Tuesday, June 24

ದೇಶ-ವಿದೇಶ

ಬಾಂಗ್ಲಾದೇಶ ಹಿಂಸಾಚಾರ ಬಗ್ಗೆ ಬ್ರಿಟೀಷ್ ಲೇಬರ್ ಪಾರ್ಟಿ ಕಳವಳ; ಶೀಘ್ರ ಶಾಂತಿ ಸ್ಥಾಪನೆಗೆ ಡಾ.ನೀರಜ್ ಪಾಟೀಲ್ ಕರೆ

ಬಾಂಗ್ಲಾದೇಶ ಹಿಂಸಾಚಾರ ಬಗ್ಗೆ ಬ್ರಿಟೀಷ್ ಲೇಬರ್ ಪಾರ್ಟಿ ಕಳವಳ; ಶೀಘ್ರ ಶಾಂತಿ ಸ್ಥಾಪನೆಗೆ ಡಾ.ನೀರಜ್ ಪಾಟೀಲ್ ಕರೆ

ದೇಶ-ವಿದೇಶ, ಪ್ರಮುಖ ಸುದ್ದಿ
📝 ಜಯ ಪ್ರಕಾಶ್ ಲಂಡನ್: ಭೀಕರ ಹಿಂಸಾಚಾರದಿಂದ ಬಾಂಗ್ಲಾದೇಶ ತ್ತರಿಸಿದೆ. ಉದ್ಯೋಗ ನೀತಿ ವಿರುದ್ದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳು ದಂಗೆ ಎದ್ದಿದ್ದು ನಿರಂತರ ಹಿಂಸಾಚಾರದಿಂದಾಗಿ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಹಿಂಸಾಚರದಿಂದ ಬೆಚ್ಚಿದ ಶೇಖ್ ಹಸೀನಾ ಅವರು ಪ್ತಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿದ್ದಾರೆ. ಬಾಂಗ್ಲಾದೇಶದ ಈ ಪರಿಸ್ಥಿತಿ ಬಗ್ಗೆ ಲಂಡನ್‌‌ನಲ್ಲಿರುವ ಬ್ರಿಟಿಷ್ ಲೇಬರ್ ಪಾರ್ಟಿ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬ್ರಿಟಿಷ್ ಲೇಬರ್ ಪಾರ್ಟಿ ನಾಯಕರೂ ಆದ, ಭಾರತ ಮೂಲದ ಮಾಜಿ ಲಂಡನ್ ಮೇಯರ್ ಡಾ.ನೀರಜ್ ಪಾಟೀಲ್, ಬಾಂಗ್ಲಾದೇಶದಲ್ಲಿ ಶೀಘ್ರ ಶಾಂತಿ ಮರುಸ್ಥಾಪಿಸಲು ವಿಶ್ವ ಸಮುದಾಯ ಸಹಕಾರ ನೀಡಬೇಕಿದೆ ಎಂದು ಪ್ರತಿಪಾದಿಸಿದ್ದಾರೆ. ಬಾಂಗ್ಲಾದೇಶ ಸಂಸತ್ತು ವಿಸರ್ಜನೆಯಾಗಿದೆ, ಅದರ ಪ್ರಧಾನಿ ಈಗ ದೆಹಲಿಯಲ್ಲಿದ್ದಾರೆ. ಮುಂದಿನ ಮೂರು ತಿಂಗಳೊಳಗೆ ಚುನಾಯಿತ ಸರ್ಕಾರವನ್ನು ಮರುಸ್ಥಾಪಿಸುವ ಭರವಸೆಯೊಂದಿಗೆ ಮಿಲಿಟರಿ ಸ್ವಾಧೀನವಿದೆ. ಇದು ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯಾಗಿದೆ ಮತ್ತು ಬ್ರಿಟಿಷ್ ವಿದೇಶಾಂಗ ಕಚೇರಿ ಕೂಡಾ ಕಳವ...
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಭಾರತದಲ್ಲಿ ರಕ್ಷಣೆ; ಸರ್ವಪಕ್ಷ ಸಭೆಯಲ್ಲಿ ಸಹಮತ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಭಾರತದಲ್ಲಿ ರಕ್ಷಣೆ; ಸರ್ವಪಕ್ಷ ಸಭೆಯಲ್ಲಿ ಸಹಮತ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹಿಂಸಾಚಾರದಿಂದ ತತ್ತರಿಸಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ ಬಳಿಕ ಭಾರತಕ್ಕೆ ಆಗಮಿಸಿದ್ದು, ಅವರಿಗೆ ರಕ್ಷಣೆ ನೀಡಲು ಭಾರತ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರದ ಈ ನಿಲುವಿಗೆ ಸರ್ವಪಕ್ಷಗಳು ಸಹಮತ ಸೂಚಿಸಿವೆ. ಈ ಸಂಬಂಧ ನವ ದೆಹಲಿಯಲ್ಲಿ ಮಂಗಳವಾರ ನಡೆದ ಸರ್ವಪಕ್ಷ ಸಭೆ ಮಹತ್ವದ ನಿರ್ಣಯ ಅಂಗೀಕರಿಸಿದೆ. ಬಾಂಗ್ಲಾದೇಶದಿಂದ ಪಲಾಯನವಾಗಿರುವ ಪ್ರಧಾನಿ ಶೇಖ್ ಹಸೀನಾ ಅವರಿಗೆ ಭಾರತದ ನೆರವು ನೀಡುವ ಕುರಿತು ಮಹತ್ವದ ನಿರ್ಣಯಕ್ಕೆ ಸರ್ವಪಕ್ಷಗಳು ಬೆಂಬಲಿಸಿವೆ. ಸೋಮವಾರ ಸಂಜೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಸಕಲ ರೀತಿಯ ನೆರವು ನೀಡುವುದಾಗಿ ಭಾರತ ಭರವಸೆ ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮಂಗಳವಾರ ಸರ್ವಪಕ್ಷ ಸಭೆಯಲ್ಲಿ ತಿಳಿಸಿದ್ದಾರೆ....
ವಯನಾಡ್ ಸಂತ್ರಸ್ತರಿಗಾಗಿ 1 ಕೋ.ರೂ.ದೇಣಿಗೆ ಸಮರ್ಪಿಸಿದ ಚಿರಂಜೀವಿ, ರಾಮ್‌ಚರಣ್

ವಯನಾಡ್ ಸಂತ್ರಸ್ತರಿಗಾಗಿ 1 ಕೋ.ರೂ.ದೇಣಿಗೆ ಸಮರ್ಪಿಸಿದ ಚಿರಂಜೀವಿ, ರಾಮ್‌ಚರಣ್

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಹೈದರಾಬಾದ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ದುರ್ಘಟನೆಯ ಸಂತ್ರಸ್ತರ ನೆರವಿಗೆ ಧಾವಿಸಿರುವ ದಕ್ಷಿಣ ಭಾರತದ ಖ್ಯಾತ ನಟರಾದ ಚಿರಂಜೀವಿ ಹಾಗೂ ರಾಮ್ ಚರಣ್ ಭಾರೀ ಮೊತ್ತದ ದೇಣಿಗೆ ನೀಡಿದ್ದಾರೆ, ಈ ದುರಂತದಲ್ಲಿ 380ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಸಾವಿರಾರು ಮಂದಿ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಸಂತ್ರಸ್ತರ ನೆರವಿಗೆ ಸಿನಿಮಾ ತಾರೆಯರು ಸಹಾಯ ಹಸ್ತ ಚಾಚಿದ್ದಾರೆ. ಇದೇ ವೇಳೆ, ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ಅವರು ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ...
ಹಿಂಸಾತ್ಮಕ ಪ್ರತಿಭಟನೆಗೆ ಬೆಚ್ಚಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

ಹಿಂಸಾತ್ಮಕ ಪ್ರತಿಭಟನೆಗೆ ಬೆಚ್ಚಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

ದೇಶ-ವಿದೇಶ, ಪ್ರಮುಖ ಸುದ್ದಿ
ಢಾಕಾ: ಉದ್ಯೋಗ ಮೀಸಲಾತಿ ವಿವಾದದಿಂದಾಗಿ ಹಿಂಸಾಚಾರ ಭುಗಿಲೆದ್ದಿರುವ ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆಯುತ್ತಿದ್ದು ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಒಂದೆಡೆ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ವಿದ್ಯಾರ್ಥಿ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಪ್ರತಿಭಟನೆ ನಡೆದಿದ್ದರೆ, ಆಡಳಿತ ಪಕ್ಷದ ಕಾರ್ಯಕರ್ತರು ಈ ಹೋರಾಟಕ್ಕೆ ಅಡ್ಡಿಪಡಿಸಿದ್ದಾರೆ. ಈ ಸನ್ನಿವೇಶಕ್ಕೆ ವೇಶದಿಂದಾಗಿ ಸಂಘರ್ಷ ಭುಗಿಲೆದ್ದು ಇಡೀ ದೆಶ ಭೀಕರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಈ ನಡುವೆ, ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ತಿಳಿಸಿದ್ದಾರೆ. ರಾಜೀನಾಮೆ ಬಳಿಕ ಸುರಕ್ಷಿತ ಸ್ಥಳಕ್ಕೆ ಅವರು ತೆರಳಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ, ಶೇಖ್ ಹಸೀನಾ ಅವರು ಭಾರತಕ್ಕೆ ಪಲಾಯನವಾಗಿದ್ದಾರೆ ಎಂಬ ಮಾತುಗಳೂ ಹರಿದಾಡುತ್ತಿವೆ....
ದೇವಸ್ಥಾನದ ಮೆರವಣಿಗೆ ವೇಳೆ ಘೋರ ದುರಂತ; ವಿದ್ಯುತ್ ಸ್ಪರ್ಷಿಸಿ 8 ಮಂದಿ ಸಾವು

ದೇವಸ್ಥಾನದ ಮೆರವಣಿಗೆ ವೇಳೆ ಘೋರ ದುರಂತ; ವಿದ್ಯುತ್ ಸ್ಪರ್ಷಿಸಿ 8 ಮಂದಿ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ಪಾಟ್ನಾ: ಬಿಹಾರದ ಸುಲ್ತಾನ್‌ಪುರ ಗ್ರಾಮದ ದೇವಸ್ಥಾನವೊಂದರ ಕಾರ್ಯಕ್ರಮದ ಮೆರವಣಿಗೆಯಲ್ಲಿ ಡಿಜೆ ವಾಹನಕ್ಕೆ ವಿದ್ಯುತ್‌ ತಗುಲಿ 8 ಮಂದಿ ಬಲಿಯಾಗಿದ್ದಾರೆ. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಈ ಗ್ರಾಮದಲ್ಲಿ ಹುಡುಗರು ಪ್ರತಿ ಸೋಮವಾರ ಸಮೀಪದ ಹರಿಹರನಾಥ ದೇವಸ್ಥಾನಕ್ಕೆ ಜಲಾಭಿಷೇಕ ಕೈಂಕರ್ಯ ಆಯೋಜಿಸಿದ್ದರು. ಈ ಸಂಬಂಧ ಭಾನುವಾರ ಮಧ್ಯರಾತ್ರಿ ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಡಿಜೆ ವಾಹನಕ್ಕೆ ವಿದ್ಯುತ್ ತಂತಿ ತಗುಲಿದೆ ಎನ್ನಲಾಗಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಬಾಂಗ್ಲಾ ಹಿಂಸಾಚಾರ; ಸದ್ಯದ ಸ್ಥಿತಿಯಲ್ಲಿ ಢಾಕಾ ಪ್ರವಾಸ ಬೇಡ ಎಂದ ಮೋದಿ ಸರ್ಕಾರ

ಬಾಂಗ್ಲಾ ಹಿಂಸಾಚಾರ; ಸದ್ಯದ ಸ್ಥಿತಿಯಲ್ಲಿ ಢಾಕಾ ಪ್ರವಾಸ ಬೇಡ ಎಂದ ಮೋದಿ ಸರ್ಕಾರ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಿಯಂತ್ರಿಸಲಾಗದ ಸ್ಥಿತಿ ತಲುಪಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಆ ದೇಶಕ್ಕೆ ಭೇಟಿ ನೀಡದಂತೆ ಭಾರತೀಯರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಿಂಸಾತ್ಮಕ ಪ್ರತಿಭಟನೆಗಳಿಂದ ಬಾಂಗ್ಲಾದೇಶ ನಲುಗಿದ್ದು, 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಮನಗಂಡಿರುವ ಮೋದಿ ಸರ್ಕಾರ, ಮುಂದಿನ ಸೂಚನೆ ಬರುವವರೆಗೆ ಬಾಂಗ್ಲಾದೇಶಕ್ಕೆ ತೆರಳದಂತೆ ಎಚ್ಚರಿಕೆ ನೀಡಿದೆ. Advisory for Bangladesh:https://t.co/mKs1auhnlK pic.twitter.com/m5c5Y0Bn8b — Randhir Jaiswal (@MEAIndia) August 4, 2024 ಈ ಸಂಬಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಬಾಂಗ್ಲಾದೇಶದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಭಟನಾ ನಿರತರ ನಡುವೆ ಭುಗಿಲೆದ್ದ ಹಿಂಸಾಚಾರ ಭುಗಿಲೆದ್ದಿದ್ದು, ಅಲ್ಲಿರುವ ಭಾರತೀಯರಿಗೂ ಸುರಕ್ಷತೆ ಬಗ್ಗೆ ಸಲಹೆ ನೀಡಲಾಗಿದೆ. ಬಾಂಗ್ಲಾದೇಶದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ತೀವ್ರ ಎಚ್ಚರಿಕೆ ವಹಿಸಲು, ಢಾಕಾದಲ್ಲಿರುವ ಭಾರತದ ಹೈಕಮಿಷನ್ ಕಚೇರಿಯ ತುರ್ತು ದೂರವಾಣಿ ಸಂಖ್...
ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ನೂರಕ್ಕೂ ಹೆಚ್ಚು ಜನರ ಸಾವು

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ನೂರಕ್ಕೂ ಹೆಚ್ಚು ಜನರ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ಢಾಕಾ: ಬಾಂಗ್ಲಾದೇಶದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಕಾರ್ಯಕರ್ತರ ನಡುವಿನ ಸಂಘರ್ಷ ತಾರಕಕ್ಕೇರಿದ್ದು ಹಿಂಸಾಚಾರ ಉಲ್ಬಣಗೊಂಡಿದೆ. ಹತ್ತಕ್ಕೂ ಹೆಚ್ಚು ನಗರಗಳಿಗೆ ಹಿಂಸಾಚಾರ ವ್ಯಾಪಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಾಂಗ್ಲಾ ದೇಶದ ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರು ಹಾಗೂ ಪ್ರತಿಭಟನಾಕಾರರ ನಡುವೆ ಹೊಡೆದಾಟ ಬಡಿದಾಟವೇ ನಡೆದಿದೆ. ಉದ್ಯೋಗ ಮೀಸಲಾತಿ ಸಹಿತ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳ ಬೆಂಬಲಿಗರು ಹಲವು ದಿನಗಳಿಂದ ಪ್ರತಿಭಟನೆ ನಡೆಸಿತ್ತಿದ್ದಾರೆ. ಪ್ರಧಾನಿ ಶೇಕ್ ಹಸೀನಾ ರಾಜೀನಾಮೆಗೂ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆ ಹತ್ತಿಕ್ಕಲು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರು ಅಖಾಡಕ್ಕಿಳಿದಿದ್ದು ಉಭಯ ಗುಂಪುಗಳ ನಡುವೆ ಹಿಂಸಾಚಾರ ನಡೆದಿದೆ. ಈ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅವಾಮಿ ಲೀಗ್ ನ ಬೆಂಬಲಿಗರು, ಛಾತ್ರಾ ಲೀಗ್ ಹಾಗೂ ಜುಬೋ ಲೀಗ್ ಕಾರ್ಯಕರ್ತರ ನಡುವೆ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಹಾಗೂ ಸೇನಾಪಡೆ ಶತಪ್ರಯತ್ನ ನಡೆಸುತ್ತಿದೆ....
‘ವೇದಾ’ ಬಗ್ಗೆ ಹೆಚ್ಚಿದ ನಿರೀಕ್ಷೆ; ಟ್ರೇಲರ್ ಬಗ್ಗೆ ಸಕತ್ ಮೆಚ್ಚುಗೆ

‘ವೇದಾ’ ಬಗ್ಗೆ ಹೆಚ್ಚಿದ ನಿರೀಕ್ಷೆ; ಟ್ರೇಲರ್ ಬಗ್ಗೆ ಸಕತ್ ಮೆಚ್ಚುಗೆ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಸಿನಿರಂಗದಲ್ಲಿ 'ವೇದಾ' ಚಿತ್ರದ ತೀವ್ರ ಕುತೂಹಲ ಕೆರಳಿಸಿದೆ. ನಟ ಜಾನ್ ಅಬ್ರಹಾಂ ಮತ್ತು ಶ್ರಾವರಿ ಅವರು 'ವೇದಾ'ದಲ್ಲಿ ನಟಿಸಿದ್ದು, ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಿಖಿಲ್ ಅಡ್ವಾಣಿ ಅವರು ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಟ್ರೇಲರ್ ಬಗ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷೆಯ ಈ‌ ಸಿನಿಮಾ ಸ್ವಾತಂತ್ರ್ಯ ದಿನದಂದು ತೆರೆಕಾಣಲಿದೆ ಎಂದು ನಟ ಜಾನ್ ಅಬ್ರಹಾಂ ಮಾಹಿತಿ ಹಂಚಿಕೊಂಡಿದ್ದಾರೆ. https://youtu.be/eGfYMhdKR0Q?si=A6zsAKIgaFrI_LO6...
ಸನಿಲೋಕದ ರಂಜನೆಗೆ ‘ಸಿಟಡೆಲ್: ಹನಿ ಬನ್ನಿ’ ಸಾಕ್ಷಿಯಾಗಲಿದೆ..!

ಸನಿಲೋಕದ ರಂಜನೆಗೆ ‘ಸಿಟಡೆಲ್: ಹನಿ ಬನ್ನಿ’ ಸಾಕ್ಷಿಯಾಗಲಿದೆ..!

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಸಿಟಡೆಲ್: ಹನಿ ಬನ್ನಿ ಟೀಸರ್ ಅನ್ನು ಸಿನಿ ಅಭಿಮಾನಿಗಳು ಸಕತ್ತಾಗಿ ಎಂಜಾಯ್ ಮಾಡಿದ್ದಾರಂತೆ. ಹೀಗೆಂದು ಸಿನಿ ತಂಡ ಸಂತಸ ಹಂಚಿಕೊಂಡಿದೆ. https://youtu.be/J2rYqO15lJk?si=6K89Az2k34UPm0V3 ನಟಿ ಸಮಂತಾ ರೂತ್ ಪ್ರಭು ಮತ್ತು ವರುಣ್ ಅಭಿನಯದ ಸಿಟಡೆಲ್: ಹನಿ ಬನ್ನಿ ಟೀಸರ್ ಬಿಡುಗಡೆಯಾಗಿದ್ದು ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ. ಈ ಚಿತ್ರವನ್ನು ರಾಜ್ ಮತ್ತು ಡಿ.ಕೆ. ನಿರ್ದೇಶಿಸಿದ್ದಾರೆ. ಸಿನಿ ಲೋಕದಲ್ಲಿ ಮತ್ತೊಂದು ರಂಜನೆಯ ಕ್ಷಣಗಳಿಗೆ ಈ ಸಿನಿಮಾ ಸಾಕ್ಷಿಯಾಗಲಿದೆ ಎಂಬ ಕಮೆಂಟ್ಸ್ ಗಮನಸೆಳೆದಿದೆ....
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮೂಲಕ ಬೆಂಗಳೂರು ದೇಶದ ಗಮನಸೆಳೆದಿದೆ. ಬೆಂಗಳೂರಿನಲ್ಲಿ ಬಿಸಿಸಿಐ ನಿರ್ಮಾಣ ಮಾಡುತ್ತಿರುವ ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಬಹುತೇಕ ಅಂತಿಮ ಹಂತದಲ್ಲಿದೆ. ಶೀಘ್ರದಲ್ಲೇ ಉದ್ಘಾಟನೆ ನೆರವೇರಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರ ತಿಳಿಸಿದ್ದಾರೆ. 45 ಅಭ್ಯಾಸದ ಪಿಚ್‌ಗಳು ಮತ್ತು ಒಲಿಂಪಿಕ್ಸ್ ಗಾತ್ರದ ಈಜುಕೊಳ ಸಹಿತ ವಿಶೇಷ ಸೌಲಭ್ಯವಿರುವ ಕ್ರಿಕೆಟ್ ಅಕಾಡೆಮಿ ಇದಾಗಿದೆ. ಈ ಅಕಾಡೆಮಿ ಬಗ್ಗೆ ಜಯ್ ಷಾ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅತ್ಯಾಧುನಿಕ ತರಬೇತಿ, ಕ್ರೀಡಾ ವಿಜ್ಞಾನ ಸೌಲಭ್ಯಗಳಿವೆ ಎಂದು ಅವರು ಪರಿಚಯಿಸಿದ್ದಾರೆ. Very excited to announce that the @BCCI’s new National Cricket Academy (NCA) is almost complete and will be opening shortly in Bengaluru. The new NCA will feature three world-class playing grounds, 45 practice pitches, indoor cricket pitches, Olympic-size swimming pool and… pic.twitter.com/...