
ಬಿಹಾರದಲ್ಲಿ ಧಗಧಗಿಸಿದ ಆಸ್ಪತ್ರೆ: ಐಸಿಯುನಲ್ಲಿ ಮೂವರು ಸಾವು
ಮುಜಫರ್ಪುರ: ಬಿಹಾರದ ಮುಜಫರ್ಪುರದಲ್ಲಿರುವ ಪ್ರಸಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಗುರುವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ರೋಗಿಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಶಾರ್ಟ್ ಸರ್ಕ್ಯೂಟ್ನಿಂದ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ದಟ್ಟ ಹೊಗೆ ಆಸ್ಪತ್ರೆಯೊಳಗೆ ವ್ಯಾಪಿಸಿತು. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.\ಅಗ್ನಿಶಾಮಕ ಅಧಿಕಾರಿ ಆರ್.ಎನ್. ಪಾಂಡೆ ನೇತೃತ್ವದಲ್ಲಿ 12 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಆಸ್ಪತ್ರೆಯೊಳಗೆ ಸಿಲುಕಿದ್ದ ರೋಗಿಗಳನ್ನು ಸುರಕ್ಷಿತವಾಗಿ ಹೊರತೆಗೆದವು. ಬಳಿಕ ಹಲವು ರೋಗಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದೆ.ಅವಘಡದ ತೀವ್ರತೆಯನ್ನು ಗಮನಿಸಿದ ಜಿಲ್ಲಾಧಿಕಾರಿ ಸುಬ್ರತ್ ಕುಮಾರ್ ಸೇನ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ...









