Tuesday, January 27

ದೇಶ-ವಿದೇಶ

‘ಡಕೋಯಿಟ್’ ಚಿತ್ರ 2026ರ ಮಾರ್ಚ್ 19ರಂದು ತೆರೆ

‘ಡಕೋಯಿಟ್’ ಚಿತ್ರ 2026ರ ಮಾರ್ಚ್ 19ರಂದು ತೆರೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಅದಿವಿ ಶೇಷ್ ಹಾಗೂ ಅನುರಾಗ್ ಕಶ್ಯಪ್ ಅವರೊಂದಿಗೆ ನಟಿಸಿರುವ ಮುಂಬರುವ ಚಿತ್ರ ‘ಡಕೋಯಿಟ್’ ತನ್ನ ವೃತ್ತಿಜೀವನದಲ್ಲಿ ಎರಡು ಭಾಷೆಗಳಲ್ಲಿ ಚಿತ್ರೀಕರಣ ಮಾಡಿದ ಮೊದಲ ಚಿತ್ರ ಎಂದು ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಹೇಳಿದ್ದಾರೆ. ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮೃಣಾಲ್, ಮರಾಠಿಯಲ್ಲಿ ಪ್ರೇಕ್ಷಕರೊಂದಿಗೆ ಸಂವಾದ ನಡೆಸಿದರು. ಸಹನಟರಾದ ಅದಿವಿ ಶೇಷ್, ಅನುರಾಗ್ ಕಶ್ಯಪ್ ಹಾಗೂ ನಿರ್ದೇಶಕ ಶನಿಲ್ ಡಿಯೋ ಅವರೊಂದಿಗೆ ಕೆಲಸ ಮಾಡಿದ ಅನುಭವವನ್ನು ಅವರು ಹಂಚಿಕೊಂಡರು. ಈ ಚಿತ್ರವು ತಮ್ಮ ‘ಲವ್ ಸೋನಿಯಾ’ ಚಿತ್ರದ ಅನುಭವವನ್ನು ನೆನಪಿಸುವ ಛಾಯೆಯನ್ನು ನೀಡಿದೆ ಎಂದರು. “ಡಕೋಯಿಟ್ ಸಂಪೂರ್ಣವಾಗಿ ವಿಭಿನ್ನವಾದ ಚಿತ್ರ. ಇದು ನಾನು ಹಿಂದಿ ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಚಿತ್ರೀಕರಿಸಿದ ಮೊದಲ ಸಿನಿಮಾ. ಅದಿವಿ ಶೇಷ್ ಅವರೊಂದಿಗೆ ಕೆಲಸ ಮಾಡುವುದು ಅದ್ಭುತ ಅನುಭವ. ಹರಿಯನ್ನು ಈ ಹೊಸ ಅವತಾರದಲ್ಲಿ ನೋಡುವುದು ನಿಜಕ್ಕೂ ಮನಸ್ಸಿಗೆ ತಾಕುತ್ತದೆ. ಅನುರಾಗ್ ಸರ್ ಅವರೊಂದಿಗೆ ಕೆಲಸ ಮಾಡುವುದು ಬಹಳ ಸಂತೋಷ ನೀಡಿತು. ನನ್ನ ದೃಶ್ಯಗಳು ಕಡಿಮೆ ಇದ್ದರೂ, ನಾನು ಮಾಡಿದ ಪ್ರತಿಯೊಂದೂ...
ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

ಕಲಬುರಗಿ, ಬೀದರ್ ನಿಂದ ಸಹಿತ ಪ್ರಾದೇಶಿಕ ವಿಮಾನ ಸಂಪರ್ಕ ಬಲಪಡಿಸಲು ಉಡಾನ್ ಯೋಜನೆ ಮುಂದುವರಿಸಲು ಆಗ್ರಹ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ಪ್ರಾದೇಶಿಕ ವಿಮಾನ ಸಂಪರ್ಕವನ್ನು ಬಲಪಡಿಸಲು ಉಡಾನ್ ಸೇವೆ 10ವರ್ಷಗಳಿಗೆ ಮುಂದುವರೆಸುವ ಅಗತ್ಯವಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದ ಭೂ ಸ್ವಾಧೀನ ಹಾಗೂ ಇಲ್ಲಿನ ಕಟ್ಟಡಗಳ ವೆಚ್ಚವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಭರಿಸಿದೆ.ಉಡಾನ್ ಯೋಜನೆ ಈ ಮಾರ್ಗದಲ್ಲಿ ಕೇವಲ 3 ವರ್ಷಗಳ ಕಾಲ ಮಾತ್ರ ಜಾರಿಯಲ್ಲಿದ್ದು, ನಂತರ ಸ್ಥಗಿತಗೊಂಡಿವೆ. ಈ ಮಾರ್ಗದಲ್ಲಿ ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿರುವ ಸಂಸ್ಥೆಯ ವಿಮಾನ ಸೇವೆಯನ್ನು ಮುಂದುವರಿಸುವ ಉದ್ದೇಶದಿಂದ, ಉಡಾನ್ ಯೋಜನೆಯಡಿ ಅರ್ಹ ನಿರ್ವಾಹಕರಿಂದ ಹೊಸದಾಗಿ ಬಿಡ್ಗಳನ್ನು ಆಹ್ವಾನಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ನಾಗರಿಕ ವಿಮಾನ ಮಾರ್ಗಗಳಿಗೆ ನೀಡಲಾಗುತ್ತಿರುವ ಹಣಕಾಸು ನೆರವು ಪ್ರಸ್ತುತ ಕೇವಲ 3 ವರ್ಷಗಳಿಗೆ ಮಾತ್ರ ಸೀಮಿತವಾಗಿದೆ. ಈ ಅವಧಿ ಮುಗಿದ ಬಳಿಕ ಹಲವು ಪ್ರದೇಶಗಳಲ್ಲಿ ವಿಮಾನ ಸೇವೆಗಳು ಸ್ಥಗಿತಗೊಳ್ಳುತ್ತಿದೆ. ಪ್ರಯಾಣಿಕರ ಸಂಖ್ಯೆ ಹಾಗೂ ಮಾರ್ಗದ ಸ್ಥಿರತೆ ಸಾಧಿಸಲು ಮೂರು ವರ್ಷಗಳ ಅವಧಿ ...
ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ; 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಆಲಮಟ್ಟಿ-ಕುಷ್ಟಗಿ ನೂತನ ರೈಲ್ವೆ ಮಾರ್ಗ ನಿರ್ಮಾಣ ಸಂಬಂಧ 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ ಸಿದ್ದವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಆಲಮಟ್ಟಿಯಿಂದ ಕುಷ್ಟಗಿವರೆಗೆ ನೂತನ ರೈಲ್ವೆ ಮಾರ್ಗದ ಕುರಿತಾಗಿ ವಿಜಯಪುರದ ಸಂಸದರಾದ ರಮೇಶ್ ಜಿಗಜಿಣಗಿ ಹಾಗೂ ಬಾಗಲಕೋಟೆಯ ಸಂಸದರಾದ ಪಿಸಿ ಗದ್ದಿಗೌಡರ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಚರ್ಚಿಸಲಾಗಿತ್ತು. ಈ ನೂತನ ರೈಲ್ವೆ ಮಾರ್ಗದ ಸರ್ವೆ ಕಾರ್ಯ ಮುಗಿದಿದ್ದು, ಮೇ 2026ರ ಅಂತ್ಯದೊಳಗೆ ವಿವರವಾದ ಯೋಜನಾ ವರದಿ (DPR) ತಯಾರಾಗಲಿದೆ ಎಂದು ಪತ್ರ ಮುಖೇನ ತಿಳಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಂಚಿಕೊಂಡಿದ್ದಾರೆ. . ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ಮತ್ತಷ್ಟು ಹೆಚ್ಚು ಅಭಿವೃದ್ದಿಗೊಳಿಸುವ ಮೂಲಕ ವಾಣಿಜ್ಯೋದ್ಯಮದ ಜೊತೆ ಸುಲಭ ಸಂಚಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವರಿಗೆ ಹಾಗೂ ಕೇಂದ್ರ ರೈಲ...
ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್

ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಕಾಂಗ್ರೆಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, "ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದರು. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು ಎಂದು ತಿಳಿಸಿದರು. ಜಿ.ಸಿ.ಚಂದ್ರಶೇಖರ್ ಅವರು ಬಿಎಲ್‌ ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ. ದೆಹಲಿಯಲ್ಲಿನ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ. ಈ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯತೆ ಇದೆ ಎಂದು ಪಕ್...
LDF ಸೋತರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ; ಮಾತು ಉಳಿಸಿಕೊಂಡ ನಾಯಕ

LDF ಸೋತರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ; ಮಾತು ಉಳಿಸಿಕೊಂಡ ನಾಯಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪತ್ತನಂತಿಟ್ಟ: ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಅಖಾಡ ಅನೇಕಾನೇಕ ವಿಶೇಷತೆಗಳಿಗೆ ಸಾಕ್ಷಿಯಾಯಿತು. ಈ ಚುನಾವಣೆಯಲ್ಲಿ ಬಿಜೆಪಿ ಯಶೋಗಾಥೆ ಬರೆದಂತೆ ಬೀಗುತ್ತಿದೆ. ಮತ್ತೊಂದೆಡೆ ಎಡರಂಗಕ್ಕೆ ತಕ್ಕ ಪಾಠ ಕಲಿಸಿರುವುದಾಗಿ ಯುಡಿಎಫ್ ನಾಯಕರು ಹೇಳುತ್ತಿದ್ದಾರೆ. ಇದೇ ವೇಳೆ, ಸೋಲು ಗೆಲುವಿನ ಪಣದಲ್ಲಿ ಸೋತ ಎಲ್‌ಡಿಎಫ್ ನಾಯಕ ಮೀಸೆ ಬೋಳಿಸಿದರೆನ್ನಲಾದ ಸನ್ನಿವೇಶವೂ ಗಮನಸೆಳೆದಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. LDF party worker Babu Varghese, who had vowed to shave his moustache if the LDF failed to win the Pathanamthitta Municipality, has now gone through with it after the party’s defeat. #Pathanamthitta #LDF #KeralaLocalBodyElection2025 #KeralaLocalBodyElection pic.twitter.com/gxQ9dKFQSt— Harish M (@chnmharish) December 13, 2025 ಪತ್ತನಂತಿಟ್ಟ ಪುರಸಭೆಯಲ್ಲಿ ಎಲ್‌ಡಿಎಫ್ ಗೆಲ್ಲಲು ವಿಫಲವಾದರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದ ಎಲ್‌ಡಿಎಫ್ ಪಕ್ಷದ ಕಾರ್ಯ...
ಕೇರಳ ದಲ್ಲಿ ಬಿಜೆಪಿ ಪಾಲಿಗೆ ಹೊಸ ಮನ್ವಂತರ: ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ ಶ್ರೀಲೇಖಾ ಜಯಭೇರಿ

ಕೇರಳ ದಲ್ಲಿ ಬಿಜೆಪಿ ಪಾಲಿಗೆ ಹೊಸ ಮನ್ವಂತರ: ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ ಶ್ರೀಲೇಖಾ ಜಯಭೇರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ತಿರುವನಂತಪುರಂ: ತಿರುವನಂತಪುರಂ ಕಾರ್ಪೊರೇಷನ್‌ನ ಶಾಸ್ತಮಂಗಲಂ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ (ಡಿಜಿಪಿ) ಶ್ರೀಲೇಖಾ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಗರಸಭೆ ಅಧಿಕಾರ ವಶಪಡಿಸಿಕೊಳ್ಳುವ ಪೈಪೋಟಿಯಲ್ಲಿ ಬಿಜೆಪಿ ತನ್ನ ಸ್ಥಿತಿಯನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ತಿರುವನಂತಪುರಂ ಕಾರ್ಪೊರೇಷನ್ ನಿಯಂತ್ರಣಕ್ಕಾಗಿ ಮೂರು ಪ್ರಮುಖ ರಾಜಕೀಯ ಮೈತ್ರಿಗಳ ನಡುವೆ ಕಠಿಣ ಸ್ಪರ್ಧೆ ನಡೆಯುತ್ತಿರುವ ಸಂದರ್ಭದಲ್ಲೇ ಶ್ರೀಲೇಖಾ ಅವರ ಜಯ ಲಭಿಸಿದೆ. ರಾಜಧಾನಿಯಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗವನ್ನು ಅಧಿಕಾರದಿಂದ ದೂರ ಸರಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಕ್ಕೆ ಈ ಗೆಲುವು ಸಾಂಕೇತಿಕ ಹಾಗೂ ರಾಜಕೀಯ ಉತ್ತೇಜನವಾಗಿದೆ ಎಂದು ಪಕ್ಷ ವಿಶ್ಲೇಷಿಸಿದೆ. ಪ್ರಸ್ತುತ ಲಭ್ಯ ಮಾಹಿತಿಯಂತೆ, 101 ಸದಸ್ಯರ ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ 34 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎಡಪಕ್ಷಗಳು 20 ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ವರ್ಷ...
ಆಂಧ್ರಪ್ರದೇಶದ ಘಾಟ್ ರಸ್ತೆಯಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಮಂದಿ ಸಾವು

ಆಂಧ್ರಪ್ರದೇಶದ ಘಾಟ್ ರಸ್ತೆಯಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಿಶಾಖಪಟ್ಟಣಂ: ಆಂಧ್ರಪ್ರದೇಶದ ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಾಯಗೊಂಡಿದ್ದಾರೆ. ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ವಿವಿಧ ದೇವಸ್ಥಾನಗಳಿಗೆ ಯಾತ್ರೆ ಹೊರಟಿದ್ದವರ ವಾಹನ ಅಪಘಾತಕ್ಕೀಡಾಗಿದೆ. 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ....
ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಬೆಳಗಾವಿ: ರಾಜ್ಯದ ರಾಜಕೀಯವಾಗಿ ಅತಿದೊಡ್ಡ ಜಿಲ್ಲೆ ಎನ್ನಲಾದ ಬೆಳಗಾವಿ ವಿಭಜನೆ ಪ್ರಶ್ನೆ ಮತ್ತೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಚಿಕ್ಕೋಡಿ ಮತ್ತು ಗೋಕಾಕ್ ಎಂಬ ಎರಡು ಹೊಸ ಜಿಲ್ಲೆಗಳ ರಚನೆಗೆ ಒತ್ತಾಯಿಸಿ ನಿಯೋಗವೊಂದು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಬೆಂಗಳೂರು ಹೊರತಾಗಿಯೇ ರಾಜ್ಯದ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಅವಶ್ಯಕತೆಯ ಕುರಿತ ಬೇಡಿಕೆ ಹಲವು ವರ್ಷಗಳಿಂದಲೇ ಕೇಳಿಬರುತ್ತಿದೆ. ಬೆಳಗಾವಿ ಚಳಿಗಾಲ ಅಧಿವೇಶನದ ಮೊದಲ ದಿನ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಪ್ರಸ್ತುತ ಜಿಲ್ಲೆಯನ್ನು ಸಣ್ಣ ಬೆಳಗಾವಿ ಜಿಲ್ಲೆಯಾಗಿ ಉಳಿಸಬೇಕು ಹಾಗೂ ಚಿಕ್ಕೋಡಿ, ಗೋಕಾಕ್ ಜಿಲ್ಲೆಗಳನ್ನು ಪ್ರತ್ಯೇಕವಾಗಿ ರಚಿಸಬೇಕು ಎಂದು ಮನವಿ ಸಲ್ಲಿಸಿತು....
ಟೆಲಿಮೆಡಿಸಿನ್ ಸೇವೆಯಲ್ಲಿ AI — eSanjeevaniಗೆ CDSS ಸಂಯೋಜನೆ

ಟೆಲಿಮೆಡಿಸಿನ್ ಸೇವೆಯಲ್ಲಿ AI — eSanjeevaniಗೆ CDSS ಸಂಯೋಜನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ದೇಶದ ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ಪರಿವರ್ತನಾತ್ಮಕ ಬದಲಾವಣೆ ತರಲು ಕೇಂದ್ರ ಸರ್ಕಾರ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ವೇಗವಾಗಿ ಅಳವಡಿಸಿಕೊಂಡಿದೆ. ವಿಶೇಷವಾಗಿ ಕ್ಷಯರೋಗ ಹಾಗೂ ಮಧುಮೇಹದ ಹೆಚ್ಚುತ್ತಿರುವ ಹೊರೆಯನ್ನು ನಿಭಾಯಿಸುವಲ್ಲಿ AI ಆಧಾರಿತ ರೋಗನಿರ್ಣಯ ಸಾಧನಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಲೋಕಸಭೆಯಲ್ಲಿ ತಿಳಿಸಿದರು. ಸಚಿವಾಲಯವು AIIMS ದೆಹಲಿ, PGIMER ಚಂಡೀಗಢ ಮತ್ತು AIIMS ಋಷಿಕೇಶವನ್ನು ‘AI ಶ್ರೇಷ್ಠತೆಯ ಕೇಂದ್ರ’ವಾಗಿ ಗುರುತಿಸಿ, ಆರೋಗ್ಯ ಕ್ಷೇತ್ರದಲ್ಲಿ AI ಪರಿಹಾರಗಳ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಜಾಧವ್ ಲಿಖಿತ ಉತ್ತರದಲ್ಲಿ ಹೇಳಿದರು. ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’ ಮಧುಮೇಹ ಸಂಬಂಧಿತ ಕಣ್ಣಿನ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಲು ‘ಮಧುನೇತ್ರAI’ ಎಂಬ AI ಆಧಾರಿತ ಪರಿಹಾರ ಅಭಿವೃದ್ಧಿಯಾಗಿದೆ. ತಜ್ಞರಲ್ಲದ ಆರೋಗ್ಯ ಕಾರ್ಯಕರ್ತರೂ ಫಂಡಸ್ ಚಿತ್ರಗಳನ್ನು ತೆಗೆದು AI ಮೂಲಕ ರೆಟಿನೋಪಥಿಯನ್ನು ಪತ್ತೆಹಚ್ಚಲು ಈ ಸಾಧನ ನೆರವಾ...
ಬೆಳಗಾವಿ ಅಧಿವೇಶನ; 9ರಂದು ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ

ಬೆಳಗಾವಿ ಅಧಿವೇಶನ; 9ರಂದು ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು; ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಕುರಿತು, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ- ಜೆಡಿಎಸ್ ಮುಖಂಡರು ಒಟ್ಟಿಗೆ ಕೂತು ಸವಿಸ್ತಾರವಾಗಿ ಚರ್ಚಿಸಿದ್ದೇವೆ ಎಂದರು. ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆ ಒಂದು ದಿನ ಚರ್ಚೆ ನಡೆಯುತ್ತಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು ಎಂದು ವಿವರಿಸಿದರು. ಆದು ಆಗುತ್ತಿಲ್ಲ ಎಂದು ಟೀಕಿಸಿದರು. ಅಧಿವೇಶನದ ಆರಂಭದ ದಿನಗಳಲ್ಲೇ ಈ ಸಮಸ್ಯೆಗಳನ್ನು ಚರ್ಚಿಸಲು ತೀ...