Thursday, August 6

ವಿದೇಶ

ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಲೇಔಟ್‌ನ ಜ್ಞಾನಭಾರತಿ ಸಮೀಪದ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಶಾಲೆಯ ಐದನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಯಿತು.ಬೇಸಿಗೆ ರಜೆ ಹಿನ್ನೆಲೆಯಲ್ಲಿ ಶಾಲೆ ಮುಚ್ಚಿದ್ದರಿಂದ ಯಾವುದೇ ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ ಒಳಗಿಲ್ಲದೆ ದೊಡ್ಡ ದುರಂತ ತಪ್ಪಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಮಾಹಿತಿ ತಿಳಿಯುತ್ತಿದ್ದಂತೆ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳು ಸಂಭವಿಸಿಲ್ಲ.ಬೆಂಕಿಯಿಂದ ಶಾಲೆಯ ಐದನೇ ಮಹಡಿಗೆ ಹಾನಿಯಾಗಿದ್ದು, ನಷ್ಟದ ಪ್ರಮಾಣ ಹಾಗೂ ಅಗ್ನಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.A fire has broken out at Chitrakala School Ring Road #Bengal...
1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಹೊಸ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ತಲುಪಬೇಕಿದ್ದ ₹5,000 ಕೋಟಿ ಹಣದ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟನೆ ನೀಡುವಂತೆ ಅವರು ಆಗ್ರಹಿಸಿದ್ದಾರೆ.ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸುರೇಶ್ ಕುಮಾರ್, 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ 1.14 ಕೋಟಿ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ ಎಂಬ ಆರೋಪವನ್ನು ಪುನರುಚ್ಚರಿಸಿದ್ದಾರೆ.ಕಳೆದ ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಈ ವಿಚಾರವನ್ನು ಸದನದ ಗಮನಕ್ಕೆ ತಂದಿದ್ದರು. ಆ ವೇಳೆ ಸರ್ಕಾರದ ಪರವಾಗಿ ಹಣ ಪಾವತಿಯಾಗಿರುವುದಾಗಿ ಹೇಳಲಾಗಿತ್ತಾದರೂ, ಫಲಾನುಭವಿಗಳಿಗೆ ಹಣ ತಲುಪಿಲ್ಲ ಎಂಬ ದಾಖಲೆಗಳನ್ನು ಮಂಡಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.ಸುಮಾರು ₹5,000 ಕೋಟಿ ಮೊತ್ತದ ಹಣದ ಕುರಿತು ಸರ್ಕಾರ ಸಮರ್ಪಕ ಉತ್ತರ ...
‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ತಮಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದರು. “ರಾಜ್ಯಸಭೆಗೆ ಹೋಗುವಂತೆ ಹೈಕಮಾಂಡ್ ಕೇಳಿತ್ತು. ಆದರೆ ನಾನು ಅದನ್ನು ವಿನಮ್ರವಾಗಿ ನಿರಾಕರಿಸಿದ್ದೇನೆ. ಕರ್ನಾಟಕ ರಾಜಕೀಯದಲ್ಲೇ ಮುಂದುವರಿಯಲು ಬಯಸುತ್ತೇನೆ” ಎಂದು ಹೇಳಿದರು.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮತ್ತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.“ನನ್ನ ರಾಜೀನಾಮೆ ಸ್ವಯಂಪ್ರೇರಿತ. ಹೈಕಮಾಂಡ್ ಒತ್ತಾಯದಿಂದ ಅಲ್ಲ. ನಾನು ಸಕ್ರಿಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ತಮ್ಮ ರಾಜಕೀಯ ಪಯಣವನ್ನು ನೆನಪಿಸಿಕೊಂಡ ಅವರು, “ಗ್ರಾಮೀಣ ಹಿನ್ನೆಲೆಯಿಂದ ಬಂದ ನಾನು ಶಾಸಕ, ಸಚಿವ ಅಥವಾ ಮುಖ್ಯಮಂತ್ರಿ ಆಗುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ” ಎಂದರು.ಬುದ್ಧ, ಬಸವಣ್ಣ, ಡಾ. ಬಿ.ಆರ್. ಅ...
ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಗುರುವಾರ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ನೊಳಗಿನ ನಾಯಕತ್ವ ಬದಲಾವಣೆಯ ಚರ್ಚೆಗೆ ಹೊಸ ತಿರುವು ಸಿಕ್ಕಿದೆ.ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಉಪಾಹಾರ ಸಭೆ ನಡೆಸಿದರು. ನಾಯಕತ್ವ ಬದಲಾವಣೆಯ ಕುರಿತ ಊಹಾಪೋಹಗಳ ನಡುವೆಯೇ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.ಸಭೆಯ ಬಳಿಕ, ತಮ್ಮ ನಂತರ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುವುದಾಗಿ ಸಿದ್ದರಾಮಯ್ಯ ಸೂಚನೆ ನೀಡಿದರೆಂದು ತಿಳಿದುಬಂದಿದೆ. ಇದರೊಂದಿಗೆ ಹಲವು ತಿಂಗಳುಗಳಿಂದ ಚರ್ಚೆಯಾಗುತ್ತಿದ್ದ ಅಧಿಕಾರ ಹಂಚಿಕೆ ಒಪ್ಪಂದದ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಕಂಡುಬಂದಿದೆ.ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕರು, “ಸಿದ್ದರಾಮಯ್ಯ ಪಕ್ಷದ ಹಿರಿಯ ಹಾಗೂ ಗೌರವಾನ್ವಿತ ನಾಯಕರು. ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಅವರ...
ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳ ನಡುವೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಕರ್ನಾಟಕಕ್ಕೆ ಇಂದು ಬೇಕಿರುವುದು ಕೇವಲ ಮುಖ್ಯಮಂತ್ರಿ ಬದಲಾವಣೆ ಅಲ್ಲ, ಈ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ಬದಲಾವಣೆ” ಎಂದು ಹೇಳಿದ್ದಾರೆ.2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಆಡಳಿತವೇ ಮರೀಚಿಕೆಯಾಗಿದೆ. ಅಭಿವೃದ್ಧಿ, ರೈತರ ಸಮಸ್ಯೆ, ಯುವಕರ ಭವಿಷ್ಯ ಸೇರಿದಂತೆ ಜನಸಾಮಾನ್ಯರ ವಿಚಾರಗಳು ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿವೆ ಎಂದು ಆರೋಪಿಸಿದ್ದಾರೆ.“ಕುರ್ಚಿ ಯಾರಿಗೆ?” ಎನ್ನುವ ಒಳಜಗಳದಲ್ಲೇ ಸರ್ಕಾರ ಮುಳುಗಿದ್ದು, “ಅಧಿಕಾರ ಹಂಚಿಕೆ” ಈಗ ಬೀದಿ ನಾಟಕದ ಮಟ್ಟಕ್ಕೆ ಇಳಿದಿದೆ. ಪ್ರಜಾಸೌಧದಲ್ಲಿ ಆಡಳಿತದ ಚರ್ಚೆಗಿಂತ ಅಧಿಕಾರದ ಲೆಕ್ಕಾಚಾರವೇ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.ಸಿದ್ದರಾಮಯ್ಯ ಮುಂದುವರಿದರೂ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದರೂ ಅಥವಾ ಮತ್ತೊಬ್ಬರನ್ನು ಕೂರಿಸಿದರೂ ರಾಜ್ಯಕ್ಕೆ ಯಾ...
ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
ಬೆಂಗಳೂರು: ಅತಿ ಕಿರಿಯ ಕವಯಿತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅಮನ ಜೆ ಕುಮಾರ್ ಅವರ 5ನೇ ಕೃತಿ 'ದಿ ಮಿಸ್ಟಿಕಲ್ ವೇವ್ಸ್' ಇದೀಗ ಸಾರಸ್ವತ ಲೋಕದ ಗಮನಸೆಳೆದಿದೆ. ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಭಾರತ ರತ್ನ ಪುರಸ್ಕೃತ, ಪ್ರೊಫೆಸರ್ ಸಿ.ಎನ್.ಆರ್. ರಾವ್ ಅವರು ಅಮನ ಜೆ ಕುಮಾರ್ ಅವರ 5ನೇ ಪುಸ್ತಕ “ದಿ ಮಿಸ್ಟಿಕಲ್ ವೇವ್ಸ್” ಅನ್ನು ಬಿಡುಗಡೆ ಮಾಡಿದ್ದಾರೆ.ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನ ಗೌರವಾಧ್ಯಕ್ಷರು ಹಾಗೂ ಲೈನಸ್ ಪಾಲಿಂಗ್ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರಾಗಿರುವ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಗೌರವ ಪ್ರಾಧ್ಯಾಪಕರಾಗಿರುವ ಪ್ರೊಫೆಸರ್ ಸಿ.ಎನ್.ಆರ್. ರಾವ್ ಅವರು, ಯುವ ಪ್ರತಿಭೆ ಅಮನ ಜೆ ಕುಮಾರ್ ಅವರ ಕೃತಿ ಕೌಶಲ್ಯ ಬಗ್ಗೆ ಕೊಂಡಾಡಿದರು.ದಿ ಮಿಸ್ಟಿಕಲ್ ವೇವ್ಸ್' (ಕವನ ಸಂಕಲನ)?ದಿ ಮಿಸ್ಟಿಕಲ್ ವೇವ್ಸ್ ಒಬ್ಬ ವ್ಯಕ್ತಿಯ ಜೀವನ ಪಯಣದ ಪ್ರತಿಬಿಂಬದಂತಿದೆ. ಅನುಭವಗಳು, ನಿರೀಕ್ಷೆಗಳು ಮತ್ತು ಅಪಾರ ಆನಂದದ ಸಂಯೋಜನೆಯಾಗಿರುವ ಈ ಕೃತಿ ಬ್ಲ್ಯಾಕ್‌ಔಟ್ ಕವನಗಳು ಮತ್ತು ಸೊನೆಟ್‌ಗಳ ಸಮನ್ವಯವಾಗಿದೆ. ಕಾ...
ಶುಕ್ರವಾರ ಸಿದ್ದರಾಮಯ್ಯ ರಾಜೀನಾಮೆ?: ವೇಣುಗೋಪಾಲ್, ಸುರ್ಜೇವಾಲಾ ರಾಜ್ಯಕ್ಕೆ ದೌಡು

ಶುಕ್ರವಾರ ಸಿದ್ದರಾಮಯ್ಯ ರಾಜೀನಾಮೆ?: ವೇಣುಗೋಪಾಲ್, ಸುರ್ಜೇವಾಲಾ ರಾಜ್ಯಕ್ಕೆ ದೌಡು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚಟುವಟಿಕೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಲಯದಲ್ಲಿ ಬೆಳವಣಿಗೆಗಳು ಚುರುಕುಗೊಂಡಿವೆ.ಮೇ 28ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಬಗ್ಗೆ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೂ ಮುನ್ನ ಗುರುವಾರ ಸಚಿವ ಸಂಪುಟ ಸಭೆ ನಡೆಯಲಿದೆ.ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪರವಾಗಿ ಒಲವು ತೋರಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ 134 ಶಾಸಕರ ಬಲವಿದ್ದು, ತಮ್ಮ ಪರವಾಗಿ 100ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂಬ ಪತ್ರವನ್ನು ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಮಂಡಿಸಿದ್ದರು. ಆದರೂ ಹೊಸ ನಾಯಕತ್ವದ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾದ ಬಳಿಕ ಬೆಂಗಳೂರಿಗೆ ಮರಳಿದ ಸಿದ್ದರಾಮಯ್ಯ, ಸಿಎಂ ನಿವಾಸ ‘ಕಾವೇರಿ’ಯಲ್ಲಿ ಆಪ್ತ ಸಚಿವರೊಂದಿಗೆ ಮಧ್ಯರಾತ್ರಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇನ್ನೊಂದೆಡೆ, ಕ...
ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗದ ವಿವರವಾದ ಯೋಜನಾ ವರದಿ (ಡಿಪಿಆರ್)ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ.ಬೆಂಗಳೂರು ಹೊರವಲಯದ ಮಾದಾವರ ಮೆಟ್ರೋ ನಿಲ್ದಾಣದಿಂದ ತುಮಕೂರುವರೆಗೆ ಹಸಿರು ಮಾರ್ಗವನ್ನು 59.60 ಕಿಲೋಮೀಟರ್ ವಿಸ್ತರಿಸುವ ಯೋಜನೆ ರೂಪಿಸಲಾಗಿದೆ.ಯೋಜನೆ ಪೂರ್ಣಗೊಂಡರೆ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ದೈನಂದಿನ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮಾರ್ಗದಲ್ಲಿ ಪ್ರತಿ ಗಂಟೆಗೆ ಒಂದು ದಿಕ್ಕಿನಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.2024-25ರ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಯನ್ನು ಘೋಷಿಸಿದ್ದರು. ಯೋಜನೆಯ ಮೊದಲ ಹಂತಕ್ಕೆ ಸುಮಾರು ₹20,649 ಕೋಟಿ ವೆಚ್ಚವಾಗುವ ನಿರೀಕ್ಷೆಯಿದೆ.ಯೋಜನೆ ಅನುಷ್ಠಾನಗೊಂಡರೆ ಹೊಸ ಮೆಟ್ರೋ ಕಾರಿಡಾರ್‌ ನೆಲಮಂಗಲ, ದಾಬಸ್‌ಪೇಟೆ ಹಾಗೂ ಕ್ಯಾತ್ಸಂದ್ರ ಮಾರ್ಗವಾಗಿ ಸಾಗಲಿ...
ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಸಂಚಾರ ನಡೆಸಲಿರುವ ಹೊಸ ಎಕ್ಸ್‌ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆ ಈ ಹೊಸ ರೈಲು ಸೇವೆಯನ್ನು ಆರಂಭಿಸಲಾಗಿದೆ.ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ (LTT) ನಡುವೆ ವಾರಕ್ಕೆ ಎರಡು ದಿನ ಈ ರೈಲು ಸಂಚರಿಸಲಿದೆ. ಶನಿವಾರ ಹಾಗೂ ಮಂಗಳವಾರ ಬೆಂಗಳೂರಿನಿಂದ ಮುಂಬೈಗೆ, ಭಾನುವಾರ ಮತ್ತು ಬುಧವಾರ ಮುಂಬೈನಿಂದ ಬೆಂಗಳೂರಿಗೆ ಓಡಾಟ ನಡೆಸಲಿದೆ. ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಪುಣೆ ಹಾಗೂ ಮುಂಬೈ ನಗರಗಳಿಗೆ ಈ ರೈಲು ಸಂಪರ್ಕ ಕಲ್ಪಿಸಲಿದೆ.ರೈಲಿನಲ್ಲಿ ಒಟ್ಟು 17 ಕೋಚ್‌ಗಳಿದ್ದು, ಒಂದು ಎಸಿ 2-ಟೈರ್, ನಾಲ್ಕು ಎಸಿ 3-ಟೈರ್, ಆರು ಸ್ಲೀಪರ್ ಹಾಗೂ ನಾಲ್ಕು ಸಾಮಾನ್ಯ ದರ್ಜೆಯ ಬೋಗಿಗಳಿವೆ.ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹಾಗೂ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ (V. Soma...
ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು.ಮುಂಬರುವ ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ, ಎಂದು ಸಚಿವರು ಹೇಳಿದರು. ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯುವ 'ಮಹಾ ಪೋಷಕ-ಶಿಕ್ಷಕರ ಸಭೆ' (Mega PTM) ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ಸಚಿವರು ಪ್ರಕಟಿಸಿದರು.ಇದೇ ಶಾಲಾ ಪ್ರಾರಂಭೋತ್ಸವದ ಶುಭ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ 'ಕರ್ನಾಟಕ ಪಬ...