Monday, August 17

ವಿದೇಶ

ಕಾಂಕ್ರೀಟ್ ಶಾಖದ ಸುಳಿಯಲ್ಲಿ ಬೆಂಗಳೂರು! ಬಿಜೆಪಿ-ಜೆಡಿಎಸ್ ನಾಯಕರಿಗೆ ಸುರ್ಜೇವಾಲಾ ಪ್ರಶ್ನೆ

ಕಾಂಕ್ರೀಟ್ ಶಾಖದ ಸುಳಿಯಲ್ಲಿ ಬೆಂಗಳೂರು! ಬಿಜೆಪಿ-ಜೆಡಿಎಸ್ ನಾಯಕರಿಗೆ ಸುರ್ಜೇವಾಲಾ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಜೆಪಿ-ಜೆಡಿಎಸ್ ಬೆಂಗಳೂರಿನ ಪರಿಸರ ಹಾಗೂ ಜೀವ ಪರಿಸರವನ್ನು ಹೇಗೆ ನಾಶಪಡಿಸುತ್ತಿದೆ ಎಂಬುದರ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾಡಿರುವ ಟ್ವೀಟ್ ಗಮನಸೆಳೆದಿದೆ.ಹವಾನಿಯಂತ್ರಿತ ನಗರ, ಉದ್ಯಾನನಗರ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರು "ಕಾಂಕ್ರೀಟ್ ಶಾಖದ ಸುಳಿಗೆ" ಸಿಲುಕುತ್ತಿದೆ. ಇದರ ನಡುವೆಯೇ ನಾನು ಕರ್ನಾಟಕ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ನಡೆಸಿದ ಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರ ಹಾಗೂ ಬಿಜೆಪಿ-ಜೆಡಿಎಸ್ ಬೆಂಗಳೂರಿನ ಪರಿಸರ ಹಾಗೂ ಜೀವ ಪರಿಸರವನ್ನು ಹೇಗೆ ನಾಶಪಡಿಸುತ್ತಿದೆ ಎಂಬ ಬಗ್ಗೆ ಆಘಾತಕಾರಿ ವಿಷಯಗಳು ಹೊರಬಂದಿವೆ ಎಂದವರು ಬೆಳಕುಚೆಲ್ಲಿದ್ದಾರೆ. 1960 ರ ದಶಕದಲ್ಲಿ ಕರ್ನಾಟಕ ಸರ್ಕಾರವು ಬೆಂಗಳೂರಿನ ಹೃದಯಭಾಗದಲ್ಲಿರುವ ಗೋರಗುಂಟೆ ಪಾಳ್ಯದ ಬಳಿ ಕಾರ್ಖಾನೆಗಾಗಿ ಎಚ್.ಎಂ.ಟಿ ಸಂಸ್ಥೆಗೆ 443 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಾರ್ಖಾನೆ ಕಳೆದ 15 ವರ್ಷಗಳಿಂದಲೂ ಸ್ಥಗಿತಗೊಂಡಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.ಈ ಜಮೀನಿನಲ್ಲಿ ಅವರು 160 ಎಕರೆಯನ್ನು ಈಗಾಗಲೇ ಮಾರಾಟ ಮಾಡಿದ್ದಾರೆ. ಉ...
ಒಂದು ವಾರ ಕಾಲ ವರ್ಷಾಧಾರರೆ: ಕರಾವಳಿ–ಮಲೆನಾಡಲ್ಲಿ ಭಾರೀ ಮಳೆ ಸಾಧ್ಯತೆ

ಒಂದು ವಾರ ಕಾಲ ವರ್ಷಾಧಾರರೆ: ಕರಾವಳಿ–ಮಲೆನಾಡಲ್ಲಿ ಭಾರೀ ಮಳೆ ಸಾಧ್ಯತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಗಳೂರು: ಮುಂದಿನ ಏಳು ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಬುಧವಾರ ಬಿಡುಗಡೆ ಮಾಡಿದ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ....

ಸಿಗಂದೂರು ಸೇತುವೆ ಉದ್ಘಾಟನೆಯ ಕುರಿತು ವಿಜಯೇಂದ್ರ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಶಿವಮೊಗ್ಗ: ಸಿಗಂದೂರು ಸೇತುವೆ ಉದ್ಘಾಟನೆಯು ತರಾತುರಿಯಲ್ಲಿ ನಡೆದಿದೆಯೆಂದು ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ."ಶರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುವ ಭೀತಿಯು ಇದ್ದ ಕಾರಣ ಮತ್ತು ಸೇತುವೆಯಡಿ ಲಾಂಚ್‌ ಸೇವೆಗೆ ಅಡ್ಡಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸೇತುವೆಯನ್ನು ತುರ್ತಾಗಿ ಉದ್ಘಾಟಿಸಲಾಗಿದೆ. ಇದರ ಹಿಂದೆ ರಾಜಕೀಯ ಉದ್ದೇಶವಿಲ್ಲ," ಎಂದು ವಿಜಯೇಂದ್ರ ಹೇಳಿದ್ದಾರೆ.ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ಸೇತುವೆಯನ್ನು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಲಿಲ್ಲ ಎನ್ನುವ ಕಾಂಗ್ರೆಸ್ ಆರೋಪವನ್ನೂ ವಿಜಯೇಂದ್ರ ಖಂಡಿಸಿ, “ಅದರಲ್ಲಿ ಯಾವುದೇ ಸತ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಸಿಗಂದೂರಿಗೆ ತೆರಳುವ ಮಾರ್ಗದಲ್ಲಿರುವ ಶರಾವತಿ ನದಿಯಲ್ಲಿ ನೀರು ಹೆಚ್ಚಾಗುವ ಆತಂಕ ಮತ್ತು ಸೇತುವೆಯಡಿ ಲಾಂಚ್ ಓಡಾಟಕ್ಕೆ ಸಮಸ್ಯೆಯಾಗಬಹುದು ಎನ್ನುವ ಕಾರಣದಿಂದ ಸೇತುವೆ ಉದ್ಘಾಟನೆ ಮಾಡಲಾಗಿದೆಯೇ ...
ದೇವನಹಳ್ಳಿಯಲ್ಲಿನ ವಿವಾದಿತ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟ ಸರ್ಕಾರ

ದೇವನಹಳ್ಳಿಯಲ್ಲಿನ ವಿವಾದಿತ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟ ಸರ್ಕಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಈ ಕುರಿತಂತೆ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದರು. .ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದು ತಿಳಿಸಿದರು.ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿ...
ಬೆಂಗಳೂರು ಕಾಲ್ತುಳಿತ ಪ್ರಕರಣ: ವರದಿಯನ್ನು ಕೆಎಸ್‌ಸಿಎ, ಆರ್‌ಸಿಬಿ ಮತ್ತು ಡಿಎನ್‌ಎ ಜೊತೆ ಹಂಚಿಕೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು ಕಾಲ್ತುಳಿತ ಪ್ರಕರಣ: ವರದಿಯನ್ನು ಕೆಎಸ್‌ಸಿಎ, ಆರ್‌ಸಿಬಿ ಮತ್ತು ಡಿಎನ್‌ಎ ಜೊತೆ ಹಂಚಿಕೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರು ಕಾಲ್ತುಳಿತ ವರದಿಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ), ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್‌ಗಳೊಂದಿಗೆ ಹಂಚಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ಪೀಠವು, ವರದಿಯನ್ನು ತಡೆಹಿಡಿದಿದ್ದಕ್ಕಾಗಿ ರಾಜ್ಯ ಸರ್ಕಾರದ ಸಮರ್ಥನೆಯನ್ನು ತಿರಸ್ಕರಿಸಿ, ಅನುವಾದಗಳೊಂದಿಗೆ ವರದಿಯನ್ನು ಮೇಲೆ ತಿಳಿಸಿದ ಸಂಸ್ಥೆಗಳಿಗೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.ಪ್ರಕರಣವು ಸಾರ್ವಜನಿಕ ಹಿತಾಸಕ್ತಿ, ರಾಷ್ಟ್ರೀಯ ಭದ್ರತೆ ಅಥವಾ ಖಾಸಗಿ ಹಕ್ಕುಗಳ ವರ್ಗಗಳ ಅಡಿಯಲ್ಲಿ ಬರುವುದಿಲ್ಲ ಎಂದು ಪೀಠವು ಗಮನಿಸಿದೆ. ಮೊಹರು ಮಾಡಿದ ಕವರ್‌ನಲ್ಲಿ ಸ್ಥಿತಿ ವರದಿಯ ಸರ್ಕಾರದ ಆವೃತ್ತಿ ಮಾತ್ರ ಇದೆ ಎಂದು ಅದು ಗಮನಿಸಿದೆ.ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಈ ಹಿಂದೆ ವರದಿಯನ್ನು ಸೀಮಿತ ಅವಧಿಗೆ ಮುಚ್ಚಿದ ಕವರ್‌ನಲ್ಲಿ ಇಡುವಂತೆ ನ್ಯಾಯಾಲಯವನ್ನು ಕೋರಿದ್ದರ...
‘ಬೀದಿನಾಯಿಗಳಿಗೆ ಬಿರಿಯಾನಿ’: ‘ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಉದ್ದೇಶ’? 

‘ಬೀದಿನಾಯಿಗಳಿಗೆ ಬಿರಿಯಾನಿ’: ‘ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಉದ್ದೇಶ’? 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಿಎಂ ಕುರ್ಚಿಯ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ಊಟ ನೀಡುವ ಯೋಜನೆ ತರಲಾಗಿದೆ. ಬೀದಿನಾಯಿಗಳ ಉಪಟಳದಿಂದ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಅದಕ್ಕಾಗಿ ನಾಯಿಗಳ ಸಂಖ್ಯೆ ಕಡಿಮೆ ಮಾಡಬೇಕು ಎಂಬ ಉದ್ದೇಶದ ಯೋಜನೆ ಬಿಬಿಎಂಪಿಯಲ್ಲಿದೆ. ಜನರು ಹಾಗೂ ಸಂಘಟನೆಗಳು ಈಗಾಗಲೇ ಬೀದಿನಾಯಿಗಳಿಗೆ ಊಟ ಹಾಕುತ್ತಿದ್ದಾರೆ. ಈಗ ಬೌ ಬೌ ಬಿರಿಯಾನಿ ಹಾಕುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದರು.ಪ್ರತಿ ಬೀದಿಗಳಲ್ಲಿ ಜನರು ಬೀದಿನಾಯಿಗಳಿಗೆ ಊಟ ಹಾಕುವುದು ಸಾಮಾನ್ಯವಾಗಿದೆ. ಈಗ ಹಣ ಲೂಟಿ ಮಾಡಲು ಇಂತಹ ಯೋಜನೆ ತರಲಾಗಿದೆ. ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದೆ. ಉದ್ಯಾನಗಳ ನಿರ್ವಹಣೆ ಆಗುತ್ತಿಲ್ಲ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಸಂಬಳ ಕೊಡಲು ಹಣವಿಲ್ಲ. ಶಾಲೆಗಳ ...
ಕಾಲ್ತುಳಿತ ಪ್ರಕರಣ: ಸರ್ಕಾರದ ಮೇಲೆ ಆರೋಪ ಬರಬಾರದೆಂದು ಮೊದಲೇ ಹೇಳಿ ವರದಿ ಬರೆಸಲಾಗಿದೆಯೇ?

ಕಾಲ್ತುಳಿತ ಪ್ರಕರಣ: ಸರ್ಕಾರದ ಮೇಲೆ ಆರೋಪ ಬರಬಾರದೆಂದು ಮೊದಲೇ ಹೇಳಿ ವರದಿ ಬರೆಸಲಾಗಿದೆಯೇ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಪೊಲೀಸರನ್ನು ಬಲಿಪಶು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆಯುಕ್ತರು, ಡಿಸಿಪಿ ಮೇಲೆ ಆರೋಪ ಹೊರೆಸಿ ಕೈ ತೊಳೆದುಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಗೃಹ ಸಚಿವರು ಎಲ್ಲ ಬಂದೋಬಸ್ತ್‌ ಮಾಡಿದ್ದರೆ, ಈ ಸಮಸ್ಯೆ ಆಗುತ್ತಿರಲಿಲ್ಲ. ಏನೂ ಮಾಡದೆ ಪೊಲೀಸರ ಮೇಲೆ ತಪ್ಪು ಹೊರಿಸಲಾಗಿದೆ ಎಂದು ಸಿಟ್ಟು ಹೊರಹಾಕಿದರು.ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರ ತಪ್ಪು ಕೂಡ ಇಲ್ಲ. ಸರ್ಕಾರದ ಮೇಲೆ ಆರೋಪ ಬರಬಾರದೆಂದು ಮೊದಲೇ ಹೇಳಿ ವರದಿ ಬರೆಸಲಾಗಿದೆ. ಇದು ಯೋಗ್ಯವಾದ ವರದಿ ಅಲ್ಲ. ಕೋರ್ಟ್‌ನಲ್ಲಿ ಬರುವ ತೀರ್ಪಿನ ಬಗ್ಗೆ ಮಾತ್ರ ನಂಬಿಕೆ ಇದೆ ಎಂದರು.ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತೇನೆ ಎಂದು ತಿಳಿದು ದೇವಾಲಯಗಳನ್ನು ಸುತ್ತುತ್ತಿದ್ದಾರೆ. ಬದಲಾವಣೆ ಬಗ್ಗೆ ಹೈಕಮಾಂಡ್‌ನಲ್ಲಿ ಚರ್ಚೆಯಾಗಿದೆ. ಡಿ.ಕೆ.ಶಿವಕುಮ...
ಖ್ಯಾತ ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ ವಿಧಿವಶ

ಖ್ಯಾತ ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ ವಿಧಿವಶ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಖ್ಯಾತ ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ (83) ವಿಧಿವಶರಾಗಿದ್ದಾರೆ.ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಬೆಳಗಿನ ಜಾವ ಹೈದರಾಬಾದ್​ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು.ಶ್ರೀನಿವಾಸ ರಾವ್ ಅವರು 1942ರ ಜುಲೈ 10ರಂದು ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದರು. ಶಾಲಾ ದಿನಗಳಲ್ಲಿ ನಾಟಕಗಳಲ್ಲಿ ಕಾಣಿಸಿಕೊಂಡ ನಂತರ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡು ನಟನೆಯನ್ನು ತಮ್ಮ ವೃತ್ತಿಯನ್ನಾಗಿ ಮಾಡಿಕೊಂಡರು. ತೆಲುಗು ಮಾತ್ರವಲ್ಲದೇ ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಸಿನಿಮಾಗಳಲ್ಲಿ ಕೂಡ ಕೋಟ ಶ್ರೀನಿವಾಸ ರಾವ್ ಅವರು ನಟಿಸಿದ್ದರು. ಕನ್ನಡದ ಲೇಡಿ ಕಮಿಷನರ್, ರಕ್ತ ಕಣ್ಣೀರು, ಲವ್, ನಮ್ಮ ಬಸವ, ನಮ್ಮಣ್ಣ, ಶ್ರೀಮತಿ, ಕಬ್ಜಾ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು.ಕಳೆದ 4 ದಶಕಗಳ ತಮ್ಮ ವೃತ್ತಿಜೀವನದಲ್ಲಿ ಕೋಟ ಶ್ರೀನಿವಾಸ ರಾವ್ ಅನೇಕ ಬಗೆಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ವಿಲನ್ ಪಾತ್ರ, ಹಾಸ್ಯ ಪಾತ್ರ ಸೇರಿದಂತೆ ಹಲವು ಬಗೆಯಲ್ಲಿ ಅವರು ಜನರನ್ನು ರಂಜಿಸಿದ್ದರು.1999ರಿಂದ 2004ರವರೆಗೆ ವಿಜಯವಾಡ ಪೂರ್ವ ಕ್ಷೇತ್ರದ ಶಾಸಕರಾಗ...
‘ನಾಯಕತ್ವ ವಿಚಾರದಲ್ಲಿ ಶಿವಕುಮಾರ್ ಆತುರದಲ್ಲಿಯೂ ಇಲ್ಲ, ಆತಂಕದಲ್ಲಿಯೂ ಇಲ್ಲ’ ಎಂದ ಸಹೋದರ

‘ನಾಯಕತ್ವ ವಿಚಾರದಲ್ಲಿ ಶಿವಕುಮಾರ್ ಆತುರದಲ್ಲಿಯೂ ಇಲ್ಲ, ಆತಂಕದಲ್ಲಿಯೂ ಇಲ್ಲ’ ಎಂದ ಸಹೋದರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿಯಾಗಿರುವ ತಮ್ಮ ಸಹೋದರ ಡಿ.ಕೆ. ಶಿವಕುಮಾರ್ ಆತುರದಲ್ಲಿಯೂ ಇಲ್ಲ ಅಥವಾ ಯಾವುದೇ ಆತಂಕದಲ್ಲಿಯೂ ಇಲ್ಲ ಎಂದು ಕಾಂಗ್ರೆಸ್‌ನ ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದರು. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಬಾರದು ಎಂಬ ಹೈಕಮಾಂಡ್ ನಿರ್ದೇಶನದ ಹೊರತಾಗಿಯೂ, ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ಬಾರಿ ಸಾರ್ವಜನಿಕವಾಗಿ ಹೇಳಿರುವ ಬಗ್ಗೆ ಕೇಳಿದಾಗ, ಸುರೇಶ್, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಆಂತರಿಕ ಜಗಳವಿಲ್ಲ. ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷರು ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಈಗಾಗಲೇ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ನಾಯಕತ್ವದ ಪಾತ್ರದಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ. ಮಾಧ್ಯಮಗಳು ಈ ಬಗ್ಗೆ ಏಕೆ ಗೊಂದಲದಲ್ಲಿವೆ ಎಂದು ನ...
“ಉದ್ಯೋಗಾವಕಾಶ ಕೊರತೆ ಇಲ್ಲ, ಆದರೆ ಕೌಶಲ್ಯ ಕೊರತೆ ಇದೆ, ಅದಕ್ಕೆ ತಕ್ಕ ಶಿಕ್ಷಣ ಬೇಕಿದೆ”: ಜಿ.ಎ.ಬಾವಾ ಅಭಿಪ್ರಾಯ

“ಉದ್ಯೋಗಾವಕಾಶ ಕೊರತೆ ಇಲ್ಲ, ಆದರೆ ಕೌಶಲ್ಯ ಕೊರತೆ ಇದೆ, ಅದಕ್ಕೆ ತಕ್ಕ ಶಿಕ್ಷಣ ಬೇಕಿದೆ”: ಜಿ.ಎ.ಬಾವಾ ಅಭಿಪ್ರಾಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶಗಳ ಕೊರತೆ ಇಲ್ಲ. ಆದರೆ ಅವುಗಳನ್ನು ಪಡೆದುಕೊಳ್ಳಲು ಅಗತ್ಯವಿರುವ ಕೌಶಲ್ಯ ಮತ್ತು ತಂತ್ರಜ್ಞಾನ ಪ್ರಜ್ಞೆಯ ಕೊರತೆಯಿದೆ ಎಂದು ಎಚ್.ಎಚ್.ಎಸ್ ಮತ್ತು ಎಚ್.ಎಂ.ಎಸ್ ಆಡಳಿತ ಸಮಿತಿಯ ಆಡಳಿತಾಧಿಕಾರಿ ಜಿ.ಎ. ಬಾವಾ ಅಭಿಪ್ರಾಯಪಟ್ಟರು.ನಿವೃತ್ತ ಪೊಲೀಸ್ ಅಧೀಕ್ಷಕರೂ ಆದ ಜಿ.ಎ. ಬಾವಾ ಅವರು ಗುರುವಾರ ಬೆಂಗಳೂರಿನ ಕಬ್ಬನಪೇಟೆಯ ಎಚ್.ಎಚ್.ಎಸ್ ಮತ್ತು ಎಚ್.ಎಂ.ಎಸ್ ಐಟಿಐ ಕಾಲೇಜಿನ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.“ನಮ್ಮ ಸಂಸ್ಥೆಯು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಎತ್ತಿನ ಮೆಟ್ಟಿಲಲ್ಲಿದೆ. ತರಬೇತಿ ಪಡೆದ ವಿದ್ಯಾರ್ಥಿಗಳು ಉದ್ಯೋಗಮೇಳಗಳಲ್ಲಿ ಭಾಗವಹಿಸಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಪಡೆದುಕೊಂಡಿದ್ದಾರೆ,” ಎಂದು ಅವರು ಹೇಳಿದರು.ಸಲಹಾ ಸಮಿತಿಯ ಸದಸ್ಯ ಅಬ್ದುಲ್ ಅಝೀಮ್ ಮಾತನಾಡಿ, ಸಂಸ್ಥೆಯ ಅನುಭವ ಹಾಗೂ ಉದ್ಯೋಗ ಮೇಳಗಳ ಪರಿಣಾಮಕಾರಿತ್ವದ ಕುರಿತು ಮಾತನಾಡಿದರು. “ಸಂಸ್ಥೆಯು ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶ್ರಮಿಸುತ್ತಿದ್ದು, ಅದರ ಫಲವೂ ಲಭ್ಯವಾಗಿದೆ,” ಎಂದರು....