Friday, August 7

ದೇಶ

ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ತಮಿಳುನಾಡಿನ ತಿರುಚಿಯಲ್ಲಿ ಮಂಗಳವಾರ ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ನೂರಾರು ರೈತರು ರೈಲು ಮೂಲಕ ತೆರಳಿದ್ದಾರೆ.ತಮಿಳುನಾಡಿನ ತಿರುಚಿಯಲ್ಲಿ ನಡೆಯುವ ರಾಷ್ಟ್ರೀಯ ರೈತ ಸಮಾವೇಶಕ್ಕೆ ಕರ್ನಾಟಕದಿಂದ ನೂರಾರು ಸಂಖ್ಯೆಯ ರೈತರು ರೈತ ನಾಯಕ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭಾಗಿಯಾಗುತ್ತಿಧದು, ಈ ಅನ್ನದಾತರು ಮೈಸೂರಿನಿಂದ ರೈಲು ಮೂಲಕ ತೆರಳಿದ್ದಾರೆ.ದೇಶಾದ್ಯಂತ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ ಸ್ವಾಮಿನಾಥನ್ ವರದಿ ಜಾರಿ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಪ್ರಬಲಗೊಳಿಸಲು. ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕರೂ ಆದ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೆತರ ಸಂಘ...
ಇಸ್ರೇಲ್ ಮೇಲೆ ಹಿಜಬುಲ್ ಉಗ್ರರ ದಾಳಿ; ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ

ಇಸ್ರೇಲ್ ಮೇಲೆ ಹಿಜಬುಲ್ ಉಗ್ರರ ದಾಳಿ; ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ

ದೇಶ, ಪ್ರಮುಖ ಸುದ್ದಿ
ಜೆರುಸಲೇಂ: ಮದ್ಯಪ್ರಾಚ್ಯಾದಲ್ಲಿ ಮತ್ತೆ ಸಂಘರ್ಷ ಭು್ಲಗಿದ್ದಿದೆ. ಲೆಬನಾನ್‌ನ ಉಗ್ರಗಾಮಿ ಸಂಘಟನೆ ಹಿಜ್‌ಬುಲ್ಲಾ ಮತ್ತು ಇಸ್ರೇಲ್ ಸೇನೆಯ ನಡುವೆ ಭಾನುವಾರ ಬೆಳಿಗ್ಗೆಯಿಂದ ಬಾರೀ ಸಂಘರ್ಷ ನಡೆದಿದೆ. ದಾಳಿ ಪ್ರತಿದಾಳಿಯಲ್ಲಿ ಭಾರೀ ಹಾನಿಯಾಗಿದ್ದು ಹಲವರು ಗಾಯಗೊಂಡಿದ್ದಾರೆ.ಭಾನುವಾರ ಉಭಯ ಗಂಪುಗಳ ನಡುವೆ ಮಿಲಿಟರಿ ಸಂಘರ್ಷ ನಡೆದಿದೆ.‌ ಇಸ್ರೇಲ್‌ನ ಉತ್ತರ ಭಾಗದ 11 ಇಸ್ರೇಲಿ ಮಿಲಿಟರಿ ನೆಲೆಗಳನ್ನು ಗುರಿಯಾಗಿರಿಸಿಕೊಂಡು, ಹೆಜ್ಬುಲ್ಲಾ ಪಡೆಯು ಸ್ಫೋಟಕ ತುಂಬಿದ ಸುಮಾರು 320 ರಾಕೆಟ್‌ಗಳು ಮತ್ತು ಬಹು ಡ್ರೋನ್‌ ಗಳನ್ನು ಉಡಾವಣೆಮಾಡಿದೆ ಎನ್ನಲಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಇಸ್ರೇಲ್‌ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ದೇಶದಾದ್ಯಂತ 48 ಗಂಟೆಗಳ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಮಿಲಿಟರಿ ಪಡೆಯನ್ನು ಸನ್ನದ್ದಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ....
ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸ್ವಲ್ಪ ದಿನ ವಿರಮಿಸಿರುವ ಮಳೆರಾಯ ಮತ್ತೆ ಆಗಮಿಸಲಿದ್ದಾನೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಶಿವಮೋಗ್ಗ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಬುಲಂದ್‌ಶಹರ್‌ನಲ್ಲಿ ಬಸ್-ಟೆಂಪೋ ನಡುವೆ ಅಪಘಾತ; 10 ಮಂದಿ ಸಾವು

ಬುಲಂದ್‌ಶಹರ್‌ನಲ್ಲಿ ಬಸ್-ಟೆಂಪೋ ನಡುವೆ ಅಪಘಾತ; 10 ಮಂದಿ ಸಾವು

ದೇಶ, ಪ್ರಮುಖ ಸುದ್ದಿ
ಲಕ್ನೋ: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.ಬಸ್ ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ ಸೇಲಂಪುರ ಸಮೀಪ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ, ಟೆಂಪೋಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ....
ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ಆಧ್ಯಾತ್ಮ, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿಶೇಷ
ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕ್ರಮ ಕೈಗೊಂಡಿದ್ದಾರೆ. ಇಂದು ಅವರು ವಾರಣಾಸಿಗೆ ನೀಡದ ಭೇಟಿ ಗಮನಸೆಳೆಯಿತು.ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕ ಭವನ ಛತ್ರಕ್ಕೆ ಇಂದು ಸಾರಿಗೆ ಮತ್ತು ಮಂಜುರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು,ಕರ್ನಾಟಕ ಭವನ ಛತ್ರ 1927 ನಿರ್ಮಿಸಿದ್ದು, ಇದೇ ವೇಳೆ ಕರ್ನಾಟಕ ಭವನದ ಛತ್ರ, ಕೊಠಡಿಗಳನ್ನು ಅಭಿವೃದ್ಧಿ ಪಡಿಸಲು ನಿಶ್ಚಯಿಸಿದ್ದು, ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭವಾಗಿ ಎಲ್ಲ ಸುಸಜ್ಜಿತವಾಗಿ ಅಭಿವೃದ್ಧಿಯಾಗಲಿದೆ, ಎಂದು ಸಚಿವರು ಮಾಹಿತಿ ನೀಡಿದರು.ಕಾಶಿಯ ಕರ್ನಾಟಕ ಭವನ ಛತ್ರ: ಕಾಶಿಯಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕರ್ನಾಟಕ ಭವನ‌ ನವೀಕರಣ ಕಾರ್ಯ- ಸಾರಿಗೆ-ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ತ್ವರಿತ ಕ್ರಮ, ವಾರಣಾಸಿಯ ಹನುಮಾನ್ ಘಾಟ್ ನಲ್ಲಿರುವ ಕರ್ನಾಟಕ ಭವನ ಛತ್ರ, ಕರ...
ದೇಶಾಧ್ಯಂತ ಆಸ್ಪತ್ರೆ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ದೇಶಾಧ್ಯಂತ ಆಸ್ಪತ್ರೆ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲಿನ ಅಮಾನುಷ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ದೇಶಾದ್ಯಂತ ವೈದ್ಯರು ಇಂದು ಮುಷ್ಕರ ಕೈಗೊಂಡಿದ್ದಾರೆ.ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಸಹಿತ ಬಹುತೇಕ ರಾಜ್ಯಗಳಲ್ಲಿ ಆಸ್ಪತ್ರೆಯ ಸೇವೆಗಳನ್ನು ಸ್ಥಗಿತಗೊಳಿಸಿ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ ನಡೆಯುತ್ತಿದ್ದು ಭಾನುವಾರ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಯಲಿದೆ ಎಂದು ವೈದ್ಯರ ಸಂಘದ ಮುಖಂಡರು ತಿಳಿಸಿದ್ದಾರೆ.ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​ಮುಂದಾಳುತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ರೋಗಿಗಳಿಗೆ ತೊಂದರೆಯಾಗದಂತೆ ಈ ಹೋರಾಟ ನಡೆಸಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ಈ ನಡುವೆ ವೈದ್ಯರ ಮುಷ್ಕರದಿಂದಾಗಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳು ಪರದಾಡುವಂತಾಗಿದೆ....
ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ಆರೆಸ್ಸೆಸ್ ಶಕ್ತಿಕೇಂದ್ರದಲ್ಲಿ ಹೀಗಿತ್ತು ಸ್ವಾತಂತ್ರ್ಯೋತ್ಸವ ಕೈಂಕರ್ಯ

ದೇಶ, ಪ್ರಮುಖ ಸುದ್ದಿ
ನಾಗ್ಪುರ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ರಾಷ್ಟ್ರಭಕ್ತಿಯ ಹಬ್ಬವಾಗಿ ಆಚರಿಸಲಾಗುತ್ತಿದೆ. RSS ಪಾಳಯದಲ್ಲೂ ಸ್ವಾತಂತ್ರ್ಯೋತ್ಸವ ಸಡಗರ ಕಡುಬಂದಿದೆ.ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಯಲ್ಲಿ ನೆರವೇರಿದ ಈ ರಾಷ್ಟ್ರಹಬ್ಬದ ಕೈಂಕರ್ಯವು ನಾಡಿನ ಗಮನೆಳೆಯಿತು. ಸಂಘದ ಶಕ್ತಿಕೇಂದ್ರದಲ್ಲಿನ ಕಾರ್ಯಕ್ರಮಕ್ಕೆ ಸರಸಂಘಚಾಲಕ್ ಡಾ.ಮೋಹನ್ ಭಾಗವತ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.78वें स्वतंत्रता दिवस के अवसर पर राष्ट्रीय स्वयंसेवक संघ के पूजनीय सरसंघचालक डॉ. मोहन भागवत जी ने आज संघ कार्यालय, महाल (नागपुर) में ध्वजारोहण किया। pic.twitter.com/aXO2vJU0ke — RSS (@RSSorg) August 15, 2024 ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಧಾನ ಕಚೇರಿ ಆವರಣದಲ್ಲಿ ಸಮಾಗಮವಾದ ಸಂಘದ ವಿವಿಧ ಕ್ಷೇತ್ರಗಳ ಪ್ರಮುಖರು, ಕಾರ್ಯಕರ್ತರು ಈ ವಿಶೇಷ ಸ್ವಾತಂತ್ರ್ಯ ದಿನಾಚರಣೆಯ ಸನ್ನಿವೇಶವನ್ನು ಸಾಕ್ಷೀಕರಿಸಿದರು....
ವಿಕಸಿತ್ ಭಾರತ: 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದ ಮೋದಿ

ವಿಕಸಿತ್ ಭಾರತ: 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದ ಮೋದಿ

ದೇಶ, ಪ್ರಮುಖ ಸುದ್ದಿ
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ.ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು.ಈ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡದ ಪ್ರಧಾನಿ ಮೋದಿ, ‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದೆ ಎಂದರು. ವಿಕಸಿತ ಭಾರತ ಮೂಲಕ ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ಅವರಿಗೆ ಹೃದಯಪೂರ್ವಕ ನಮನ ಎಂದ ಅವರು, ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೂ, ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದು ಹೇಳಿದರು.ನೈಸರ್ಗಿಕ ವಿಕೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ, ಅನೇಕ ಜನರು ಇದರಿಂದ ತಮ್ಮ ಕುಟುಂಬಗಳನ್ನು, ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ ಅವರ ಪರವಾಗಿ ...
ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ.ಮನೆಮನೆಗಳಲ್ಲೂ ತಿಂರಂಗ ಧ್ವಜ ಹಾರಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನುಡಿ ಬರೆದಿರುವ ಹರ್ ಘರ್ ತಿರಂಗ ಅಭಿಯಾನಕ್ಕೂ ಭಾರೀ ಬೆಂಬಲ ವ್ಯಕ್ತವಾಗಿದೆ.ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು.ಶಾಲೆಗಳಲ್ಲಿ, ಸಂಘಸಂಸ್ಥೆಗಳಲ್ಲೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳು ಗಮನಸೆಳೆದವು....
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ; ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆದಿದ್ದು ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳೂ ಭರ್ತಿಯಾಗಿದ್ದು ಹೊರ ಹರಿವು ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.ತುಂಗಭದ್ರಾ ಜಲಾಶಯದ ಒಂದು ಕ್ರೆಸ್ಟ್ ಗೇಟ್ ಹಾನಿಗೊಳಗಾಗಿದ್ದು ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಹರಿ ಬಿಡಲಾಗಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.ಇನ್ನೊಂದೆಡೆ, ಕಾವೇರಿ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯತ್ತಿದೆ. ಹಾಗಾಗಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಭಾಗದ ನದಿಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ....