Saturday, August 8

ದೇಶ

ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ದೇಶ, ಪ್ರಮುಖ ಸುದ್ದಿ, ವಿದೇಶ
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮ ಗಮನಸೆಳೆಯಿತು. ‌ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಾಗೂ ಕಾಂಗ್ರೆಸ್ ನಾಯಕರು, ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು.ಭಾರತ ಜೋಡೋ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, "ನಾವಿಂದು ಬಹಳ ಪುಣ್ಯದ ವರ್ಷದಲ್ಲಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನಕ್ಕೆ ಈಗ ಶತಮಾನ ತುಂಬಿದೆ. ಈ ಸಂದರ್ಭವನ್ನು ನಾವು ಬಳಸಿಕೊಂಡು ಗಾಂಧಿಜಿ ಅವರು ಹಾಕಿಕೊಟ್ಟ ದಾರಿ ಹಾಗೂ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ. ಈ ದೇಶಕ್ಕೆ ಕಾಂಗ್ರೆಸ್ ಹಾಕಿಕೊಟ್ಟಿರುವ ಬುನಾದಿ, ಗಾಂಧಿ ಅವರ ತತ್ವ, ಆದರ್ಶವೇ ನಮ್ಮ ಆಸ್ತಿ. ಈ ಸಂದರ್ಭದಲ್ಲಿ ಕರ್ನಾಟಕದವೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಎಐಸಿಸಿ ಅಧ್ಯಕ್ಷರಾಗಿರ...
ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸೂಪರ್‌ಸ್ಟಾರ್ ರಜನಿಕಾಂತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ದೇಶ, ಪ್ರಮುಖ ಸುದ್ದಿ, ಸಿನಿಮಾ
ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜಿನಿಕಾಂತ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸೋಮವಾರ ಅವರನ್ಬು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೊಟ್ಟೆ ನೋವು ಕಾಣಿಸಿಕೊಂಡು ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: “ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿವೆ. ಈ ನೆನಪಿಗೆ ರಾಜ್ಯಾದ್ಯಂತ ʼಗಾಂಧಿ ನಡಿಗೆʼ, ʼಸ್ವಚ್ಚತಾ ಪ್ರತಿಜ್ಞಾವಿಧಿʼ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜತೆಗೆ ಇಡೀ ವರ್ಷ ನಾನಾ ಕಾರ್ಯಕ್ರಮಗಳನ್ನು ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ..ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಸೋಮವಾರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಉದ್ದಗಲಕ್ಕೂ ಅಕ್ಟೋಬರ್ 2 ರ ಬೆಳಿಗ್ಗೆ 11 ಗಂಟೆಗೆ ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ, ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ತನಕ ʼಗಾಂಧಿ ಜ್ಯೋತಿ ಪಾದಯಾತ್ರೆʼ ನಡೆಸಲಾಗುವುದು” ಎಂದರು.“ಪಾದಯಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ''ಗಾಂಧಿ ನಡಿಗೆ'' ಕಾರ್ಯಕ್ರಮ ನಡೆಯುತ್ತದೆ. ...
ಹರಿಯಾಣ: ಬಿಜೆಪಿಯ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಬಂಡಾಯವೇ ಸವಾಲು

ಹರಿಯಾಣ: ಬಿಜೆಪಿಯ ಹ್ಯಾಟ್ರಿಕ್ ಗೆಲುವಿನ ಕನಸಿಗೆ ಬಂಡಾಯವೇ ಸವಾಲು

ದೇಶ, ಪ್ರಮುಖ ಸುದ್ದಿ
ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿರುವ ಬಿಜೆಪಿಗೆ ಇದೀಗ ಬಂಡಾಯ ಸವಾಲಾಗಿದೆ. ಬಂಡಾಯ ಮುಖಂಡರ ವಿರುದ್ದ ನಿಷ್ಠೂರ ಕ್ರಮಕ್ಕೆ ನಿರ್ಧರಿಸಿರುವ ಬಿಜೆಪಿ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಮತ್ತು ಇತರ ಏಳು ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದೆ.90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿಯೂ ಗೆಲುವು ಸಾಧಿಸಲೇಬೇಕೆಂದು ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ಟಿಕೆಟ್ ವಂಚಿತರ ಸವಾಲು ಎದುರಾಗಿದೆ.ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಸಹಿತ ಹಲವು ಮುಖಂಡರು ಸಂಧಾನಕ್ಕೆ ಮಣಿಯಲಿಲ್ಲ. ಈ ಹಿನ್ನೆಲೆಯಲ್ಲಿ ಏಳು ನಾಯಕರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.ಹರಿಯಾಣ ಬಿಜೆಪಿಯ ಮುಖ್ಯಸ್ಥ ಮೋಹನ್ ಲಾಲ್ ಅವರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಣದ ಮೂಲಗಳು ತಿಳಿಸಿವೆ....
ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ತತ್ತರ; ನೂರಕ್ಕೂ ಹೆಚ್ಚು ಮಂದಿ ಬಲಿ

ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ತತ್ತರ; ನೂರಕ್ಕೂ ಹೆಚ್ಚು ಮಂದಿ ಬಲಿ

ದೇಶ, ಪ್ರಮುಖ ಸುದ್ದಿ
ಕಠ್ಮಂಡು: ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ನೇಪಾಳ ತತ್ತರಿಸಿದೆ. ನಿರಂತರ ಮಳೆಯಿಂದಾಗಿ ಪ್ರವಾಹ ಉಲ್ಬಣಗೊಂಡಿದ್ದು ನೂರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.ಮಳೆಯಿಂದಾಗಿ ಸಂಭವಿಸಿದ ವಿವಿಧ ಪ್ರಕರಣಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 112ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರವಾಹದಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಅಸಂಖ್ಯ ಮಂದಿ ನಾಪತ್ತೆಯಾಗಿದ್ದಾರೆ. 3,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು.ಎಲ್ಲ ಪಕ್ಷಗಳು ದೇಣಿ...
ಮಧ್ಯಪ್ರಾಚ್ಯ ಸಂಘರ್ಷ; ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ದಾಳಿ

ಮಧ್ಯಪ್ರಾಚ್ಯ ಸಂಘರ್ಷ; ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ದಾಳಿ

ದೇಶ, ಪ್ರಮುಖ ಸುದ್ದಿ
ಜೆರುಸಲೆಂ: ಮಧ್ಯಪ್ರಾಚ್ಯದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಪೇಜರ್ ಬ್ಲಾಸ್ಟ್ ನಂತರ ಇದೀಗ ಇಸ್ರೇಲ್ ಸೇನೆ ಹಮಾಸ್ ಉಗ್ರರ ನೆಲೆಗಳ ಮೇಲೆ ಭಾರೀ ವಾಯುದಾಳಿ ನಡೆಸಿದೆ.ಹಮಾಸ್ ಉಗ್ರರನ್ನು ಬೆಂಬಲಿಸುವ ಹಿಜ್ಬುಲ್ಲಾ ಉಗ್ರರು ಹಾಗೂ ಇಸ್ರೇಲ್ ಸೇನೆಯ ನಡುವೆ ಹಲವು ದಿನಗಳಿಂದ ಸಂಘರ್ಷ ಏರ್ಪಟ್ಟಿದ್ದು, ಇಸ್ರೇಲ್ ಸೇನೆ ಶುಕ್ರವಾರ ರಾತ್ರಿ ಬೈರೂತ್ ನಲ್ಲಿ ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದೆ.ಈ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಮೊಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಹುಸೇನ್ ಅಹ್ಮದ್ ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಅಮೆರಿಕದಲ್ಲಿ ಇನ್ನೂ ಎರಡು ಭಾರತೀಯ ರಾಯಭಾರ ಕಚೇರಿ; ಪ್ರಧಾನಿ ಮೋದಿ

ಅಮೆರಿಕದಲ್ಲಿ ಇನ್ನೂ ಎರಡು ಭಾರತೀಯ ರಾಯಭಾರ ಕಚೇರಿ; ಪ್ರಧಾನಿ ಮೋದಿ

ದೇಶ, ಪ್ರಮುಖ ಸುದ್ದಿ
ನ್ಯೂಯಾರ್ಕ್‌: ಅಮೆರಿಕದಲ್ಲಿ ಇನ್ನೂ ಎರಡು ಭಾರತೀಯ ರಾಯಭಾರ ಕಚೇರಿ ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ರಾಯಭಾರ ಕಚೇರಿಗಳನ್ನು ತೆರೆಯುವ ಬಗ್ಗೆ ಸಲಹೆಗಳನ್ನು ಕೋರಿದ್ದೇವೆ. ಸಲಹೆಯ ನಂತರ ಭಾರತವು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ತಿಳಿಸಿದರು.ಜಗತ್ತಿನಲ್ಲಿ AI ಕ್ರಾಂತಿ ಬಗ್ಗೆ ತಮ್ಮದೇ ದಾಟಿಯಲ್ಲಿ ವಿಶ್ಲೇಷಣೆ ಮಾಡಿದ ಮೋದಿ AI ಅಂದ್ರೆ ಕೃತಕ ಬುದ್ಧಿಮತ್ತೆ. ಆದರೆ, ನನಗೆ AI ಎಂದರೆ ಅಮೆರಿಕನ್-ಇಂಡಿಯನ್ ಸ್ಪಿರಿಟ್ ಎಂದರು....
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ಬಿಡುಗಡೆ​ ಆಗಲಿದೆ.ಇದೇ ಸಂದರ್ಭದಲ್ಲಿ 'ದೇವರ' ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಿದೆ. 'ಆರ್​ಆರ್​ಆರ್​’ ಸಿನಿಮಾ ಬಳಿಕ ಜೂನಿಯರ್​ ಎನ್‌ಟಿಆರ್​ ಅವರು ಈ ಚಿತ್ರದಲ್ಲಿ ಕಮಾಲ್ ಪ್ರದರ್ಶಿಸಲಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ.https://youtu.be/HNYA6bqL6bU?si=nIRtqhPMISPhVIbJ...
ದೆಹಲಿಯ 3ನೇ ಮಹಿಳಾ ಸಿಎಂ ಆಗಿ ಅತಿಶಿ ಪದಗ್ರಹಣ

ದೆಹಲಿಯ 3ನೇ ಮಹಿಳಾ ಸಿಎಂ ಆಗಿ ಅತಿಶಿ ಪದಗ್ರಹಣ

ದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗಿ ಹಿರಿಯ ಎಎಪಿ ಶಾಸಕಿ ಅತಿಶಿ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಧಾನಿಯ ರಾಜ್ ನಿವಾಸದಲ್ಲಿ ಶನಿವಾರ ಅವರು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಮಾಡಿದರು. ಅವರ ಜೊತೆ ಐವರು ಸಂಪುಟ ಸಚಿವರಾಗಿ ಕೂಡಾ ಪ್ರಮಾಣ ವಚನ ಸ್ವೀಕರಿಸಿದರು.ದೆಹಲಿಯ 3ನೇ ಸಿಎಂ ಆಗಿ ಆತಿಶಿ ಅವರು ಅಧಿಕಾರ ವಹಿಸಿಕೊಂಡು ಗಮನಸೆಳೆದಿದ್ದಾರೆ. ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಹಿನ್ನಲೆಯಲ್ಲಿ ಸಿಎಂ ಪದಗ್ರಹಣ ಸಮಾರಂಭ ಸರಳವಾಗಿ ನಡೆಯಿತು. ಆತಿಶಿ ಸರ್ಕಾರ ಈ ತಿಂಗಳ 26-27 ರಂದು ನಡೆಯಲಿರುವ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಬಹುಮಾನ ಸಾಬೀತುಪಡಿಸಲಿದೆ ಎಂದು ಆಪ್ ನಾಯಕರು ತಿಳಿಸಿದ್ದಾರೆ....