Tuesday, August 18

ವಿದೇಶ

ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡಲು ಚಿಂತನೆ

ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡಲು ಚಿಂತನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ನಡೆದ ಭಾರತೀಯ ಸೇವಾದಳದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಸಮಾಜ ಸೇವೆ ಮಾಡುವವರನ್ನು ಹೆಚ್ಚು ಗುರುತಿಸುತ್ತದೆ. ಹೀಗಾಗಿ ನಮ್ಮ ಸಮಾಜದಲ್ಲಿ ರಾಮನ ತಂದೆ ದಶರಥ ಮಹಾರಾಜನಿಂಗಿಂತ, ರಾಮನ ಭಂಟ ಹನುಮಂತನ ದೇವಾಲಯಗಳು ಹೆಚ್ಚಾಗಿವೆ. ಅದೇ ರೀತಿ ನೀವು ಕಾಂಗ್ರೆಸ್ ಪಕ್ಷಕ್ಕೆ ಆಧಾರಸ್ತಂಭ. ಇದನ್ನು ಸೇವಾದಳದ ಎಲ್ಲಾ ಕಾರ್ಯಕರ್ತರು ತಲೆಯಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು."ದೇಶದ ಭದ್ರತೆ ಉದ್ದೇಶದಿಂದ ಸ್ಥಾಪನೆಯಾದ ವಿಭಾಗ ಸೇವಾದಳ. ನೆಹರೂ ಅವರ ಅವಧಿಯಲ್ಲಿ ಪ್ರಾರಂಭವಾಗಿ ಈಗ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿವರೆಗೆ ನಡೆದುಕೊಂಡು ಬಂದಿದೆ. ಸೇವಾದಳ ಕಾಂಗ್ರೆಸ್ ಪಕ್ಷದ ಕಡೆಯ ಅಂಗ, ನಮ್ಮನ್ನು ಗುರುತಿಸ...
ಜಾತಿ ಜನಗಣತಿ ವರದಿ ಜಾರಿಯಾದರೆ ಲಕ್ಷಾಂತರ ಕುಟುಂಬಗಳಿಗೆ ಅನ್ಯಾಯ: ಸೋಮಣ್ಣ

ಜಾತಿ ಜನಗಣತಿ ವರದಿ ಜಾರಿಯಾದರೆ ಲಕ್ಷಾಂತರ ಕುಟುಂಬಗಳಿಗೆ ಅನ್ಯಾಯ: ಸೋಮಣ್ಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾತಿ ಜನಗಣತಿ ಕುರಿತ ಕಾಂತರಾಜ್ ವರದಿ ಜಾರಿಯಾದಲ್ಲಿ ಲಕ್ಷಾಂತರ ಜನರಿಗೆ ಅನ್ಯಾಯವಾಗಲುತ್ತದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಜಾತಿ ಜನಗಣತಿ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಎಲ್ಲೋ ಕುಳಿತು ತಮಗೆ ಬೇಕಾದಂತೆ ವರದಿ ರೂಪಿಸಲಾಗಿದೆ. ಇದು ಜಾರಿಯಾದರೆ ಲಕ್ಷಾಂತರ ಕುಟುಂಬಗಳಿಗೆ ಅನ್ಯಾಯವಾಗಲಿದೆ. ಇಂತಹ ಮಹಾಪರಾಧ ಮಾಡುವ ಚಿಂತನೆ ಬೇಡ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದರು.ವಿವಾದಾತ್ಮಕ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೂಲಕ ತಮ್ಮ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯತ್ನಿಸುತ್ತಿದ್ದಾರೆ ಎಂದೂ ಸೋಮಣ್ಣ ಆರೋಪಿಸಿದರು. ಸಚಿವ ವಿ. ಸೋಮಣ್ಣ ಅವರು ಶನಿವಾರ ಹೇಳಿದ್ದಾರೆ....
ಜಾತಿ ಜನಗಣತಿ ಸಮೀಕ್ಷೆ: ವರದಿ ಜಾರಿಯ ವಿಶ್ವಾಸ ಇದೆ ಎಂದ ಕಾಂತರಾಜ್

ಜಾತಿ ಜನಗಣತಿ ಸಮೀಕ್ಷೆ: ವರದಿ ಜಾರಿಯ ವಿಶ್ವಾಸ ಇದೆ ಎಂದ ಕಾಂತರಾಜ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಶಿವಮೊಗ್ಗ: ಜಾತಿ ಜನಗಣತಿ ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಾತಿ ಜನಗಣತಿ ವರದಿ ಸೋರಿಕೆಯಾಗಿದೆ ಎಂಬ ಆರೋಪವಂತೂ ವಿವಾದದ ಬಿರುಗಾಳಿ ಎಬ್ಬಿಸಿದೆ.ಈ ನಡುವೆ, ಜಾತಿ ಜನಗಣತಿ ವರದಿ ಸೋರಿಕೆಯಾಗಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್.ಕಾಂತರಾಜ್ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಆಯಾಮಗಳಿಂದಲೂ ಜಾತಿ ಜನಗಣತಿ ಸಮೀಕ್ಷೆ ನಡೆಸಲಾಗಿದ್ದು, ವರದಿ ಅವೈಜ್ಞಾನಿಕವಾಗಿದೆ ಎಂಬ ಆರೋಪ ಸರಿಯಲ್ಲ ಎಂದರು.1931 ರ ನಂತರ ಹಿಂದುಳಿದ ವರ್ಗಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಕುರಿತು ಯಾವುದೇ ಸಮೀಕ್ಷೆಯನ್ನು ನಡೆಸಲಾಗಿಲ್ಲ, ಹೀಗಾಗಿ 2015 ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸಮೀಕ್ಷೆಯನ್ನು ಕೈಗೆತ್ತಿಕೊಳ್ಳಲು ಸಮಿತಿಯನ್ನು ರಚಿಸಿದರು ಎಂದ ಎಚ್.ಕಾಂತರಾಜ್, ಆಯೋಗದ ಶಿಫಾರಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತರಲಿದ್ದಾರೆಂಬ ಭರವಸೆಯಿದೆ ಎಂದರು....
‘ಬಿಜೆಪಿ ಹೋರಾಟ ಕೇಂದ್ರ ಸರಕಾರದ ವಿರುದ್ಧ’ ಎಂದು ಬೋರ್ಡ್ ಬದಲಿಸಿಕೊಳ್ಳಲಿ

‘ಬಿಜೆಪಿ ಹೋರಾಟ ಕೇಂದ್ರ ಸರಕಾರದ ವಿರುದ್ಧ’ ಎಂದು ಬೋರ್ಡ್ ಬದಲಿಸಿಕೊಳ್ಳಲಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: "ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ 'ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ' ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆಸಲಿರುವ ಹೋರಾಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪೂರ್ವಸಿದ್ಧತಾ ಸಭೆ ನಡೆಸಿ, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. 'ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲಾ ವಸ್ತುಗಳ ಬೆಲೆ ಏನಿತ್ತು, ಈಗ ಏನಾಗಿದೆ ಎಂದು ನೋಡಬೇಕು. ಈ ಬೆಲೆ ಏರಿಕೆ ಬಿಸಿ ತಡೆಯಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲು ಅನೇಕ ನಾಯಕರು ಇಂದು ಚರ್ಚೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಜಿಲ್ಲ...
ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರ ’45’ ಬಗ್ಗೆ ಹೆಚ್ಚಿದ ಕೌತುಕ

ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರ ’45’ ಬಗ್ಗೆ ಹೆಚ್ಚಿದ ಕೌತುಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಮುಂಬೈ: ಕನ್ನಡದ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರ ಬಹುನಿರೀಕ್ಷಿತ ಕನ್ನಡ ಚಿತ್ರ '45' ಟೀಸರ್ ಏಪ್ರಿಲ್ 15 ಮತ್ತು 16, 2025 ರಂದು ಭಾರತದಾದ್ಯಂತ ನಾಲ್ಕು ರಾಜ್ಯಗಳಲ್ಲಿ ಬಿಡುಗಡೆಯಾಗಲಿದೆ.https://www.youtube.com/watch?v=ZsZxyyEmGlkಏಪ್ರಿಲ್ 15 ರಂದು ಮುಂಬೈನಲ್ಲಿ ಭವ್ಯ ಪ್ರಚಾರದ ಬ್ಲಿಟ್ಜ್ ಪ್ರಾರಂಭವಾಗಲಿದೆ. ನಂತರ ಹೈದರಾಬಾದ್‌ನಲ್ಲಿ ಸಂಜೆ ಆಚರಣೆ ನಡೆಯಲಿದೆ. ಮರುದಿನ ಏಪ್ರಿಲ್ 16 ರಂದು ಬೆಳಿಗ್ಗೆ, ತಂಡವು ಚೆನ್ನೈಗೆ ತೆರಳಲಿದ್ದು, ಕೊಚ್ಚಿಯ ಪಿವಿಆರ್ ಫೋರಂನಲ್ಲಿ ನಡೆಯುವ ಕಾರ್ಯಕ್ರಮದೊಂದಿಗೆ ಪರ್ಯಟನೆಯು ಪರಿಪೂರ್ಣವಾಗಲಿದೆಯಂತೆ.ಮಹತ್ವಾಕಾಂಕ್ಷೆಯ ಸಿನಿಮಾ ಬಿಡುಗಡೆ ಕುರಿತು ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, "ನಾನು '45' ಚಿತ್ರಕ್ಕೆ ನನ್ನ ಹೃದಯ ಮತ್ತು ಆತ್ಮವನ್ನು ಧಾರೆಯೆರೆದಿದ್ದೇನೆ. ಇದು ಅಪಾರ ಪ್ರೀತಿ, ದೃಷ್ಟಿ ಮತ್ತು ಉತ್ಸಾಹದಿಂದ ಹೇಳಲಾದ ಕಥೆ. ಮಾಂತ್ರಿಕ ಆದರೆ ಶಕ್ತಿಶಾಲಿ ಎಂದು ಭಾವಿಸುವ ಜಗತ್ತನ್ನು ರಚಿಸಲು ಈ ಮಟ್ಟದ ಪ್ರತಿಭೆಯನ್ನು ಒಟ್ಟುಗೂಡಿಸುವುದು ಒಂದು ಕನಸಾಗಿದೆ. ಈ '45 ಪ್ಯಾನ್ ಇಂಡಿಯಾ ಟೀಸರ್ ಪ್ರವಾಸ' ದೇಶಾದ್ಯಂತದ ಪ್ರೇಕ...
ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ, ವೀಡಿಯೊ
ಮಂಗಳೂರು: ಪುರಾಣ ಪ್ರಸಿದ್ಧ ಶ್ರೀ ಕಟೀಲು ಕ್ಷೇತ್ರದಲ್ಲಿ ಇದೀಗ ವೈಭವದ ಜಾತ್ರಾ ಮಹೋತ್ಸವದ ಸಡಗರ ಆವರಿಸಿದೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರವು ಕರಾವಳಿಯ ಪ್ರಸಿದ್ಧ ದೇಗುಲವಾಗಿದ್ದು, ದೇಶ-ವಿದೇಶಗಳಿಂದಲೂ ಭಕ್ತರು ಈ ಜಾತ್ರೆಗೆ ಸಾಕ್ಷಿಯಾಗುತ್ತಾರೆ. ಕಟೀಲು ಕ್ಷೇತ್ರದ ಜಾತ್ರೆಯ ಸಂದರ್ಭದಲ್ಲೇ ಕರಾವಳಿಯ ಯುವಜನ ಸಮೂಹ ಶ್ರೀ ದುರ್ಗಾಪರಮೇಶ್ವರಿಯ ಮಹಿಮೆಯ ಬಗ್ಗೆ ಬೆಳಕು ಚೆಲ್ಲುವ ಹಾಡೊಂದನ್ನು ಲೋಕಾರ್ಪಣೆ ಮಾಡಿ ಗಮನಸೆಳೆದಿದ್ದಾರೆ. ಈ ಭಕ್ತಿ ಗಾನಕ್ಕೆ ಆಸ್ತಿಕರ ಪಾಳಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.https://www.youtube.com/watch?v=etv5WCNznXQಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರೆ ಪ್ರಯುಕ್ತ ದೇವಲೋಕ ಕ್ರಿಯೇಷನ್ಸ್ ವತಿಯಿಂದ 'ಅಪ್ಪೆ ಭ್ರಾಮರಿಯೇ' ಎಂಬ ಹೊಸ ಭಕ್ತಿಗೀತೆಯನ್ನು ಶನಿವಾರ ಬೆಳಿಗ್ಗೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಗಿದೆ. ಜ್ಯೋತಿಗುಡ್ಡೆ ಕ್ಷೇತ್ರದ ಅರ್ಚಕಿ ಗುಲಾಬಿ ಅಮ್ಮನವರು ಭಕ್ತಿಗೀತೆಯನ್ನು ಲೋಕಾರ್ಪಣೆ ಮಾಡಿದರು.ಸಾಫಲ್ಯ ಸೇವಾ ಸಂಘ (ರಿ) ...
ಬಿಜೆಪಿ ನಾಯಕರಿಗೆ ಶಾಕ್..! ಶೇ.40 ಕಮಿಷನ್ ಆರೋಪ ಬಗ್ಗೆ ತನಿಖೆಗೆ SIT ರಚಿಸಲು ಸಂಪುಟ ನಿರ್ಧಾರ

ಬಿಜೆಪಿ ನಾಯಕರಿಗೆ ಶಾಕ್..! ಶೇ.40 ಕಮಿಷನ್ ಆರೋಪ ಬಗ್ಗೆ ತನಿಖೆಗೆ SIT ರಚಿಸಲು ಸಂಪುಟ ನಿರ್ಧಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಕೈಗೊಂಡಿರುವ ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದೆ. ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಶೇ. 40 ರಷ್ಟು ಕಮಿಷನ್ ಆರೋಪಗಳ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ತನಿಖಾ ವರದಿ ಆಧರಿಸಿ ಹೆಚ್ಚಿನ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ.ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಾ ತೀರ್ಮಾನಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಬಿಜೆಪಿ ಸರ್ಕಾರದ ವಿರುದ್ಧದ 40% ಕಮಿಷನ್ ಆರೋಪದ ತನಿಖೆಗೆ ರಚನೆಯಾಗಿದ್ದ ನ್ಯಾ. ನಾಗಮೋಹನ್ ದಾಸ್ ವಿಚಾರಣಾ ಆಯೋಗ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಯಿತು ಎಂದು ತಿಳಿಸಿದರು.ಸಂಪುಟ ಸಭೆಯು ವಿಚಾರಣಾ ಆಯೋಗದ ವರದಿ ಆಧಾರದಲ್ಲಿ ಹೆಚ್ಚಿನ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಲು ನಿರ್ಧಾರ ಮಾಡಿದೆ. ಎಸ್‌ಐಟಿ ಎರಡು ತಿಂಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದರು....
ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ ಮತ್ತೆ ಮಳೆ ಸಾಧ್ಯತೆ

ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ ಮತ್ತೆ ಮಳೆ ಸಾಧ್ಯತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರ ಬಳಿಕ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ವಿಜಯಪುರ, ಕಲಬುರಗಿ ಯಾದಗಿರಿ, ರಾಯಚೂರು, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಭಿವೃದ್ಧಿಯ ಶಕೆ; ಸಚಿವ ರಾಮಲಿಂಗಾ ರೆಡ್ಡಿಗೆ ಸೆಲ್ಯೂಟ್ ಎಂದ ಜನ

ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಭಿವೃದ್ಧಿಯ ಶಕೆ; ಸಚಿವ ರಾಮಲಿಂಗಾ ರೆಡ್ಡಿಗೆ ಸೆಲ್ಯೂಟ್ ಎಂದ ಜನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕೊಪ್ಪಳ: ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮ ವ್ಯಾಪ್ತಿಯಲ್ಲಿ ಹೊಸ ಅಭಿವೃದ್ಧಿಯ ಶಕೆ ಆರಂಭವಾಗಿದೆ. ಸಾರಿಗೆ ನಿಗಮಗಳಲ್ಲಿ ಒಂದಾದ KKRTC ವ್ಯಾಪ್ತಿಯಲ್ಲಿ ಹಲವು ಅಭುದ್ದಿ ಕೆಲಸಗಳಿಗೆ ಸಾರಿಗೆ ಸಚಿವರು ಮುನ್ನುಡಿ ಬರೆದಿದ್ದಾರೆ. ಯೋಜನೆಗಳ ತ್ವರಿತ ಹಾಗೂ ಪರಿಣಾಮಕಾರಿ ಜಾರಿಗಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಕ್ರಮದ ಬಗ್ಗೆ ಕಲ್ಯಾಣ ಕರ್ನಾಟಕ ಭಾಗದ ಜನರು ಅಭಿನಂಧಿಸಿದ ಸನ್ನಿವೇಶ ಗಮನಸೆಳೆಯಿತು.ಇದಕ್ಕೆ ಸಾಕ್ಷಿಯಾದದ್ದು, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿನ ನೂತನ ಬಸ್ ನಿಲ್ದಾಣಗಳ ಉದ್ಘಾಟನಾ ಸಮಾರಂಭ. ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ನೂತನ ಬಸ್ ನಿಲ್ದಾಣ, ಸಿಬ್ಬಂದಿ ವಸತಿ‌ಗೃಹ, ಘಟಕಗಳಿಗೆ ಶಂಕು ಸ್ಥಾಪನೆ ಮತ್ತು ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾರಿಗೆ ನಿಗಮಗಳ ಸಿಬ್ಬಂದಿ ಸಮೂಹ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ತಾವು ಸಚಿವರಾದ ನಂತರ ಸಾರಿಗೆ ನಿಗಮಗಳಲ್ಲಿ ಅಭೂತಪೂರ್ವ ಅಭಿವೃದ್ಧಿಯಾಗಿದೆ ಎಂದರು.ಹೊಸ ಯೋಜನೆಗಳಿಗೆ ಮುನ್ನುಡಿ.. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ...
ನೈತಿಕ ಪೊಲೀಸ್ ಗಿರಿ; ಬೆಂಗಳೂರಿನಲ್ಲಿ ನಾಲ್ವರ ಬಂಧನ

ನೈತಿಕ ಪೊಲೀಸ್ ಗಿರಿ; ಬೆಂಗಳೂರಿನಲ್ಲಿ ನಾಲ್ವರ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಂದ್ರ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.ಇಂಗ್ಲಿಷ್ ಆವೃತ್ತಿಯಲ್ಲೂ ಉದಯ ನ್ಯೂಸ್ ಲಭ್ಯ Moral policing: Muslim woman harassed for talking to youth in B’luru; 4 heldಬಂಧಿತರನ್ನು ಮೊಹಮ್ಮದ್ ಮೊಹ್ಸಿನ್, ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಫ್ರಿದಿ ಪಾಷಾ ಮತ್ತು ವಸೀಮ್ ಖಾನ್ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಮುಹಮ್ಮದ್ ಮುಹಮ್ಮದ್ ಮನ್ಸೂರ್, ಮೊಹಮ್ಮದ್ ಅಫ್ರಿದಿ ಪಾಷಾ ಮತ್ತು ವಸೀಮ್ ಖಾನ್ ವೆಲ್ಡರ್ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಚಂದ್ರ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಒಬ್ಬ ಹುಡುಗ ಮತ್ತು ಹುಡುಗಿ ಉದ್ಯಾನವನದ ಮುಂದೆ ಬೈಕ್‌ನಲ್ಲಿ ಕುಳಿತಿದ್ದರು. ಅವರನ್ನು ನೋಡಿದ ನಾಲ್ಕೈದು ಮಂದಿಯ ಗುಂಪು ಬಂದು ಬುರ್ಖಾ ಧರಿಸಿದ್ದ ಮಹಿಳೆಯನ್ನು ಪ್ರಶ್ನಿಸಿ, ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದೆ. ಈ ಬಗ್ಗೆ ಮಹಿಳೆಯ ದೂರಿನ ಆಧಾರದಲ್ಲಿ ನಾಲ್ವರು ಆರೋಪಿಗಳನ...