Tuesday, January 27

ದೇಶ-ವಿದೇಶ

ಕರ್ನಾಟಕದ ಮುಖ್ಯಮಂತ್ರಿ ಎಂಬಂತೆ ಕೆ. ಸಿ. ವೇಣುಗೋಪಾಲ್‌ ದರ್ಪ

ಕರ್ನಾಟಕದ ಮುಖ್ಯಮಂತ್ರಿ ಎಂಬಂತೆ ಕೆ. ಸಿ. ವೇಣುಗೋಪಾಲ್‌ ದರ್ಪ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಕುರ್ಚಿ ಗೊಂದಲಗಳು ತಾರಕಕ್ಕೇರಿದೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟ ಇನ್ನೂ ಜೀವಂತವಾಗಿದೆ. ಇದರ ನಡುವೆ ಕೇರಳದ ನಾಯಕರ ಆಣತಿಗೆ ಕಾಂಗ್ರೆಸ್ ಸರ್ಕಾರವೇ ಗಡಗಡ ನಡುಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸಿದೆ. ಕೇರಳ ಕಾಂಗ್ರೆಸ್‌ ನಾಯಕ ಕೆ. ಸಿ. ವೇಣುಗೋಪಾಲ್‌ ಅವರೇ ಕರ್ನಾಟಕದ ಮುಖ್ಯಮಂತ್ರಿ ಎಂಬಂತೆ ದರ್ಪ ತೋರಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇಷ್ಟೆಲ್ಲಾ ವಿವಾದಗಳಿರುವಾಗ, ರಾಜ್ಯದ ಮುಖ್ಯಮಂತ್ರಿ ಯಾರೆಂಬುದು ಗೊಂದಲದಲ್ಲಿರುವಾಗ ಬಜೆಟ್‌ ತಯಾರಿ ನಡೆಸುವುದು ಸರಿಯಲ್ಲ. ರಾಜ್ಯದ ಮುಖ್ಯಮಂತ್ರಿ ಯಾರೆಂಬುದು ಮೊದಲು ನಿರ್ಧರಿತವಾಗಲಿ ಎಂದು ಸಾಮಾಜಿಕ ಮಾಧ್ಯಮ X ನಲ್ಲಿ ಬರೆದುಕೊಂಡಿರುವ ಬಿಜೆಪಿ, ಕರ್ನಾಟಕದ ಜನತೆಗೆ ನಿಮ್ಮ ಕಾಟಾಚಾರದ, ದಾಖಲೆ ನಿರ್ಮಿಸಲು ಎಂದು ಮಂಡಿಸುವ ಬಜೆಟ್‌ನ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಕುರ್ಚಿ ಗೊಂದಲಗಳು ತಾರಕಕ್ಕೇರಿದೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟ ಇನ್ನೂ ಜೀವಂತವಾಗಿದೆ. ಇದರ ನಡುವೆ ಕೇರಳದ ನಾ...

ಮುಂದಿನ ವರ್ಷ ಆಗಸ್ಟ್‌ 15ಕ್ಕೆ ದೇಶಕ್ಕೆ ಆಗಮಿಸಲಿದೆ ಮೊದಲ ಬುಲೆಟ್ ರೈಲು: ಅಶ್ವಿನಿ ವೈಷ್ಣವ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: 2027ರ ಆಗಸ್ಟ್‌ 15ರಂದು ಭಾರತಕ್ಕೆ ಮೊದಲ ಬುಲೆಟ್ ರೈಲು ಲಭ್ಯವಾಗುವ ಸಾಧ್ಯತೆ ಇದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ಮಾತನಾಡಿದ ಅವರು, “ಮುಂದಿನ ವರ್ಷ ಬುಲೆಟ್ ರೈಲು ಹಳಿಗಳ ಮೇಲೆ ಓಡಲು ಆರಂಭವಾಗಲಿದೆ. 2027ರ ಸ್ವಾತಂತ್ರ್ಯ ದಿನದಂದು ದೇಶದ ಮೊದಲ ಬುಲೆಟ್ ರೈಲಿನಲ್ಲಿ ಪ್ರಯಾಣಿಸುವ ಅವಕಾಶ ನಾಗರಿಕರಿಗೆ ದೊರೆಯಲಿದೆ” ಎಂದು ಹೇಳಿದರು. ವಂದೇ ಭಾರತ್ ಎಕ್ಸ್‌ಪ್ರೆಸ್ ಚೇರ್ ಕಾರ್ ರೈಲುಗಳು ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಜನರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿವೆ ಎಂದು ವೈಷ್ಣವ್ ಹೇಳಿದರು. “ವಂದೇ ಭಾರತ್ ರೈಲುಗಳನ್ನು ಓಡಿಸಲು ಈಗ ದೇಶದಾದ್ಯಂತ ಬೇಡಿಕೆ ಬರುತ್ತಿದೆ. ಬಹುತೇಕ ಎಲ್ಲಾ ಸಂಸದರೂ ತಮ್ಮ ಕ್ಷೇತ್ರಕ್ಕೆ ವಂದೇ ಭಾರತ್ ರೈಲು ಬಯಸುತ್ತಿದ್ದಾರೆ. ಇದೇ ಮಾನದಂಡ, ಸೌಕರ್ಯ ಮತ್ತು ಸುರಕ್ಷತೆಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲುಗಳ ಮೂಲಕ ರಾತ್ರಿ ಪ್ರಯಾಣಕ್ಕೂ ಶೀಘ್ರದಲ್ಲೇ ಚಾಲನೆ ಸಿಗಲಿದೆ” ಎಂದರು. ಭಾರತದ ಮೊದಲ ಹೈ–ಸ್ಪೀಡ್ ಬುಲೆಟ್ ರೈಲು ಯೋಜನೆ ಮುಂಬೈ–ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಮಾರ್ಗವನ್...

‘ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ’; ಬಿ.ಎಲ್.ಸಂತೋಷ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ, ನಾಗರೀಕತೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಹೋರಾಟ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಯ ಕ್ರಮವನ್ನು ಟೀಕಿಸುತ್ತಿರುವ ರಾಜಕೀಯ ಎದುರಾಳಿಗಳನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತವನ್ನು ಉಳಿಸಬೇಕಾದರೆ ನಾವು ಬಂಗಾಳವನ್ನು ಉಳಿಸಬೇಕು. ಎಲ್ಲರ ಆಶೀರ್ವಾದದೊಂದಿಗೆ ಬಂಗಾಳವನ್ನು ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಸಂತೋಷ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಂಗಾಳದ ಚುನಾವಣೆ ನಮಗೆ ರಾಜಕೀಯ, ಅಧಿಕಾರದ ಹೋರಾಟವಲ್ಲ, ನಾಗರೀಕತೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಹೋರಾಟ. ಭಾರತವನ್ನು ಉಳಿಸಬೇಕಾದರೆ ನಾವು ಬಂಗಾಳವನ್ನು ಉಳಿಸಬೇಕು. ಎಲ್ಲರ ಆಶೀರ್ವಾದದೊಂದಿಗೆ ಬಂಗಾಳವನ್ನು ಬಿಜೆಪಿ ಗೆದ್ದೇ ಗೆಲ್ಲುತ್ತದೆ. * ಶ್ರೀ ಬಿ. ಎಲ್.‌ ಸಂತೋಷ್‌, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು pic.twitter.com/ulCkovz7yT— BJP Karnataka (@BJP4Karnataka) December 30, 2025...
ಸಿಂಧೂರ್‌ನಿಂದ ಮಂದಿರ ಧ್ವಜಾರೋಹಣವರೆಗೆ: ‘2025 ಭಾರತಕ್ಕೆ ಹೆಚ್ಚಿದ ಆತ್ಮವಿಶ್ವಾಸ ನೀಡಿದ ವರ್ಷ’ ಎಂದ ಪ್ರಧಾನಿ

ಸಿಂಧೂರ್‌ನಿಂದ ಮಂದಿರ ಧ್ವಜಾರೋಹಣವರೆಗೆ: ‘2025 ಭಾರತಕ್ಕೆ ಹೆಚ್ಚಿದ ಆತ್ಮವಿಶ್ವಾಸ ನೀಡಿದ ವರ್ಷ’ ಎಂದ ಪ್ರಧಾನಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: 2025ರಲ್ಲಿ ದೇಶದಲ್ಲಿ ನಡೆದ ಪ್ರಮುಖ ಹಾಗೂ ಐತಿಹಾಸಿಕ ಘಟನೆಗಳನ್ನು ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಈ ವರ್ಷ ಭಾರತಕ್ಕೆ “ಇನ್ನಷ್ಟು ಹೆಚ್ಚಿದ ಆತ್ಮವಿಶ್ವಾಸ” ನೀಡಿದೆ ಎಂದು ಭಾನುವಾರ ಹೇಳಿದರು. ಹೊಸ ಭರವಸೆಗಳು ಹಾಗೂ ಸಂಕಲ್ಪಗಳೊಂದಿಗೆ ದೇಶವು 2026ರತ್ತ ಹೆಜ್ಜೆ ಇಡಲು ಸಜ್ಜಾಗಿದೆ ಎಂದು ಅಭಿಪ್ರಾಯಪಟ್ಟರು. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, “ಇನ್ನು ಕೆಲವೇ ದಿನಗಳಲ್ಲಿ 2026 ವರ್ಷ ನಮ್ಮ ಮನೆಬಾಗಿಲು ತಟ್ಟಲಿದೆ. ಈ ಸಂದರ್ಭದಲ್ಲಿ ಇಡೀ ವರ್ಷದ ನೆನಪುಗಳು ಮನಸ್ಸಿನಲ್ಲಿ ಓಡಾಡುತ್ತಿವೆ. ದೇಶವನ್ನು ಒಂದಾಗಿ ಕಟ್ಟಿದ ಅನೇಕ ಕ್ಷಣಗಳು, ಚರ್ಚೆಗಳು ಮತ್ತು ಸಾಧನೆಗಳು 2025ನ್ನು ಸ್ಮರಣೀಯವಾಗಿಸಿವೆ. ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣಗಳನ್ನು ಈ ವರ್ಷ ನೀಡಿದೆ” ಎಂದು ಹೇಳಿದರು. ರಾಷ್ಟ್ರೀಯ ಭದ್ರತೆಯಿಂದ ಹಿಡಿದು ಕ್ರೀಡಾ ಸಾಧನೆಗಳವರೆಗೆ, ವಿಜ್ಞಾನ ಪ್ರಯೋಗಾಲಯಗಳಿಂದ ಜಾಗತಿಕ ವೇದಿಕೆಗಳವರೆಗೆ ಎಲ್ಲೆಡೆ ಭಾರತದ ಮುದ್ರೆ ಮೂಡಿದೆ ಎಂದು ಪ್ರಧಾನಿ ಹೇಳಿದರು. ಮೇ ತಿಂಗಳಲ್ಲಿ ಭಯೋತ್ಪಾದಕರ ವಿರುದ್ಧ ಭಾರತೀಯ ಸಶಸ್ತ್ರ ಪಡೆ...
ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯ ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ವಿಶೇಷ ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸಿದರು. ದೆಹಲಿ ಮತ್ತು ಉತ್ತರ ಭಾರತದ ಕ್ರೈಸ್ತ ಸಮುದಾಯದ ಭಾರಿ ಪ್ರಾರ್ಥನಾ ಕೂಟದಲ್ಲಿ ಪ್ರಧಾನಮಂತ್ರಿ ಉಪಸ್ಥಿತರಿದ್ದರು. #WATCH | Prime Minister Narendra Modi attended the Christmas morning service at The Cathedral Church of the Redemption in Delhi along with a large congregation of Christians of Delhi and North India on the occassion of #Christmas2025 today. The service included prayers,… pic.twitter.com/wVuQe6GYKQ— ANI (@ANI) December 25, 2025 ಈ ಸಂದರ್ಭದಲ್ಲಿ ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಪ್ರಧಾನಮಂತ್ರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನಾ ಸೇವೆಯಲ್ಲಿ ಕ್ರಿಸ್‌ಮಸ್ ಕ್ಯಾರೋಲ್‌ಗಳು, ಸ್ತುತಿಗೀತೆಗಳು ಹಾಗೂ ಶಾಂತಿ, ಸಹಬಾಳ್ವೆ ಮತ್ತ...
ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಸರ್ಕಾರವು ಐತಿಹಾಸಿಕ ಪ್ರಮಾದವನ್ನು ಮಾಡಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿದ್ದ ಯೋಜನೆಯ ಹೆಸರನ್ನು ಬದಲಿಸಲಾಗಿದೆ. ಇಷ್ಟು ದಿನ ಬೇರೆ ಹೆಸರಿನಲ್ಲಿದ್ದ ಯೋಜನೆಗಳ ಹೆಸರನ್ನು ಮಹಾತ್ಮಾ ಗಾಂಧೀಜಿ ಹೆಸರಿಗೆ ಬದಲಿಸಲಾಗುತ್ತಿತ್ತು. ಭಾರತ ಸರ್ಕಾರವು ದೇಶದ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ. ಮನರೇಗಾ ಯೋಜನೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಯೋಜನೆಯಾಗಿದ್ದು, ಇದು ಆರ್ಥಿಕವಾಗಿ ತೀರಾ ಹಿಂದುಳಿದ ಜನರಿಗೆ ಸಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕನ್ನು ನೀಡಲಾಗಿತ್ತು. ಗ್ರಾಮೀಣ ಭಾಗದ ಬಡ ಕುಟುಂಬದ ವ್ಯಕ್ತಿಗೆ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡುವ ಖಾತರಿ ಯೋಜನೆ ಇದಾಗಿ...
SSB 62ನೇ ಸ್ಥಾಪನಾ ದಿನ: ಉನ್ನತ ನಾಯಕರಿಂದ ಶುಭಾಶಯ

SSB 62ನೇ ಸ್ಥಾಪನಾ ದಿನ: ಉನ್ನತ ನಾಯಕರಿಂದ ಶುಭಾಶಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಸಶಸ್ತ್ರ ಸೀಮಾ ಬಲ (SSB)ದ 62ನೇ ಸ್ಥಾಪನಾ ದಿನದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವಾರು ಉನ್ನತ ನಾಯಕರು ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಶುಭಾಶಯ ಕೋರಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು Xನಲ್ಲಿ ಸಂದೇಶ ಪ್ರಕಟಿಸಿ, “SSB ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು. ಗಡಿಗಳ ರಕ್ಷಣೆಯಿಂದ ಹಿಡಿದು ಸಂಕಷ್ಟದ ವೇಳೆಯಲ್ಲಿ ನಾಗರಿಕರೊಂದಿಗೆ ಹೆಗಲಿಗೆ ಹೆಗಲು ನಿಲ್ಲುವವರೆಗೆ SSB ಸದಾ ರಾಷ್ಟ್ರವನ್ನು ಹೆಮ್ಮೆಪಡಿಸಿದೆ. ಕರ್ತವ್ಯನಿರತ ಹುತಾತ್ಮರಿಗೆ ನಮನಗಳು,” ಎಂದು ಹೇಳಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, “ಸೇವೆ, ಭದ್ರತೆ ಮತ್ತು ಸಮರ್ಪಣೆಯ ಪ್ರತೀಕವಾದ SSBಯ ಎಲ್ಲಾ ಧೈರ್ಯಶಾಲಿ ಸೈನಿಕರಿಗೆ ಮತ್ತು ಅವರ ಕುಟುಂಬಗಳಿಗೆ ಸ್ಥಾಪನಾ ದಿನದ ಶುಭಾಶಯಗಳು. ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ರಕ್ಷಣೆಗೆ ನಿಮ್ಮ ಅಚಲ ಬದ್ಧತೆ ಶ್ಲಾಘನೀಯ,” ಎಂದು ತಿಳಿಸಿದ್ದಾರೆ. ಕೇಂದ್ರ ಸಚಿವ ನ...
ರಾಜಧಾನಿ ಎಕ್ಸ್‌ಪ್ರೆಸ್‌ ಡಿಕ್ಕಿ: ಏಳು ಆನೆಗಳ ಸಾವು

ರಾಜಧಾನಿ ಎಕ್ಸ್‌ಪ್ರೆಸ್‌ ಡಿಕ್ಕಿ: ಏಳು ಆನೆಗಳ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ/ಗುವಾಹಟಿ: ಶನಿವಾರ ಬೆಳಗಿನ ಜಾವ ಅಸ್ಸಾಂನ ಹೊಜೈ ಸಮೀಪ ಸೈರಾಂಗ್–ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಆನೆಗಳು ಸಾವನ್ನಪ್ಪಿದ್ದು, ಒಂದು ಮರಿ ಗಾಯಗೊಂಡಿದೆ. ಅಪಘಾತದಿಂದ ರೈಲಿನ ಕೆಲವು ಬೋಗಿಗಳು ಹಳಿತಪ್ಪಿದ್ದು, ಈಶಾನ್ಯ ಭಾಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ನವದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ಬೆಳಿಗ್ಗೆ 2.17ರ ಸುಮಾರಿಗೆ ಹಳಿ ದಾಟುತ್ತಿದ್ದ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಏಳು ಆನೆಗಳ ಸಾವನ್ನು ದೃಢಪಡಿಸಿದ್ದು, ಗಾಯಗೊಂಡ ಮರಿಯನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗಿದೆ. ಡಿಕ್ಕಿಯ ಪರಿಣಾಮ ರೈಲಿನ ಕೆಲ ಬೋಗಿಗಳು ಹಳಿ ತಪ್ಪಿದ್ದರೂ, ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಮಿಜೋರಾಂನ ಐಜ್ವಾಲ್ ಸಮೀಪದ ಸೈರಾಂಗ್‌ನಿಂದ ದೆಹಲಿಯ ಆನಂದ್ ವಿಹಾರ್‌ ಟರ್ಮಿನಲ್‌ಗೆ ಸಂಚರಿಸುವ ಈ ರೈಲು ಗುವಾಹಟಿಯಿಂದ ಸುಮಾರು 126 ಕಿಮ...
ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್, ಬುಶ್ರಾ ಬೀಬಿಗೆ 17 ವರ್ಷ ಜೈಲು

ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್, ಬುಶ್ರಾ ಬೀಬಿಗೆ 17 ವರ್ಷ ಜೈಲು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಇಸ್ಲಾಮಾಬಾದ್: ತೋಷಖಾನಾ–2 ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಪಾಕಿಸ್ತಾನ ನ್ಯಾಯಾಲಯ ಶನಿವಾರ ತಲಾ 17 ವರ್ಷಗಳ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಿದೆ. ಮೇ 2021ರಲ್ಲಿ ಸೌದಿ ಅರೇಬಿಯಾದ ಕಿರೀಟ ರಾಜಕುಮಾರರಿಂದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಉಡುಗೊರೆಯಾಗಿ ದೊರೆತ ದುಬಾರಿ ಆಭರಣ ಸೆಟ್ ಅನ್ನು ಅತಿ ಕಡಿಮೆ ಬೆಲೆಗೆ ಖರೀದಿಸಿದ ಆರೋಪ ಈ ಪ್ರಕರಣಕ್ಕೆ ಕಾರಣವಾಗಿದೆ. ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ನಡೆಯುತ್ತಿರುವ ವಿಚಾರಣೆಯ ವೇಳೆ ಫೆಡರಲ್ ತನಿಖಾ ಸಂಸ್ಥೆ (ಎಫ್‌ಐಎ)ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಾರುಖ್ ಅರ್ಜುಮಂದ್ ತೀರ್ಪು ಪ್ರಕಟಿಸಿದರು. ತೀರ್ಪಿನಂತೆ, ಪಾಕಿಸ್ತಾನ ದಂಡ ಸಂಹಿತೆಯ ವಿವಿಧ ವಿಧಿಗಳ ಅಡಿಯಲ್ಲಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಇದೇ ಶಿಕ್ಷೆಯನ್ನು ಬುಶ್ರಾ ಬೀಬಿಗೂ ವಿಧಿಸಲಾಗಿದೆ. ಇಬ್ಬರಿಗೂ ತಲಾ 16...
ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ವಾಷಿಂಗ್ಟನ್: ಕಳೆದ ವಾರ ಅಮೆರಿಕದ ಸೈನಿಕರ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ, ಅಮೆರಿಕ ಮಧ್ಯ ಸಿರಿಯಾದಾದ್ಯಂತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಸಂಘಟನೆಯ ಡಜನ್ಗಟ್ಟಲೆ ಗುರಿಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ. ‘ಆಪರೇಷನ್ ಹಾಕೈ ಸ್ಟ್ರೈಕ್’ ಎಂಬ ಹೆಸರಿನ ಈ ಕಾರ್ಯಾಚರಣೆಯಡಿ ಐಸಿಸ್ ಉಗ್ರರು, ಅವರ ಮೂಲಸೌಕರ್ಯ ಮತ್ತು ಶಸ್ತ್ರಾಸ್ತ್ರ ಸಂಗ್ರಹ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿವೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ದೃಢಪಡಿಸಿದ್ದಾರೆ. ಅಗತ್ಯವಿದ್ದರೆ ಮುಂದುವರಿದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ. ಇದು ಯುದ್ಧದ ಆರಂಭವಲ್ಲ, ಬದಲಾಗಿ ಪ್ರತೀಕಾರದ ಸ್ಪಷ್ಟ ಘೋಷಣೆ ಎಂದು ಹೆಗ್ಸೆತ್ ಹೇಳಿದ್ದಾರೆ. “ಅಮೆರಿಕನ್ನರನ್ನು ಗುರಿಯಾಗಿಸಿಕೊಂಡರೆ, ಅವರು ಜಗತ್ತಿನ ಎಲ್ಲಿಯಾದರೂ ಇರಲಿ, ಅವರನ್ನು ಬೇಟೆಯಾಡಿ ನಾಶಪಡಿಸಲಾಗುತ್ತದೆ” ಎಂಬ ಸಂದೇಶವನ್ನು ಈ ದಾಳಿ ನೀಡುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ಡಿಸೆ...