Tuesday, June 9

ದೇಶ-ವಿದೇಶ

ದೇಶದ 14.72 ಲಕ್ಷ ಶಾಲೆಗಳಲ್ಲಿ 24.8 ಕೋಟಿ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ : ಆರ್ಥಿಕ ಸಮೀಕ್ಷೆ 2024-25

ದೇಶದ 14.72 ಲಕ್ಷ ಶಾಲೆಗಳಲ್ಲಿ 24.8 ಕೋಟಿ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ : ಆರ್ಥಿಕ ಸಮೀಕ್ಷೆ 2024-25

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ಆರ್ಥಿಕ ಸಮೀಕ್ಷೆಯ ಹೈಲೈಟ್ಸ್:ಕಂಪ್ಯೂಟರ್ ಹೊಂದಿರುವ ಶಾಲೆಗಳ ಪ್ರಮಾಣ 2019-20ರಲ್ಲಿ ಇದ್ದ 38.5%ನಿಂದ 2023-2024ರಲ್ಲಿ 57.2% ಗೆ ಏರಿಕೆ, ಇಂಟರ್ ನೆಟ್ ಸೌಲಭ್ಯ ಹೊಂದಿರುವ ಶಾಲೆಗಳ ಪ್ರಮಾಣ 2019-20ರಲ್ಲಿ ಇದ್ದ 22.3%ನಿಂದ 2023-2024ರಲ್ಲಿ 53.9%ಗೆ ಏರಿಕೆ ಇತ್ತೀಚಿನ ವರ್ಷಗಳಲ್ಲಿ ಶಾಲೆ ತೊರೆಯುತ್ತಿರುವ ವಿದ್ಯಾರ್ಥಿಗಳ ಪ್ರಮಾಣ ಸ್ಥಿರವಾಗಿ ಕಡಿಮೆಯಾಗಿವೆ, ಪ್ರಾಥಮಿಕ ಹಂತದಲ್ಲಿ 1.9%, ಉನ್ನತ ಪ್ರಾಥಮಿಕ ಹಂತದಲ್ಲಿ 5.2% ಮತ್ತು ಮಾಧ್ಯಮಿಕ ಹಂತದಲ್ಲಿ 14.1%ಗೆ ತಗ್ಗಿದೆ ಶಿಕ್ಷಣ ವ್ಯವಸ್ಥೆಯ ಚಲನಶೀಲತೆಯನ್ನು ವೇಗವಾಗಿ ಅಭಿವೃದ್ಧಿಪಡಿಸುವಲ್ಲಿ ತಂತ್ರಜ್ಞಾನದ ಏಕೀಕರಣ(ಕೃತಕ ಬುದ್ಧಿಮತ್ತೆ) ಅತ್ಯಗತ್ಯ ಒಟ್ಟು ಉನ್ನತ ಶಿಕ್ಷಣ ಸಂಸ್ಥೆಗಳು(ಎಚ್ಇಐಎಸ್) 2014-15ರಲ್ಲಿ ಇದ್ದ 51,534ರಿಂದ 2022-23ರಲ್ಲಿ 58,643ಕ್ಕೆ ಅಂದರೆ ಶೇಕಡ 13.8ರಷ್ಟು ಹೆಚ್ಚಾಗಿದೆನವದೆಹಲಿ: ಆರ್ಥಿಕ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರದ ಗುರಿಗಳನ್ನು ಸಾಧಿಸಲು ಪೀರ್ ಬೋಧನೆ(ಶಿಕ್ಷಕರಿಗೆ ಬದಲಾಗಿ ಮಕ್ಕಳ ನಡುವೆ ಬೋಧನೆ)ಯಂತಹ ನಾವೀನ್ಯತೆಗೆ ಆರ್ಥಿಕ ಸಮೀಕ್ಷೆ ಒತ್ತು ನೀಡಿದೆ.ಕೇಂದ್ರ ಹಣ...
ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ 1,737.68 ಕೋ.ರೂ.ಖರ್ಚು

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ 1,737.68 ಕೋ.ರೂ.ಖರ್ಚು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು 1,737.68 ಕೋಟಿ ರೂ. ಖರ್ಚು ಮಾಡಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ಲೆಕ್ಕ ಕೊಟ್ಟಿದೆ.884.45 ಕೋಟಿ ರೂ ಪಕ್ಷದ ಪ್ರಚಾರಕ್ಕಾಗಿ ಖರ್ಚು, 853.23 ಕೋಟಿ ರೂ ಅಭ್ಯರ್ಥಿಗಳ ವೆಚ್ಚ, ಜಾಹೀರಾತು ಮತ್ತಿತರ ಪ್ರಚಾರಗಳಿಗಾಗಿ ಸುಮಾರು 611.50 ಕೋಟಿ ರೂ ಖರ್ಚು ಮಾಡಲಾಗಿದೆ. ಪೋಸ್ಟರ್‌ಗಳು, ಬ್ಯಾನರ್‌, ಧ್ವಜ ಮುಂತಾದ ಪ್ರಚಾರ ಸಾಮಗ್ರಿಗಳಿಗಾಗಿ 55.75 ಕೋಟಿ ರೂ, ವೇದಿಕೆ, ಆಸನ, ಧ್ವನಿವರ್ಧಕ ವಾಹನಗಳು ಸೇರಿದಂತೆ ಬಹಿರಂಗ ಪ್ರಚಾರಗಳಿಗಾಗಿ 19.84 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ತನ್ನ ಖರ್ಚು-ವೆಚ್ಚಗಳ ವರದಿಯಲ್ಲಿ ತಿಳಿಸಿದೆ....
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ; ಇಬ್ಬರು ಉಗ್ರರ ಹತ್ಯೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮ ನುಸುಳುವಿಕೆಗೆ ಸೇನೆ ಬ್ರೇಕ್ ಹಾಕಿದೆ. ಪೂಂಚ್ ಜಿಲ್ಲೆಯ ಖಾರಿ ಕರ್ಮರಾ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿಶಸ್ತ್ರಸಜ್ಜಿತ ಉಗ್ರರ ಗುಂಪು ಒಳನುಸುಳಲು ಯತ್ನಿಸಿದ್ದು ಅದನ್ನು ಯೋಧರು ವಿಫಲಗೊಳಿಸಿದ್ದಾರೆ.ಉಗ್ರರು ಒಳನುಸುಳಲು ಯತ್ನಿಸುತ್ತಿದ್ದಂತೆ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ರಾತ್ರಿ ಹಲವು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ಸ್ದಾರೆ. ಕಾರ್ಯಾಚರಣೆ ಸಂದರ್ಭದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಆಮ್ ಆದ್ಮಿಗೆ ಸ್ವಪಕ್ಷೀಯರಿಂದಲೇ ಆಘಾತ; 8 ಶಾಸಕರು ಎಎಪಿ ಪಕ್ಷಕ್ಕೆ ರಾಜೀನಾಮೆ

ಆಮ್ ಆದ್ಮಿಗೆ ಸ್ವಪಕ್ಷೀಯರಿಂದಲೇ ಆಘಾತ; 8 ಶಾಸಕರು ಎಎಪಿ ಪಕ್ಷಕ್ಕೆ ರಾಜೀನಾಮೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿ ಚುನಾವಣೆಗೆ ಕೇವಲ ಐದು ದಿನ ಇರುವಾಗಲೇ, ಆಮ್ ಆದ್ಮಿ ಪಕ್ಷಕ್ಕೆ ಸ್ವಪಕ್ಷೀಯರೇ ಆಘಾತ ನೀಡಿದ್ದಾರೆ. ಟಿಕೆಟ್ ಸಿಗದೇ ಪಕ್ಷದ ವಿರುದ್ದ ಮುನಿಸಿಕೊಂಡಿದ್ದ 8 ಶಾಸಕರು ಎಎಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.ನರೇಶ್ ಯಾದವ್, ರೋಹಿತ್ ಕುಮಾರ್, ರಾಜೇಶ್ ರಿಷಿ, ಮದನ್ ಲಾಲ್, ಪವನ್ ಶರ್ಮಾ, ಮತ್ತು ಭಾವನಾ ಗೌಡ್, ಬಿಎಸ್ ಜೂನ್, ಮತ್ತು ಗಿರೀಶ್ ಸೋನಿ ಅವರು ಆಮ್ ಆದ್ಮಿ ಪಕ್ಷ ತ್ಯಜಿಸಿದ್ದಾರೆ. ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನಡೆ ಬಗ್ಗೆ ಈ ನಾಯಕರು ನಿರಾಶೆ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯು ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ....
ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಮುಂಬೈ: ಶ್ರುತಿ ಹಾಸನ್ ಹಾಲಿವುಡ್‌ನಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಈ ನಟಿ ಶೀಘ್ರದಲ್ಲೇ ಅಂತರರಾಷ್ಟ್ರೀಯ ಚಿತ್ರ "ದಿ ಐ" ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜನವರಿ 28, 2025 ಅವರ ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿರುವ ಚಿತ್ರದ ನಿರ್ದೇಶಕಿ ಡ್ಯಾಫ್ನೆ ಸ್ಕ್ಮನ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “Happy birthday to the stunning, brave and fierce Shruti Haasan, who will always be “our Diana.” The creators of The Eye in London, Greece, America and India love you and celebrate you on this special day and always! @shrutzhaasan.” ಎಂದು ಬರೆದುಕೊಂಡಿದ್ದಾರೆ.ಶ್ರುತಿ ಹಾಸನ್ ಅವರು ಈ ಚಿತ್ರದಲ್ಲಿ ಡಯಾನಾ ಪಾತ್ರವನ್ನು ನಿರ್ವಹಿಸಲಿದ್ದಾರೆ. ಫಸ್ಟ್-ಲುಕ್ ಪೋಸ್ಟರ್‌ನಲ್ಲಿ ಅವರು ನೀಲಿ ಹೈ-ನೆಕ್ ಸ್ವೆಟರ್‌ನಲ್ಲಿ ಪೋಸ್ ನೀಡಿದ್ದಾರೆ."ದಿ ಐ" ಈಗಾಗಲೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಅಲೆಗಳನ್ನು ಸೃಷ್ಟಿಸಿದೆ, ಗ್ರೀಕ್ ಅಂತರರಾ...
ಹೃದಯದ ಅಪಾಯ ತಡೆಯಲು ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯ

ಹೃದಯದ ಅಪಾಯ ತಡೆಯಲು ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯವನ್ನು ಒದಗಿಸಬಹುದು ಮತ್ತು ಅದನ್ನು ಉತ್ತೇಜಿಸಬೇಕು ಎಂದು ಬುಧವಾರ ತಜ್ಞರು ಪ್ರತಿಪಾದಿಸಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಸಂಬಂಧಿತ ಹೃದಯ ಅಪಾಯಗಳನ್ನು ಎದುರಿಸಲು ಪೊಟ್ಯಾಸಿಯಮ್-ಪುಷ್ಟೀಕರಿಸಿದ ಉಪ್ಪಿನ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಮಾಡಿದ ಹೊಸ ಶಿಫಾರಸನ್ನು ತಜ್ಞರು ಸ್ವಾಗತಿಸಿದ್ದಾರೆ.WHO, ತನ್ನ ಇತ್ತೀಚಿನ ಮಾರ್ಗಸೂಚಿಯಲ್ಲಿ, ಸೋಡಿಯಂನಲ್ಲಿ ಸಮೃದ್ಧವಾಗಿರುವ ಸಾಮಾನ್ಯ ಟೇಬಲ್ ಉಪ್ಪಿನ ಬದಲಿಗೆ K-ಉಪ್ಪು ಅಥವಾ ಪೊಟ್ಯಾಸಿಯಮ್ ಕ್ಲೋರೈಡ್ ಅನ್ನು ಬಳಸಲು ಸೂಚಿಸುತ್ತದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುವ ಮೂಲಕ ಹೃದಯರಕ್ತನಾಳದ ಕಾಯಿಲೆಗಳು (CVDs) ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಂತಹ ಸಂವಹನ ಮಾಡಲಾಗದ ಕಾಯಿಲೆಗಳನ್ನು (NCDs) ಕಡಿಮೆ ಮಾಡಬಹುದು ಎಂದಿದೆ.ಇದು ಗ್ಯಾಸ್ಟ್ರಿಕ್ ಕ್ಯಾನ್ಸರ್‌ನಂತಹ ಹೆಚ್ಚಿನ ಸೋಡಿಯಂ ಸೇವನೆಗೆ ಸಂಬಂಧಿಸಿದ ಇತರ ಪರಿಸ್ಥಿತಿಗಳ ಅಪಾಯಗಳನ್ನು ಸಹ ಕಡಿಮೆ ಮಾಡುತ್ತದೆ. WHO ಪ್ರಕಾರ, ಪ್ರತಿ ವರ್ಷ 80 ಲಕ್ಷ ಜನರು ಕಳಪೆ ಆಹಾರದಿಂದ ಸಾಯುತ್ತಾರೆ. ಇವುಗಳಲ್ಲಿ, 19 ಲಕ್ಷ ಸಾ...
ಪ್ರಯಾಗರಾಜ್​ ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

ಪ್ರಯಾಗರಾಜ್​ ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್​ ಮಹಾಕುಂಭಮೇಳದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.ಕಾಲ್ತುಳಿತಪ್ರಕರಣಕ್ಕೆ ಸಂಬಂಧಿಸಿದಂತೆ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಹೇಳಿದೆ. ಈ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಈ ದುರಂತ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಆದಿತ್ಯನಾಥ್ ತಿಳಿಸಿದ್ದಾರೆ....
ಉಚಿತ ಬಸ್‌ಪಾಸ್‌ ಸೌಲಭ್ಯ; ಗ್ರಾಮೀಣ ಪತ್ರಕರ್ತರಿಗೆ ಸಿಎಂ ಸಲಹೆ ಹೀಗಿದೆ..!

ಉಚಿತ ಬಸ್‌ಪಾಸ್‌ ಸೌಲಭ್ಯ; ಗ್ರಾಮೀಣ ಪತ್ರಕರ್ತರಿಗೆ ಸಿಎಂ ಸಲಹೆ ಹೀಗಿದೆ..!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ನಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣ 'X'ನಲ್ಲಿ ಸಿಎಂ ಸಿದ್ದರಾಮಯ್ಯ ಹಂಚಿಕೊಂಡ ಮಾಹಿತಿ ಹೀಗಿದೆ: ಉಚಿತ ಬಸ್‌ಪಾಸ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು ಎಂದವರು ಮಾಹಿತಿ ನೀಡಿದ್ದಾರೆ. ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್‌ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು....
ಮೂರನೇ ವಿವಾಹಕ್ಕೆ ರಾಖೀ ಸಾವಂತ್ ತಯಾರಿ? ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ

ಮೂರನೇ ವಿವಾಹಕ್ಕೆ ರಾಖೀ ಸಾವಂತ್ ತಯಾರಿ? ಪಾಕಿಸ್ತಾನ ಹುಡುಗನ ಹುಡುಗನ ಕೈ ಹಿಡಿಯಲಿದ್ದಾರೆ ನಟಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಒಂದಿಲ್ಲೊಂದು ವಿವಾದಗಳ ಸುದ್ದಿಗಳಿಂದ ಗಮನಸೆಳೆಯುತ್ತಿರುವ ನಟಿ ರಾಖಿ ಸಾವಂತ್ ಅವರು ಇಡೀಗ್ಗ ಮತ್ತೊಂದು ಮದುವೆ ಪ್ರಸ್ತಾಪ ವಿಚಾರದಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ರಾಖಿ ಸಾವಂತ್ ಅವರು ಇದೀಗ ಮೂರನೇ ಬಾರಿಗೆ ಮದುವೆಯಾಯಾಗುವ ತಯಾರಿಯಲ್ಲಿದ್ದಾರೆ. ಈ ಬಾರಿ ಅವರು ಪಾಕಿಸ್ತಾನದ ಹುಡುಗನ ಕೈ ಹಿಡಿಯಲಿದ್ದಾರೆ ಎನ್ನಲಾಗಿದೆ.ಪಾಕಿಸ್ತಾನದಲ್ಲಿ ಪೊಲೀಸ್ ಅಧಿಕಾರಿ ಆಗಿಯೂ ಕೆಲಸ ಮಾಡುತ್ತಿರುವ ನಟ ಡೊಡಿ ಖಾನ್ ಜೊತೆ ಮದುವೆ ಆಗುವುದಾಗಿ ರಾಖಿ ಸಾವಂತ್ ತಿಳಿಸಿದ್ದಾರೆ. ಡೊಡಿ ಖಾನ್ ಅವರು ತಮಗೆ ಮದುವೆಯ ಪ್ರಸ್ತಾಪ ಮಾಡಿದ್ದಾರೆ ಎಂದು ರಾಖಿ ಸಾವಂತ್​ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿಬ್ಬಣ ಕರೆದುಕೊಂಡು ಭಾರತಕ್ಕೆ ಬರಲೇ ಅಥವಾ ದುಬೈಗೆ ಬರಲೇ’ ಎಂದು ಡೊಡಿ ಖಾನ್ ಕೇಳಿದ್ದಾರೆ ಎಂದು ರಾಖಿ ಹೇಳಿದ್ದಾರೆ.ಈಗಾಗಲೇ ಅವರಿಗೆ ಎರಡು ಮದುವೆ ಆಗಿ ಮುರಿದು ಬಿದ್ದಿವೆ. 2019ರಲ್ಲಿ ಅವರು ರಿತೇಶ್ ಸಿಂಗ್ ಜೊತೆ ಮದುವೆ ಆಗಿದ್ದರು. 2022ರಲ್ಲಿ ವಿಚ್ಛೇದನ ಪಡೆದುಕೊಂಡ ಬಳಿಕ ಮೈಸೂರು ಮೂಲದ ಆದಿಲ್ ಖಾನ್​ ಜೊತೆ ಮದುವೆ ನೆರವೇರಿತ್ತು. ಅವರೊಂದಿಗಿನ ವಿಚ್ಛೇದನದ ನಂತರ ಇದೀಗ ಮೂರನೇ ವ...
VIDEO: ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

VIDEO: ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್'ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು ಬುಧವಾರ ಯಶಸ್ವಿಯಾಗಿ ನಡೆಸಿದೆ. ಈ ಕುರಿತ ವೀಡಿಯೊವನ್ನು ಇಸ್ರೋ ಸಂಸ್ಥೆ ಹಂಚಿಕೊಂಡಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಯಶೋಗಾಥೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.🌍 A view like no other! Watch onboard footage from GSLV-F15 during the launch of NVS-02.India’s space programme continues to inspire! 🚀 #GSLV #NAVIC #ISRO pic.twitter.com/KrrO3xiH1s — ISRO (@isro) January 29, 2025...