Wednesday, June 25

ದೇಶ-ವಿದೇಶ

ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕ್ರಮ ಕೈಗೊಂಡಿದ್ದಾರೆ. ಇಂದು ಅವರು ವಾರಣಾಸಿಗೆ ನೀಡದ ಭೇಟಿ ಗಮನಸೆಳೆಯಿತು. ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕ ಭವನ ಛತ್ರಕ್ಕೆ ಇಂದು ಸಾರಿಗೆ ಮತ್ತು ಮಂಜುರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಕರ್ನಾಟಕ ಭವನ ಛತ್ರ 1927 ನಿರ್ಮಿಸಿದ್ದು, ಇದೇ ವೇಳೆ ಕರ್ನಾಟಕ ಭವನದ ಛತ್ರ, ಕೊಠಡಿಗಳನ್ನು ಅಭಿವೃದ್ಧಿ ಪಡಿಸಲು ನಿಶ್ಚಯಿಸಿದ್ದು, ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭವಾಗಿ ಎಲ್ಲ ಸುಸಜ್ಜಿತವಾಗಿ ಅಭಿವೃದ್ಧಿಯಾಗಲಿದೆ, ಎಂದು ಸಚಿವರು ಮಾಹಿತಿ ನೀಡಿದರು. ಕಾಶಿಯ ಕರ್ನಾಟಕ ಭವನ ಛತ್ರ: ಕಾಶಿಯಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕರ್ನಾಟಕ ಭವನ‌ ನವೀಕರಣ ಕಾರ್ಯ- ಸಾರಿಗೆ-ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ತ್ವರಿತ ಕ್ರಮ, ವಾರಣಾಸಿಯ ಹನುಮಾನ್ ಘಾಟ್ ನಲ್ಲಿರುವ ಕರ್ನಾಟಕ ಭವನ ಛತ್ರ, ಕರ...
ದೇಶಾಧ್ಯಂತ ಆಸ್ಪತ್ರೆ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ದೇಶಾಧ್ಯಂತ ಆಸ್ಪತ್ರೆ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲಿನ ಅಮಾನುಷ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ದೇಶಾದ್ಯಂತ ವೈದ್ಯರು ಇಂದು ಮುಷ್ಕರ ಕೈಗೊಂಡಿದ್ದಾರೆ. ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಸಹಿತ ಬಹುತೇಕ ರಾಜ್ಯಗಳಲ್ಲಿ ಆಸ್ಪತ್ರೆಯ ಸೇವೆಗಳನ್ನು ಸ್ಥಗಿತಗೊಳಿಸಿ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ ನಡೆಯುತ್ತಿದ್ದು ಭಾನುವಾರ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಯಲಿದೆ ಎಂದು ವೈದ್ಯರ ಸಂಘದ ಮುಖಂಡರು ತಿಳಿಸಿದ್ದಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​ಮುಂದಾಳುತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ರೋಗಿಗಳಿಗೆ ತೊಂದರೆಯಾಗದಂತೆ ಈ ಹೋರಾಟ ನಡೆಸಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ಈ ನಡುವೆ ವೈದ್ಯರ ಮುಷ್ಕರದಿಂದಾಗಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳು ಪರದಾಡುವಂತಾಗಿದೆ....
ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ದೇಶ-ವಿದೇಶ, ಪ್ರಮುಖ ಸುದ್ದಿ
ನಾಗ್ಪುರ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ರಾಷ್ಟ್ರಭಕ್ತಿಯ ಹಬ್ಬವಾಗಿ ಆಚರಿಸಲಾಗುತ್ತಿದೆ. RSS ಪಾಳಯದಲ್ಲೂ ಸ್ವಾತಂತ್ರ್ಯೋತ್ಸವ ಸಡಗರ ಕಡುಬಂದಿದೆ. ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಯಲ್ಲಿ ನೆರವೇರಿದ ಈ ರಾಷ್ಟ್ರಹಬ್ಬದ ಕೈಂಕರ್ಯವು ನಾಡಿನ ಗಮನೆಳೆಯಿತು. ಸಂಘದ ಶಕ್ತಿಕೇಂದ್ರದಲ್ಲಿನ ಕಾರ್ಯಕ್ರಮಕ್ಕೆ ಸರಸಂಘಚಾಲಕ್ ಡಾ.ಮೋಹನ್ ಭಾಗವತ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು. 78वें स्वतंत्रता दिवस के अवसर पर राष्ट्रीय स्वयंसेवक संघ के पूजनीय सरसंघचालक डॉ. मोहन भागवत जी ने आज संघ कार्यालय, महाल (नागपुर) में ध्वजारोहण किया। pic.twitter.com/aXO2vJU0ke — RSS (@RSSorg) August 15, 2024 ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಧಾನ ಕಚೇರಿ ಆವರಣದಲ್ಲಿ ಸಮಾಗಮವಾದ ಸಂಘದ ವಿವಿಧ ಕ್ಷೇತ್ರಗಳ ಪ್ರಮುಖರು, ಕಾರ್ಯಕರ್ತರು ಈ ವಿಶೇಷ ಸ್ವಾತಂತ್ರ್ಯ ದಿನಾಚರಣೆಯ ಸನ್ನಿವೇಶವನ್ನು ಸಾಕ್ಷೀಕರಿಸಿದರು....
ವಿಕಸಿತ್ ಭಾರತ: 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದ ಮೋದಿ

ವಿಕಸಿತ್ ಭಾರತ: 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದ ಮೋದಿ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡದ ಪ್ರಧಾನಿ ಮೋದಿ, ‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದೆ ಎಂದರು. ವಿಕಸಿತ ಭಾರತ ಮೂಲಕ ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ಅವರಿಗೆ ಹೃದಯಪೂರ್ವಕ ನಮನ ಎಂದ ಅವರು, ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೂ, ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದು ಹೇಳಿದರು. ನೈಸರ್ಗಿಕ ವಿಕೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ, ಅನೇಕ ಜನರು ಇದರಿಂದ ತಮ್ಮ ಕುಟುಂಬಗಳನ್ನು, ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರ ಪರವಾಗಿ ...
ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಮನೆಮನೆಗಳಲ್ಲೂ ತಿಂರಂಗ ಧ್ವಜ ಹಾರಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನುಡಿ ಬರೆದಿರುವ ಹರ್ ಘರ್ ತಿರಂಗ ಅಭಿಯಾನಕ್ಕೂ ಭಾರೀ ಬೆಂಬಲ ವ್ಯಕ್ತವಾಗಿದೆ. ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು. ಶಾಲೆಗಳಲ್ಲಿ, ಸಂಘಸಂಸ್ಥೆಗಳಲ್ಲೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳು ಗಮನಸೆಳೆದವು....
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ. ತುಂಗಭದ್ರಾ ಜಲಾಶಯದ ಒಂದು ಕ್ರೆಸ್ಟ್ ಗೇಟ್ ಹಾನಿಗೊಳಗಾಗಿದ್ದು ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಹರಿ ಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನೊಂದೆಡೆ, ಕಾವೇರಿ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯತ್ತಿದೆ. ಹಾಗಾಗಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಭಾಗದ ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ....
ತಿರುವಳ್ಳೂರು ಬಳಿ ಭೀಕರ ಅಪಘಾತ; ಐವರು ವಿದ್ಯಾರ್ಥಿಗಳು ದುರ್ಮರಣ

ತಿರುವಳ್ಳೂರು ಬಳಿ ಭೀಕರ ಅಪಘಾತ; ಐವರು ವಿದ್ಯಾರ್ಥಿಗಳು ದುರ್ಮರಣ

ದೇಶ-ವಿದೇಶ, ಪ್ರಮುಖ ಸುದ್ದಿ
ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿ ಬಳಿಯೂ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಿದ್ದ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಈ ಅಪಘಾತ ಘಟಿಸಿದೆ. ಚೆನ್ನೈನ ಕಾಲೇಜಿನಲ್ಲಿ ಓದುತ್ತಿದ್ದ ಏಳು ಮಂದಿ ವಿದ್ಯಾರ್ಥಿಗಳು ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿಕಾರಿನಲ್ಲಿ ತೆರಳುತ್ತಿದ್ದಾಗ ಟ್ರಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಅಪಘಾತಕ್ಕೆ ಕಾರಣ ಎನ್ನಲಾದ ಟ್ರಕ್ ಚಾಲಕನನ್ನು ಕನಗಮ್ಮಛತ್ರಂ ಪೊಲೀಸರು ಬಂಧಿಸಿದ್ದಾರೆ....
ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿ; ವೀಡಿಯೋ ವೈರಲ್

ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿ; ವೀಡಿಯೋ ವೈರಲ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ರೀಲ್ಸ್ ಮಾಡೋ ಹೆಣ್ಣುಮಕ್ಕಳ ವಿಡಿಯೋ ಶೇರ್ ಮಾಡೋ ಬದಲು ಇಂತಹ ಹೆಣ್ಣುಮಕ್ಕಳ ವಿಡಿಯೋ ಶೇರ್ ಮಾಡಿ ಅವರಿಗೆ ಪ್ರೋತ್ಸಾಹ ನೀಡಿ 🙏🙏🙏 ನಿಜಕ್ಕೂ ಈ ಹೆಣ್ಣುಮಗಳ ಧೈರ್ಯ ಮೆಚ್ಚಬೇಕು ಕಸಾಯಿಖಾನೆಗೆ ಹೋಗುತಿದ್ದ ಗೋವುಗಳನ್ನು ರಕ್ಷಿಸಿದ ಹಿಂದೂ ಹೋರಾಟಗಾರ್ತಿಗೆ ಸಮಸ್ತ ಹಿಂದೂ ಕಾರ್ಯಕರ್ತರ ಪರವಾಗಿ ಒಂದು ಮೆಚ್ಚುಗೆ ಇರಲಿ 🙏#ಗೋರಕ್ಷಕಿ pic.twitter.com/TR2j8Q0HGM — Puneeth Kerehalli (@Puneeth74353549) August 11, 2024...
ಬಿಹಾರದ ಜೆಹನಾಬಾದ್ ದೇವಾಸ್ಥಾನದಲ್ಲಿ ಕಾಲ್ತುಳಿತ; ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆ

ಬಿಹಾರದ ಜೆಹನಾಬಾದ್ ದೇವಾಸ್ಥಾನದಲ್ಲಿ ಕಾಲ್ತುಳಿತ; ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ
ಪಾಟ್ನಾ: ಬಿಹಾರದ ಜೆಹನಾಬಾದ್ ಬಳಿ ದೇವಾಸ್ಥಾನದಲ್ಲಿನ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿದೆ. ಜೆಹನಾಬಾದ್ ಬಳಿಯ ಬಾಬಾ ಸಿದ್ಧಾಂತ ದೇವಾಲಯದಲ್ಲಿ ಸಂಭವಿಸಿದ ಈ ಕಾಲ್ತುಳಿತದಲ್ಲಿ ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ದೇವಾಸ್ಥಾನದಲ್ಲಿ ಕನ್ವಾರಿಯಾಗಳ ನಡುವೆ ಹೊಡೆದಾಟ ನಡೆದಿದ್ದು ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ. VIDEO | Seven dead and 50 feared injured as a stampede occurred at a temple of Bihar's Jehanabad after a fight broke between flower seller and people. (Full video available on PTI Videos - https://t.co/dv5TRARJn4) pic.twitter.com/psJSERP7ra — Press Trust of India (@PTI_News) August 12, 2024...
ಭಾರೀ ಮಳೆ, ಭೂಕುಸಿತ: ಹಿಮಾಚಲದಲ್ಲಿ 120 ರಸ್ತೆಗಳು ಬಂದ್

ಭಾರೀ ಮಳೆ, ಭೂಕುಸಿತ: ಹಿಮಾಚಲದಲ್ಲಿ 120 ರಸ್ತೆಗಳು ಬಂದ್

ದೇಶ-ವಿದೇಶ, ಪ್ರಮುಖ ಸುದ್ದಿ
ಶಿಮ್ಲಾ: ಉತ್ತರ ಹಾಗೂ ಈಶಾನ್ಯ ರಾಜ್ಯಗಳಲ್ಲೂ ಮುಂಗಾರು ಮಳೆ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಗೆ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಸರಣಿ ಭೂಕುಸಿತದ ಘಟನೆಗಳು ಸಂಭವಿಸಿವೆ. ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿ ಸುಮಾರು 120 ರಸ್ತೆಗಳು ಬಂದ್ ಆಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.