Monday, August 17

ವಿದೇಶ

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಸರ್ಕಾರದಿಂದ ನಗದು ರಹಿತ ಚಿಕಿತ್ಸೆ ಯೋಜನೆ

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಸರ್ಕಾರದಿಂದ ನಗದು ರಹಿತ ಚಿಕಿತ್ಸೆ ಯೋಜನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಸೇವೆ ನೀಡುತ್ತಿರುವ ಸುಮಾರು 3 ಲಕ್ಷಕ್ಕೂ ಅಧಿಕ ನೌಕರರು ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಆರೋಗ್ಯ ಸೇವೆ ಒದಗಿಸಲು ರಾಜ್ಯ ಸರ್ಕಾರ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ – ಖಾಯಂ ಅಲ್ಲದ ಸಿಬ್ಬಂದಿಗೆ (KASS–NPE)’ಯನ್ನು ಅನುಮೋದಿಸಿದೆ.2025–26ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದ ಈ ಯೋಜನೆಗೆ ಸಂಬಂಧಪಟ್ಟಂತೆ ಸರಕಾರವು ಈಚೆಗೆ ಆದೇಶ ಹೊರಡಿಸಿದ್ದು, ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ (AB-ArK) ಯೋಜನೆಯ ಸ್ವರೂಪದಲ್ಲಿಯೇ ಹೊಸ ಯೋಜನೆ ಜಾರಿಗೆ ಬರುತ್ತದೆ. ಯೋಜನೆಯ ಅಂಶಗಳು ಹೀಗಿವೆ:ಮಾಸಿಕ ಆದಾಯ ₹21,000ರೊಳಗಿನ ನೌಕರರು ತಿಂಗಳಿಗೆ ₹100 ವಂತಿಕೆ ಪಾವತಿಸಿದರೆ, ಸರ್ಕಾರವೂ ₹100 ಸೇರಿಸಿ ವಾರ್ಷಿಕ ವೆಚ್ಚದ ಅರ್ಧವನ್ನು ಭರಿಸುತ್ತದೆ. ₹21,000ಕ್ಕಿಂತ ಹೆಚ್ಚು ಆದಾಯವಿರುವ ಸಿಬ್ಬಂದಿಗೆ ಸರ್ಕಾರ ₹60 ಕೊಡುಗೆ ನೀಡುತ್ತಿದ್ದು, ಸಿಬ್ಬಂದಿ ₹140 ಪಾವತಿಸಬೇಕಾಗುತ್ತದೆ. ಇದು ವಾರ್ಷಿಕ ವೆಚ್ಚದ 30% ಪಾಲಾಗುತ್ತದೆ. ಯೋಜನೆಯಡಿ ವಾರ್ಡ್ ಶ್ರೇಣಿಯ ಚಿಕಿತ್ಸೆಗ...
ಭಾರೀ ಮಳೆಗೆ ರಾಜ್ಯದ ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಭಾರೀ ಮಳೆಗೆ ರಾಜ್ಯದ ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕನ್ನಡ, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ತೀವ್ರಗೊಂಡಿದೆ.ಹವಾಮಾನ ಇಲಾಖೆ ಬುಧವಾರವೂ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಉಂಟಾಗುವ ತೊಂದರೆಗಳನ್ನು ಮನಗಂಡು ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ (ಜೂನ್‌ 25) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.ಈ ಮೂಲಕ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತುರ್ತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಭಾಗದ ಸಾರ್ವಜನಿಕರು ಹಾಗೂ ಪಾಲಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತದಿಂದ ಮನವಿ ಮಾಡಲಾಗಿದೆ. ...
ಗೃಹ ಸಚಿವ ಜಮೀರ್ ರಾಜೀನಾಮೆಗೆ ಸಿ.ಟಿ. ರವಿ ಆಗ್ರಹ

ಗೃಹ ಸಚಿವ ಜಮೀರ್ ರಾಜೀನಾಮೆಗೆ ಸಿ.ಟಿ. ರವಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: "ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಇವೆರಡೂ ಒಂದು ನಾಣ್ಯದ ಎರಡು ಮುಖಗಳು" ಎಂಬ ಗಂಭೀರ ಆರೋಪವನ್ನು ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮಾಡಿದ್ದಾರೆ.ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸ್ಕ್ಯಾನ್ ಮಾಡುವ ಅಗತ್ಯವಿಲ್ಲ; ಕಣ್ಣಿಗೆ ಕಾಣುವಷ್ಟು ಸ್ಪಷ್ಟವಾಗಿದೆ. ಕಾಂಗ್ರೆಸ್ ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಅಳಲು ತೋಡಿಕೊಳ್ಳುತ್ತಿದ್ದಾರೆ" ಎಂದು ಹೇಳಿದರು.ಸಿ.ಟಿ. ರವಿ ಅವರು, ಉದ್ಯಮಿಗಳು ಹಾಗೂ ಸಾಮಾನ್ಯ ನಾಗರಿಕರು ಎದುರಿಸುತ್ತಿರುವ ಲಂಚದ ಅನುಭವದ ವಿವರಗಳನ್ನೂ ಉದಾಹರಿಸಿದರು. "ಬಿಲ್ಡಿಂಗ್ ಪ್ಲಾನ್ ಮಂಜೂರಿಗೆ ಪ್ರತಿ ಅಡಿಗೆ 100 ರೂ. ಲಂಚ ನೀಡಬೇಕಾಗುತ್ತಿದೆ. ಭೂ ಬದಲಾವಣೆಗೆ ಎಕರೆಗೂ 25 ಲಕ್ಷ ರೂ. ಲಂಚ ಕೇಳಲಾಗುತ್ತಿದೆ. ಎಲ್ಲ ಇಲಾಖೆಗಳಲ್ಲಿ ಲಂಚದ ಬೇಡಿಕೆ ನಡೆಯುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಅನುದಾನ ಪಡೆಯಲು ಅಡ್ವಾನ್ಸ್ ಲಂಚ, ನಂತರ ಬಿಲ್Clearing, ಎನ್‌ಒಸಿ, ಹಾಗೂ ಕಾಮಗಾರಿಗೆ ಪ್ರತ್ಯೇಕವಾಗ...
‘ಬಿಜೆಪಿಯವರು ಒಂದು ಮನೆಯನ್ನಾದರೂ ಬಡವರಿಗೆ ಕೊಟ್ಟಿದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ’

‘ಬಿಜೆಪಿಯವರು ಒಂದು ಮನೆಯನ್ನಾದರೂ ಬಡವರಿಗೆ ಕೊಟ್ಟಿದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ’

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಡವರಿಗೆ ಮನೆ ಹಂಚಿಕೆಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತು ಸಮಗ್ರ ತನಿಖೆ ನಡೆಯಲಿ ಎಂದಿದ್ದಾರೆ.ಹಣ ಪಡೆದು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಆರೋಪವನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ನಾಯಕರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.ಈ ನಡುವೆ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಮನೆ ಹಂಚಿಕೆ ಮಾಡಲು ಹಣ ತೆಗೆದುಕೊಳ್ಳುತ್ತಿರುವ ಬಗ್ಗೆ ಯಾವುದಾದರೂ ದಾಖಲೆ ಇದೆಯೇ? ಹಣಕ್ಕೆ ಬೇಡಿಕೆ ಇಟ್ಟವರು ಯಾರು ಎಂದು ಬಿ.ಆರ್. ಪಾಟೀಲ್ ನನಗೆ ಹೇಳಲಿ ಎಂದು ಸವಾಲು ಹಾಕಿದ್ದಾರೆ. ಲಂಚ ಪಡೆದವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ, ಅವರನ್ನು ಬಿಡುವುದಿಲ್ಲ" ಎಂದು ಜಮೀರ್ ಅಹ್ಮದ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಬಿಆರ್ ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...
ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಆರ್ಥಿಕವಾಗಿ ದಿವಾಳಿ ಆಗಿರುವ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ವಸತಿ ನಿಗಮದ ಮನೆಗಳನ್ನು ಹಣ ಕೊಟ್ಟವರಿಗೆ ಮಾತ್ರ ನೀಡಿ ಹಗಲು ದರೋಡೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.ಆರ್ಥಿಕವಾಗಿ ದಿವಾಳಿ ಆಗಿರುವ ಭ್ರಷ್ಟ @siddaramaiah ಸರ್ಕಾರ ವಸತಿ ನಿಗಮದ ಮನೆಗಳನ್ನು ಹಣ ಕೊಟ್ಟವರಿಗೆ ಮಾತ್ರ ನೀಡಿ ಹಗಲು ದರೋಡೆ ಮಾಡುತ್ತಿದೆ.ಆಳಂದ ಶಾಸಕ @brpatilmla ಹಾಗೂ ಸಚಿವ @BZZameerAhmedK ಅವರ ಆಪ್ತ ಕಾರ್ಯದರ್ಶಿ ಸರ್ಫ ರಾಜ್ ಖಾನ್ ಮನೆಗಳನ್ನು ಹಣ ಪಡೆದು ಹಂಚಿರುವ ಬಗ್ಗೆ ದೂರವಾಣಿ ಕರೆಯಲ್ಲಿ ಮಾತನಾಡಿಕೊಂಡಿದ್ದಾರೆ.… pic.twitter.com/ykPrqXGQ5I — BJP Karnataka (@BJP4Karnataka) June 20, 2025ಆಳಂದ ಶಾಸಕ ಬಿ.ಆರ್.ಪಾಟೀಲ್ ಹಾಗೂ ಸಚಿವ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫ ರಾಜ್ ಖಾನ್ ಮನೆಗಳನ್ನು ಹಣ ಪಡೆದು ಹಂಚಿರುವ ಬಗ್ಗೆ ದೂರವಾಣಿ ಕರೆಯಲ್ಲಿ ಮಾತನಾಡಿಕೊಂಡಿದ್ದಾರೆ ಎನ್ನಲಾದ ಆಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಬಿಜೆಪಿ, ಸಿದ್ದರಾಮಯ್ಯ ಅವರೇ ರಾಜೀನಾಮೆ ನೀಡುತ್ತಿರೋ ಅಥವಾ ನಿಮ್ಮ ಆಪ್ತ ಜಮೀರ್ ಅವರಿಂದ ರಾಜೀ...
ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅಲ್ಪಸಂಖ್ಯಾತರಿಗಾಗಿ ವಸತಿ ಯೋಜನೆಗಳಲ್ಲಿ ಮೀಸಲಾತಿಯನ್ನು ಶೇಕಡಾ 10ರಿಂದ 15ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೊಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯ ಮೇರೆಗೆ ಕೈಗೊಳ್ಳಲಾದ ಕ್ರಮವೆಂದು ಸ್ಪಷ್ಟಪಡಿಸಿದ್ದಾರೆ."2019ರಲ್ಲಿ ಪ್ರಧಾನಿ ನೇತೃತ್ವದ ಕೇಂದ್ರ ಸರ್ಕಾರ ಪ್ರಕಟಿಸಿದ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮದಡಿ ಈ ಮಾರ್ಗಸೂಚಿ ಜಾರಿಗೆ ಬಂದಿದೆ. ಇದರಂತೆ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳು ಅಲ್ಪಸಂಖ್ಯಾತರಿಗೆ ಶೇ.15 ರಷ್ಟು ಮೀಸಲಾತಿ ನೀಡಬೇಕು ಎಂದು ಸ್ಪಷ್ಟವಾಗಿದೆ," ಎಂದು ಸಿಎಂ ಹೇಳಿದ್ದಾರೆ.ಈ ಮಾರ್ಗಸೂಚಿ ಹಿಂದಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ರೂಪಿಸಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. "ಇದು ಅಸಂವಿಧಾನಿಕವಾಗಿದ್ದರೆ, ಕೇಂದ್ರವೇ ಎಲ್ಲ ರಾಜ್ಯಗಳಿಗೆ ಅನುಸರಿಸಬೇಕು ಎಂದು ಹೇಳಲು ಹೇಗೆ ಸಾಧ್ಯ?" ಎಂದು ಅವರು ಪ್ರಶ್ನಿಸಿದರು.ಪ್ರಧಾನ ಮಂತ್ರಿ ಆವಾಸ್ ಯೋಜನೆಯಂತಹ ಹಲವಾರು ಕೇಂದ್ರ ಯೋಜನೆಗಳಲ್ಲಿ ಈ ಮೀಸಲಾತಿ ಜಾರಿಗೆ ...
ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯುವ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗವಹಿಸಿದೇ ಇರುವುದು ಸರ್ಕಾರದ ಕುತಂತ್ರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.ಮೆಟ್ರೋ ನಿಲ್ದಾಣಗಳಲ್ಲಿನ ಮಳಿಗೆ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗಿಯಾಗದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅಶೋಕ್, ಒಂದು ಕಡೆ ರೈತರಿಗೆ ಹಾಲಿನ ಸಹಾಯಧನ ನೀಡಿಲ್ಲ. ಇನ್ನೊಂದು ಕಡೆ ಕೆಎಂಎಫ್‌ಗೆ ಅವಕಾಶ ನೀಡಿಲ್ಲ. ಸರ್ಕಾರದ ತಪ್ಪಿನಿಂದಾಗಿ ರೈತರಿಗೆ ಅನ್ಯಾಯವಾಗಿದೆ ಹಾಗೂ ಬೇರೆಯವರಿಗೆ ಅವಕಾಶ ಸಿಕ್ಕಿದೆ ಎಂದರು.ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಕಾಂಗ್ರೆಸ್‌ ಒಡೆಯುತ್ತಿದೆ. ಸಿದ್ದರಾಮಯ್ಯ ಬಂದ ನಂತರ ಎಲ್ಲರನ್ನೂ ಒಡೆಯುತ್ತಿದ್ದಾರೆ. ಬೆಂಗಳೂರನ್ನು ಒಡೆಯುವುದನ್ನು ಜನರು ಸಹಿಸುವುದಿಲ್ಲ. 1 ಕೋಟಿ ಜನರನ್ನು ಆಳಲು ಒಬ್ಬ ಮೇಯರ್‌ಗೆ ಸಾಧ್ಯವಿಲ್ಲ ಎಂದು ಭಾವಿಸಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಹಣವಿಲ್ಲ. ಈ ತಪ್ಪನ್ನು ಮರೆಮಾಚಲು ಮೂರು ಭಾಗ ಮಾಡುವ ತೀರ್ಮಾನ ಮಾಡಲಾಗಿದೆ. ಗುಂಡಿ ಬಿದ್ದ ರಸ್ತೆ, ಕಸದ ಸಮಸ್ಯೆಯನ್ನು ಜನರು ಮರೆಯುವಂತೆ ಮಾಡಲು ಹೊಸ ವಿಚಾರಗಳನ್ನು ಪ್ರಸ್ತಾಪ...
ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣಕ್ಕೆ ಇದೀಗ ‘ವಸತಿ’ ಸೂತ್ರ? ಬಿಜೆಪಿ ಟೀಕೆ

ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣಕ್ಕೆ ಇದೀಗ ‘ವಸತಿ’ ಸೂತ್ರ? ಬಿಜೆಪಿ ಟೀಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿರುವುದಕ್ಕೆ ಬಿಜೆಪಿ ಆಕ್ಷೇಪಿಸಿದ್ದು, ಇದು ಅಲ್ಪಸಂಖ್ಯಾತರನ್ನು ಓಲೈಸುವ ರಾಜಕೀಯ ಯತ್ನವಾಗಿದೆ ಎಂದು ಟೀಕಿಸಿದೆ.ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಸಿಟಿ ರವಿ, ಅಲ್ಪಸಂಖ್ಯಾತರ ಮತ ಬ್ಯಾಂಕ್‌ ರಾಜಕಾರಣಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ವಸತಿ ಯೋಜನೆ ಕೂಡಾ ಉಪಯೋಗಿಸುತ್ತಿದೆ. ಸಮಾಜದ ಎಲ್ಲ ವರ್ಗಗಳಿಗೂ ಸೌಲಭ್ಯ ದೊರೆಯಬೇಕು ಎಂಬುದು ಸಂವಿಧಾನದ ಆಶಯ. ಆದರೆ ಸರ್ಕಾರ ಅದರ ವಿರುದ್ಧ ನಡೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಧನ್ ಯೋಜನೆ, ಉಚಿತ ಗ್ಯಾಸ್ ಸಿಲಿಂಡರ್‌ ವಿತರಣೆ, ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ವಿಮೆ ನೀಡಿದಾಗ ಯಾರಿಂದಲೂ ಧರ್ಮ ಅಥವಾ ಜಾತಿಯನ್ನು ಕೇಳಲಿಲ್ಲ ಎಂದು ಸಿಟಿ ರವಿ ಹಿಗ್ಗೆ ಹೇಳಿದರು.ವಾಸ್ತವದಲ್ಲಿ ಕಾಂಗ್ರೆಸ್ ಪಕ್ಷ ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಸಂವಿಧಾನದ ಮೌಲ್ಯಗಳಿಗೆ ಧಕ್ಕೆ ತರುತ್ತಿದೆ. ಬೆಂಗಳೂರಿನಲ್ಲಿ ವಾಸವಿರುವ ಬಾಂಗ್ಲಾದ...
ಬಳ್ಳಾರಿ: ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬಳ್ಳಾರಿ: ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬಳ್ಳಾರಿ: ಮೂವರು ಪುಟ್ಟ ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಹೊಸೂರು ಚಂಪಾ ಗ್ರಾಮದ ಸಿದ್ದವ್ವ ಎಂದು ಗುರುತಿಸಲಾಗಿದೆ. ಮಂಗಳವಾರದಿಂದಲೂ ಸಿದ್ದವ್ವ ಮತ್ತು ಮಕ್ಕಳ ಕುರುಹು ಸಿಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದರು.ಬುಧವಾರ ಬೆಳಿಗ್ಗೆ ದಮ್ಮೂರಿನ ಸಮೀಪದ ಕೃಷಿ ಹೊಂಡದಲ್ಲಿ ಸಿದ್ದವ್ವ ಹಾಗೂ ಮಕ್ಕಳ ಮೃತದೇಹಗಳು ಕಂಡುಬಂದಿದ್ದು, ಗ್ರಾಮಸ್ಥರು ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯ ಹಿಂದೆ ಕಾರಣ ಇನ್ನೂ ತಿಳಿದುಬಂದಿಲ್ಲ....
ವೈಫಲ್ಯಗಳನ್ನು ವಿರುದ್ಧ ಜನಾಕ್ರೋಶ; ಗಮನ ಬೇರೆಡೆ ಸೆಳೆಯಲು ಸಿದ್ದರಾಮಯ್ಯ  ‘ಮುಸ್ಲಿಂ ಮೀಸಲಾತಿ’ ಅಸ್ತ್ರ?

ವೈಫಲ್ಯಗಳನ್ನು ವಿರುದ್ಧ ಜನಾಕ್ರೋಶ; ಗಮನ ಬೇರೆಡೆ ಸೆಳೆಯಲು ಸಿದ್ದರಾಮಯ್ಯ ‘ಮುಸ್ಲಿಂ ಮೀಸಲಾತಿ’ ಅಸ್ತ್ರ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆಯನ್ನು ಮರು ಸ್ಥಾಪಿಸಲು ಹೊರಟಂತಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಮುಸ್ಲಿಂಮರಿಗೆ ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಕಲ್ಪಿಸಿ ನಂತರ ಸರ್ಕಾರಿ ಗುತ್ತಿಗೆ ಕಾಮಗಾರಿಗಳ ಹಂಚಿಕೆಯಲ್ಲಿಯೂ ಮೀಸಲಾತಿ ನಿಗದಿಪಡಿಸಲಾಗಿತ್ತು, ಇದೀಗ ವಸತಿ ಸೌಲಭ್ಯ ಕಲ್ಪಿಸುವುದರಲ್ಲಿಯೂ ಮೀಸಲಾತಿ ಹೆಚ್ಚಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.ಪ್ರಜಾಪ್ರಭುತ್ವದ ತತ್ವ-ಸರ್ವರಿಗೂ ಸಮಾನತೆ, ಸಂವಿಧಾನದ ಆಶಯ-ವರ್ಗ ತಾರತಮ್ಯಕ್ಕೆ ಅವಕಾಶ ನೀಡದಿರುವುದು, ಇವೆರಡನ್ನೂ ಗಾಳಿಗೆ ತೂರಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ವಿಪರೀತ ಎನ್ನುವಂತೆ ಮುಸ್ಲಿಂ ಸಮುದಾಯವನ್ನು ಓಲೈಸಲು ಟೊಂಕ ಕಟ್ಟಿ ನಿಂತಿದೆ ಎಂದವರು ಟೀಕಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರ ಸಮಗ್ರ ಕಲ್ಯಾಣವನ್ನು ಸಂಪೂರ್ಣ ಮರೆತಿದೆ, ಚುನಾವಣೆಯಲ್ಲಿ ಗೆದ್ದು ಬರುವಾಗ 'ನಮ್ಮದು ಜಾತ್ಯಾತೀತ ತತ್ವ ಎಂದು ಬೊಗಳೆ ಬಿಡುತ್ತಿದ್...