
ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಲವು ಜನಪರ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ನಿಂದ ಹಿಡಿದು ರಸ್ತೆ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ಘೋಷಿಸುವವರೆಗೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಹೊಸ ಆಡಳಿತದ ದಿಕ್ಕು ನಿರ್ಧರಿಸುವ ಉದ್ದೇಶದಿಂದ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಅರ್ಜಿ ವಿತರಣೆ ಹಾಗೂ ಅನುಷ್ಠಾನದ ಕುರಿತು ಸಾರಿಗೆ ಇಲಾಖೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.ನಗರ ಹಾಗೂ ಪಟ್ಟಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿರುವ ಸರ್ಕಾರ, ಈಗಾಗಲೇ ನ...








