Sunday, August 9

ವಿದೇಶ

ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಲವು ಜನಪರ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ನಿಂದ ಹಿಡಿದು ರಸ್ತೆ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ಘೋಷಿಸುವವರೆಗೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಹೊಸ ಆಡಳಿತದ ದಿಕ್ಕು ನಿರ್ಧರಿಸುವ ಉದ್ದೇಶದಿಂದ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಅರ್ಜಿ ವಿತರಣೆ ಹಾಗೂ ಅನುಷ್ಠಾನದ ಕುರಿತು ಸಾರಿಗೆ ಇಲಾಖೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.ನಗರ ಹಾಗೂ ಪಟ್ಟಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿರುವ ಸರ್ಕಾರ, ಈಗಾಗಲೇ ನ...
ಜೂನ್ 9ರವರೆಗೆ ರಾಜ್ಯದಲ್ಲಿ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬಗ್ಗೆ ಎಚ್ಚರಿಕೆ

ಜೂನ್ 9ರವರೆಗೆ ರಾಜ್ಯದಲ್ಲಿ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬಗ್ಗೆ ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಜೂನ್ 9ರವರೆಗೆ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಿರುಗಾಳಿ ಮತ್ತು ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಇಲಾಖೆ ಸೂಚಿಸಿದೆ.ಹವಾಮಾನ ಇಲಾಖೆ ಮಾಹಿತಿಯಂತೆ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳ ಶೇಕಡಾ 50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಹಾವೇರಿ, ಬೆಳಗಾವಿ, ಮೈಸೂರು, ಮಂಡ್ಯ ಹಾಗೂ ರಾಯಚೂರು ಜಿಲ್ಲೆಗಳಲ್ಲ...
ವಿಧಾನಸಭೆ ಸ್ಪೀಕರ್, ಮೇಲ್ಮನೆ ಸಭಾಪತಿ ಬದಲಾವಣೆಗೂ ಕಾಂಗ್ರೆಸ್ ತಯಾರಿ

ವಿಧಾನಸಭೆ ಸ್ಪೀಕರ್, ಮೇಲ್ಮನೆ ಸಭಾಪತಿ ಬದಲಾವಣೆಗೂ ಕಾಂಗ್ರೆಸ್ ತಯಾರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು (ANU): ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಸ್ಥಾನಗಳಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ.ಮೂಲಗಳ ಪ್ರಕಾರ, ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರು ಸಂಪುಟಕ್ಕೆ ಸೇರುವ ಸಾಧ್ಯತೆ ಇದ್ದು, ಸಚಿವ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ಅವರಿಗೆ ಮಂತ್ರಿ ಸ್ಥಾನ ನೀಡಲಾಗಬಹುದು ಎನ್ನಲಾಗಿದೆ. 2023ರಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಖಾದರ್ ಅವರನ್ನು ನಂತರ ವಿಧಾನ ಪರಿಷತ್ ಸಭಾಪತಿಯನ್ನಾಗಿ ಮಾಡಲಾಗಿತ್ತು.ಸಂಪುಟ ಪುನರ್‌ರಚನೆ ವೇಳೆ ಖಾದರ್ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗಿ ಅವರು ತೆರವುಗೊಳಿಸಬಹುದಾದ ಸ್ಥಾನಕ್ಕೆ ಹೊಸ ಸದಸ್ಯರನ್ನು ಸ್ಪೀಕರ್ ಆಗಿ ನೇಮಿಸುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.ಇತ್ತ, ವಿಧಾನ ಪರಿಷತ್‌ನಲ್ಲಿಯೂ ಸಮೀಕರಣಗಳು ಕಾಂಗ್ರೆಸ್ ಪರವಾಗಿ ಅನುಕೂಲಕರವಾಗುವ ಸಾಧ್ಯತೆ ಇದೆ. ಜೂನ್ 18ರಂದು ನಡೆಯಲಿರುವ ಪರಿಷತ್ ಚುನಾವಣೆಯ ನಂತರ ಮೇಲ್ಮನೆಯಲ್ಲಿ ಕ...
ಸಿಎಂ ಪದಗ್ರಹಣದ ಜೊತೆಗೆ ಮೊದಲ ಹಂತದ ಸಚಿವರ ಪ್ರಮಾಣವಚನ? ಸಂಭಾವ್ಯ ಪಟ್ಟಿ..

ಸಿಎಂ ಪದಗ್ರಹಣದ ಜೊತೆಗೆ ಮೊದಲ ಹಂತದ ಸಚಿವರ ಪ್ರಮಾಣವಚನ? ಸಂಭಾವ್ಯ ಪಟ್ಟಿ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಅಂತಿಮ ಹಂತ ತಲುಪುತ್ತಿದ್ದಂತೆ, ಇದೀಗ ನೂತನ ಸರ್ಕಾರದ ಸಚಿವ ಸಂಪುಟ ರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಚಟುವಟಿಕೆ ಚುರುಕುಗೊಳಿಸಿದೆ. ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಆಯ್ಕೆಯಾದ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.ಮೂಲಗಳ ಪ್ರಕಾರ, ಮೊದಲ ಹಂತದಲ್ಲಿ 10 ರಿಂದ 12 ಸಚಿವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೂನ್ 3ರಂದು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಕುರಿತು ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಸಿದ್ಧಪಡಿಸಿರುವ ಪ್ರಾಥಮಿಕ ಪಟ್ಟಿಯನ್ನು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.ಪಟ್ಟಿಯನ್ನು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಪರಿಶೀಲಿಸಿದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಂತಿಮ ಅನುಮೋದನೆಗೆ ಕಳುಹಿಸಲಾಗುವುದು ಎಂದು ತಿಳಿದುಬಂದಿದೆ.ಸದ್ಯ ಚರ್ಚೆಯಲ್ಲಿರುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಡಿ.ಕೆ. ಶಿವಕುಮಾರ್, ಯು.ಟಿ. ಖಾದ...
ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

ವಿಜಯಾನಂದ್ ಕಾಶಪ್ಪನವರ್‌ಗೆ ಸಚಿವ ಸ್ಥಾನ ನೀಡಲಿ: ಪಂಚಮಸಾಲಿ ಸಮಾಜದ ಒತ್ತಾಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಪಂಚಮಸಾಲಿ ಲಿಂಗಾಯಿತ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ನೀಡಬೇಕು ಹಾಗೂ ಯುವ ಶಾಸಕ ವಿಜಯಾನಂದ್ ಎಸ್. ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ–ಪಂಚಮಸಾಲಿ ಸಂಘ ಒತ್ತಾಯಿಸಿದೆ.ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ–ಪಂಚಮಸಾಲಿ ಸಂಘ ಹಾಗೂ ವಿಜಯಾನಂದ್ ಕಾಶಪ್ಪನವರ್ ಅಭಿಮಾನಿ ಬಳಗದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬೇಡಿಕೆ ಮುಂದಿರಿಸಲಾಯಿತು.ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ಡಿಂಡೂರ ಮಾತನಾಡಿ, ರಾಜ್ಯದಲ್ಲಿ ಲಿಂಗಾಯಿತ ಪಂಚಮಸಾಲಿ ಸಮುದಾಯದ ಜನಸಂಖ್ಯೆ ಒಂದು ಕೋಟಿಗೂ ಅಧಿಕವಿದ್ದು, ಕೃಷಿ ಆಧಾರಿತ ಸಮುದಾಯವಾಗಿ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ಆದಾಗ್ಯೂ, ಹಲವು ಸರ್ಕಾರಗಳಲ್ಲಿ ಸಮುದಾಯಕ್ಕೆ ಸಮರ್ಪಕ ಆದ್ಯತೆ ಸಿಕ್ಕಿಲ್ಲ ಎಂಬ ಬೇಸರವಿದೆ ಎಂದು ಹೇಳಿದರು.ಪಂಚಮಸಾಲಿ ಸಮುದಾಯಕ್ಕೆ ಒಂದು ಉಪಮುಖ್ಯಮಂತ್ರಿ ಹುದ್ದೆ ಹಾಗೂ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದ ಅವರು, ಯುವ ನಾಯಕ ವಿಜಯಾನಂದ್ ಕಾಶಪ್ಪನವರ್ ಅವರಿಗ...
ಮುಖ್ಯಮಂತ್ರಿ ಹುದ್ದೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅರ್ಪಣೆ: ಡಿಕೆಶಿ

ಮುಖ್ಯಮಂತ್ರಿ ಹುದ್ದೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅರ್ಪಣೆ: ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಹಾಗೂ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ. ರಾಜ್ಯಾದ್ಯಂತ ಕಾರ್ಯಕರ್ತರು ತಮ್ಮ ಪದವಿ ಪ್ರದಾನವನ್ನು ಸಂಭ್ರಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಹುದ್ದೆಯ ಗೌರವ ಕಾರ್ಯಕರ್ತರಿಗೇ ಸೇರಿದ್ದು ಎಂದು ಅವರು ಹೇಳಿದ್ದಾರೆ.ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ಮುಖ್ಯಮಂತ್ರಿಯಾಗುತ್ತಿರುವುದು ನಾನಲ್ಲ, ಪಕ್ಷದ ಕಾರ್ಯಕರ್ತರೇ ಮುಖ್ಯಮಂತ್ರಿಯಾಗುತ್ತಿದ್ದಾರೆ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, 1979ರಿಂದ ವಿದ್ಯಾರ್ಥಿ ನಾಯಕನಾಗಿ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಕಾರ್ಯಕರ್ತರ ಪರಿಶ್ರಮ ಮತ್ತು ಪಕ್ಷದ ಮೇಲಿನ ನಿಷ್ಠೆಯೇ ಈ ಸ್ಥಾನಕ್ಕೆ ನನ್ನನ್ನು ತಲುಪಿಸಿದೆ. ಅದಕ್ಕಾಗಿಯೇ ರಾಜ್ಯಾದ್ಯಂತ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ” ಎಂದು ಹೇಳಿದರು.ಇದೇ ವೇಳೆ ತಮ್ಮನ್ನು ಅಭಿನಂದಿಸಲು ಬರುವ ಕಾರ್ಯಕರ್ತರಿಗೆ ವಿಶೇಷ ಮನವಿಯನ್ನೂ ಮಾಡಿ...
ಆರ್‌ಸಿಬಿಗೆ ಅಭಿನಂದನೆ ಮಹಾಮಳೆ: ‘ಈ ಸಲವೂ ಕಪ್ ನಮ್ಮದೇ’ ಎಂದು ಸಂಭ್ರಮಿಸಿದ ಸಿದ್ದು, ಡಿಕೆಶಿ

ಆರ್‌ಸಿಬಿಗೆ ಅಭಿನಂದನೆ ಮಹಾಮಳೆ: ‘ಈ ಸಲವೂ ಕಪ್ ನಮ್ಮದೇ’ ಎಂದು ಸಂಭ್ರಮಿಸಿದ ಸಿದ್ದು, ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಮುಖ್ಯಮಂತ್ರಿ ಹುದ್ದೆಗೆ ನಿಯೋಜಿತರಾಗಿರುವ ಡಿ.ಕೆ. ಶಿವಕುಮಾರ್ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.ಆರ್‌ಸಿಬಿಯ ಐತಿಹಾಸಿಕ ಗೆಲುವಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ತಂಡದ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.“ಆರ್‌ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಟೂರ್ನಿಯುದ್ದಕ್ಕೂ ಆರ್‌ಸಿಬಿ ಆಟಗಾರರು ಪ್ರದರ್ಶಿಸಿದ ನಿರ್ಭೀತಿಯ ಕ್ರಿಕೆಟ್ ಎದುರಾಳಿ ತಂಡಗಳಿಗೆ ಉತ್ತರವೇ ಇಲ್ಲದಂತೆ ಮಾಡಿತು. ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದ ನಮ್ಮ ಆರ್‌ಸಿಬಿಗೆ ಅಭಿನಂದನೆಗಳು. ತಂಡದ ಒಗ್ಗಟ್ಟಿನ ಪ್ರಯತ್ನದಿಂದ ಸಾಧಿಸಿದ ಈ ಗೆಲುವು ಆರ್‌ಸಿಬಿ ಅಭಿಮಾನಿಗಳ ಮನೆಗಳಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿದೆ” ಎಂದು ತಿಳಿಸಿದ್ದಾರೆ.ಅಲ್ಲದೆ, ಆರ್‌ಸಿಬಿ ವಿಜಯೋತ್ಸವದ ಹಿನ್ನೆಲೆಯಲ್ಲ...
ಜೂನ್ 3ರರಂದು ಪ್ರಮಾಣವಚನ ಸ್ವೀಕರಿಸುವ ಸಚಿವರ ಪಟ್ಟಿಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದ ಡಿಕೆಶಿ

ಜೂನ್ 3ರರಂದು ಪ್ರಮಾಣವಚನ ಸ್ವೀಕರಿಸುವ ಸಚಿವರ ಪಟ್ಟಿಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದ ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜೂನ್ 3ರಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತಮ್ಮೊಂದಿಗೆ ಸಚಿವರು ಪ್ರಮಾಣವಚನ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ರೇಸ್ ಕೋರ್ಸ್ ರಸ್ತೆಯ ಸಮೀಪ ನಿರ್ಮಾಣವಾಗಲಿರುವ ಕಾಂಗ್ರೆಸ್ ಭವನಕ್ಕೆ ಮೀಸಲಾದ ಜಾಗವನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮಾಣವಚನ ಸಮಾರಂಭದ ನಂತರ ಹೊಸ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಲಭ್ಯತೆ ಇನ್ನೂ ಖಚಿತವಾಗಿಲ್ಲ ಎಂದು ಹೇಳಿದರು.ಸಮಾರಂಭಕ್ಕೆ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ವಿವಿಧ ಘಟಕಗಳ ಪದಾಧಿಕಾರಿಗಳು, ಸಂಸದರು ಹಾಗೂ ನಿಗಮ-ಮಂಡಳಿಗಳ ಅಧ್ಯಕ್ಷರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು. ಸಿದ್ಧತೆಗಳ ಜವಾಬ್ದಾರಿಯನ್ನು ಹಿರಿಯ ನಾಯಕ ರ...
‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು. ರಾಜ್ಯವನ್ನು ಮುನ್ನಡೆಸಲು ಬೇಕಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು ಎಂದು ನೂತನ ಆಗಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಅಭಯದ ಮಾತುಗಳನ್ನು ಹೇಳಿದ್ದಾರೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.'ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ' ಎಂದಿರುವ ಸಿದ್ದರಾಮಯ್ಯ, 'ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿ...
ಜೂನ್ 3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ

ಜೂನ್ 3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಜೂನ್ 3 ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಜೊತೆಗೆ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಏಕಮತದಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.ಇದಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚನೆಗೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿದರು. ಬಹುಮತದ ಬೆಂಬಲದ ಆಧಾರದ ಮೇಲೆ ರಾಜ್ಯಪಾಲರು ಸರ್ಕಾರ ರಚಿಸಲು ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.ಈ ಸಂಬಂಧ ರಾಜ್ಯಪಾಲರ ಕಚೇರಿಯಿಂದ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪತ್ರ ಕಳುಹಿಸಲಾಗಿದ್ದು, ಜೂನ್ 3ರಂದು ಸಂಜೆ 4.05 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಂತೆ ಆಹ್ವಾನಿಸಲಾಗಿದೆ.ಶಾಸಕಾಂಗ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ಕಾಂಗ್ರೆಸ್ ...