Monday, August 17

ವಿದೇಶ

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಬೆಂಗಳೂರಿನ ವಿಕಾಸಸೌಧದಲ್ಲಿ ಕೋವಿಡ್‌ ಮುನ್ನೆಚ್ಚರಿಕಾ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿ ನಡೆಸಿದರು. ಕೋವಿಡ್ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಸಚಿವರು ತಿಳಿಸಿದರು.ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ...
ನೀತಿ ಸಭೆಗೆ ಸಿಎಂ ಗೈರು: ಸಚಿವರ ಸಮರ್ಥನೆ

ನೀತಿ ಸಭೆಗೆ ಸಿಎಂ ಗೈರು: ಸಚಿವರ ಸಮರ್ಥನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ವಾರ ನಡೆದ ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಗೈರು ಹಾಜರಾಗಿದ್ದರಲ್ಲಿ ತಪ್ಪಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ..ಸರ್ಕಾರದ ಪರವಾಗಿ ನಮ್ಮ ಕಂದಾಯ ಸಚಿವರು ಹೋಗಿದ್ದರು ಎಂದು ಅವರು ತಿಳಿಸಿದ್ದಾರೆ.ಪ್ರಧಾನಮಂತ್ರಿ ಈ ಹಿಂದೆ ನಡೆದ ನೀತಿ ಆಯೋಗದ ಎಷ್ಟೋ ಸಭೆಗಳಿಗೆ ಹೋಗಿಲ್ಲ. ಆಗ ಹಣಕಾಸು ಸಚಿವರು ನಡೆಸಿದ್ದಾರೆ. ಮತ್ತೆ ಸಭೆಗೆ ಹೋದರೂ ಅವರು ಹೇಳಿದ್ದನ್ನು ಮಾತ್ರ ಕೇಳಿಕೊಂಡು ಬರಬೇಕು. ನಮಗೆ ಕೇಳುವ ಹಕ್ಕು, ಸಮಯ ಎರಡನ್ನೂ ಕೊಡುವುದಿಲ್ಲ. ಒನ್‌ ವೇ ಸಭೆಗಳಿಗೆ ನಾವೇಕೆ ಹೋಗಬೇಕು ಎಂದು ಪತ್ರಕರ್ತರನ್ನೇ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಪ್ರಶ್ನಿಸಿದರು....
ಅಲ್ಪಸಂಖ್ಯಾತ ಐಎಎಸ್‌ ಅಧಿಕಾರಿ ಮೇಲೆ ಬಿಜೆಪಿ ನಾಯಕರ ವಾಗ್ದಾಳಿ: ಶರಣ್‌ ಪ್ರಕಾಶ್‌ ಪಾಟೀಲ್‌ ಟೀಕೆ 

ಅಲ್ಪಸಂಖ್ಯಾತ ಐಎಎಸ್‌ ಅಧಿಕಾರಿ ಮೇಲೆ ಬಿಜೆಪಿ ನಾಯಕರ ವಾಗ್ದಾಳಿ: ಶರಣ್‌ ಪ್ರಕಾಶ್‌ ಪಾಟೀಲ್‌ ಟೀಕೆ 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು.ವಿಕಾಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು, ಬಿಜೆಪಿಯವರೆಗೆ ಬುದ್ದಿ ಭ್ರಮಣೆಯಾಗಿದೆ. ಐಎಎಸ್‌ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಷಾದನೀಯ. ಶಾಲಾ ಮಕ್ಕಳು ಕೂಡ ಹೀಗೆ ಮಾತನಾಡಲ್ಲ. ಸಾರ್ವಜನಿಕ ಜೀವನದಲ್ಲಿ ಇರಲು ಇಂಥವರು ಅನರ್ಹ' ಎಂದು ಕಿಡಿಕಾರಿದರು.ಐಎಎಸ್‌ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವದನ್ನು ಐಎಎಸ್‌ ಅಧಿಕಾರಿಗಳ ಒಕ್ಕೂಟ ಈಗಾಗಲೇ ರವಿಕುಮಾರ್‌ ವಿರುದ್ಧ ಪತ್ರ ಬರೆದು, ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್‌ ನಾಯಕರೊಬ್ಬರು ಈ ರೀತಿ ಮಾತನಾಡಿದ್ದು ಅಪ್ರಬುದ್ಧತೆ ತೋರುತ್ತದೆ ಎಂದು ಸಚಿವರು ತಿಳಿಸಿದರು.ಹೇಳಿಕೆ ನೀಡುವಾಗ ಸರಿ, ತಪ್ಪು ಎಂಬುದರ ಬಗ್ಗೆ ಜ್ಞಾನ ಕಳೆದುಕೊಂಡಿದ್ದಾರೆ. ಅಧಿಕಾರ ಕಳೆದುಕೊಂಡು ನೀರಿನ...
ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಕನ್ನಡ ಕಿರುತೆರೆ, ಹಿರಿ ತೆರೆ ನಟ ಶ್ರೀಧರ್ ನಾಯಕ್ ವಿಧಿವಶರಾಗಿದ್ದಾರೆ.. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಮೂಲಗಳು ತಿಳಿಸಿವೆ.47 ವರ್ಷ ವಯಸ್ಸಿನ ಅವರು 'ಪಾರು'‌ ಧಾರಾವಾಹಿಯಲ್ಲಿ ನಟಿಸಿದ್ದರು. ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಸಿನಿಮಾದಲ್ಲೂ ಶ್ರೀಧರ್ ನಾಯಕ್ ನಟಿಸಿದ್ದರು....
ರಾಜ್ಯದಲ್ಲಿ ಈ ತಿಂಗಳ ಅಂತ್ಯದವರೆಗೂ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಈ ತಿಂಗಳ ಅಂತ್ಯದವರೆಗೂ ಭಾರೀ ಮಳೆ ಸಾಧ್ಯತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ. ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ ಮತ್ತು ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್, ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದ್ದು, ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲೂ ಭಾರಿ ಮಳೆಯಾಗಲಿದೆ.ಬೆಳಗಾವಿ ಮತ್ತು ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಗದಗದಲ್ಲಿ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡ...
ರಾಜ್ಯದಲ್ಲಿ ಭಾರೀ ಮಳೆ; ಸರಣಿ ಅವಘಡಗಳಿಂದ ಜನ ಕಂಗಾಲು

ರಾಜ್ಯದಲ್ಲಿ ಭಾರೀ ಮಳೆ; ಸರಣಿ ಅವಘಡಗಳಿಂದ ಜನ ಕಂಗಾಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ಕಳೆದೆರಡು ದಿನಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಭಾರೀ ಮಳೆಯೂ ಸರಣಿ ಅವಘಡಗಳಿಗೂ ಕಾರಣವಾಗಿವೆ.ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿವೆ. ಕುಂದಾಪುರ, ಕಾರ್ಕಳ ತಾಲೂಕುಗಳ ಹಲವು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. #ಭಾಗಮಂಡಲ_ತ್ರಿವೇಣಿ_ಸಂಗಮ_ಭರ್ತಿತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಗಾಳಿ ಮಳೆ ಜೋರಾಗಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ. pic.twitter.com/Np5pTX5RrN— Coorg The Kashmir of Karnataka (@Coorgthekashmir) May 25, 2025ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆ ಸರಣಿ ಅನಾಹುತಗಳಿಗೆ ಕಾರಣವಾಗಿವೆ. ಇನ್ನೊಂದೆಡೆ ಹಾಸನ ಜಿಲ್ಲೆಯಲ್ಲೂ ಮಳೆ ಸಂಬಂಧಿ ಘಟನೆ ಸಂಭವಿಸಿದೆ. ಶಿರಾಡಿ ಘಾಟಿ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ವಾ...
ಕರ್ನಾಟಕದಲ್ಲಿ ಮೊದಲ ಕೋವಿಡ್ ಸಾವು; 38 ಸಕ್ರಿಯ ಪ್ರಕರಣಗಳು

ಕರ್ನಾಟಕದಲ್ಲಿ ಮೊದಲ ಕೋವಿಡ್ ಸಾವು; 38 ಸಕ್ರಿಯ ಪ್ರಕರಣಗಳು

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ ಬೆಂಗಳೂರಿನಲ್ಲಿ ಮೊದಲ ಕೋವಿಡ್ -19 ಸಾವು ವರದಿಯಾಗಿದೆ. ಶನಿವಾರ ರೋಗಿಯು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಆದಾಗಿಯೂ ಕಳೆದೆರಡು ದಿನಗಳಲ್ಲಿ 108 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಐವರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು38 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಸರ್ಕಾರ ತಿಳಿಸಿದೆ.ಒಟ್ಟು 38 ಸಕ್ರಿಯ ಪ್ರಕರಣಗಳಲ್ಲಿ 32 ಬೆಂಗಳೂರಿನಿಂದ ವರದಿಯಾಗಿದೆ. ನಗರದಲ್ಲಿ ಒಟ್ಟು 92 ಜನರು ಪರೀಕ್ಷೆಗೆ ಒಳಗಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಇಬ್ಬರು ವ್ಯಕ್ತಿಗಳು ಪಾಸಿಟಿವ್ ಆಗಿದ್ದಾರೆ ಎಂದು ವರದಿ ತಿಳಿಸಿದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಮಂಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಲಾ ಒಂದು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಮತ್ತು ಮೈಸೂರು ಜಿಲ್ಲೆಯಲ್ಲಿ ಎರಡು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ವರದಿ ತಿಳಿಸಿದೆ.ಮುಂಬೈನಿಂದ ಹಿಂದಿರುಗಿದ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದ...
ಭಾರತದಲ್ಲಿ NB.1.8.1, LF.7 ಕೋವಿಡ್ ರೂಪಾಂತರಿ ವೈರಸ್ ಸಕ್ರಿಯ!

ಭಾರತದಲ್ಲಿ NB.1.8.1, LF.7 ಕೋವಿಡ್ ರೂಪಾಂತರಿ ವೈರಸ್ ಸಕ್ರಿಯ!

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಭಾರತದಲ್ಲಿ SARS-CoV-2 ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ವರದಿಗಳ ಮಧ್ಯೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಸ್ಥಾಪಿಸಲಾದ ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ದತ್ತಾಂಶವು ದೇಶದಲ್ಲಿ JN.1 ಕೋವಿಡ್ ರೂಪಾಂತರದ ವಂಶಸ್ಥರಾದ NB.1.8.1, LF.7 ಉಪಸ್ಥಿತಿಯನ್ನು ತೋರಿಸಿದೆ.ಕೋವಿಡ್ ವೈರಸ್‌ನ ಜೀನೋಮಿಕ್ ವ್ಯತ್ಯಾಸಗಳನ್ನು ಮೇಲ್ವಿಚಾರಣೆ ಮಾಡಲು 64 ಪ್ರಯೋಗಾಲಯಗಳ ಒಕ್ಕೂಟವಾದ INSACOG ದತ್ತಾಂಶವು NB.1.8.1 ನ ಒಂದು ಪ್ರಕರಣ ಮತ್ತು LF.7 ಪ್ರಕಾರದ ನಾಲ್ಕು ಪ್ರಕರಣಗಳನ್ನು ತೋರಿಸಿದೆ.ಏಪ್ರಿಲ್‌ನಲ್ಲಿ ತಮಿಳುನಾಡಿನಲ್ಲಿ NB.1.8.1 ಅನ್ನು ಗುರುತಿಸಲಾಗಿದ್ದರೆ, ಮೇ ತಿಂಗಳಲ್ಲಿ ಗುಜರಾತ್‌ನಲ್ಲಿ LF.7 ನ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಪ್ರಸ್ತುತ, LF.7 ಮತ್ತು NB.1.8 ಎರಡನ್ನೂ ವಿಶ್ವ ಆರೋಗ್ಯ ಸಂಸ್ಥೆ (WHO) ಮೇಲ್ವಿಚಾರಣೆಯಲ್ಲಿರುವ ರೂಪಾಂತರಗಳು (VUM) ಎಂದು ವರ್ಗೀಕರಿಸಿದೆ. SARS-CoV-2 ರೂಪಾಂತರಕ್ಕೆ ಆದ್ಯತೆಯ ಗಮನ ಮತ್ತು ಮೇಲ್ವಿಚಾರಣೆಯ ಅಗತ್ಯವಿರಬಹುದು ಎಂದು ಸಾರ್ವಜನಿಕ ಆರೋಗ್ಯ ಅಧಿಕಾರಿಗಳಿಗೆ ಸೂಚಿಸ...
ಹಿಂದೂ ದೇವಾಲಯ ಮಸೂದೆ: ರಾಷ್ಟ್ರಪತಿಗಳ ಒಪ್ಪಿಗೆ ಕೋರಿದ ರಾಜ್ಯಪಾಲರು

ಹಿಂದೂ ದೇವಾಲಯ ಮಸೂದೆ: ರಾಷ್ಟ್ರಪತಿಗಳ ಒಪ್ಪಿಗೆ ಕೋರಿದ ರಾಜ್ಯಪಾಲರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಹಿಂದೂ ದೇವಾಲಯ ಮಸೂದೆ ಎಂದೂ ಕರೆಯಲ್ಪಡುವ “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ (ತಿದ್ದುಪಡಿ) ಮಸೂದೆ, 2024” ಗೆ ರಾಷ್ಟ್ರಪತಿಗಳ ಒಪ್ಪಿಗೆ ಕೋರಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ನೀಡಿದ ಸ್ಪಷ್ಟೀಕರಣಗಳಿಂದ ಮತ್ತು ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ ರಾಜ್ಯಪಾಲರು ತಮಗೆ ಮನವರಿಕೆಯಾಗಿಲ್ಲ ಎಂದು ಹೇಳಿದ್ದಾರೆ.ರಾಜ್ಯ ವಿಧಾನ ಮಂಡಲದಲ್ಲಿ ಪ್ರತಿಪಕ್ಷ ಬಿಜೆಪಿಯ ಪ್ರತಿಭಟನೆಯ ನಡುವೆ ಮಸೂದೆಯನ್ನು ಅಂಗೀಕರಿಸಲಾಗಿತ್ತು. ರಾಜ್ಯಾದ್ಯಂತ ಶ್ರೀಮಂತ ಹಿಂದೂ ದೇವಾಲಯಗಳಿಂದ ಬರುವ ಆದಾಯದ ಹೆಚ್ಚಿನ ಭಾಗವನ್ನು ಸಾಮಾನ್ಯ ನಿಧಿಗೆ ಬಳಸಿಕೊಳ್ಳಲು ಮಸೂದೆ ಪ್ರಯತ್ನಿಸುತ್ತದೆ."ರಾಜ್ಯ ಸರ್ಕಾರದ ಕಾನೂನು ಇಲಾಖೆಯು ಕಾನೂನು ದೃಷ್ಟಿಕೋನವನ್ನು ತೆಗೆದುಕೊಂಡಾಗ, ಅಂತಹ ಅಂಶವನ್ನು ಪರಿಶೀಲಿಸುವುದು ನನ್ನ ಪೂರ್ವವೀಕ್ಷಣೆಯನ್ನು ಮೀರಿದೆ, ಆದರೆ, ಈ ವಿಷಯವು ಭಾರತದ ಸಂವಿಧಾನದ 14 ಮತ್ತು 26 ನೇ ವಿಧಿಯ ಅಡಿಯಲ್ಲಿ ಕಾನೂನು ಪರಿಶೀಲನೆಗಾಗಿ ಸುಪ್ರೀಂ ಕೋರ್ಟ್ ಮುಂದೆ ಇದೆ, ಸುಪ್ರೀಂ ಕೋರ್ಟ್‌ನ ಅಂತಿಮ ತ...
”ಹೊಸ ಟೀಚರ್ ಬರ್ತಾರೆ..!’; 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

”ಹೊಸ ಟೀಚರ್ ಬರ್ತಾರೆ..!’; 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕ ಸಂಬಂಧ ಆದೇಶ ನೀಡಿದೆ.ಮೇ 29 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಆರಂಭವಾಗಲಿ ಎಂಬ ಉದ್ದೇಶ ಈ ತಾತ್ಕಾಲಿಕ ನೇಮಕಾತಿಗೆ ಆದೇಶ ಹೊರಡಿಸಿದೆ.2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.ರಾಜ್ಯ ಸರ್ಕಾರದ ಈ ತ್ವರಿತ ಕ್ರಮವು ವಿದ್ಯಾರ್ಥಿಗಳ ಶಿಕ್ಷಣ ನಿರಂತರವಾಗಿರಿಸಲು ಸರ್ಕಾರದ ಬದ್ಧತೆಯನ್ನು ಪುನರುಚ್ಚ...