Monday, August 17

ವಿದೇಶ

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.They can’t clear waterlogged roads or fallen trees after a single downpour, but they want to dig tunnels costing ₹48,000 crore to “solve” Bengaluru’s traffic? Maybe the tunnel’s real purpose is to serve as a water reservoir. pic.twitter.com/yNQRHgWeF6 — P C Mohan (@PCMohanMP) May 19, 2025ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ "ಬ್ರಾಂಡ್ ಬೆಂಗಳೂರು"ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಅಪಮಾನ ಹಿಂದಿನ ವರ್ಷದ ಲೋಪಗಳಿಂ...
ಒಂದೆಡೆ ‘ಸಾಧನಾ ಸಮಾವೇಶ’ಕ್ಕೆ ತಯಾರಿ.. ಇನ್ನೊಂದೆಡೆ ‘ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್

ಒಂದೆಡೆ ‘ಸಾಧನಾ ಸಮಾವೇಶ’ಕ್ಕೆ ತಯಾರಿ.. ಇನ್ನೊಂದೆಡೆ ‘ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ 'ಸಾಧನಾ ಸಮಾವೇಶ'ಕ್ಕೆ ತಯಾರಿ ನಡೆದಿರುವಾಗಲೇ ಪ್ರತಿಪಕ್ಷ ಬಿಜೆಪಿ 'ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ' ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ.ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಸೋಮವಾರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್, ವಕ್ತಾರ ಪ್ರಕಾಶ್ ಶೇಷಾರಾಘವಾಚಾರ್, ಎಸ್‌ಸಿ ಮೋರ್ಚಾ ಕಚೇರಿ ಕಾರ್ಯದರ್ಶಿ ಜಿ. ಪ್ರಶಾಂತ್ ಮತ್ತು ಪಕ್ಷದ ನಾಯಕ ಸಿ. ಮುನಿಕೃಷ್ಣ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ನಾಯಕ ಅಶ್ವಥ್ ನಾರಾಯಣ್, ಕಳೆದ ಎರಡು ವರ್ಷಗಳ ಸಾಧನೆಗಳನ್ನು ಪ್ರದರ್ಶಿಸಲು ಕಾಂಗ್ರೆಸ್ ಸರ್ಕಾರ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಆದಾಗ್ಯೂ, ಕಾಂಗ್ರೆಸ್ ಸರ್ಕಾರದ "ಸಾಧನೆ ಚಿತ್ರ"ದ ಟ್ರೇಲರ್ ಈಗಾಗಲೇ ಬೆಂಗಳೂರಿನಲ್ಲಿ ಭಾರೀ ಮಳೆಯ ರೂಪದಲ್ಲಿ ಬಿಡುಗಡೆಯಾಗಿದೆ ಮತ್ತು ಪೂರ್ಣ ಚಿತ್ರ ಇನ್ನೂ ಬರಬೇಕಿದೆ ಎಂದು ಹೇಳುವ ಮೂಲಕ ಅವರು ಕಾರ್ಯಕ್ರಮವನ್ನು ಅಣಕಿಸಿದರ...
ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಭಾನುವಾರ ಮತ್ತು ಸೋಮವಾರ ಸುರಿದ ಭಾರೀ ಮಳೆಗೆ ಹಲವು ಜೀವಗಳು ಬಲಿಯಾಗಿವೆ. Just one normal rain and our Bengaluru turns into a swimming pool but our Karnataka government is more interested in tunnel roads, dismantling BBMP, and Tumkur Metro extensions instead of fixing these issues.What a pathetic/lazy government we have 😒🙏 pic.twitter.com/izMqc2DhhU— Virat👑Rocky✨️ (@Virat_Rocky18) May 18, 2025ಸೋಮವಾರ ಬಿಟಿಎಂ ಲೇಔಟ್ ಸಮೀಪದ ಎನ್.ಎಸ್.ಪಾಳ್ಯದಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​'ನಲ್ಲಿ ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಎಂದು ಗುರುತಿಸಲಾಗಿದೆ. They can’t clear waterlogged roads or fallen trees after a single downpour, but they want to dig t...
ಅನಾಹುತಗಳಿಗೆ ಸರ್ಕಾರದ ಬೇಜವಬ್ದಾರಿತನ ಕಾರಣ: ಆರ್.ಅಶೋಕ್ ಆಕ್ರೋಶ

ಅನಾಹುತಗಳಿಗೆ ಸರ್ಕಾರದ ಬೇಜವಬ್ದಾರಿತನ ಕಾರಣ: ಆರ್.ಅಶೋಕ್ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ "ಬ್ರಾಂಡ್ ಬೆಂಗಳೂರು"ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಾನುವಾರ ಮಧ್ಯ ರಾತ್ರಿಯಿಂದಲೇ ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ ಕರೆಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಬಡಾವಣೆಗಳು ಜಲಾವೃತವಾಗಿವೆ, ನೂರಾರು ವಾಹನಗಳ...
ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ

ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. Good morning Bengaluru!#BengaluruRain #bengalurufloods pic.twitter.com/0JQcCKTwIH— Citizens Movement, East Bengaluru (@east_bengaluru) May 19, 2025ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು. Just one normal rain and our Bengaluru turns into a swimming pool but our Karnataka govern...
ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಬಹುತೇಕ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿ

ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಬಹುತೇಕ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ.ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು.ಬಹುತೇಕ ಕಡೆ ಸರ್ಕಾರದ ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಮಳೆ ನೀರು ಸುಗಮವಾಗಿ ಹರಿದು ಹೋಗದೆ ಅವಾಂತರ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕೇವಲ ಒಂದೆರಡು ದಿನಗಳ...
ಸುಂಕ ರಾದ್ದಾಂತ: ಅಬಕಾರಿ ಉದ್ಯಮವನ್ನು ಸಂಕಷ್ಟಕ್ಕೆ ದೂಡಿತೇ ಸರ್ಕಾರ?

ಸುಂಕ ರಾದ್ದಾಂತ: ಅಬಕಾರಿ ಉದ್ಯಮವನ್ನು ಸಂಕಷ್ಟಕ್ಕೆ ದೂಡಿತೇ ಸರ್ಕಾರ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ.ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ.ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ ಮದ್ಯ ಮಾರಾಟ ಮತ್ತು ಸನ್ನದು ಶುಲ್ಕವನ್ನು ಅಡ್ಡಾದಿಡ್ಡಿ ಹೆಚ್ಚಿಸುತ್ತಿರುವುದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.ಎಷ್ಟು ಸಲ ಹೆಚ್ಚಳ?ಬಜೆಟ್ ನಲ್ಲಿ ಯಾವುದೇ ತೆರಿಗೆ ಹಾಕಿಲ್ಲ ಎಂದು ಬೆನ್ನು ತಟ್ಟಿಕೊಂಡು ನಂತರದಲ್ಲಿ ಆಲ್ಕೊಹಾಲ್ ದರಗಳನ್ನು ಯದ್ವಾತದ್ವಾ ಹೆಚ್ಚಿಸಿದ್ದಾರೆ. ಅದರಲ್ಲೂ ಬಿಯರ್ ದರವನ್ನು ವರ್ಷದಲ್ಲಿ ಎರಡೂ - ಮೂರು ಸಲ ಹೆಚ್ಚಿಸಲಾಗಿದೆ. ಗ್ರಾಹಕರಿಗೆ ದೊಡ್ಡ ಹೊರೆ ಹೊರಿಸಲಾಗಿದೆ. ಮದ್ಯಪ್ರಿಯರು ಪ್ರತಿಭಟಿಸುವುದಿಲ್...
ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

ಪ್ರಮುಖ ಸುದ್ದಿ, ವಿದೇಶ
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಬಜೆಟ್'ನಲ್ಲಿ ಘೋಷಿಸಿರುವ ಒಂದು ಸಾವಿರ ರೂಪಾಯಿ ಗೌರವಧನ ನೀಡಿರುವುದನ್ನು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಸ್ವಾಗತಿಸಿದೆ. ಅದರಂತೆ ಬಜೆಟ್ ಪೂರ್ವದಲ್ಲಿ ನೀಡಿರುವ ಭರವಸೆಯನ್ನೂ ಈಡೇರಿಸಿ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಒತ್ತಾಯಿಸಿದ್ದಾರೆ.ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ರೂಪಾಯಿ ಗೌರವಧನ ಹೆಚ್ಚಳ ಮಾಡಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಡಿ.ನಾಗಲಕ್ಷ್ಮಿ, 'ಇದು ರಾಜ್ಯ ಬಜೆಟ್ ಸಂದರ್ಭದಲ್ಲಿ ಬಜೆಟ್ ಅಲ್ಲಿ ಘೋಷಣೆ ಮಾಡಿದ ಒಂದು ಸಾವಿರ ರೂಪಾಯಿ ಆಗಿರುತ್ತದೆ. ಇದು ರಾಜ್ಯದ ಎಲ್ಲಾ 41,000 ಆಶಾ ಗಳಿಗೆ ರಾಜ್ಯದಿಂದ ಹೆಚ್ಚಳವಾಗಿರುವುದಿಲ್ಲ .ಕೇವಲ 15004 ಮಂದಿಗೆ ಈ 1000 ರೂ ಹೆಚ್ಚಳ ಆಗಿದೆ. ಬಜೆಟ್ ನಲ್ಲಿ ಘೋಷಣೆ ಆಗಿರುವುದು ಈಗ ಸರ್ಕಾರದ ಅನುಮೋದನೆಯಾಗಿ ಆದೇಶವಾಗಿರುತ್ತದೆ' ಎಂದು ಗಮನಸೆಳೆದಿದ್ದಾರೆ.ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ AIUTUC, ನೇತೃತ್ವದಲ್ಲಿ ಜನವರಿ 7 ರಿಂದ 10ರವರೆಗೆ ಅನಿರ್ದಿಷ್ಟ- ಅಹೋ ರಾತ್ರಿ ಆಶಾ ಕಾರ್...
ಮೇ 17ರಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ; 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಮೇ 17ರಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ; 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವದ ಮತ್ತಷ್ಟು ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ.ಕರ್ನಾಟಕದಾದ್ಯಂತ ಮೇ 17ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.ಮಂಡ್ಯ, ಮೈಸೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ....
‘ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು’: ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಗೇಲಿ

‘ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು’: ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಗೇಲಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರನ್ನು 'ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು' ಮಾಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಗೇಲಿ ಮಾಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ತಮ್ಮದೇ ಶೈಲಿಯಲ್ಲಿ ಅಶೋಕ್ ಪ್ರತಿಕ್ರಿಯಿಸಿದರು. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ. ಇದರಿಂದಾಗಿ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ ಅಲ್ಲಿ ಕನ್ನಡಿಗರೇ ಮೇಯರ್‌ ಆಗುತ್ತಾರೆ ಎಂಬ ಖಚಿತತೆ ಇಲ್ಲ ಎಂದರು.ಮುಖ್ಯಮಂತ್ರಿಗಳು ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್‌ ಬೆಂಗಳೂರು ಪ್ರಾಧಿಕ...