
ಎಂಎಸ್ಪಿ ಖಾತ್ರಿ ಕಾನೂನು ಜಾರಿಯಾಗುವ ತನಕ ಹೋರಾಟ ನಿಲ್ಲುವುದಿಲ್ಲ : ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ
ಹರಿಯಾಣ: ಹರಿಯಾಣ ಚುನಾವಣಾ ಹಿನ್ನಲೆಯಲ್ಲಿ. ಕಿಸಾನ್ ಮಹಾಪಂಚಾಯತ್ ಸಮಾವೇಶ ನಡೆಸಲು ಸಾಧ್ಯವಿಲ್ಲ ಎಂದು ಪೊಲೀಸರು ರೈತರಿಗೆ ತಿಳಿಸಿದ್ದಾರೆ.. ಹಾಗೂ ಸಮಾವೇಶದ ಸ್ಥಳದಲ್ಲಿ ಹಾಕಲಾಗಿದ್ದ ಶಾಮಿಯಾನ ಮೈಕಳನ್ನ ಕಿತ್ತುಹೊಯ್ದಿದ್ದಾರೆ. ಇದನ್ನು ರೈತ ಮುಖಂಡರು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ಸಂದೇಶ ನೀಡಿದ್ದಾರೆ..ಸಮಾವೇಶ ನಡೆಸಲು ಹಾಕಿದ್ದ ಟೆಂಟುಗಳನ್ನ ಕಿತ್ತಾಕಿ ಮೈಕಳನ್ನ ಕಿತ್ತೆಸೆದ ಪೊಲೀಸರು ಬೆಳಿಗ್ಗೆ 9:00 ಒಳಗೆ ಸಮಾವೇಶ ನಡೆಸಲು ಆಸ್ಪದ ನೀಡದಿದ್ದರೆ. ರೈತರು ರಾಜ್ಯದ್ಯಂತ ಎಲ್ಲ ರಸ್ತೆಗಳನ್ನ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಸಮಾವೇಶ ನಡೆಸಲು ಅವಕಾಶ ಕಲ್ಪಿಸಿತು ಆದರೆ ಪಕ್ಕದ ರಾಜ್ಯದ ಪಂಜಾಬ್ ರೈತರಿಗೆ ಸಮಾವೇಶಕ್ಕೆ ಬರಲು ಅವಕಾಶ ನೀಡಲಿಲ್ಲ. ಆಗ ಮತ್ತಷ್ಟು ಸಂಖ್ಯೆಯ ರೈತರು ತಂಡೋಪ ತಂಡವಾಗಿ ಸಮಾವೇಶ ಸ್ಥಳಕ್ಕೆ ಬಂದರು. ಇದರಿಂದ ರೈತಶಕ್ತಿ ಇಮ್ಮಡಿ ಗೊಳಿಸಿತು.ಇದೇ ಸಮಾವೇಶದಲ್ಲಿ ಮಾತನಾಡಿದ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರೈತರ...





