Tuesday, March 17

ದೇಶ-ವಿದೇಶ

ಮಧ್ಯಪ್ರಾಚ್ಯ ಸಂಘರ್ಷ; ಇರಾನ್ ಕ್ಷಿಪಣಿ ದಾಳಿಗೆ ಇಸ್ರೇಲ್ ಪ್ರತೀಕಾರ, ಲೆಬನಾನ್ ಮೇಲೆ ಬಾಂಬ್

ಮಧ್ಯಪ್ರಾಚ್ಯ ಸಂಘರ್ಷ; ಇರಾನ್ ಕ್ಷಿಪಣಿ ದಾಳಿಗೆ ಇಸ್ರೇಲ್ ಪ್ರತೀಕಾರ, ಲೆಬನಾನ್ ಮೇಲೆ ಬಾಂಬ್

ದೇಶ-ವಿದೇಶ, ಪ್ರಮುಖ ಸುದ್ದಿ
ಗಾಜಾ: ಮಧ್ಯಪ್ರಾಚ್ಯವೂ ರಾಷ್ಟ್ರಗಳ ನಡುವಿನ ಸಮರ ಉಗ್ರ ಸ್ವರೂಪ ತಾಳಿದ್ದು, ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ಇಸ್ರೇಲ್ ಸೇನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ತನ್ನ ಮಿಲಿಟರಿ ಪದೇ ಲೆಬನಾನ್ ಮೇಲೆ ನಡೆಸಿದ ದಾಳಿ ವೇಳೆ 8 ಯೋಧರು ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿದೆ.ಕಳೆದ ವಾರ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಇಸ್ರೇಲ್ ಪದೇ ದಾಳಿ ಮಾಡಿ ಹತ್ಯೆ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್ ವಾಯುಪಡೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಮಂಗಳವಾರ ನಡೆದ ಇರಾನ್‌ನ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಭರ್ಜರಿ ಕಾರ್ಯಾಚರಣೆ ಕೈಗೊಂಡಿದೆ. ಎರಡು ಪ್ರತ್ಯೇಕ ದಾಳಿಗಳಲ್ಲಿ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ....
ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ 'ಚೌಧರಿ' ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ.https://www.youtube.com/watch?v=4noS-o_9q0o&t=2s...
ಜೈಲರ್ ನಂತರ ʼವೆಟ್ಟೈಯನ್‌ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

ಜೈಲರ್ ನಂತರ ʼವೆಟ್ಟೈಯನ್‌ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ʼಜೈಲರ್‌ʼ ಬಳಿಕ ರಜಿನಿಕಾಂತ್‌ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್‌ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್‌ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ.https://youtu.be/zPqMbwmGC1U?si=Kn7rPkKdUMYJUUlu
ದೆಹಲಿ ಪೊಲೀಸರ ಭರ್ಜರಿ ಬೇಟೆ; 2,000 ಕೋಟಿ ರೂ ಮೌಲ್ಯದ ಕೊಕೇನ್ ವಶ

ದೆಹಲಿ ಪೊಲೀಸರ ಭರ್ಜರಿ ಬೇಟೆ; 2,000 ಕೋಟಿ ರೂ ಮೌಲ್ಯದ ಕೊಕೇನ್ ವಶ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ರಾಜಧಾನಿ ದೆಹಲಿ ಪೊಲೀಸರು ಡ್ರಗ್ಸ್ ಮಾಫಿಯಾ ಭರ್ಜರಿ ಬೇಟೆಯಾಡಿದ್ದಾರೆ. ಅತಿ ದೊಡ್ಡ ಮಾದಕ ದ್ರವ್ಯ ದಂಧೆ ಭೇದಿಸಿರುವ ಪೊಲೀಸರು, ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 560 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ.ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಈ ಕಾರ್ಯಾಚರಣೆ ನಡೆಸಿದ್ದು ನಾಲ್ವರನ್ನು ಬಂಧಿಸಿದ್ದು, 565 ಕಿಲೋಗ್ರಾಂ ಕೊಕೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಮಾಫಿಯಾ ಜಾಲವು ದೆಹಲಿ ಸಹಿತ ವಿವಿಧ ರಾಜ್ಯಗಳಲ್ಲಿ ಕೊಕೇನ್ ಮಾರಾಟ ಮಾಡಲು ಯೋಜಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮ ಗಮನಸೆಳೆಯಿತು. ‌ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಾಗೂ ಕಾಂಗ್ರೆಸ್ ನಾಯಕರು, ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು.ಭಾರತ ಜೋಡೋ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, "ನಾವಿಂದು ಬಹಳ ಪುಣ್ಯದ ವರ್ಷದಲ್ಲಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನಕ್ಕೆ ಈಗ ಶತಮಾನ ತುಂಬಿದೆ. ಈ ಸಂದರ್ಭವನ್ನು ನಾವು ಬಳಸಿಕೊಂಡು ಗಾಂಧಿಜಿ ಅವರು ಹಾಕಿಕೊಟ್ಟ ದಾರಿ ಹಾಗೂ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ. ಈ ದೇಶಕ್ಕೆ ಕಾಂಗ್ರೆಸ್ ಹಾಕಿಕೊಟ್ಟಿರುವ ಬುನಾದಿ, ಗಾಂಧಿ ಅವರ ತತ್ವ, ಆದರ್ಶವೇ ನಮ್ಮ ಆಸ್ತಿ. ಈ ಸಂದರ್ಭದಲ್ಲಿ ಕರ್ನಾಟಕದವೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಎಐಸಿಸಿ ಅಧ್ಯಕ್ಷರಾಗಿರ...
ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜಿನಿಕಾಂತ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸೋಮವಾರ ಅವರನ್ಬು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡು ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿವೆ. ಈ ನೆನಪಿಗೆ ರಾಜ್ಯಾದ್ಯಂತ ʼಗಾಂಧಿ ನಡಿಗೆʼ, ʼಸ್ವಚ್ಚತಾ ಪ್ರತಿಜ್ಞಾವಿಧಿʼ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜತೆಗೆ ಇಡೀ ವರ್ಷ ನಾನಾ ಕಾರ್ಯಕ್ರಮಗಳನ್ನು ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ..ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಸೋಮವಾರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಉದ್ದಗಲಕ್ಕೂ ಅಕ್ಟೋಬರ್ 2 ರ ಬೆಳಿಗ್ಗೆ 11 ಗಂಟೆಗೆ ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ, ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ತನಕ ʼಗಾಂಧಿ ಜ್ಯೋತಿ ಪಾದಯಾತ್ರೆʼ ನಡೆಸಲಾಗುವುದು” ಎಂದರು.“ಪಾದಯಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ''ಗಾಂಧಿ ನಡಿಗೆ'' ಕಾರ್ಯಕ್ರಮ ನಡೆಯುತ್ತದೆ. ...
ಹರಿಯಾಣ: ಬಿಜೆಪಿಯ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಬಂಡಾಯವೇ ಸವಾಲು

ಹರಿಯಾಣ: ಬಿಜೆಪಿಯ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಬಂಡಾಯವೇ ಸವಾಲು

ದೇಶ-ವಿದೇಶ, ಪ್ರಮುಖ ಸುದ್ದಿ
ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿರುವ ಬಿಜೆಪಿಗೆ ಇದೀಗ ಬಂಡಾಯ ಸವಾಲಾಗಿದೆ. ಬಂಡಾಯ ಮುಖಂಡರ ವಿರುದ್ದ ನಿಷ್ಠೂರ ಕ್ರಮಕ್ಕೆ ನಿರ್ಧರಿಸಿರುವ ಬಿಜೆಪಿ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಮತ್ತು ಇತರ ಏಳು ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದೆ.90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿಯೂ ಗೆಲುವು ಸಾಧಿಸಲೇಬೇಕೆಂದು ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ಟಿಕೆಟ್ ವಂಚಿತರ ಸವಾಲು ಎದುರಾಗಿದೆ.ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಸಹಿತ ಹಲವು ಮುಖಂಡರು ಸಂಧಾನಕ್ಕೆ ಮಣಿಯಲಿಲ್ಲ. ಈ ಹಿನ್ನೆಲೆಯಲ್ಲಿ ಏಳು ನಾಯಕರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.ಹರಿಯಾಣ ಬಿಜೆಪಿಯ ಮುಖ್ಯಸ್ಥ ಮೋಹನ್ ಲಾಲ್ ಅವರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಣದ ಮೂಲಗಳು ತಿಳಿಸಿವೆ....
ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ತತ್ತರ; ನೂರಕ್ಕೂ ಹೆಚ್ಚು ಮಂದಿ ಬಲಿ

ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ತತ್ತರ; ನೂರಕ್ಕೂ ಹೆಚ್ಚು ಮಂದಿ ಬಲಿ

ದೇಶ-ವಿದೇಶ, ಪ್ರಮುಖ ಸುದ್ದಿ
ಕಠ್ಮಂಡು: ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ನೇಪಾಳ ತತ್ತರಿಸಿದೆ. ನಿರಂತರ ಮಳೆಯಿಂದಾಗಿ ಪ್ರವಾಹ ಉಲ್ಬಣಗೊಂಡಿದ್ದು ನೂರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.ಮಳೆಯಿಂದಾಗಿ ಸಂಭವಿಸಿದ ವಿವಿಧ ಪ್ರಕರಣಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 112ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರವಾಹದಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಅಸಂಖ್ಯ ಮಂದಿ ನಾಪತ್ತೆಯಾಗಿದ್ದಾರೆ. 3,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು.ಎಲ್ಲ ಪಕ್ಷಗಳು ದೇಣಿ...