Saturday, December 6

ದೇಶ-ವಿದೇಶ

ಅಯೋಧ್ಯೆ ದೇವಾಲಯದಲ್ಲಿ ವಿಶೇಷ ‘ಧರ್ಮಧ್ವಜ’; ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತ

ಅಯೋಧ್ಯೆ ದೇವಾಲಯದಲ್ಲಿ ವಿಶೇಷ ‘ಧರ್ಮಧ್ವಜ’; ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಅಯೋಧ್ಯೆ/ನವದೆಹಲಿ: ಐತಿಹಾಸಿಕ ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಈ ಸಂದರ್ಭದಲ್ಲಿ ಪ್ರಧಾನಿ ಜೊತೆಗಿದ್ದರು. “आज हम सबके लिए सार्थकता का दिन है। इसके लिए जितने लोगों ने प्राण न्योछावर किए, उनकी आत्मा तृप्त हुई होगी। आज मंदिर का ध्वजारोहण हो गया। मंदिर की शास्त्रीय प्रक्रिया पूर्ण हो गई। राम राज्य का ध्वज, जो कभी अयोध्या में फहराता था, जो पूरी दुनिया में अपने आलोक से समृद्धि प्रदान करता… pic.twitter.com/WqLQMJjM43 — RSS (@RSSorg) November 25, 2025 ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನಡೆದ ಈ ಕಾರ್ಯಕ್ರಮವನ್ನು ‘ಧ್ವಜಾರೋಹಣ ಉತ್ಸವ’ ಎಂದು ಗುರುತಿಸಲಾಗಿದೆ. ಸಮಾರಂಭದ ನಂತರ ಬಿಜೆಪಿ ನಾಯಕರು, ರಾಷ್ಟ್ರಕ್ಕೆ ಹೊಸ ನಂಬಿಕೆ ಮತ್ತು ಸಂಸ್ಕೃತಿಯ ಗೌರವವನ್ನು ಸಾರುವ ಕ್ಷಣ ಎಂದು ಅಭಿಪ್ರಾಯ ವ್ಯಕ್ತಪಡ...
ಕಬಡ್ಡಿ ವಿಶ್ವಕಪ್​​ಗೆದ್ದ ಭಾರತ ವನಿತೆಯರು; ಪ್ರಧಾನಿ ಅಭಿನಂದನೆ

ಕಬಡ್ಡಿ ವಿಶ್ವಕಪ್​​ಗೆದ್ದ ಭಾರತ ವನಿತೆಯರು; ಪ್ರಧಾನಿ ಅಭಿನಂದನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಢಾಕಾ: ಬಾಂಗ್ಲಾದೇಶದ ಢಾಕಾದಲ್ಲಿ ಸೋಮವಾರ ನಡೆದ 2025ರ ಮಹಿಳಾ ಕಬಡ್ಡಿ ವಿಶ್ವಕಪ್​​ ಟೂರ್ನಿಯಲ್ಲಿ ಭಾರತ ತಂಡ ಜಯಭೇರಿ ಭಾರಿಸಿದೆ. ಭಾರತದ ವನಿತೆಯರು ಚಾಂಪಿಯನ್​ ಆಗಿ ಹೊರಹೊಮ್ಮಿದ್ದಾರೆ. ಸೆಮಿಫೈನಲ್‌ನಲ್ಲಿ ಇರಾನ್ ತಂಡವನ್ನು 33–21 ಅಂತರದಿಂದ ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿದ್ದ ಭಾರತ ತಂಡ ರಣರೋಚಕ ಫೈನಲ್ ಹಣಾಹಣಿಯಲ್ಲಿ ಚೀನಾದ ತೈಪೆ ತಂಡವನ್ನು 35-28 ಅಂಕಗಳ ಅಂತರದಲ್ಲಿ ಸೋಲಿಸಿಡೇ. ಈ ಮೂಲಕ ಭರ್ಜರಿ ಗೆಲುವು ಸಾಧಿಸಿದ ಭಾರತದ ವನಿತೆಯರು ಸತತ ಎರಡನೇ ಬಾರಿಗೆ ವಿಶ್ವಕಪ್​​ ಮುಡಿಗೇರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅಭಿನಂದನೆ. ಮಹಿಳಾ ಕಬಡ್ಡಿ ವಿಶ್ವಕಪ್​​ ಟೂರ್ನಿಯಲ್ಲಿ ಗೆದ್ದು ಬೀಗಿರುವ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ‘2025ರ ಕಬಡ್ಡಿ ವಿಶ್ವಕಪ್​​​ ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಭಾರತೀಯ ಮಹಿಳಾ ಕಬಡ್ಡಿ ತಂಡ ಮಾಡಿದೆ. ಈ ಗೆಲುವು ಅಸಂಖ್ಯಾತ ಯುವಕರಿಗೆ ಸ್ಫೂರ್ತಿ’ ಎಂದು ಪ್ರಧಾನಿ ಬಣ್ಣಿಸಿದ್ದಾರೆ....
ಹೊಸ ಕಾರ್ಮಿಕ ಸಂಹಿತೆಗಳ ಅನುಷ್ಠಾನದಿಂದ 77 ಲಕ್ಷ ಹೊಸ ಉದ್ಯೋಗ ಸೃಷ್ಟಿ ಸಾಧ್ಯ’: ಎಸ್‌ಬಿಐ ವರದಿ

ಹೊಸ ಕಾರ್ಮಿಕ ಸಂಹಿತೆಗಳ ಅನುಷ್ಠಾನದಿಂದ 77 ಲಕ್ಷ ಹೊಸ ಉದ್ಯೋಗ ಸೃಷ್ಟಿ ಸಾಧ್ಯ’: ಎಸ್‌ಬಿಐ ವರದಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕಾರ್ಮಿಕ ಸಂಹಿತೆಗಳು ಮಧ್ಯಮ ಅವಧಿಯಲ್ಲಿ ದೇಶದ ಉದ್ಯೋಗ ಪರಿಸ್ಥಿತಿಗೆ ಮಹತ್ವದ ಬದಲಾವಣೆ ತರಲಿವೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಂಶೋಧನಾ ವಿಭಾಗ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ವರದಿಯ ಪ್ರಕಾರ, ಹೊಸ ಕಾರ್ಮಿಕ ಕಾನೂನುಗಳ ಅನುಷ್ಠಾನದಿಂದಾಗಿ ಮುಂದಿನ ಹಂತದಲ್ಲಿ ನಿರುದ್ಯೋಗವು ಶೇಕಡಾ 1.3ರಷ್ಟು ಕಡಿಮೆಯಾಗುವ ಸಾಧ್ಯತೆಯಿದ್ದು, ಸುಮಾರು 77 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಅಂದಾಜು 15 ವರ್ಷಕ್ಕಿಂತ ಮೇಲ್ಪಟ್ಟ ಜನಸಂಖ್ಯೆಯ ಕಾರ್ಮಿಕ ಬಲದ ಆಧಾರದ ಮೇಲೆ ಮಾಡಲಾಗಿದೆ. ಉದ್ಯೋಗದ ಏರಿಕೆಯೊಂದಿಗೆ ದೇಶೀಯ ಬಳಕೆಗೂ ಉತ್ತೇಜನ ಸಿಗಲಿದೆ. ವರದಿ ಪ್ರಕಾರ, ಜನರಿಗೆ ಹೊಸ ಆದಾಯ ಸಿಗುವುದರಿಂದ ಪ್ರತಿ ವ್ಯಕ್ತಿಗೆ ದಿನಕ್ಕೆ ಸರಾಸರಿ ₹66ರಷ್ಟು ಹೆಚ್ಚುವರಿ ಖರ್ಚು ಸಾಧ್ಯ. ಇದು ಒಟ್ಟು ಸುಮಾರು ₹75,000 ಕೋಟಿಗಳ ಬಳಕೆ ಏರಿಕೆಗೆ ಕಾರಣವಾಗಬಹುದು ಎಂದು ವರದಿ ಸೂಚಿಸಿದೆ. ಎಸ್‌ಬಿಐ ಗ್ರೂಪ್ ಮುಖ್ಯ ಆರ್ಥಿಕ ಸಲಹೆಗಾರ ಡಾ. ಸೌಮ್ಯ ಕಾಂತಿ ಘೋಷ್ ಹೇಳುವಂತೆ, “ಕಾರ್ಮಿಕ ಸಂಹಿತೆಗಳು ಜಾ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು. ಸೂರ್ಯಕಾಂತ್ ಅವರು ಹಿಂದಿಯಲ್ಲಿ ದೇವರ ಹೆಸರಿನಿಂದ ಪ್ರಮಾಣವಚನ ಪಠಿಸಿದರು. ಸಮಾರಂಭದಲ್ಲಿಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಚಿವರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಭೂತಾನ್, ಕೀನ್ಯಾ, ಮಲೇಷ್ಯಾ, ಬ್ರೆಜಿಲ್, ಮಾರಿಷಸ್, ನೇಪಾಳ ಮತ್ತು ಶ್ರೀಲಂಕಾದ ಮುಖ್ಯ ನ್ಯಾಯಮೂರ್ತಿಗಳು ಹಾಜರಿದ್ದರು. ಹರಿಯಾಣ ಮುಖ್ಯಮಂತ್ರಿ ನೈಬ್ ಸಿಂಗ್ ಸೈನಿ ಕೂಡ ಸಮಾರಂಭಕ್ಕೆ ಹಾಜರಾಗಿದ್ದರು. ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಅಧಿಕಾರಾವಧಿ ಸುಮಾರು 14 ತಿಂಗಳು. ಅವರು ಫೆಬ್ರವರಿ 9, 2027 ರಂದು ನಿವೃತ್ತಿಗೊಳ್ಳಲಿದ್ದಾರೆ. ಇತ್ತೀಚೆಗೆ ಸಿಜೆಐ ಪೀಠವನ್ನು ಖಾಲಿ ಮಾಡಿರುವ ಭೂಷಣ್ ಆರ್. ಗವಾಯಿ ಅವರು ಅಕ್ಟೋಬರ್ 30ರಂದು ತಮ್ಮ ಉತ್ತರಾಧಿಕಾರಿಯಾಗಿ ಸೂರ್ಯಕಾಂತ್ ಅವರನ್ನು ಶಿಫಾರಸು ಮಾಡಿದ್ದರು. ನಂತರ ಕ...
ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ

ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ....
ಕದನ ವಿರಾಮ ಉಲ್ಲಂಘನೆಗೆ ಇಸ್ರೇಲ್ ಎದಿರೇಟು; ವೈಮಾನಿಕ ದಾಳಿ, 20ಕ್ಕೂ ಹೆಚ್ಚು ಮಂದಿ ಸಾವು

ಕದನ ವಿರಾಮ ಉಲ್ಲಂಘನೆಗೆ ಇಸ್ರೇಲ್ ಎದಿರೇಟು; ವೈಮಾನಿಕ ದಾಳಿ, 20ಕ್ಕೂ ಹೆಚ್ಚು ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಗಾಜಾ: ಕದನ ವಿರಾಮ ಉಲ್ಲಂಘನೆಯಿಂದಾಗಿ ಪಶಿಮ ದಂಡೆ ಮತ್ತೊಮ್ಮೆ ಪ್ರಕ್ಷುಬ್ಧಗೊಂಡಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಭಾರೀ ಮಾರಣಹೋಮವೇ ನಡೆದಿದ್ದು ಜೊತೆಗೆ ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ, ಅಕ್ಟೋಬರ್ ನಲ್ಲಿ ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಜಾರಿಗೆ ಬಂದಿತ್ತು. ಆದರೆ ಭಯೋತ್ಪಾದಕ" ದಾಳಿಯ ಪರಿಣಾಮವಾಗಿ ತಾನು ವೈಮಾನಿಕ ದಾಳಿ ಮಾಡಬೇಕಾಯಿತು ಎಂದು ಇಸ್ರೇಲ್​ ಮಿಲಿಟರಿ ಹೇಳಿದೆ....
ಏರೋ ಶೋ ವೇಳೆ ತೇಜಸ್ ಯುದ್ಧವಿಮಾನ ದುರಂತ

ಏರೋ ಶೋ ವೇಳೆ ತೇಜಸ್ ಯುದ್ಧವಿಮಾನ ದುರಂತ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ದುಬೈ: ವಿಶ್ವದ ಗಮನ ಸೆಳೆದಿರುವ ದುಬೈ ಏರೋ ಶೋ ಕಾರ್ಯಕ್ರಮದಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ದುರಂತಕ್ಕೆ ಗುರಿಯಾಗಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರದರ್ಶನ ಹಾರಾಟ ನಡೆಸುತ್ತಿದ್ದ ತೇಜಸ್, ತಕ್ಷಣವೇ ಬೆಂಕಿಗಾಹುತಿಯಾಗಿ ನೆಲಕ್ಕೆ ಅಪ್ಪಳಿಸಿದೆ. ಸ್ಫೋಟದ ನಂತರ ಸ್ಥಳದೆಲ್ಲೆ ದಟ್ಟವಾದ ಕಪ್ಪು ಹೊಗೆ ಆವರಿಸಿತು. आज एक दर्दनाक क्षण हमारे बहादुर पायलट की शहादत के साथ हमारे सामने आया, जब दुबई एयर शो के दौरान हमारी अपनी तकनीक, हमारी उड़ान संभावना, यानी #Tejas विमान जो देश की शक्ति व समर्पण का प्रतीक है जो #DubaiAirShow में इस प्रकार धराशाही हो गया जैसे ये हकीकत नहीं किसी फ़िल्म का scene… pic.twitter.com/4OfCDYAjHA — Abhishek Kumar Jatav ( बहुजन शायर ) (@abhijatav07) November 21, 2025 ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ ನಿರ್ಮಿಸಿದ LCA ತೇಜಸ್ ಯುದ್ಧ ವಿಮಾನವು ಪತನಗೊಂಡಿರುವುದಾಗಿ ತಿಳಿದುಬಂದಿದೆ. ಪೈಲಟ್‌ನ ಸ್ಥಿತಿ, ಹ...
ಪಾಕ್ ಪರ ಬೇಹುಗಾರಿಕೆ ಆರೋಪ: ಉಡುಪಿಯಲ್ಲಿ ಇಬ್ಬರು ಬಂಧನ

ಪಾಕ್ ಪರ ಬೇಹುಗಾರಿಕೆ ಆರೋಪ: ಉಡುಪಿಯಲ್ಲಿ ಇಬ್ಬರು ಬಂಧನ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಉಡುಪಿ: ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಚೋರಿಸಿ ರವಾನಿಸಿದ್ದ ಆರೋಪದಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಸಿಇಒ ಮಲ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್ 152 ಹಾಗೂ ಅಧಿಕೃತ ರಹಸ್ಯ ಕಾಯ್ದೆ (ಒಎಸ್‌ಎ) 3 ಮತ್ತು 5ನೇ ಕಲಮಗಳಡಿ ಕೇಸ್ ದಾಖಲಾಗಿದೆ. ಬಂಧಿತರನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರ ಮೂಲದ 20 ವರ್ಷದ ರೋಹಿತ್ ಮತ್ತು 37 ವರ್ಷದ ಸಾಂತ್ರಿ ಎಂದು ಗುರುತಿಸಲಾಗಿದೆ. ಸ್ಥಳೀಯ ನ್ಯಾಯಾಲಯ ಆರೋಪಿಗಳಿಗೆ ಡಿಸೆಂಬರ್ 3ರವರೆಗೆ ನ್ಯಾಯಾಂಗ ಬಂಧನವನ್ನೂ ವಿಧಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಎಸ್ಪಿ ಹರಿರಾಮ್ ಶಂಕರ್ “ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗೆ ಸಂಬಂಧಿಸಿದ ಗಂಭೀರ ಪ್ರಕರಣವಾದ್ದರಿಂದ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ. ನವೆಂಬರ್ 22ರಂದು ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆಯಲಾಗುವುದು” ಎಂದರು. ಮಲ್ಪೆಯಲ್ಲಿದ್ದ ವಸತಿಗೃಹದ ಕೋಣೆಯಲ್ಲಿ ಸುಳಿವಿನ ಆಧಾರದ ಮೇಲೆ ದಾಳಿ ನಡೆಸಿದ ವಿಶೇಷ ಪೊಲೀಸ್ ತಂಡ ಆರೋಪಿಗಳನ್...
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿ ಒಮ್ಮತದಿಂದ ಮರು ಆಯ್ಕೆಗೊಂಡಿದ್ದಾರೆ. ಜೆಪಿ ಭವನದಲ್ಲಿ ಶುಕ್ರವಾರ ನಡೆದ ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಕರ್ನಾಟಕದಲ್ಲೂ ಸಂಘಟನೆ ವಿಸ್ತರಣೆ ಅಗತ್ಯವಾಗಿರುವ ಈ ಸಂದರ್ಭದಲ್ಲಿ, ದೇವೇಗೌಡ–ಕುಮಾರಸ್ವಾಮಿ ನೇತೃತ್ವ ಮುಂದುವರಿಯಬೇಕೆಂಬ ಅಭಿಪ್ರಾಯ ಪ್ರತಿನಿಧಿಗಳ ನಡುವೆ ನಿರ್ಮಾಣವಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ವಿವಿಧ ರಾಜ್ಯಗಳ ಜೆಡಿಎಸ್ ಪ್ರತಿನಿಧಿಗಳು, ರಾಜ್ಯದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು....
ನಾಯಕತ್ವ ಬಿಕ್ಕಟ್ಟು: ಹೈಕಮಾಂಡ್ ಮಧ್ಯಪ್ರವೇಶಿಸಿ, ಸಿಎಲ್‌ಪಿ ಸಭೆ ಕರೆಯಲು ಕಾಂಗ್ರೆಸ್ ಶಾಸಕರ ಒತ್ತಾಯ

ನಾಯಕತ್ವ ಬಿಕ್ಕಟ್ಟು: ಹೈಕಮಾಂಡ್ ಮಧ್ಯಪ್ರವೇಶಿಸಿ, ಸಿಎಲ್‌ಪಿ ಸಭೆ ಕರೆಯಲು ಕಾಂಗ್ರೆಸ್ ಶಾಸಕರ ಒತ್ತಾಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ ಸಭೆ ನಡೆಸಿ ಆಯಕತ್ವ ಬದಲಾವಣೆಗೆ ರಂಗ ಸಜ್ಜುಗೊಳಿಸುತ್ತಿದ್ದಾರೆ. ಸರ್ಕಾರ ರಚನೆಯಾದ ಆರಂಭದಲ್ಲಿ ಚರ್ಚೆಗೆ ಬಂದಂತೆಯೇ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಬೆಂಬಲಿಗ ಶಾಸಕರು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಡಿಕೆಶಿ ಬೆಂಬಲಿಗರು ರಹಸ್ಯ ಸಭೆ ನಡೆಸಿದ ಸಂದರ್ಭದಲ್ಲಿ, ಇನ್ನೊಂದೆಡೆ ಕುತೂಹಲಕಾರಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಟ್ಟಾ ಬೆಂಬಲಿಗ ಶಾಸಕ ಎಚ್.ಸಿ. ಬಾಲಕೃಷ್ಣ, ಹೈಕಮಾಂಡ್‌ಗೆ ತಕ್ಷಣ ಮಧ್ಯಪ್ರವೇಶಿಸಿ ನಾಯಕತ್ವ ಬದಲಾವಣೆಯ ಒಟ್ಟಾರೆ ಬೆಳವಣಿಗೆ ಬಗ್ಗೆ ಶಾಸಕರಿಗೆ ಸ್ಪಷ್ಟನೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕೃಷ್ಣ, ಕಾಂಗ್ರೆಸ್ ಹೈಕಮಾಂಡ್ ಮಧ್ಯ...