
ನರ್ಸಿಂಗ್ ಕಾಲೇಜುಗಳ ಬೇಡಿಕೆ ತಿರಸ್ಕಾರ, ಅಧಿಕ ಶುಲ್ಕ ವಿಧಿಸಿದರೆ ಕಠಿಣ ಕ್ರಮ ಎಂದ ಸಚಿವರು
ಬೆಂಗಳೂರು, ಜುಲೈ 10: ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್ ಕೋರ್ಸ್ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ನಡೆದ ನರ್ಸಿಂಗ್ ಕಾಲೇಜುಗಳ ಸಂಘದೊಂದಿಗಿನ ಸಭೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಸಚಿವರು, ಆರ್ಥಿಕವಾಗಿ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಪೂರಕವಾಗುವಂತೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.ಈ ಮೂಲಕ ಖಾಸಗಿ ನರ್ಸಿಂಗ್ ಕಾಲೇಜುಗಳಿಗೆ ಸಂದೇಶ ನೀಡಿರುವ ಸಚಿವರು, ಈ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದರು.ಗ್ರಾಮೀಣ, ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲ: ಹೆಚ್ಚಿನ ನರ್ಸಿಂಗ್ ವಿದ್ಯಾರ್ಥಿಗಳು ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದವರು. ಹೆಚ್ಚುವರಿ ಶುಲ್ಕ ವಿಧಿಸುವುದು ಅನ್ಯಾಯ ಮತ್ತು ಸ್ವೀಕಾರಾರ್ಹವಾಗುವುದಿಲ್ಲ ಎಂದು ತಿಳಿಸಿದರು....









