
ಕಾಂಕ್ರೀಟ್ ಶಾಖದ ಸುಳಿಯಲ್ಲಿ ಬೆಂಗಳೂರು! ಬಿಜೆಪಿ-ಜೆಡಿಎಸ್ ನಾಯಕರಿಗೆ ಸುರ್ಜೇವಾಲಾ ಪ್ರಶ್ನೆ
ಬೆಂಗಳೂರು: ಬಿಜೆಪಿ-ಜೆಡಿಎಸ್ ಬೆಂಗಳೂರಿನ ಪರಿಸರ ಹಾಗೂ ಜೀವ ಪರಿಸರವನ್ನು ಹೇಗೆ ನಾಶಪಡಿಸುತ್ತಿದೆ ಎಂಬುದರ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾಡಿರುವ ಟ್ವೀಟ್ ಗಮನಸೆಳೆದಿದೆ.ಹವಾನಿಯಂತ್ರಿತ ನಗರ, ಉದ್ಯಾನನಗರ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರು "ಕಾಂಕ್ರೀಟ್ ಶಾಖದ ಸುಳಿಗೆ" ಸಿಲುಕುತ್ತಿದೆ. ಇದರ ನಡುವೆಯೇ ನಾನು ಕರ್ನಾಟಕ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ನಡೆಸಿದ ಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರ ಹಾಗೂ ಬಿಜೆಪಿ-ಜೆಡಿಎಸ್ ಬೆಂಗಳೂರಿನ ಪರಿಸರ ಹಾಗೂ ಜೀವ ಪರಿಸರವನ್ನು ಹೇಗೆ ನಾಶಪಡಿಸುತ್ತಿದೆ ಎಂಬ ಬಗ್ಗೆ ಆಘಾತಕಾರಿ ವಿಷಯಗಳು ಹೊರಬಂದಿವೆ ಎಂದವರು ಬೆಳಕುಚೆಲ್ಲಿದ್ದಾರೆ.
1960 ರ ದಶಕದಲ್ಲಿ ಕರ್ನಾಟಕ ಸರ್ಕಾರವು ಬೆಂಗಳೂರಿನ ಹೃದಯಭಾಗದಲ್ಲಿರುವ ಗೋರಗುಂಟೆ ಪಾಳ್ಯದ ಬಳಿ ಕಾರ್ಖಾನೆಗಾಗಿ ಎಚ್.ಎಂ.ಟಿ ಸಂಸ್ಥೆಗೆ 443 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಾರ್ಖಾನೆ ಕಳೆದ 15 ವರ್ಷಗಳಿಂದಲೂ ಸ್ಥಗಿತಗೊಂಡಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.ಈ ಜಮೀನಿನಲ್ಲಿ ಅವರು 160 ಎಕರೆಯನ್ನು ಈಗಾಗಲೇ ಮಾರಾಟ ಮಾಡಿದ್ದಾರೆ. ಉ...








