆ’, ‘ದ್ವ...