Saturday, June 13

ದೇಶ-ವಿದೇಶ

ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ ವರದಿ ಮಂಡನೆ: ರಾಜ್ಯಸಭೆಯಲ್ಲಿ ಗದ್ದಲ, ಕೋಲಾಹಲ

ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ ವರದಿ ಮಂಡನೆ: ರಾಜ್ಯಸಭೆಯಲ್ಲಿ ಗದ್ದಲ, ಕೋಲಾಹಲ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ ವರದಿಯನ್ನು ರಾಜ್ಯಸಭೆಯಲ್ಲಿ ಇಂದು ಮಂಡಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ-ಪ್ರತಿಪಕ್ಷಗಳ ನಡುವೆ ಗದ್ದಲ ಕೋಲಾಹಲ ಏರ್ಪಟ್ಟು ಸದನವನ್ನು ಮುಂದೂಡಲಾಯಿತು.ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ಜೆಪಿಸಿ ವರದಿ ಮಂಡನೆಯಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದವು. ಗದ್ದಲ ಕೋಲಾಹಲದ ನಡುವೆ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದವು.ಈ ವೇಳೆ ಸದಸ್ಯರನ್ನು ಸಮಾಧಾನ ಪಡಿಸಲೆತ್ತನಿಸಿದ ಸಭಾಧ್ಯಕ್ಷ ಜಗದೀಪ್ ಧಂಖರ್ ಅವರು, ರಾಷ್ಟ್ರಪತಿಗಳಿಗೆ ಅಗೌರವ ತೋರಿಸುವಂತಹಾ ನಡೆ ಸರಿಯಲ್ಲ ಎಂದರಲ್ಲದೆ, ಸದಸ್ಉರನ್ನು ತಮ್ಮ ಸ್ಥಾನದಲ್ಲಿ ಕುಳಿತುಕೊಳ್ಳುವಂತೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಬೇಕು ಎಂದು ಮನವಿ ಮಾಡಿದರು. ಆದರೆ ವಿರೋಧ ಪಕ್ಷಗಳ ಸಂಸದರು ಒಪ್ಪಲಿಲ್ಲ. ಈ ಗದ್ದಲದ ನಡುವೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು....
ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

ವಿಜಯ್ ದೇವರಕೊಂಡ ಅವರ 12ನೇ ಸಿನಿಮಾ ‘ಕಿಂಗ್​ಡಮ್’; ಟೀಸರ್ ಅನಾವರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ.. Actor Vijay Deverakonda’s next titled Kingdom; Film to hit screens on May 30ವಿಜಯ್ ದೇವರಕೊಂಡ ನಟನೆಯ 12ನೇ ಸಿನಿಮಾ ಬಗ್ಗೆ ಇದ್ದ ಕುತೂಹಲ ತಣ್ಣಗಾಗಿದೆ. ಈ ವರೆಗೂ ವಿಜಯ್ ದೇವರಕೊಂಡ ಅವರ ಮುಂಬರುವ ಸಿನಿಮಾವನ್ನು ‘VD12’ ಎಂದು ಕರೆಯಲಾಗುತ್ತಿತ್ತು. ಇದೀಗ ಚಿತ್ರದ ಟೈಟಲ್ ಅನಾವರಣ ಆಗಿದೆ. ಟೀಸರ್​ ಕೂಡ ಬಿಡುಗಡೆ ಆಗಿದ್ದು, ನೂತನ ಸಿನಿಮಾಗೆ ‘ಕಿಂಗ್​ಡಮ್’ ಎಂದು ಹೆಸರಿಡಲಾಗಿದೆ.https://youtu.be/McPGQ-Nb9Uk?si=crsksyReJMcXmBECತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ‘ಕಿಂಗ್​ಡಮ್​’ ಸಿನಿಮಾದ ಟೀಸರ್ ಬಿಡುಗಡೆಯಾಗಿವೆ. ತೆಲುಗಿನಲ್ಲಿ ಜೂನಿಯರ್​ ಎನ್​ಟಿಆರ್​, ಹಿಂದಿಯಲ್ಲಿ ರಣಬೀರ್​ ಕಪೂರ್​ ಹಾಗೂ ತಮಿಳಿನಲ್ಲಿ ಸೂರ್ಯ ಅವರು ‘ಕಿಂಡ್​ಕಮ್’ ಟೀಸರ್​ಗೆ ಧ್ವನಿ ನೀಡಿರುವುದು ವಿಶೇಷ.....
ಅಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶ

ಅಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಅಯೋಧ್ಯೆ: ಅಯೋಧ್ಯೆಯಲ್ಲಿರುವ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶರಾಗಿದ್ದಾರೆ.ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ.. Ayodhya Ram Temple’s chief priest Acharya Satyendra Das passes awayಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯುವಿಗೆ ಒಳಗಾಗಿದ್ದು ಅನಂತರ ಅವರ ಆರೋಗ್ಯ ಕ್ಷೀಣಿಸಿತ್ತೆನ್ನಲಾಗಿದೆ.85 ವರ್ಷ ವಯಸ್ಸಿನ ಆಚಾರ್ಯ ಸತ್ಯೇಂದ್ರ ದಾಸ್ ಅವರು, 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು. ಭವ್ಯ ರಾಮ ಮಂದಿರ ನಿರ್ಮಾಣ ನಂತರವೂ ಶ್ರೀರಾಮನ ಕೈಂಕರ್ಯದಲ್ಲಿ ಮುಂಚೂಣಿಯಲ್ಲಿದ್ದರು.‌...
ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 16 ದೇಶಗಳ ರಾಯಭಾರಿಗಳು ಭಾಗಿ

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 16 ದೇಶಗಳ ರಾಯಭಾರಿಗಳು ಭಾಗಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳಲ್ಲದೆ, ಹಲವು ದೇಶಗಳ ರಾಯಭಾರಿಗಳು ಕೂಡ ಭಾಗವಹಿಸಿದ್ದಾರೆ.ಇವರಲ್ಲಿ ಬಹ್ರೇನ್ ರಾಯಭಾರಿ ಮಹಮದ್ ಅಲ್ ಗಾವ್ಡ್, ಕ್ಯೂಬಾದ ಅಬೆಲ್ ಅಬಾಲ್ ಡೆಸ್ಪೇನ್, ಇಟಲಿಯ ಆಂಟೋನಿಯೊ ಬಾರ್ತೋಲಿ, ನೇಪಾಳದ ಡಾ.ಶಂಕರ್ ಪ್ರಸಾದ್ ಶರ್ಮ, ಪೋಲೆಂಡಿನ ಸೆಬಾಸ್ಟಿಯನ್ ಡಾಮ್ಜಾಲ್ಸ್ಕಿ, ಮಲೇಷ್ಯಾದ ದಾತೊ ಮಜಾಫರ್ ಷಾ ಮುಸ್ತಫ, ಜಪಾನಿನ ಓನೋ ಕೀಚಿ, ಕಾಂಗೋದ ರೇಮಂಡ್ ಸರ್ಜ್ ಬೇಲ್, ಜಮೈಕಾದ ಜೇಸನ್ ಹಾಲ್ ಫಿಜಿಯ ಜಗನ್ನಾಥ ಸ್ವಾಮಿ, ಜಮೈಕಾದ ಜೇಸನ್ ಹಾಲ್, ಕಝಕಸ್ತಾನದ ನೂರುಲಾನ್ ಝಲ್ಗಸ್ಬಯೇವ್, ಮೊರಾಕ್ಕೋದ ಮಹಮದ್ ಮಾಲೀಕಿ, ಸೀಷೆಲ್ಸ್ ನ ಲಲಟಿಯಾನಾ ಅಕೌಷೆ, ತಝಕಿಸ್ತಾನದ ಲೂಕ್ಮನ್ ಬೊಬಕಾಲೊಜೋಡ, ಟೋಗೋದ ಯಾವೋ ಇಡೆಂ ಮತ್ತು ಜಿಂಬಾಬ್ವೆಯ ಸ್ಟೆಲ್ಲಾ ನೋಮೋ ಸೇರಿದ್ದಾರೆ....
ಸೈಬರ್ ಅಪರಾಧ: ಖದೀಮರ ಖಾತೆ ಪತ್ತೆಗೆ AI ಬಳಕೆ ಕೇಂದ್ರದ ಚಿಂತನೆ; ಅಮಿತ್ ಶಾ

ಸೈಬರ್ ಅಪರಾಧ: ಖದೀಮರ ಖಾತೆ ಪತ್ತೆಗೆ AI ಬಳಕೆ ಕೇಂದ್ರದ ಚಿಂತನೆ; ಅಮಿತ್ ಶಾ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಮ್ಯೂಲ್ ಖಾತೆಗಳನ್ನು ಗುರುತಿಸಲು ಕೃತಕ ಬುದ್ಧಿಮತ್ತೆಯನ್ನು ಬಳಸುವ ಪ್ರಯತ್ನಗಳು ನಡೆಯುತ್ತಿವೆ, ಆದರೆ ಸೈಬರ್ ಅಪರಾಧದ ವಿರುದ್ಧದ ಹೋರಾಟದಲ್ಲಿ 19 ಲಕ್ಷಕ್ಕೂ ಹೆಚ್ಚು ಅಂತಹ ಖಾತೆಗಳನ್ನು ಪತ್ತೆಹಚ್ಚಲಾಗಿದೆ ಮತ್ತು 2,038 ಕೋಟಿ ರೂ.ಗಳ ವಹಿವಾಟುಗಳನ್ನು ತಡೆಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.ಮ್ಯೂಲ್ ಖಾತೆ ಎಂದರೆ ಅಪರಾಧಿಗಳು ಕದ್ದ ಹಣವನ್ನು ವರ್ಗಾಯಿಸಲು ಬಳಸುವ ಬ್ಯಾಂಕ್ ಖಾತೆ. ಖಾತೆಯನ್ನು ಹೊಂದಿರುವ ವ್ಯಕ್ತಿಯನ್ನು "ಹಣ ಮ್ಯೂಲ್" ಎಂದು ಕರೆಯಲಾಗುತ್ತದೆ.'ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ' ವಿಷಯದ ಕುರಿತು ಗೃಹ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯ ಸಭೆ ನಡೆಸಿದ ಅಮಿತ್ ಶಾ, ಸೈಬರ್ ಹಣಕಾಸು ವಂಚನೆಗಳ ಹೆಚ್ಚಳವನ್ನು ಪರಿಗಣಿಸಿ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) 1930 ಸಹಾಯವಾಣಿಯನ್ನು ಕಾರ್ಡ್‌ಗಳನ್ನು ನಿರ್ಬಂಧಿಸುವಂತಹ ವಿವಿಧ ಸೇವೆಗಳನ್ನು ನೀಡುವ ಒಂದು-ಬಿಂದು ಪರಿಹಾರವಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದರು.ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ..Cyber crime: Amit Shah hints at using...
Invest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ

Invest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಆವರಣದಲ್ಲಿ ಆಯೋಜಿಸಲಾಗಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಚಾಲನೆ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೊದಲಾದ ಗಣ್ಯರ ಉಪಸ್ಥಿತಿಯಲ್ಲಿ ಸಮಾವೇಶಕ್ಕೆ ಚಾಲನೆ ನೀಡಲಾಗಿದೆ.ಬೆಂಗಳೂರಿನಲ್ಲಿ Invest Karnataka 2025 ಹೆಸರಿನಲ್ಲಿ ಮೂರು ದಿನಗಳ ಕಾಲ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜಿತವಾಗಿದೆ. ಈ ಸಮಾವೇಶದಲ್ಲಿ ಪ್ರತಿಷ್ಠಿತ ಕಂಪನಿಗಳೊಂದಿಗೆ ಹೂಡಿಕೆ ಒಪ್ಪಂದ, ವಿಚಾರ ಸಂಕಿರಣ ನಡೆಯಲಿದೆ....
KSRTCಗೆ ರಾಷ್ಟ್ರೀಯ ಹಾಗೂ ವಿಶ್ವ ನಾವೀನ್ಯತೆ ಪ್ರಶಸ್ತಿಗಳು

KSRTCಗೆ ರಾಷ್ಟ್ರೀಯ ಹಾಗೂ ವಿಶ್ವ ನಾವೀನ್ಯತೆ ಪ್ರಶಸ್ತಿಗಳು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಎಸ್‌ಆರ್‌ಟಿಸಿ ಅನುಷ್ಠಾನಗೊಳಿಸಿರುವ ಉಪಕ್ರಮಗಳಿಗೆ ರಾಷ್ಟ್ರೀಯ ಹಾಗೂ ವಿಶ್ವ ನಾವೀನ್ಯತೆ ಪ್ರಶಸ್ತಿಗಳು ಲಭಿಸಿವೇ.ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 17, 18 ಮತ್ತು 21 ಫೆಬ್ರವರಿ 2025 ರಂದು ಮುಂಬೈನಲ್ಲಿ ನಡೆಯಲಿದೆ.ಉತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ ಕನಸುಗಳ ಕಂಪನಿಗಳು – ಉದ್ಯೋಗದಲ್ಲಿ ಆರೋಗ್ಯ ನಿರ್ವಹಣೆಗೆ ಗೌರವ ವರ್ಷದ ವ್ಯವಹಾರ ನಾಯಕ ಪ್ರಶಸ್ತಿ – ಕಾರ್ಯಸ್ಥಳ ಮತ್ತು ಜನಸಂಪತ್ತು ಅಭಿವೃದ್ಧಿ ವಿಶ್ವ ಆರೈಕೆ ಪ್ರಶಸ್ತಿ – ಉತ್ತಮ ಸಾರ್ವಜನಿಕ ಆರೋಗ್ಯ ಉಪಕ್ರಮ ವಿಶ್ವ ನಾವಿನ್ಯತೆ ಪ್ರಶಸ್ತಿ – ಆರೋಗ್ಯ ತಂತ್ರಜ್ಞಾನದಲ್ಲಿ ಉತ್ತಮ ನಾವೀನ್ಯತೆ ಜಾಗತಿಕ ತಯಾರಿಕಾ ನಾಯಕರ ಪ್ರಶಸ್ತಿ – ಸುಸ್ಥಿರತೆಯ ಗೌರವ ಡಿಜಿಟಲ್ ತಂತ್ರಜ್ಞಾನ ಪ್ರಶಸ್ತಿ.ಹೀಗೆ ವಿವಿಧ ವಿಭಾಗಗಳಲ್ಲಿ ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿಗಳು ಸಿಕ್ಕಿವೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ....
ಭಾರತದ ವೈಮಾನಿಕ ಶಕ್ತಿ ಅನಾವರಣ; ಏರೋ ಇಂಡಿಯಾ 2025 ವೈಶಿಷ್ಟ್ಯಗಳು ಹೀಗಿವೆ

ಭಾರತದ ವೈಮಾನಿಕ ಶಕ್ತಿ ಅನಾವರಣ; ಏರೋ ಇಂಡಿಯಾ 2025 ವೈಶಿಷ್ಟ್ಯಗಳು ಹೀಗಿವೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
ಬೆಂಗಳೂರು: ಉದ್ಯಾನ ನಗರಿಯ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ನಡೆಯುತ್ತಿರುವ ಐದು ದಿನಗಳ ಏರೋ ಇಂಡಿಯಾ 2025 ಪ್ರದರ್ಶನದಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ತನ್ನ ಲಘು ಉಪಯುಕ್ತ ಹೆಲಿಕಾಪ್ಟರ್, ಫೈಟರ್ ಜೆಟ್ ಮತ್ತು ತರಬೇತಿ ವಿಮಾನಗಳನ್ನು ಪ್ರದರ್ಶಿಸುತ್ತಿದೆ."HAL 'ಇನ್ನೋವೇಟ್. ಕೊಲಾಬರೇಟ್. ಲೀಡ್' ಎಂಬ ಥೀಮ್ ಅನ್ನು ಕೇಂದ್ರೀಕರಿಸಿ ಏರೋ ಇಂಡಿಯಾ 2025 ರಲ್ಲಿ ತನ್ನ ಸ್ಥಳೀಯ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶಿಸಲಿದೆ" ಎಂದು HAL ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಿ ಕೆ ಸುನಿಲ್ ಹೇಳಿದ್ದಾರೆ.HAL ನ ಒಳಾಂಗಣ ಪೆವಿಲಿಯನ್ (HAL-E) ನಲ್ಲಿ LUH, ಹಿಂದೂಸ್ತಾನ್ ಟರ್ಬೊ ಟ್ರೈನರ್ (HTT)-40 ಸಿಮ್ಯುಲೇಟರ್, LCA Mk1A ಫೈಟರ್, LCA Mk1 ಟ್ರೈನರ್, ಹಿಂದೂಸ್ತಾನ್ ಜೆಟ್ ಟ್ರೈನರ್ (HJT)-36, HTT-40, LCH ಮತ್ತು ALH Mk IV ನ ಸ್ಕೇಲ್ಡ್ ಮಾದರಿಗಳು ಪ್ರಮುಖ ಆಕರ್ಷಣೆಯಾಗಿರುತ್ತವೆ ಎಂದು ಕಂಪನಿಯ ಹೇಳಿಕೆ ತಿಳಿಸಿದೆ.ವೈಮಾನಿಕ ಪ್ರದರ್ಶನವು LCA Mk 1A, HJT 36, HTT40, LUH ಅನ್ನು ಒಳಗೊಂಡಿರುತ್ತದೆ ಮತ್ತು ಸ್ಥಿರ ಪ್ರದರ್ಶನವು LCA ...
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣ; ನಾಲ್ವರು ಡೈರಿ ಪ್ರಮುಖರ ಬಂಧನ

ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣ; ನಾಲ್ವರು ಡೈರಿ ಪ್ರಮುಖರ ಬಂಧನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ತಿರುಮಲ: ದಕ್ಷಿಣ ಭಾರತದ ಪುಣ್ಯಕ್ಷೇತ್ರ ತಿರುಪತಿ ತಿರುಮಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖರ ಬಂಧನವಾಗಿದೆ. ಭಾನುವಾರ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ.ಲಡ್ಡು ಪ್ರಸಾದ ಪ್ರಕರಣ ಕುರಿತಂತೆ ತನಿಖೆ ಕೈಗೊಂಡಿರುವ ಸಿಬಿಐ ಹೈದರಾಬಾದ್ ವಿಭಾಗದ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ. ಈ ಆರೋಪಿಗಳು ವಿವಿಧ ಡೈರಿಗಳ ಪ್ರಮುಖರೆಂದು ಹೇಳಲಾಗುತ್ತಿದೆ....
ಏರೋ ಇಂಡಿಯಾ ನವ ಭಾರತದ ಶಕ್ತಿ, ಸ್ವಾವಲಂಬನೆಯನ್ನು ಪ್ರದರ್ಶಿಸುವ ವೇದಿಕೆ: ರಾಜನಾಥ್ ಸಿಂಗ್

ಏರೋ ಇಂಡಿಯಾ ನವ ಭಾರತದ ಶಕ್ತಿ, ಸ್ವಾವಲಂಬನೆಯನ್ನು ಪ್ರದರ್ಶಿಸುವ ವೇದಿಕೆ: ರಾಜನಾಥ್ ಸಿಂಗ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಏರೋ ಇಂಡಿಯಾ ನಮ್ಮ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ, ವೈಜ್ಞಾನಿಕ ಮನೋಧರ್ಮ ಮತ್ತು ನಾವೀನ್ಯತೆಯ ಮನೋಭಾವವನ್ನು ಬೆಳೆಸುವುದರ ಜೊತೆಗೆ ಸರ್ಕಾರದ ಬಲವಾದ ಮತ್ತು ಸ್ವಾವಲಂಬಿ ಭಾರತದ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಏರೋ ಇಂಡಿಯಾದ 15 ನೇ ಆವೃತ್ತಿಯ ಮುನ್ನಾದಿನ, ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಏರೋ ಇಂಡಿಯಾ ನವ ಭಾರತದ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಸ್ವಾವಲಂಬನೆಯನ್ನು ಪ್ರದರ್ಶಿಸುವ ವೇದಿಕೆಯಾಗಿದೆ. ಇದು ಭಾರತದ ರಕ್ಷಣಾ ಸನ್ನದ್ಧತೆಗೆ ನಿರ್ಣಾಯಕ ಮಾತ್ರವಲ್ಲ, ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ನಮ್ಮ ರಕ್ಷಣಾ ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತದೆ ಮತ್ತು ಜಾಗತಿಕ ಪಾಲುದಾರಿಕೆಗಳನ್ನು ರೂಪಿಸುತ್ತದೆ. ಎಂದರು.ಆರ್ಡನೆನ್ಸ್ ಫ್ಯಾಕ್ಟರಿ ಮಂಡಳಿಯ ಕಾರ್ಪೊರೇಟೀಕರಣದ ನಂತರ, ಹೊಸದಾಗಿ ರೂಪುಗೊಂಡ ಕಂಪನಿಗಳು ರಕ್ಷಣಾ ಉತ್ಪಾದನೆಯಲ್ಲಿ ಅಸಾಧಾರಣವಾಗಿ ಉತ್ತಮವಾಗಿ ಕಾ...