
ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಅಶೋಕ್ ಆಕ್ಷೇಪ
ಬೆಂಗಳೂರು: ಕಾಂಗ್ರೆಸ್ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ವಿಧಾನಸೌಧದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ 'ಭೀಮ ಹೆಜ್ಜೆ 100 ರ ಸಂಭ್ರಮ' ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷಶೋಷಿತರನ್ನು ಕಾಂಗ್ರೆಸ್ನವರೇ ತುಳಿದಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ ಎಂದರು.ಬಾಬಾ ಸಾಹೇಬ್ ಅಂಬೇಡ್ಕರ್ರ ಹೆಸರನ್ನು ಕಾಂಗ್ರೆಸ್ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ದೂರಿದರು.ವಕ್ಫ್ ಮಂಡಳ...









