ಬೆಂಗಳೂರು: ಬಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಜನರು ಪರದಾಡುವಂತಾಗಿದೆ. ಬೆಂಗಳೂರಿನ ಎಲ್ಲೆಡೆ ಸೋಮವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ಜನ ಜೀವನವೂ ಏರುಪೇರಾಗಿದೆ.ಈ ನಡುವೆ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ...
ನವದೆಹಲಿ: ದೇಶದ ಆತರಿಕ ಭದ್ರತೆಗೆ ಸಾಮಾಜಿಕ ಮಾಧ್ಯಮಗಳು ಸವಾಲಗಿ ಪರಿಣಮಿಸಿದೆ. ಅದರಲ್ಲೂ ಇತ್ತೀಚೆಗೆ ವಿಮಾನಗಳಿಗೆ ಸಾಮಾಜಿಕ ಜಾಲತಾಣ ಮೂಲಕ ಬಾಂಬ್ ಬೆದರಿಕೆ ಒಡ್ಡಲಾಗಿರುವ ಪ್ರಕರಣ ಆತಂಕಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದೆ.ಈ ನಡುವೆ, ಭಾರತೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಯ ಸಂದೇಶ ರವಾನಿಸಿದ್ದ ಹಲವು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಸೈಬರ್ ಭದ್ರತಾ ಏಜೆನ್ಸಿಗಳು ಕಾನೂನು ಕ್ರಮ ಕೈಗೊಂಡು ಅಮಾನತುಗೊಳಿಸಿವೆ ಎಂದು ಮೂಲಗಳು ತಿಳಸಿವೆ.ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವು ವಿವಿಧ ಖಾತೆಗಳನ್ನು ಪರಿಶೀಲಿಸಿದ್ದು, ಹಲವಾರು ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ....
ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದ್ದು, ಸೇನಾ ದಾಳಿಯಲ್ಲಿ ಹಮಾಸ್ ಮುಖ್ಯಸ್ಥನ ಹತ್ಯೆಯಾಗಿದೆ.ಗಾಜಾದಲ್ಲಿ ಐಡಿಎಫ್ ಕಾರ್ಯಾಚರಣೆ ವೇಳೆ 3 ಉಗ್ರರು ಸಾವನ್ನಪ್ಪಿದ್ದು ಇವರಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸೇರಿದ್ದಾನೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ.
ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿಕೆ ನೀಡಿ, ಗಾಜಾದಲ್ಲಿನ ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾಹ್ಯಾ ಸಿನ್ವಾರ್ ಹತ್ಯೆಯಾಗಿರುವ ಬಗ್ಗೆ ಐಡಿಎಫ್ ತನಿಖೆ ನಡೆಸಿದೆ ಎಂದು ತಿಳಿಸಿದ್ದಾರೆ....
ನವದೆಹಲಿ: ವಿಮಾನಗಳಲ್ಲಿ ಬಾಂಬ್ ಬೆದರಿಕೆಯ ಪ್ರಕರಣಗಳ ಬಗ್ಗೆ ದೆಹಲಿ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಕುರಿತು 8 ಎಫ್ಐಆರ್ಗಳನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ವಿವಿಧ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದ ನಂತರ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಕಗ್ಗೊಲೆ ಜನರನ್ನು ಬೆಚ್ಚಿಬೀಳಿಸಿದೆ.ಮುಂಬಯಿ ನಗರದ ಬಾಂದ್ರಾ ಪ್ರದೇಶದಲ್ಲಿ ಎನ್ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆದಿದೆ. ಹಂತಕರ ಗುಂಡಿಗೆ ಸಿದ್ದಿಕಿ ಬಲಿಯಾಗಿದ್ದಾರೆ.
ಶನಿವಾರ ರಾತ್ರಿ ಬಾಬಾ ಸಿದ್ದಿಕಿ ಅವರ ಕಚೇರಿ ಬಳಿಯೇ ಘಟನೆ ನಡೆದಿದ್ದು, ಗುಂಡಿನ ದಾಳಿಯ ನಂತರ ಬಾಬಾ ಸಿದ್ದಿಕಿ ಅವರನ್ನು ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಸಿದ್ದಿಕಿ ಬದುಕುಳಿಯಲಿಲ್ಲ ಎಂದು ಆಪ್ತರು ಹೇಳಿದ್ದಾರೆ.ಈ ನಡುವೆ ಹತ್ಯೆ ಬೆನ್ನಲ್ಲೇ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ....
ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.ಅವಿವಾಹಿತರಾಗಿದ್ದ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಗಮನಸೆಳೆದವರು. ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಖ್ಯಾತಿ ಅವರದ್ದು. ಔದ್ಯೋಗಿಕ ಕ್ಷೇತ್ರದಲ್ಲಿ ಅವರು ದಂತಕತೆಯಾಗಿದ್ದರು. ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿ ದೇಶದ ಆಸ್ತಿಯಾಗಿದ್ದರು.1937ರಲ್ಲಿ ಜನಿಸಿದ್ದ ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಪದ್ಮವಿಭೂಷಣ'ವನ್ನು ನೀಡಿ ಗೌರವಿಸಿತ್ತು.ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ....
ಮುಂಬಯಿ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮುಖ್ಯಸ್ಥ ರತನ್ ನಾವಲ್ ಟಾಟಾ ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷ ಹರೆಯದ ರತನ್ ನಾವಲ್ ಟಾಟಾ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.ಅವಿವಾಹಿತರಾಗಿದ್ದ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಗಮನಸೆಳೆದವರು. ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಖ್ಯಾತಿ ಅವರದ್ದು. ಔದ್ಯೋಗಿಕ ಕ್ಷೇತ್ರದಲ್ಲಿ ಅವರು ದಂತಕತೆಯಾಗಿದ್ದರು. ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿ ದೇಶದ ಆಸ್ತಿಯಾಗಿದ್ದರು.1937ರಲ್ಲಿ ಜನಿಸಿದ್ದ ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಪದ್ಮವಿಭೂಷಣ'ವನ್ನು ನೀಡಿ ಗೌರವಿಸಿತ್ತು.ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು: ಕರ್ನಾಟಕದ ಹಲವು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಇತರೆ ಉಪ್ರಕಮಗಳ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ.ಬುಧವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೊಂದಿಗೆ ಹಿಮಾಚಲ ಪ್ರದೇಶದ ಪಟ್ಟಣ ಯೋಜನೆ, ವಸತಿ ಮತ್ತು ತಾಂತ್ರಿಕ ಶಿಕ್ಷಣ ಸಚಿವ ರಾಜೇಶ್ ಕುಮಾರ್ ಧರ್ಮಾನಿ ಸಮಾಲೋಚನೆ ನಡೆಸಿದರು.ಉದ್ಯೋಗ ಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಕರ್ನಾಟಕದ ಪ್ರಯತ್ನ ಶ್ಲಾಘನೀಯ ಎಂದು ಹಿಮಾಚಲ ಪ್ರದೇಶ ಸಚಿವರು ತಿಳಿಸಿದರು. ತಮ್ಮ ತವರು ರಾಜ್ಯದಲ್ಲಿ ಇದೇ ರೀತಿಯ ಕಾರ್ಯತಂತ್ರಗಳನ್ನು ಜಾರಿಗೆ ತರಲು ತೀವ್ರ ಆಸಕ್ತಿ ಇದೆ ಎಂದು ರಾಜೇಶ್ ಕುಮಾರ್ ಧರ್ಮಾನಿ ಇಂಗಿತ ವ್ಯಕ್ತಪಡಿಸಿದರು.ಕರ್ನಾಟಕದಲ್ಲಿ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಅಧ್ಯಯನ ಮಾಡಲು ಆಗಮಿಸಿರುವ ಧರ್ಮಾನಿ, ಅಂತಾರಾಷ್ಟ್ರೀಯ ವಲಸೆ ಕೇಂದ್ರ (IMC-K) ದಿಂದ ಭಾರಿ ಪ್ರಭಾವಿತರಾದರು. ಯುಎಇ, ವ...
ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ.ಹರಿಯಾಣ ವಿಧಾನಸಭೆಗೆ ಆಯ್ಕೆ ಬಯಸಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಾಟ್ ಜಯಗಳಿಸಿದ್ದಾರೆ.ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಕುಸ್ತಿಪಟು ವಿನೇಶ್ ಫೋಗಾಟ್ ಅವರು ಬಿಜೆಪಿಯ ಕ್ಯಾಪ್ಟನ್ ಬೈರಾಗಿ ವಿರುದ್ಧ 6,000 ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ....
ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ.90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ.ಇದೇ ವೇಳೆ, ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಘೋಷಣೆ ಮಾಡಿದ್ದಾರೆ. ತನ್ನ ಮಗ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಪ್ರಕಟಿಸಿದ್ದಾರೆ....