Tuesday, June 24

ದೇಶ-ವಿದೇಶ

ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್

ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಸಾವೊ ಪೌಲೋ: ಬ್ರೆಜಿಲ್‌ನ ಸಾವೊ ಪಾಲೊ ಬಳಿ ಟರ್ಬೊಪ್ರೊಪ್ ವಿಮಾನ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ 62 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಈ ದುರಂತ ಸಂಭವಿಸಿದೆ. The crash occurred in the Capela neighborhood in Vinhedo (San Paulo). According to the Sao Paulo Fire Department, seven teams are on site. Initial information is that it was a twin-engine passenger plane, model ATR-72, that left Cascavel bound for Guarulhos. According to the… pic.twitter.com/B1mlKXTwEG — Sputnik (@SputnikInt) August 9, 2024 ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋನತ್ತ ಈ ವಿಮಾನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಸಾವೊ ಪಾಲೊದಿಂದ ಸುಮಾರು 50 ಮೈಲು ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ಬಾನೆತ್ತರದಲ್ಲಿ ವಿಮಾನ ಪತನಗೊಂಡ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. The crash occurred in the Capela neighbo...
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಹಿಂದೂ ಶ್ರದ್ದಾಕೇಂದ್ರಗಳ ಮೇಲೆ ನಡೆದಿರುವ ದಾಳಿ ಘಟನೆಗಳು ಕಳವಳಕಾರಿ ಬೆಳವಣಿಗೆಯಾಗಿದ್ದು, ಅಲ್ಲಿನ ಮಧ್ಯಂತರ ಸರ್ಕಾರವು ಇಂತಹಾ ಕ್ರೌರ್ಯಗಳಿಗೆ ಅಂತ್ಯ ಹಾಡಬೇಕಿದೆ ಎಂದು ಸಂಘ ಪ್ರತಿಪಾದಿಸಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಬಾಂಗ್ಲಾದೇಶದ ಘಟನೆಗಳ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುವುದನ್ನು ಸಹಿಸಲಾಗದು ಎಂದಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಆಡಳಿತ ಬದಲಾವಣೆಯ ಚಳವಳಿಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳು, ಬೌದ್ಧರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧದ ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಗಂಭೀರ ಕಳವಳ ವ್ಯಕ್ತಪಡಿಸುತ್ತದೆ ಎಂದಿರುವ ಅವರು, ಹತ್ಯೆ, ಲೂಟಿ, ಬೆಂಕಿ ಹಚ್ಚುವುದು ಮತ್ತು ಹಿಂದೂ ಹಾಗೂ ಇತರ ಧಾರ್ಮಿಕ ಅಲ್ಪಸಂಖ್ಯಾತ ಮಹಿಳೆಯರ ಮೇಲಿನ ದೌರ್ಜನ್ಯಗಳು ಖಂಡನೀಯ‌. ಬಾಂಗ್ಲಾದೇ...
ದೆಹಲಿ ಅಬಕಾರಿ ನೀತಿ ಅಕ್ರಮ ಆರೋಪ; ಮನೀಶ್ ಸಿಸೋಡಿಯಾಗೆ ಜಾಮೀನು

ದೆಹಲಿ ಅಬಕಾರಿ ನೀತಿ ಅಕ್ರಮ ಆರೋಪ; ಮನೀಶ್ ಸಿಸೋಡಿಯಾಗೆ ಜಾಮೀನು

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮ ಆರೋಪ ಎದುರಿಸುತ್ತಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದು ಆರೋಪ ಎದುರಿಸುತ್ತಿರುವ ಆಪ್ ಮುಖಂಡ ಮನೀಶ್ ಸಿಸೋಡಿಯಾ ಬಂಧನದಲ್ಲಿದ್ದಾರೆ. ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಈ ಮೂಲಕ ಸಿಸೋಡಿಯಾರ 17 ತಿಂಗಳ ಸೆರೆವಾಸ ಕೊನೆಗೂ ಅಂತ್ಯಕಂಡಿದೆ....
ಇಂದಿನಿಂದ ‘ಹರ್‌ ಘರ್‌ ತಿರಂಗಾ’ ಅಭಿಯಾನ; ಎಲ್ಲೆಲ್ಲೂ ತ್ರಿವರ್ಣ ಧ್ವಜದ ಕಲರವ

ಇಂದಿನಿಂದ ‘ಹರ್‌ ಘರ್‌ ತಿರಂಗಾ’ ಅಭಿಯಾನ; ಎಲ್ಲೆಲ್ಲೂ ತ್ರಿವರ್ಣ ಧ್ವಜದ ಕಲರವ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಈ ಬಾರಿಯೂ 'ಹರ್‌ ಘರ್‌ ತಿರಂಗಾ’ ಅಭಿಯಾನ ನಡೆಯಲಿದೆ. ಇಂದಿನಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ 'ಹರ್‌ ಘರ್‌ ತಿರಂಗಾ’ ಅಭಿಯಾನ ನಡೆಯಲಿದೆ. ಹರ್‌ ಘರ್‌ ತಿರಂಗಾ’ ಅಭಿಯಾನದ 3ನೇ ಆವೃತ್ತಿ ಇದಾಗಿದ್ದು ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 'ಹರ್‌ ಘರ್‌ ತಿರಂಗಾ’ ಅಭಿಯಾನದ ಭಾಗವಾಗಿ ಈ ತಿಂಗಳ 13ರಂದು ದಿಲ್ಲಿಯಲ್ಲಿ ಬೈಕ್‌ ರ್‍ಯಾಲಿ ನಡೆಯಲಿದ್ದು ಎಲ್ಲ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ....
ಪ್ಯಾರಿಸ್ ಒಲಿಂಪಿಕ್ಸ್: ಬೆಳ್ಳಿ ಗೆದ್ದ ನೀರಜ್ ಚೋಪ್ರಾ; ಭಾರತಕ್ಕೆ 5ನೇ ಪದಕ

ಪ್ಯಾರಿಸ್ ಒಲಿಂಪಿಕ್ಸ್: ಬೆಳ್ಳಿ ಗೆದ್ದ ನೀರಜ್ ಚೋಪ್ರಾ; ಭಾರತಕ್ಕೆ 5ನೇ ಪದಕ

ದೇಶ-ವಿದೇಶ, ಪ್ರಮುಖ ಸುದ್ದಿ
ಪ್ಯಾರಿಸ್: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ಸಿಕ್ಕಿದೆ. ಭಾರತದ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಿನ್ನ ಗೆಲ್ಲುವ ಉತ್ಸಾಹದಲ್ಲಿದ್ದ ನೀರಜ್ ಚೋಪ್ರಾ, ಬೆಳ್ಳಿ ಗೆದ್ದು ಬೀಗಿದ್ದಾರೆ. 2020ರ ಒಲಿಂಪಿಕ್ಸ್‌ನಲ್ಲಿ ಅವರು 87.58 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದಿದ್ದರು. ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಜಾವೆಲಿನ್ ಎಸೆದರಾದರೂ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಅಚ್ಚರಿಯ ಸಂಗತಿ ಎಂದರೆ, ಕಳೆದ ಒಲಿಂಪಿಕ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದ ಪಾಕಿಸ್ತಾನದ ಅರ್ಷದ್ ನದೀಮ್ ಈ ಬಾರಿ ದಾಖಲೆಯ 92.97 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನ ಗೆದ್ದಿದ್ದಾರೆ. ಜೊತೆಗೆ ಹೊಸ ದಾಖಲೆ ನಿರ್ಮಿಸಿದ್ದಾರೆ....
ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ.. ಉದ್ಯೋಗ ಆಕಾಂಕ್ಷೆಗಳಿಗೆ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಆಯೋಜನೆ.. ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ, ವಿಮಾನ ಟಿಕೆಟ್, ವಸತಿ ಆಹಾರ ಇತ್ಯಾದಿ ವ್ಯವಸ್ಥೆ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27,000 ರೂ. ವೇತನ.  ಬೆಂಗಳೂರು: ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ವೃತ್ತಿ ತರಬೇತಿ ಮತ್ತು ನೇಮಕಾತಿಗಾಗಿ ಕಾರ್ಯಕ್ರಮ ಏರ್ಪಡಿಸಿದೆ. ಈಗಾಗಲೇ ಸ್ಲೋವಾಕಿಯಾ, ಯೂ ಎ ಈ, ಹಂಗೇರಿ, ಸೇರಿದಂತೆ ಮತ್ತಿತರ ಕಡೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಯಶಸ್ಸೀಯಾಗಿರುವ ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮವು ಇದೀಗ ಐಐಟಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ನಿಗಮದ ವತಿಯಿಂದಲೇ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ ಕಾರ್ಯಕ್ರಮದ ಮೂಲಕ ಮತ್ತೊಂದು ಹೊಸ ದೃಡ ಹೆಜ್ಜೆ ಇಟ್ಟಿದೆ. ಆಯ್ಕೆಯಾದ ಅಭ್ಯರ್ಥಿಗಳಿಗ...
ನೋವಿನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಪೋಗಟ್

ನೋವಿನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಪೋಗಟ್

ದೇಶ-ವಿದೇಶ, ಪ್ರಮುಖ ಸುದ್ದಿ
ಪ್ಯಾರಿಸ್: ತೂಕ ಹೆಚ್ಚಿದ್ದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಸುದ್ದಿ ಇಡೀ ಕ್ಷೀಡಾ ಕ್ಷೇತ್ರವನ್ನೇ ನಲುಗಿಸದೆ. ಈ ಬಗ್ಗೆ ಕ್ರೀಡಾಪಟುಗಳು ದುಃಖ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಾಗಿರುವ ಕಹಿ ಅನುಭವದ ನಂತರ ವಿನೇಶ್ ಪೊಗಟ್ ಅವರು ಒಲಿಂಪಿಕ್ಸ್‌ಗೆ ವಿದಾಯ ಹೇಳಿದ್ದಾರೆ. ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪೋಗಟ್, 'ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ನೋವು ಹಂಚಿಕೊಂಡಿದ್ದಾರೆ. माँ कुश्ती मेरे से जीत गई मैं हार गई माफ़ करना आपका सपना मेरी हिम्मत सब टूट चुके इससे ज़्यादा ताक़त नहीं रही अब। अलविदा कुश्ती 2001-2024 🙏 आप सबकी हमेशा ऋणी रहूँगी माफी 🙏🙏 — Vinesh Phogat (@Phogat_Vinesh) August 7, 2024 ಕುಸ್ತಿಗೆ ವಿ...
‘ಪೋಗಟ್ ಅನರ್ಹತೆ ಬಗ್ಗೆ ದುಃಖವಾಗಿದೆ, ಆದರೆ ನಿಯಮಗಳನ್ನು ಗೌರವಿಸಬೇಕು’: ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಪ್ರತಿಕ್ರಿಯೆ

‘ಪೋಗಟ್ ಅನರ್ಹತೆ ಬಗ್ಗೆ ದುಃಖವಾಗಿದೆ, ಆದರೆ ನಿಯಮಗಳನ್ನು ಗೌರವಿಸಬೇಕು’: ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಪ್ರತಿಕ್ರಿಯೆ

ದೇಶ-ವಿದೇಶ, ಪ್ರಮುಖ ಸುದ್ದಿ
ಪ್ಯಾರಿಸ್: ತೂಕ ಹೆಚ್ಚಿದ್ದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಸುದ್ದಿ ಇಡೀ ಕ್ಷೀಡಾ ಕ್ಷೇತ್ರವನ್ನೇ ನಲುಗಿಸದೆ. ಈ ಬಗ್ಗೆ ಕ್ರೀಡಾಪಟುಗಳು ದುಃಖ ವ್ಯಕ್ತಪಡಿಸಿದ್ದಾರೆ. ಫೊಗಟ್ ಅವರ ಅನರ್ಹತೆ ಬಗ್ಗೆ ಪ್ರತಿಕ್ರಿಯಿಸಿರುವ ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ನೆನಾದ್ ಲಾಲೋವಿಕ್ ಅವರು ತಮಗೆ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಲಾಲೋವಿಕ್, ನಿಯಮಗಳು ಎಲ್ಲರಿಗೂ ಒಂದೇ. ಅದನ್ನು ಗೌರವಿಸಬೇಕು ಎಂದಿದ್ದಾರೆ. ಫೋಗಟ್ ಅವರ ಅನರ್ಹತೆ ಬಗ್ಗೆ ಅತೀವ ದುಃಖವಾಗಿದೆ. ಆದರೆ ಈ ಬಗ್ಗೆ ಏನನ್ನೂ ಮಾಡಲಾಗುವುದಿಲ್ಲ ಎಂದವರು ಹೇಳಿದ್ದಾರೆ....
ವಯನಾಡ್ ಸಂತ್ರಸ್ತರಿಗೆ ಸೂಪರ್ ಸ್ಟಾರ್ ಪ್ರಭಾಸ್ ನೆರವು; 2 ಕೋಟಿ ರೂಪಾಯಿ ನೀಡಿದ ನಟ

ವಯನಾಡ್ ಸಂತ್ರಸ್ತರಿಗೆ ಸೂಪರ್ ಸ್ಟಾರ್ ಪ್ರಭಾಸ್ ನೆರವು; 2 ಕೋಟಿ ರೂಪಾಯಿ ನೀಡಿದ ನಟ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ನವದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ವಯನಾಡ್ ಭೂಕುಸಿತ ಘಟನೆಯಲ್ಲಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಈ ನಿರಾಶ್ರಿತರ ನೆರವಿಗೆ ಧಾವಿಸಿರುವ ಚಿತ್ರೋದ್ಯಮದ ಗಣ್ಯರು ಧನಸಹಾಯ ಮಾಡುತ್ತಿದ್ದಾರೆ. ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ನ‌ಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ದಕ್ಷಿಣ ಭಾರತದ ಖ್ಯಾತ ನಟ ಪ್ರಭಾಸ್‌ ಅವರು 2 ಕೋಟಿ ರೂ. ನೆರವು ನೀಡಿದ್ದಾರೆ. ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ಅವರು ಈ ಮೊತ್ತವನ್ನು ಪಾವತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕು; ತೃಣಮೂಲ ಕಾಂಗ್ರೆಸ್ ಸಲಹೆ

ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕು; ತೃಣಮೂಲ ಕಾಂಗ್ರೆಸ್ ಸಲಹೆ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ತೂಕ ಹೆಚ್ಚಳದ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕೆಂದು ತೃಣಮೂಲ ಕಾಂಗ್ರೆಸ್ ಆಗ್ರಹಿಸಿದೆ. ಪೋಗಟ್ ಅವರು ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರಿಗೆ ಈ ಬಾರಿ ಅನ್ಯಾಯವಾಗಿದೆ ಎಂದು ಇಡೀ ದೇಶ ಬೇಸರಗಿಂಡಿದೆ. ಪೋಗಟ್ ಅವರಿಗೆ ಧೈರ್ಯ ತುಂಬುವ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ ಹೊಸ ಸಲಹೆ ನೀಡಿ ಗಮನಸೆಳೆದಿದೆ. ಒಲಿಂಪಿಕ್ಸ್ ನಲ್ಲಿ ಆಕೆಯ ಕುಸ್ತಿ ಪ್ರದರ್ಶನವನ್ನು ಪರಿಗಣಿಸಿ ಆಕೆಗೆ ಭಾರತ ರತ್ನ ನೀಡಬೇಕು ಎಂದಿರುವ ಟಿಎಂಸಿ, ಪೋಗಟ್ ಅವರು ಭಾರತದ 1.4 ಬಿಲಿಯನ್ ಜನತೆಗೆ ಆಕೆ ಚಾಂಪಿನ್ ಗಳ ಚಾಂಪಿಯನ್ ಹಾಗೂ ದೇಶದ ಹೆಮ್ಮೆ. ಹಾಗಾಗಿ ಅವರಿಗೆ ಭಾರತ ರತ್ನ ಅಥವಾ ರಾಷ್ಟ್ರಪತಿಗಳ ಮೂಲಕ ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಬಗ್ಗೆ ಪಕ್ಷಾತೀತವಾಗಿ ನಿರ್ಧರಿಸಬೇಕು ಎಂದು ಪ್ರತಿಪಾದಿಸಿದೆ....