Sunday, August 9

ದೇಶ

ಫಿನ್‌ಟೆಕ್ ನಿಯಮಗಳು ಮತ್ತಷ್ಟು ಕಠಿಣ; ಸೈಬರ್ ಭದ್ರತೆಗೆ ಕೇಂದ್ರ-ಆರ್‌ಬಿಐ ಒತ್ತು

ಫಿನ್‌ಟೆಕ್ ನಿಯಮಗಳು ಮತ್ತಷ್ಟು ಕಠಿಣ; ಸೈಬರ್ ಭದ್ರತೆಗೆ ಕೇಂದ್ರ-ಆರ್‌ಬಿಐ ಒತ್ತು

ದೇಶ, ಪ್ರಮುಖ ಸುದ್ದಿ
ನವದೆಹಲಿ: ಡಿಜಿಟಲ್ ಹಣಕಾಸು ಸೇವೆಗಳನ್ನು ಹೆಚ್ಚು ಸುರಕ್ಷಿತ ಮತ್ತು ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಫಿನ್‌ಟೆಕ್ ವಲಯದ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ ಕೈಗೊಂಡಿವೆ. ಡಿಜಿಟಲ್ ಸಾಲ ವೇದಿಕೆಗಳು, ಪಾವತಿ ಸಂಗ್ರಾಹಕರು ಹಾಗೂ ಫಿನ್‌ಟೆಕ್ ಸಂಸ್ಥೆಗಳ ಕಾರ್ಯಾಚರಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಮಾರುಕಟ್ಟೆ ಶಿಸ್ತನ್ನು ಹೆಚ್ಚಿಸಲು ಹೊಸ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ಆರ್‌ಬಿಐ ಫಿನ್‌ಟೆಕ್ ಕ್ಷೇತ್ರಕ್ಕೆ ಸ್ವಯಂ-ನಿಯಂತ್ರಕ ಸಂಸ್ಥೆಗಳ (SRO-FT) ಚೌಕಟ್ಟು ಜಾರಿಗೆ ತಂದಿದ್ದು, ಡಿಜಿಟಲ್ ಪಾವತಿಗಳ ಭದ್ರತೆಯನ್ನು ಬಲಪಡಿಸಿದೆ. ಅಲ್ಲದೆ, ಯುಪಿಐ ವಹಿವಾಟುಗಳಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ಯಂತ್ರ ಕಲಿಕೆ (ML) ಆಧಾರಿತ ವಂಚನೆ ಪತ್ತೆ ವ್ಯವಸ್ಥೆಗಳ ಬಳಕೆಯನ್ನು ಉತ್ತೇಜಿಸಲಾಗಿದೆ.ಡೇಟಾ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ (DPDP) ಕಾಯ್ದೆ-2023 ಹಾಗೂ ಸಂಬಂಧಿತ ನಿಯಮಗಳನ್ನು ಜಾರಿಗೆ ತಂದಿದೆ. ಆರ್‌ಬಿಐ ತನ್ನ ನಿ...
ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

ದೇಶ, ಪ್ರಮುಖ ಸುದ್ದಿ
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಯಿತು. ಜಂತರ್ ಮಂತರ್‌ನಿಂದ ಸಂಸತ್ತಿನತ್ತ ಮೆರವಣಿಗೆ ( 'ಚಲೋ ಸಂಸದ್') ನಡೆಸಲು ಪ್ರತಿಭಟನಾಕಾರರು ಯತ್ನಿಸಿದ ವೇಳೆ ಪೊಲೀಸರು ತಡೆದಿದ್ದು, ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಹಾಗೂ ತಳ್ಳಾಟ ಉಂಟಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಪ್ರತಿಭಟನಾ ಸ್ಥಳದಲ್ಲಿ ಹಲವು ರಾಜಕೀಯ ನಾಯಕರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ಆಜಾದ್ ಸಮಾಜ ಪಾರ್ಟಿ-ಕಾನ್ಶಿರಾಮ್ ಅಧ್ಯಕ್ಷ ಹಾಗೂ ಸಂಸದ ಚಂದ್ರಶೇಖರ್ ಆಜಾದ್, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಹಲವು ಗಣ್ಯರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.ಭದ್ರತಾ ಕಾರಣಗಳಿಂದ ಸಂಸತ್ ಪ್ರದೇಶದಲ್ಲಿ ಮೆರವಣಿಗೆಗೆ ಪೂರ್ವಾನುಮತಿ ನೀಡಲಾಗ...
‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

ದೇಶ, ಪ್ರಮುಖ ಸುದ್ದಿ
ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ಮಾಜಿ ಅಧೀನ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅವರು ಎಎನ್‌ಐ ಪಾಡ್‌ಕ್ಯಾಸ್ಟ್‌ನಲ್ಲಿ ಮಾಡಿದ ಹೇಳಿಕೆಗಳ ಕುರಿತು ಸ್ವತಂತ್ರ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸುವಂತೆ ಸಿಟಿಜನ್ ರೈಟ್ಸ್ ಫೌಂಡೇಶನ್ (ಸಿಆರ್‌ಎಫ್) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಸಿಆರ್‌ಎಫ್ ಅಧ್ಯಕ್ಷ ಕೆ.ಎ. ಪಾಲ್ ಅವರು ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ಮನವಿಯಲ್ಲಿ, ಮಣಿ ಅವರ ಹೇಳಿಕೆಗಳನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವುದು ಅಥವಾ ಸೂಕ್ತ ಸ್ವತಂತ್ರ ತನಿಖಾ ಸಂಸ್ಥೆಗೆ ಜವಾಬ್ದಾರಿ ವಹಿಸುವಂತೆ ಕೋರಿದ್ದಾರೆ. 'ಹಿಂದೂ ಟೆರರಿಸಂ' ಎಂದು ಬಿಂಬಿಸುವ ಪ್ರಯತ್ನ ಏಕೆ ನಡೆದಿತ್ತು? ಮುಂಬೈ ದಾಳಿ ಹಿಂದಿನ ಮರ್ಮ ಏನು? ಸಾಧ್ವಿ ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ವಿರುದ್ಧದ ಆರೋಪದ ಹಿಂದಿನ ಪಿತೂರಿ ಯಾರದ್ದು? ಪಾಕಿಸ್ತಾನದ ISI ಜೊತೆ ರಾಜಕೀಯ ಪಕ್ಷದ ನಂಟು ಏನು? ಎಂಬ ಬಗ್ಗೆ ನಿವೃತ್ತ MHA ಅಧಿಕಾರಿ ಆರ್.ವಿ.ಎಸ್. ಮಣಿ ನೀಡಿರುವ ಹೇಳಿಕೆ ದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಇದು ಗಂಭೀರ ಆರೋಪಗಳು. ಈ ಬಗ್ಗೆ ಸ್ವತಂತ್ರ ತನಿಖೆ...
ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಮಧ್ಯಪ್ರದೇಶ ಸಂಪುಟ ಅಸ್ತು

ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಮಧ್ಯಪ್ರದೇಶ ಸಂಪುಟ ಅಸ್ತು

ದೇಶ, ಪ್ರಮುಖ ಸುದ್ದಿ
ಭೋಪಾಲ್: ಮಧ್ಯಪ್ರದೇಶ ಸಚಿವ ಸಂಪುಟವು ಭಾನುವಾರ ನಡೆದ ವಿಶೇಷ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code - UCC) ಮಸೂದೆಗೆ ಅನುಮೋದನೆ ನೀಡಿದೆ. ಭೋಪಾಲ್ ಸಮೀಪದ ಐತಿಹಾಸಿಕ ಜಗದೀಶಪುರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯದ ಐತಿಹಾಸಿಕ ಪರಂಪರೆ ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳನ್ನು ಖಚಿತಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಯುಸಿಸಿ ಯಾವುದೇ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಹಾಗೂ ಎಲ್ಲ ಧರ್ಮಗಳ ಜನರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ಒದಗಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.ಮಸೂದೆ ಸಿದ್ಧಪಡಿಸುವ ಮೊದಲು, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರ್ವಜನಿಕ ಸಮಾಲೋಚನೆ ನಡೆಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಾಮಾಜಿಕ ಸಂಘಟನೆಗಳು ಚರ್ಚೆಯಲ್ಲಿ ಭಾಗವಹಿಸಿದ್ದರೆ, ಕಾಂಗ್ರೆಸ್ ಪಕ್ಷ...
ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

ದೇಶ, ಪ್ರಮುಖ ಸುದ್ದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೌರಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಪೂಂಚ್ ಜಿಲ್ಲೆಯ ಸುರಂಕೋಟ್ ತಹಸಿಲ್‌ನ ಬುಫ್ಲಿಯಾಜ್‌ನ ಲೋವರ್ ಮುರ್ರಾ ಪ್ರದೇಶದಲ್ಲಿ ಪ್ರವಾಹದ ಹೊಡೆತಕ್ಕೆ ಸಿಲುಕಿದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಮೃತರಲ್ಲಿ ಎಂಟು ಮಂದಿಯನ್ನು ಗುರುತಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ. ಪ್ರವಾಹದಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಉರುಳಿಬಿದ್ದಿದ್ದು, ಮೊಬೈಲ್ ನೆಟ್‌ವರ್ಕ್ ಸೇವೆ ಅಸ್ತವ್ಯಸ್ತಗೊಂಡಿದೆ. ಪೊಲೀಸರು, ಎಸ್‌ಡಿಆರ್‌ಎಫ್ ಸಿಬ್ಬಂದಿ, ನಾಗರಿಕ ಆಡಳಿತ ಹಾಗೂ ಸ್ಥಳೀಯರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೊಘಲ್ ರಸ್ತೆ ಹಾಗೂ ರಾಜೌರಿ–ಪೂಂಚ್ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳ...
ಮೇಕೆದಾಟು ಯೋಜನೆ ವಿರೋಧಿಸಿ ಸಂಸತ್‌ನಲ್ಲಿ ಡಿಎಂಕೆ ಹೋರಾಟ; ತುರ್ತು ಚರ್ಚೆಗೆ ಆಗ್ರಹ

ಮೇಕೆದಾಟು ಯೋಜನೆ ವಿರೋಧಿಸಿ ಸಂಸತ್‌ನಲ್ಲಿ ಡಿಎಂಕೆ ಹೋರಾಟ; ತುರ್ತು ಚರ್ಚೆಗೆ ಆಗ್ರಹ

ದೇಶ, ಪ್ರಮುಖ ಸುದ್ದಿ
ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆ ವಿರೋಧಿಸಿ ಡಿಎಂಕೆ ಸಂಸತ್ತಿನಲ್ಲಿ ಹೋರಾಟ ತೀವ್ರಗೊಳಿಸಿದ್ದು, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಸಲ್ಲಿಸಿ ವಿಷಯದ ಕುರಿತು ತಕ್ಷಣ ಚರ್ಚೆ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ತುರ್ತು ಸಾರ್ವಜನಿಕ ಮಹತ್ವದ ವಿಚಾರವಾಗಿ ಪರಿಗಣಿಸಿ, ಇತರ ವ್ಯವಹಾರಗಳನ್ನು ಸ್ಥಗಿತಗೊಳಿಸಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಡಿಎಂಕೆ ಆಗ್ರಹಿಸಿದೆ. ಕಾವೇರಿ ಜಲ ವಿವಾದ ನ್ಯಾಯಮಂಡಳಿ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಎಂಕೆ ಪುನರುಚ್ಚರಿಸಿದೆ. ತಮಿಳುನಾಡಿನ ಒಪ್ಪಿಗೆಯಿಲ್ಲದೆ ಮೇಕೆದಾಟು ಯೋಜನೆಯನ್ನು ಮುಂದುವರಿಸಬಾರದು ಎಂದು ಪಕ್ಷವು ಕೇಂದ್ರ ಸರ್ಕಾರದ ಮಧ್ಯಸ್ಥಿಕೆಗೆ ಆಗ್ರಹಿಸಿದೆ.ಲೋಕಸಭೆಯಲ್ಲಿ ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿ.ಆರ್. ಬಾಲು ಸ್ಪೀಕರ್‌ಗೆ ಸಲ್ಲಿಸಿದ ನೋಟಿಸ್‌ನಲ್ಲಿ, ಕರ್ನಾಟಕವು ಏಕಪಕ್ಷೀಯವಾಗಿ ಮೇಕೆದಾಟು ಯೋಜನೆಯನ್ನು ಮುಂದುವರಿಸಿದರೆ ತಮಿಳುನಾಡಿನ ನೀರಿನ ...
PM Modi, Rahul Gandhi lead tributes as leaders mourn H.D. Deve Gowda’s wife Chennamma

PM Modi, Rahul Gandhi lead tributes as leaders mourn H.D. Deve Gowda’s wife Chennamma

ದೇಶ, ಪ್ರಮುಖ ಸುದ್ದಿ
New Delhi: Prime Minister Narendra Modi, Leader of Opposition Rahul Gandhi, Karnataka Chief Minister Siddaramaiah, Deputy Chief Minister D.K. Shivakumar and several other political leaders on Saturday condoled the death of Chennamma, wife of former Prime Minister H.D. Deve Gowda, who passed away at the age of 85. In a post on X, Prime Minister Modi said he was deeply saddened by Chennamma's passing and remembered her for her humility and dedication to social service. He also spoke to Deve Gowda over the phone to convey his personal condolences and offered prayers for strength to the bereaved family. Leader of Opposition Rahul Gandhi described Chennamma as a source of strength throughout Deve Gowda's decades of public life. Extending condolences to Deve Gowda, Union minister H.D. Kumaraswam...
ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ದೇಶ, ಪ್ರಮುಖ ಸುದ್ದಿ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿ, ಚೆನ್ನಮ್ಮ ಅವರ ಸರಳತೆ, ವಿನಮ್ರತೆ ಹಾಗೂ ಸಾಮಾಜಿಕ ಸೇವೆಯ ಮನೋಭಾವವನ್ನು ಸ್ಮರಿಸಿದ್ದಾರೆ. ಬಳಿಕ ದೇವೇಗೌಡರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವೈಯಕ್ತಿಕವಾಗಿ ಸಂತಾಪ ಸೂಚಿಸಿದ್ದು, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ದೇವೇಗೌಡರ ದೀರ್ಘ ರಾಜಕೀಯ ಜೀವನದಲ್ಲಿ ಚೆನ್ನಮ್ಮ ಅವರು ಸದಾ ಬೆನ್ನೆಲುಬಾಗಿ ನಿಂತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಕುಟುಂಬದ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಚೆನ್ನಮ್ಮ ಅವರನ್ನು ದ...
ವಿಕ್ರಮ್-1 ಯಶಸ್ವಿ ಉಡಾವಣೆ; ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಐತಿಹಾಸಿಕ ಮೈಲಿಗಲ್ಲು

ವಿಕ್ರಮ್-1 ಯಶಸ್ವಿ ಉಡಾವಣೆ; ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಐತಿಹಾಸಿಕ ಮೈಲಿಗಲ್ಲು

ದೇಶ, ಪ್ರಮುಖ ಸುದ್ದಿ
ಶ್ರೀಹರಿಕೋಟಾ: ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ಭಾರತದ ಮೊದಲ ಖಾಸಗಿ ಕಕ್ಷೆಯ ಉಡಾವಣಾ ವಾಹನ ವಿಕ್ರಮ್-1 ಶನಿವಾರ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಲೋ ಅರ್ಥ್ ಆರ್ಬಿಟ್ (LEO) ತಲುಪಿದೆ. ಭಾರತೀಯ ಖಾಸಗಿ ಕಂಪನಿಯೊಂದು ದೇಶದ ನೆಲದಿಂದ ನಡೆಸಿದ ಮೊದಲ ಯಶಸ್ವಿ ಕಕ್ಷೆಯ ಉಡಾವಣೆ ಇದಾಗಿದ್ದು, ದೇಶದ ವಾಣಿಜ್ಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸ್ಕೈರೂಟ್ ತಂಡವನ್ನು ಅಭಿನಂದಿಸಿ, ಈ ಸಾಧನೆ ಭಾರತದ ವೈಜ್ಞಾನಿಕ ಸಾಮರ್ಥ್ಯ ಹಾಗೂ ಬೆಳೆಯುತ್ತಿರುವ ಬಾಹ್ಯಾಕಾಶ ಪರಿಸರ ವ್ಯವಸ್ಥೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್, 2020ರ ಬಾಹ್ಯಾಕಾಶ ವಲಯದ ಸುಧಾರಣೆಗಳ ಫಲವಾಗಿ ಈ ಯಶಸ್ಸು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ISRO, IN-SPACe ಹಾಗೂ ಬಾಹ್ಯಾಕಾಶ ಇಲಾಖೆಯ ಸಹಕಾರವನ್ನು ಅವರು ಶ್ಲಾಘಿಸಿದ್ದಾರೆ. ಸುಮಾರು 22 ಮೀಟರ್ ಎತ್ತರದ ವಿಕ್ರಮ್-1 ರಾಕೆಟ್ 350 ಕೆ.ಜಿ.ವರೆಗೆ ಪೇಲೋಡ್‌ಗಳನ್ನು ಕಡಿಮೆ ಭೂಕಕ್ಷೆಗೆ ಸಾಗಿಸುವ ಸಾಮರ್ಥ್ಯ ಹೊಂದಿ...
‘ಆಪರೇಷನ್ ಸಿಂದೂರ್’ ಭಾರತದ ರಕ್ಷಣಾ ಸಾಮರ್ಥ್ಯಕ್ಕೆ ಸಾಕ್ಷಿ: ರಾಜನಾಥ್ ಸಿಂಗ್

‘ಆಪರೇಷನ್ ಸಿಂದೂರ್’ ಭಾರತದ ರಕ್ಷಣಾ ಸಾಮರ್ಥ್ಯಕ್ಕೆ ಸಾಕ್ಷಿ: ರಾಜನಾಥ್ ಸಿಂಗ್

ದೇಶ, ಪ್ರಮುಖ ಸುದ್ದಿ
ನವದೆಹಲಿ: ‘ಆಪರೇಷನ್ ಸಿಂದೂರ್’ ಭಾರತದ ಆಧುನಿಕ ರಕ್ಷಣಾ ಸನ್ನದ್ಧತೆ ಹಾಗೂ ಸ್ವದೇಶಿ ರಕ್ಷಣಾ ತಂತ್ರಜ್ಞಾನದ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ನವದೆಹಲಿದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಕಾಶ್ ಕ್ಷಿಪಣಿ ವ್ಯವಸ್ಥೆ, ಆಕಾಶ್ ತೀರ್ ವಾಯು ರಕ್ಷಣಾ ವ್ಯವಸ್ಥೆ ಹಾಗೂ ಬ್ರಹ್ಮೋಸ್ ಕ್ಷಿಪಣಿ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ತಿಳಿಸಿದರು. ಭಯೋತ್ಪಾದನೆ ವಿರುದ್ಧ ಸರ್ಕಾರದ ‘ಶೂನ್ಯ ಸಹಿಷ್ಣುತೆ’ ನೀತಿ ಮುಂದುವರಿಯಲಿದೆ ಎಂದರು. 2025-26ರಲ್ಲಿ ದೇಶದ ರಕ್ಷಣಾ ಉತ್ಪಾದನೆ ₹1.78 ಲಕ್ಷ ಕೋಟಿ ದಾಖಲೆಯ ಮಟ್ಟ ತಲುಪಿದ್ದು, ರಕ್ಷಣಾ ರಫ್ತು ₹38,000 ಕೋಟಿ ದಾಟಿದೆ ಎಂದು ಸಿಂಗ್ ಹೇಳಿದರು. ಈ ವರ್ಷ ಉತ್ಪಾದನೆಯನ್ನು ₹2 ಲಕ್ಷ ಕೋಟಿಗೆ ಹಾಗೂ 2029ರ ವೇಳೆಗೆ ₹3 ಲಕ್ಷ ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಇದೇ ಅವಧಿಯಲ್ಲಿ ರಕ್ಷಣಾ ರಫ್ತನ್ನು ₹50,000 ಕೋಟಿಗೆ ಏರಿಸುವ ಉದ್ದೇಶವೂ ಇದೆ.ರಕ್ಷಣಾ ಕ್ಷೇತ್ರದ ನವೋದ್ಯಮಗಳು ಹಾಗೂ ಎಂಎಸ್‌ಎಂಇಗಳಿಂದ ₹2,400 ಕೋಟಿಗೂ ಹೆಚ್ಚು ಮೌಲ್ಯದ ಖರೀದಿಗೆ ಅನುಮೋದನೆ ನೀಡಲಾಗಿದ...