Monday, August 17

ವಿದೇಶ

ಯುವ ರಾಜ್ ಕುಮಾರ್ ನಟನೆಯ ‘ಎಕ್ಕ’ ಟ್ರೈಲರ್ ರಿಲೀಸ್

ಯುವ ರಾಜ್ ಕುಮಾರ್ ನಟನೆಯ ‘ಎಕ್ಕ’ ಟ್ರೈಲರ್ ರಿಲೀಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ನಟ ಯುವ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಎಕ್ಕ’ ಟ್ರೈಲರ್ ಇದೀಗ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ರೋಹಿತ್ ಪದಕಿ ನಿರ್ದೇಶನದ ಈ ಸಿನಿಮಾ ಫ್ಯಾಮಿಲಿ ಸೆಂಟಿಮೆಂಟ್, ಮಾಸ್ ಆಕ್ಷನ್ ಮತ್ತು ಲವ್ ಸ್ಟೋರಿ—all in one ಎಂಬ ರೀತಿಯ ಪಕ್ಕಾ ಕಮರ್ಷಿಯಲ್ ಎಂಟರ್‌ಟೈನರ್ ಆಗಿರುವ ಛಾಪು ಟ್ರೈಲರ್‌ನಲ್ಲಿಯೇ ಮೂಡಿಸಿದೆ.ಸಂಜನಾ ಆನಂದ್ ಮತ್ತು ಸಂಪದಾ ನಾಯಕಿಯರಾಗಿ ಅಭಿನಯಿಸಿದ್ದಾರೆ. ಟ್ರೈಲರ್‌ನ ಕೆಲ ದೃಶ್ಯಗಳು, ವಿಶೇಷವಾಗಿ ಒಂದು ಫೈಟ್ ಸೀನ್, ಪುನೀತ್ ರಾಜ್‌ಕುಮಾರ್ ಅಭಿನಯದ 'ಜಾಕಿ' ಸಿನಿಮಾದ ನೆನಪನ್ನು ತರುವಂತಿದೆ.ಚಿತ್ರದಲ್ಲಿ ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ಹಲವು ಪ್ರಮುಖ ಕಲಾವಿದರು ಭಾಗಿ ಆಗಿದ್ದಾರೆ. ಪಿಆರ್‌ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್, ಮತ್ತು ಕೆಆರ್‌ಜಿ ಸ್ಟುಡಿಯೋಸ್ ಮೂರು ಪ್ರಮುಖ ನಿರ್ಮಾಣ ಸಂಸ್ಥೆಗಳು ಈ ಚಿತ್ರವನ್ನು ಒಟ್ಟಾಗಿ ನಿರ್ಮಿಸುತ್ತಿವೆ.ಚರಣ್ ರಾಜ್ ಸಂಗೀತ ನೀಡಿರುವ ಈ ಚಿತ್ರಕ್ಕೆ, ಸತ್ಯಾ ಹೆಗಡೆ ಛಾಯಾಗ್ರಹಣ ಹೊತ್ತಿದ್ದಾರೆ. ‘ಎಕ್ಕ’ ಚಿತ್ರ ಜುಲೈ 18ರಂದು ಚಿತ್ರಮಂದಿರಗಳಲ್ಲಿ ತ...
ಒಂದು ವಾರದೊಳಗೆ ವಕೀಲರ ಸಂಘದ ಕಟ್ಟಡಕ್ಕೆ ಸೋಲಾರ್ ಗ್ರಿಡ್ ವ್ಯವಸ್ಥೆ

ಒಂದು ವಾರದೊಳಗೆ ವಕೀಲರ ಸಂಘದ ಕಟ್ಟಡಕ್ಕೆ ಸೋಲಾರ್ ಗ್ರಿಡ್ ವ್ಯವಸ್ಥೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ವಕೀಲರ ಸಂಘಕ್ಕೆ 5 ಕೋಟಿ ರೂ. ಅನುದಾನ ಪ್ರಕಟಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಂಪೇಗೌಡ ಜಯಂತಿಗೆ ವಾರ್ಷಿಕ ರೂ. 5 ಲಕ್ಷ ಮೀಸಲು ಇದೆ ಎಂದು ಪ್ರಕಟಿಸಿದ್ದಾರೆ. ಒಂದು ವಾರದೊಳಗೆ ವಕೀಲರ ಸಂಘದ ಕಟ್ಟಡಕ್ಕೆ ಸೋಲಾರ್ ಗ್ರಿಡ್ ವ್ಯವಸ್ಥೆ ಒದಗಿಸಲು ಪರಿಶೀಲನೆ ನಡೆಸಲಾಗುವುದು ಎಂದೂ ಅವರು ಭರವಸೆ ನೀಡಿದ್ದಾರೆ.ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ಆವರಣದಲ್ಲಿ ಶುಕ್ರವಾರ ಬೆಂಗಳೂರು ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಡಿಕೆಶಿ, ವಕೀಲರ ಬೇಡಿಕೆಗಳಿಗೆ ಸ್ಪಂಧಿಸುವ ಭರವಸೆ ನೀಡಿದರು.ಒಂದು ವಾರದೊಳಗೆ ವಕೀಲರ ಸಂಘದ ಕಟ್ಟಡಕ್ಕೆ ಸೋಲಾರ್ ಗ್ರಿಡ್ ವ್ಯವಸ್ಥೆ ಒದಗಿಸಲು ಪರಿಶೀಲನೆ ನಡೆಸಲಾಗುವುದು. ಇದರ ಬಗ್ಗೆ ಹಿಂದೆಯೇ ಮಾತುಕತೆಯಾಗಿತ್ತು. ನೀವು ಅಧಿಕಾರಿಗಳ ಹಿಂದೆ ಬಿದ್ದು ಕೆಲಸ ಮಾಡಿಸಿಕೊಳ್ಳಬೇಕು. ಜೊತೆಗೆ ಈ ಸಂಸ್ಥೆಗೆ ಭೂಮಿ ಬೇಕು ಎಂದು ಹೇಳಿದ್ದೀರಿ. ಆದ ಕಾರಣಕ್ಕೆ 10 ಎಕರೆ ಕಂದಾಯ ಭೂಮಿಯನ್ನು ಲಭ್ಯತೆ ನೋಡಿಕೊಂಡು ನೀಡಲಾಗುವುದು. ನಗರದ 20 ಕಿ.ಮೀ. ವ್ಯಾಪ್ತಿ...
ಕಾಲ್ತುಳಿತ ದುರಂತ: ಜಸ್ಟೀಸ್ ಕುನ್ಹಾ ವರದಿ ಬಗ್ಗೆ ಜು.17ರ ಸಂಪುಟ ಸಭೆಯಲ್ಲಿ ನಿರ್ಧಾರ

ಕಾಲ್ತುಳಿತ ದುರಂತ: ಜಸ್ಟೀಸ್ ಕುನ್ಹಾ ವರದಿ ಬಗ್ಗೆ ಜು.17ರ ಸಂಪುಟ ಸಭೆಯಲ್ಲಿ ನಿರ್ಧಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದ ಕಾಲ್ತುಳಿತ ದುರಂತ ಕುರಿತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ವರದಿಯನ್ನು ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು 11 ಜನ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಅವಘಡದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಏಕ ಸದಸ್ಯ ಆಯೋಗವು ಎರಡು ಸಂಪುಟಗಳಲ್ಲಿ ವರದಿ ಸಲ್ಲಿಸಿದೆ.ವರದಿಯಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟ ನಿರ್ಧಾರ ಮಾಡಲಿದೆ ಎಂದು ಸಿಎಂ ತಿಳಿಸಿದ್ದಾರೆ. ವರದಿ ಈಗಷ್ಟೇ ಸಲ್ಲಿಕೆಯಾಗಿರುವುದರಿಂದವರದಿಯನ್ನು ಪೂರ್ಣವಾಗಿ ಓದಿಲ್ಲ. ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ಈ ವರದಿಯನ್ನು ಮಂಡಿಸಿ, ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ. ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು 11 ಜನ ಮೃತಪಟ್ಟಿದ್ದ...
‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

‘ಕಡ್ಡಾಯ ಕನ್ನಡ ಶಿಕ್ಷಣ’; ನಿಲುವು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವ ಆದೇಶದ ಕುರಿತು ಮೂರು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಕರ್ನಾಟಕದಾದ್ಯಂತ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.ಶಾಲೆಗಳಲ್ಲಿ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರ ಜಾರಿಗೆ ತಂದ ಕೆಲವು ಕಾನೂನುಗಳನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. 2023 ರಲ್ಲಿ ಸಿ. ಸೋಮಶೇಖರ್ ಮತ್ತು ಇತರರು ಸಲ್ಲಿಸಿದ ಈ ಪಿಐಎಲ್‌ನಲ್ಲಿ, ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ಇನ್ನೂ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿಲ್ಲ ಎಂದು ಗಮನಿಸಲಾಗಿದೆ. ಈ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪೀಠವು, ಕಳೆದ ಎರಡು ವರ್ಷಗಳಿಂದ ಕರ್ನಾಟಕ ಸರ್ಕಾರ ಏನನ್ನೂ ಮಾಡಿಲ್ಲ ಎಂದಿದೆ.ರಾಜ್ಯ ಸರ್ಕಾರವು ತನ್ನ ಪ್ರತಿಕ್ರಿಯೆ ಕ...
ಚಿನ್ನಸ್ವಾಮಿ ಕಾಲ್ತುಳಿತ ದುರಂತ; ನ್ಯಾ.ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗದಿಂದ ಸರ್ಕಾರಕ್ಕೆ ವರದಿ

ಚಿನ್ನಸ್ವಾಮಿ ಕಾಲ್ತುಳಿತ ದುರಂತ; ನ್ಯಾ.ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗದಿಂದ ಸರ್ಕಾರಕ್ಕೆ ವರದಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ ಟ್ರೋಫಿ ಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4 ರಂದು ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ನ್ಯಾಯಾಂಗ ತನಿಖೆ ನಡೆಸಿದ್ದ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಏಕಸದಸ್ಯ ತನಿಖಾ ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.ಈ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಘಟನೆಯ ತೀವ್ರತೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದು, ಒಂದು ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಿತ್ತು.ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಆಯೋಗ ತನ್ನ ತನಿಖೆಯನ್ನು ಸಮಯಕ್ಕೆ ಒಳಗಾಗಿ ಪೂರ್ಣಗೊಳಿಸಿ, ಎರಡು ಸಂಪುಟಗಳಲ್ಲಿ ವರದಿಯನ್ನು ಮುಖ್ಯಮಂತ್ರಿ ಕಚೇರಿಗೆ ಮುಚ್ಚಿದ ಲಕೋಟೆಯಲ್ಲಿ ಹಸ್ತಾಂತರಿಸಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ತನಿಖಾ ಆಯೋಗವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಜುಲೈ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿಯನ್ನು ಮಂಡಿಸಲಾಗುವುದು...
‘ಡಿಸಿಎಂ ಸ್ಥಾನ ನೀಡಿದೆ, ಪಕ್ಷ ಸಂಘಟನೆಯತ್ತ ಗಮನಹರಿಸಬೇಕಿದೆ’: ಡಿಕೆಶಿ

‘ಡಿಸಿಎಂ ಸ್ಥಾನ ನೀಡಿದೆ, ಪಕ್ಷ ಸಂಘಟನೆಯತ್ತ ಗಮನಹರಿಸಬೇಕಿದೆ’: ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ತಮ್ಮದೇ ದಾಟಿಯಲ್ಲಿ ಉತ್ತರಿಸಿದ ಡಿಕೆಶಿ, 'ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮಗೆ ಬಲಿಯಾಗುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷವಾಗಿ ಸ್ವೀಕರಿಸಿದ್ದೇವೆ. ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ' ಎಂದರು.ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ನಾವು ಸುರ್ಜೆವಾಲ ಅವರ ಹೊರತಾಗಿ ಬೇರೆ ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಲ್ಲ. ರಾಜ್ಯ ಉಸ್ತುವಾರಿಗಳ ಜೊತೆ ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ...
ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: “ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್, ಭೂಪೇಂದರ್ ಯಾದವ್, ಸೋಮಣ್ಣ ಹಾಗೂ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿದ್ದೆ. ಈ ಭೇಟಿ ವೇಳೆ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಕೃಷ್ಣಾ ನದಿ ವಿಚಾರವಾಗಿ ನಾವು ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದೇವೆ ಎಂದು ಮನದಟ್ಟು ಮಾಡಿದ್ದೇವೆ. ಹೀಗಾಗಿ ಮುಂದೂಡಲಾಗಿರುವ ಸಭೆಯನ್ನು ಶೀಘ್ರದಲ್ಲೇ ಕರೆಯುವುದಾಗಿ ತಿಳಿಸಿದ್ದಾರೆ. ಅರಣ್ಯ ಸಚಿವರ ಬಳಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರ ಜತೆಗೂ ಮಾತನಾಡಿದ್ದೇನೆ ಎರಡು ರಾಜ್ಯಗಳ ನಡುವೆ ರಾಜಿಗೆ ಸಲಹೆ ನೀಡಿದ್ದಾರೆ. ನಾವು ಸುಪ್ರೀಂ ಕೋರ್ಟ್ ...
‘ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು’: ಬೊಮ್ಮಾಯಿ

‘ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು’: ಬೊಮ್ಮಾಯಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಹಾವೇರಿ: ಸಿದ್ದರಾಮಯ್ಯ ಐದು ವರ್ಷಗಳ ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಮಾತ್ರ ದೃಢಪಡಿಸಬಹುದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಒಂದು ವೇಳೆ ಹೈಕಮಾಂಡ್ ಸ್ಪಷ್ಟಪಡಿಸದಿದ್ದರೆ, ಸ್ಪಷ್ಟಪಡಿಸುವವರೆಗೆ ರಾಜ್ಯದಲ್ಲಿ ಈ ರಾಜಕೀಯ ನಾಟಕ ಮುಂದುವರಿಯುತ್ತದೆ ಎಂದವರು ಹೇಳಿದ್ದಾರೆ.ಐದು ವರ್ಷಗಳ ಪೂರ್ಣ ಅವಧಿಗೆ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಬಸವರಾಜ್ ಬೊಮ್ಮಾಯಿ, ಪ್ರತಿ ಬಾರಿ ಸಿಎಂ ಸಿದ್ದರಾಮಯ್ಯ ಐದು ವರ್ಷಗಳ ಪೂರ್ಣ ಅವಧಿಗೆ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ ಎಂದು ಹೇಳಿದಾಗ, ಅವರ ಮುಂದುವರಿಕೆಯ ಬಗ್ಗೆ ಪ್ರಶ್ನೆಗಳು ಅನುಮಾನಕ್ಕೆ ಎಡೆಮಾಡಿಕೊಡುತ್ತವೆ ಎಂದರು.ಈ ವಿಷಯದ ಬಗ್ಗೆ ಮಾತನಾಡಬೇಕಾದವರು ಮೌನವಾಗಿರುತ್ತಾರೆ. ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸುವವರೆಗೆ, ಈ ರಾಜಕೀಯ ನಾಟಕ ಮುಂದುವರಿಯುತ್ತದೆ" ಎಂದು ಬಿಜೆಪಿ ಸಂಸದ ಹೇಳಿದರು."ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ...
ಧರ್ಮಸ್ಥಳ ಸರಣಿ ಕೊಲೆ ಪ್ರಕರಣ: ತನಿಖೆ ಶೀಘ್ರದಲ್ಲೇ ಆರಂಭ ಎಂದ ಪರಂ

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ: ತನಿಖೆ ಶೀಘ್ರದಲ್ಲೇ ಆರಂಭ ಎಂದ ಪರಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೂರುದಾರರು ಮುಂದೆ ಬಂದು ಪೊಲೀಸರೊಂದಿಗೆ ಹೇಳಿಕೆ ದಾಖಲಿಸಿದ ನಂತರ ಧರ್ಮಸ್ಥಳ ಕೊಲೆಗಳ ತನಿಖೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಗುರುವಾರ ಮಾತನಾಡಿದ ಪರಮೇಶ್ವರ್, ಅತ್ಯಾಚಾರ ಮತ್ತು ಕೊಲೆಯಾದ ಮಹಿಳೆಯರ ಶವಗಳನ್ನು ವಿಲೇವಾರಿ ಮಾಡಿದ ಆರೋಪಗಳನ್ನು ಒಳಗೊಂಡಂತೆ ಪೊಲೀಸರು ಪ್ರಸ್ತುತ ಆರೋಪಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು.ಒಬ್ಬ ವ್ಯಕ್ತಿ ಅಪರಿಚಿತ ವ್ಯಕ್ತಿಯ ಪರವಾಗಿ ದೂರು ನೀಡಿದ್ದಾರೆ. ಆದಾಗ್ಯೂ, ಆರೋಪಗಳನ್ನು ಮಾಡುವ ವ್ಯಕ್ತಿ ಸ್ವತಃ ದೂರು ದಾಖಲಿಸಿಲ್ಲ. ಆ ವ್ಯಕ್ತಿ ಮುಂದೆ ಬಂದು ಹೇಳಿಕೆ ನೀಡಬೇಕು ಎಂದು ಸಚಿವರು ಹೇಳಿದರು."ಇಲ್ಲದಿದ್ದರೆ, ಪೊಲೀಸರ ಕಡೆಯಿಂದ ಕಾರ್ಯವಿಧಾನದ ಲೋಪವಾಗುತ್ತದೆ ಮತ್ತು ಪ್ರಕರಣ ನಿಲ್ಲುವುದಿಲ್ಲ. ಯಾವುದೇ ತಾಂತ್ರಿಕ ವೈಫಲ್ಯ ಇರಬಾರದು. ಪೊಲೀಸರು ಪ್ರಸ್ತುತ ಈ ವಿಷಯವನ್ನು ಪರಿಶೀಲಿಸುತ್ತಿದ್ದಾರೆ. ವಿಷಯಗಳು ಹೇಗೆ ನಡೆಯುತ್ತವೆ ಎಂಬುದನ್ನು ನಾವು ಕಾಯ್ದು ನೋಡಬೇಕಾಗಿದೆ. ಈ ಆರೋಪಗಳನ್ನು ಮಾಡುವ ವ್ಯಕ್ತಿಯು ಔಪಚಾರಿಕ ದೂರು ದಾಖಲಿಸಬೇಕು ಮತ್ತು ಅವರ ಹೇ...
ಉಪ ಲೋಕಾಯುಕ್ತರನ್ನು ಗುರಿಯಾಗಿಸಿದ ಸೈಬರ್ ವಂಚಕರು; ಎಫ್‌ಐಆರ್ ದಾಖಲು

ಉಪ ಲೋಕಾಯುಕ್ತರನ್ನು ಗುರಿಯಾಗಿಸಿದ ಸೈಬರ್ ವಂಚಕರು; ಎಫ್‌ಐಆರ್ ದಾಖಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ಉಪ ಲೋಕಾಯುಕ್ತರನ್ನು ಗುರಿಯಾಗಿಸಲು ಯತ್ನಿಸಿದ ಇಬ್ಬರು ಸೈಬರ್ ವಂಚಕರ ವಿರುದ್ಧ ಕರ್ನಾಟಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರ ದೂರಿನ ಮೇರೆಗೆ ಬೆಂಗಳೂರಿನ ಕೇಂದ್ರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಮಾಹಿತಿ ತಂತ್ರಜ್ಞಾನ ಕಾಯ್ದೆ, 2008 ರ ಸೆಕ್ಷನ್ 66 (ಡಿ) (ಕಂಪ್ಯೂಟರ್ ಸಂಪನ್ಮೂಲಗಳನ್ನು ಬಳಸಿಕೊಂಡು ವಂಚಿಸುವುದು) ಮತ್ತು 84 (ಸಿ) (ಐಟಿ ಕಾಯ್ದೆಯಡಿಯಲ್ಲಿ ಅಪರಾಧಗಳನ್ನು ಮಾಡಲು ಪ್ರಯತ್ನಿಸುವುದು ಅಥವಾ ಅವರ ಆಯೋಗವನ್ನು ಸುಗಮಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ದೀಪಕ್ ಕುಮಾರ್ ಶರ್ಮಾ ಮತ್ತು ರಾಹುಲ್ ಕುಮಾರ್ ಶರ್ಮಾ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.ಎಫ್‌ಐಆರ್ ಪ್ರಕಾರ, ಜುಲೈ 7 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನ್ಯಾಯಮೂರ್ತಿ ಫಣೀಂದ್ರ ಅವರಿಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಕ...