Saturday, May 9

ದೇಶ-ವಿದೇಶ

ಜಮ್ಮು ಕಾಶ್ಮೀರ: ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ: ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ

ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ.90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ.ಇದೇ ವೇಳೆ, ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಘೋಷಣೆ ಮಾಡಿದ್ದಾರೆ. ತನ್ನ ಮಗ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಪ್ರಕಟಿಸಿದ್ದಾರೆ....
ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ; ಪ್ರಧಾನಿ ಜೊತೆ ಸೋಮಣ್ಣ ಚರ್ಚೆ

ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ; ಪ್ರಧಾನಿ ಜೊತೆ ಸೋಮಣ್ಣ ಚರ್ಚೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ ಸಹಿತ ಕರ್ನಾಟಕದ ಹಲವು ಯೋಜನೆಗಳ ತ್ವರಿತ ಅನುಷ್ಠಾನ ಸಂಬಂಧ ಪ್ರಧಾನಿ ಜೊತೆ ಕೇಂದ್ರ ರೇಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಮಂಗಳವಾರ ಚರ್ಚೆ ನಡೆಸಿದರು.ನವದೆಹಲಿಯಲ್ಲಿ  ಪ್ರಧಾನ ಮಂತ್ರಿಗಳನ್ನು ಬೇಟಿ ಮಾಡಿದ ಸಚಿವ ವಿ ಸೋಮಣ್ಣ ಸುಮಾರು 30 ನಿಮಿಷಗಳ ಕಾಲ ಚರ್ಚಿಸಿದರು.ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ್ ರೇಲ್ವೆ ಇತ್ಯಾದಿಗಳ ಬಗ್ಗೆ ೨ ಸುತ್ತಿನ ಸಭೆ ನಡೆಸಿರುವ ಬಗ್ಗೆ  ಸೋಮಣ್ಣ ಪ್ರಧಾನ ಮಂತ್ರಿಗಳಿಗೆ ವಿವರಿಸಿದರು. ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ತುಮಕೂರು ರಾಯದುರ್ಗ ರೇಲ್ವೆ ಮಾರ್ಗ ಭೂಸ್ವಾಧಿನ ಪ್ರಕ್ರಿಯೆಯನ್ನು ಕೇವಲ 3 ತಿಂಗಳ ಅವಧಿಯಲ್ಲಿ 90% ಕ್ಕಿಂತಲೂ ಮಿಗಲಾಗಿ ಮುಗಿಸಿರುವ ಬಗ್ಗೆ ಪ್ರಧಾನ ಮಂತ್ರಿಗಳಿಗೆ ವಿವರಿಸಿದ್ದಾರೆ.ರೇಲ್ವೆ ಅಧಿಕಾರಿ ಮತ್ತು ಜಿಲ್ಲಾಡಳಿತದ ಉತ್ತಮ ಕಾರ್ಯವೈಖರಿಯ ಬಗ್ಗೆಯೂ ಮಾನ್ಯ ಪ್ರದಾನ ಮಂತ್ರಿಗಳ ಗಮನ ಸೆಳೆದಿದ್ದು , ಪ್ರಧಾನಮಂತ್ರಿಗಳು ಅತ್ಯಂತ ಹರ್ಷ ವ್ಯಕ್ತಪಡಿಸಿದ ಬಗ್ಗೆ ಕೇಂದ್ರ ಸಚಿವ ಸೋಮಣ್ಣ ತಿಳಿಸಿದ್ದಾರೆ.ಇದಲ್ಲದೆ ಕಳೆದ 3 ...
ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ -ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಜಯಭೇರಿ

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ -ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಜಯಭೇರಿ

ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ.ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಬಹುಮತ ಗಳಿಸಿದೆ.90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ....
ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಸೇನೆಯ ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿಯಾಗಿದ್ದಾರೆ. ಈ ಬಗ್ಗೆ ಸೋಮವಾರ ಮಾಹಿತಿ ಹಂಚಿಕೊಂಡಿರುವ ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಬಿಸಿಲಿನ ತಾಪಮಾನಕ್ಕೆ ಐವರು ಸಾವನ್ನಾಪಿದ್ದಾರೆ ಎಂದು ತಿಳಿಸಿದ್ದಾರೆ.ಏರ್ ಶೋ ವೇಳೆ ಬಿಸಿಲಿನ ಝಳದಿಂದ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು 90ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಐವರು ಸಾವನ್ನಪ್ಪಿದ್ದಾರೆ ಎಂದು ಸುಬ್ರಮಣಿಯನ್ ತಿಳಿಸಿದ್ದಾರೆ....
‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

‘ಸಿಂಗಂ ಅಗೈನ್’; ಬಹು ತಾರಾಂಗಣವೇ ಬಂಡವಾಳ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಸಿಂಗಂ ಚಿತ್ರದ ಮುಂದಿನ ಆವೃತ್ತಿ ನಿರ್ಮಾಣವಾಗಿದ್ದು 'ಸಿಂಗಂ ಅಗೈನ್' ಹೆಸರಿನಲ್ಲಿ ಈ ಸಿನಿಮಾ ಕುತೂಹಲ ಕೆರಳಿಸಿದೆ.ಅಜೇಯ್ ದೇವಗನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸಹಿತ ಹಲವರು 'ಸಿಂಗಂ ಅಗೈನ್' ಚಿತ್ರದಲ್ಲಿ ನಟಿಸಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್ ದೇವಗನ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು ಈ ಸಿನಿಮಾದ ಟ್ರೈಲರ್ ಬಗ್ಗೆ ನೆಟ್ಟಿಗರು ಸಕತ್ ಲೈಕ್ಸ್ ನೀಡಿದ್ದಾರೆ.https://www.youtube.com/watch?v=MD7v0-igVIM&t=64s&ab_channel=JioStudios...
ಮುಂಬೈ: ಕಟ್ಟಡದಲ್ಲಿ ಅಗ್ನಿ ದುರಂತ; ಬಾಲಕಿ ಸೇರಿ 7 ಮಂದಿ ಸಾವು

ಮುಂಬೈ: ಕಟ್ಟಡದಲ್ಲಿ ಅಗ್ನಿ ದುರಂತ; ಬಾಲಕಿ ಸೇರಿ 7 ಮಂದಿ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ಚೆಂಬೂರ್‌ನಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಈ ಅಗ್ನಿ ಆಕಸ್ಮಿಕದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.ಮುಂಬೈನ ಚೆಂಬೂರ್ ಪ್ರದೇಶದ ಸಿದ್ಧಾರ್ಥ್ ಕಾಲೋನಿಯಲ್ಲಿ ಭಾನುವಾರ ಮುಂಜಾನೆ 5.20ರ ಸುಮಾರಿಗೆ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಬಾಲಕಿ ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ನೆಲ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ, ಮೇಲಿನ ಮಹಡಿಗೆ ವ್ಯಾಪಿಸಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ....
ಹರಿಯಾಣದಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧ್ಯತೆ: ಎಕ್ಸಿಟ್ ಪೋಲ್ ರಿಸಲ್ಟ್

ಹರಿಯಾಣದಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧ್ಯತೆ: ಎಕ್ಸಿಟ್ ಪೋಲ್ ರಿಸಲ್ಟ್

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹರಿಯಾಣ ವಿಧಾನಸಭೆಗೆ ನಡೆದ ಶನಿವಾರ ಮತದಾನ ನಡೆದಿದ್ದು ಇದೀಗ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿವೆ. ಬಹುತೇಕ ಸಂಸ್ಥೆಗಳ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂಬ ಸುಳಿವನ್ನು ನೀಡಿವೆ.ಹರಿಯಾಣದಲ್ಲಿ ಈವರೆಗೂ ಅಧಿಕಾರ ನಡೆಸಿರುವ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ.ಸಮೀಕ್ಷಾ ಫಲಿತಾಂಶ ಹೀಗಿದೆ:ರಿಪಬ್ಲಿಕ್-ಮ್ಯಾಟ್ರಿಜ್: ಕಾಂಗ್ರೆಸ್ 55-62 ಸ್ಥಾನಗಳು, ಬಿಜೆಪಿ 18-24 ಸ್ಥಾನಗಳು, ಜೆಜೆಪಿ 0-3 ಸ್ಥಾನಗಳು, ಐಎನ್‌ಎಲ್‌ಡಿ 3-6 ಸ್ಥಾನಗಳು, ಇತರೆ 2-5 ಸ್ಥಾನಗಳು.ದೈನಿಕ್ ಭಾಸ್ಕರ್: ಕಾಂಗ್ರೆಸ್ 44-54 ಸ್ಥಾನಗಳು, ಬಿಜೆಪಿ 19-29 ಸ್ಥಾನಗಳು, ಜೆಜೆಪಿ 0-1 ಸ್ಥಾನಗಳು, ಐಎನ್‌ಎಲ್‌ಡಿ 1-5 ಸ್ಥಾನಗಳು, ಇತರರು 4-9 ಸ್ಥಾನಗಳುಧ್ರುವ್ ಸಮೀಕ್ಷೆ: ಕಾಂಗ್ರೆಸ್ 57-64 ಸ್ಥಾನಗಳು, ಬಿಜೆಪಿ 27-32 ಸ್ಥಾನಗಳು, ಇತರರು 5-8 ಸ್ಥಾನಗಳು....
ಎಕ್ಸಿಟ್ ಫೋಲ್ :ಜಮ್ಮು-ಕಾಶ್ಮೀರದಲ್ಲಿ JKNC 33-35 ನೇತೃತ್ವದ ಸರ್ಕಾರ ಅಧಿಕಾರಕ್ಕೆ

ಎಕ್ಸಿಟ್ ಫೋಲ್ :ಜಮ್ಮು-ಕಾಶ್ಮೀರದಲ್ಲಿ JKNC 33-35 ನೇತೃತ್ವದ ಸರ್ಕಾರ ಅಧಿಕಾರಕ್ಕೆ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ JKNC 33-35 ಸ್ಥಾನಗಳನ್ನು ಗೆದ್ದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.ಪೀಪಲ್ಸ್ ಪಲ್ಸ್ ಭವಿಷ್ಯ ಪ್ರಕಾರ JKNC 33-35 ಸ್ಥಾನಗಳನ್ನು ಗೆಲ್ಲಲಿವೆ ಎಂಬ ಸುಳಿವು ವ್ಯಕ್ತವಾಗಿದೆ.ಕಾಂಗ್ರೆಸ್ 13-15 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿದ್ದು, ಬಿಜೆಪಿ 23-27 ಸ್ಥನಗಳನ್ನು ಜಯಿಸಲಿದೆ. ಪಿಡಿಪಿ 7-11 ಸ್ಥಾನಗಳನ್ನು ಹಾಗೂ ಇತರರು 4-5 ಸ್ಥಾನಗಳನ್ನು ಗೆಲ್ಲಲಿವೆ ಎಂದು ಪೀಪಲ್ಸ್ ಪಲ್ಸ್ ವಿಶ್ಲೇಷಿಸಿದೆ....
ಮಹಾ ಸಚಿವಾಲಯ ಕಟ್ಟಡ 3ನೇ ಮಹಡಿಯಿಂದ ಜಿಗಿದ ಡೆಪ್ಯುಟಿ ಸ್ಪೀಕರ್.. ವೀಡಿಯೋ ವೈರಲ್

ಮಹಾ ಸಚಿವಾಲಯ ಕಟ್ಟಡ 3ನೇ ಮಹಡಿಯಿಂದ ಜಿಗಿದ ಡೆಪ್ಯುಟಿ ಸ್ಪೀಕರ್.. ವೀಡಿಯೋ ವೈರಲ್

ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಮಹಾರಾಷ್ಟ್ರ ಸರ್ಕಾರದ ಆಡಳಿತ ಶಕ್ತಿಕೇಂದ್ರ ಮಂತ್ರಾಲಯ ಇಂದು ಕೋಲಾಹಲದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಮಂತ್ರಾಲಯ ಕಟ್ಟಡದಿಂದ ಮೂರನೇ ಮಹಡಿಯಿಂದ ಜಿಗಿದ ಪ್ರಸಂಗ ಆತಂಕ ಸೃಷ್ಟಿಸಿತು.Maharashtra state assembly deputy speaker & DCM Ajit Pawar led NCP factions MLA Narhari Zirwal & other ST reserved seats elected MLAs breached police security & jumped at the safety net at Mantralaya in protest against state govt for not recruiting tribal youths under PESA act. pic.twitter.com/6kHwp8PGIv — Sudhir Suryawanshi (@ss_suryawanshi) October 4, 2024   ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶಾಸಕ ಹಾಗೂ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಶುಕ್ರವಾರ ಮಹಾರಾಷ್ಟ್ರದ ಸಚಿವಾಲಯ ಕಟ್ಟಡದ ಛಾವಣಿಯಿಂದ ಜಿಗಿದಿದ್ದಾರೆ. ಕೆಳಗೆ ಸುರಕ್ಷತಾ...
2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ

2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜನಪ್ರಿಯ 'ಏರೋ ಇಂಡಿಯಾ' ವೈಮಾನಿಕ ಪ್ರದರ್ಶನದ 15ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಪೆಬ್ರವರಿ 10ರಿಂದ ನಡೆಯಲಿದೆ ಕೇಂದ್ರ ರಕ್ಷಣಾ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ.2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಏರೋ ಇಂಡಿಯಾ ಆಯೋಜಿತವಾಗಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಇದಾಗಿದೆ.ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್, ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯದ ಪ್ರಾಯೋಜಕತ್ವದಲ್ಲಿ ಈ ವೈಮಾನಿಕ ಪ್ರದರ್ಶನ ಏರ್ಪಾಡಾಗಿದ್ದು ಸಿದ್ದತೆಗಳು ಸಾಗಿವೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ....