Tuesday, August 11

ದೇಶ

ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

ದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸರ್ಕಾರದ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಮೌಲ್ಯಮಾಪನದಲ್ಲಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಮುನ್ನಡೆಸುತ್ತಿರುವ ಗ್ರಾಹಕ ವ್ಯವಹಾರಗಳ ಸಚಿವಾಲಯ ಮೊದಲ ಸ್ಥಾನ ಪಡೆದಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (B. Y. Vijayendra) ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಪ್ರಲ್ಹಾದ್ ಜೋಶಿ ಅವರ ನಾಯಕತ್ವದಲ್ಲಿ ಸಚಿವಾಲಯವು ಸಾರ್ವಜನಿಕ ಕುಂದುಕೊರತೆಗಳ ತ್ವರಿತ ಪರಿಹಾರ, ಫೈಲ್ ವಿಲೇವಾರಿ ಸೇರಿದಂತೆ ಹಲವು ಮಾನದಂಡಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ “ಉತ್ತಮ ಆಡಳಿತ” ದೃಷ್ಟಿಕೋನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಸಚಿವಾಲಯ ಯಶಸ್ವಿಯಾಗಿದೆ. ಇದು ಪ್ರಲ್ಹಾದ್ ಜೋಶಿ ಅವರ ಸಮರ್ಪಿತ ಆಡಳಿತ, ಪರಿಣಿತಿ ಮತ್ತು ಕರ್ತವ್ಯನಿಷ್ಠೆಗೆ ಸಾಕ್ಷಿಯಾಗಿದೆ ಎಂದು ವಿಜಯೇಂದ್ರ ಶ್ಲಾಘಿಸಿದ್ದಾರೆ. ...
ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

ದೇಶ, ಪ್ರಮುಖ ಸುದ್ದಿ, ವೀಡಿಯೊ
ಐಪಿಎಲ್ 2026ರ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡವು ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ತಂಡದ ಪರ ಜೋಶ್ ಇಂಗ್ಲಿಸ್ (Josh Inglis) 72 ರನ್ ಸಿಡಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಪಂಜಾಬ್ ಪರ ಮಾರ್ಕೊ ಜಾನ್ಸೆನ್ (Marco Jansen) ಹಾಗೂ ಯುಜ್ವೇಂದ್ರ ಚಾಹಲ್ (Yuzvendra Chahal) ತಲಾ ಎರಡು ವಿಕೆಟ್ ಪಡೆದು ಮಿಂಚಿದರು.197 ರನ್ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪರ ನಾಯಕ ಶ್ರೇಯಸ್ ಐಯ್ಯರ್ (Shreyas Iyer) ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 51 ಎಸೆತಗಳಲ್ಲಿ ಶತಕ ಸಿಡಿಸಿದ ಅಯ್ಯರ್ ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. Cometh the hour, cometh the Captain! 🫡🔥🎥 What a way to bring up a maiden #TATAIPL ton and seal victory 👏Scorecard ▶️ https://t.co/2A...
ರಾಜ್ಯಸಭೆಗೆ ದೇವೇಗೌಡ ಮರು ಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

ರಾಜ್ಯಸಭೆಗೆ ದೇವೇಗೌಡ ಮರು ಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

ದೇಶ, ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸುವ ಕುರಿತು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಚರ್ಚೆಗಳು ಜೋರಾಗಿವೆ.ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲದ ಲೆಕ್ಕಾಚಾರ ಪ್ರಕಾರ, ಒಬ್ಬ ಅಭ್ಯರ್ಥಿ ಗೆಲ್ಲಲು ಕನಿಷ್ಠ 45 ರಿಂದ 46 ಮತಗಳ ಅಗತ್ಯವಿದೆ. ಕಾಂಗ್ರೆಸ್ ಬಳಿ 136 ಶಾಸಕರ ಬಲವಿದ್ದು, ಪಕ್ಷವು ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸ್ಥಿತಿಯಲ್ಲಿದೆ.ಇನ್ನೊಂದೆಡೆ ಬಿಜೆಪಿ ಬಳಿ 63 ಹಾಗೂ ಜೆಡಿಎಸ್ ಬಳಿ 18 ಶಾಸಕರಿದ್ದು, ಮೈತ್ರಿಕೂಟದ ಒಟ್ಟು ಬಲ 81ಕ್ಕೆ ತಲುಪುತ್ತದೆ. ಹೀಗಾಗಿ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ. ದೇವೇಗೌಡರನ್ನು ಕಣಕ್ಕಿಳಿಸಿದರೆ ಅವರ ಗೆಲುವು ಬಹುತೇಕ ಖಚಿತ ಎನ್ನಲಾಗುತ್ತಿದೆ.ದೇವೇಗೌಡರ ರಾಜಕೀಯ ಅನುಭವ, ಹಿರಿತನ ಮತ್ತು ರಾಷ್ಟ್ರೀಯ ಮಟ್ಟದ ಪ್ರಭಾವವನ್ನು ಪರಿಗಣಿಸಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯ ಜೆಡಿಎಸ್ ವಲಯದಲ್ಲಿ ವ್ಯಕ್ತವಾಗಿದೆ. ಈ ಸಂಬಂಧ ಜೆಡಿಎಸ್ ನಾಯಕರು ಈಗಾಗಲೇ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಕಸರತ್ತು ಆರಂಭಿ...
ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

ಮತ್ತೆ ಏರಿದ ಇಂಧನ ದರ; ಬೆಂಗಳೂರಿನಲ್ಲಿ ಪೆಟ್ರೋಲ್ ₹107.14, ಡೀಸೆಲ್ ₹95.04

ದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ದೇಶದಲ್ಲಿ ದೀರ್ಘಕಾಲ ಸ್ಥಿರವಾಗಿದ್ದ ಇಂಧನ ದರಗಳಿಗೆ ಇದೀಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರ ತೈಲ ಕಂಪನಿಗಳು ಪೆಟ್ರೋಲ್ ದರವನ್ನು ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ದರವನ್ನು 91 ಪೈಸೆ ಹೆಚ್ಚಿಸಿವೆ.ಇಂಧನ ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹107.14 ಆಗಿದ್ದರೆ, ಡೀಸೆಲ್ ದರ ₹95.04ಕ್ಕೆ ಏರಿಕೆಯಾಗಿದೆ.ಇತ್ತೀಚಿನ ದಿನಗಳಲ್ಲಿ ತೈಲ ಕಂಪನಿಗಳು ನಿರಂತರವಾಗಿ ಇಂಧನ ದರ ಹೆಚ್ಚಳ ಮಾಡುತ್ತಿದ್ದು, ಮೇ ತಿಂಗಳಲ್ಲಿ ಇದು ಮೂರನೇ ಬಾರಿ ಏರಿಕೆಯಾಗಿದೆ. ಈ ವಾರದ ಆರಂಭದಲ್ಲಿಯೇ ಲೀಟರ್‌ಗೆ 90 ಪೈಸೆ ಹೆಚ್ಚಳ ಮಾಡಲಾಗಿತ್ತು. ಅದಕ್ಕೂ ಮೊದಲು ಸಾರ್ವಜನಿಕ ತೈಲ ಮಾರುಕಟ್ಟೆ ಕಂಪನಿಗಳು ಒಮ್ಮೆಗೆ ಸುಮಾರು ₹3ರವರೆಗೆ ದರ ಹೆಚ್ಚಿಸಿ ದೀರ್ಘಕಾಲದ ಸ್ಥಿರತೆಗೆ ಬ್ರೇಕ್ ಹಾಕಿದ್ದವು.ಇತ್ತೀಚಿನ ಪರಿಷ್ಕರಣೆಯ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ₹98.64ರಿಂದ ₹99.51ಕ್ಕೆ ಏರಿಕೆಯಾಗಿದೆ. ಡೀಸೆಲ್ ದರ ₹91.58ರಿಂದ ₹92.49ಕ್ಕೆ ತಲುಪಿದೆ.ಮುಂಬೈನಲ್ಲಿ ಪೆಟ್ರೋಲ್ ದರ ₹107.56 ಹಾಗೂ ಡೀಸೆಲ್ ₹94.05 ಆಗಿದೆ. ಚೆನ್ನೈನಲ್ಲಿ...
IPLನಲ್ಲಿ ಸನ್ ರೈಸರ್ಸ್ ಬೃಹತ್ ಮೊತ್ತದ ದಾಖಲೆ, RCB ಹೀನಾಯ ಸೋಲಿನ ಇತಿಹಾಸ

IPLನಲ್ಲಿ ಸನ್ ರೈಸರ್ಸ್ ಬೃಹತ್ ಮೊತ್ತದ ದಾಖಲೆ, RCB ಹೀನಾಯ ಸೋಲಿನ ಇತಿಹಾಸ

ದೇಶ, ಪ್ರಮುಖ ಸುದ್ದಿ
ಹೈದರಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯ ಶುಕ್ರವಾರದ ಮಹತ್ವದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಜಯ ಸಾಧಿಸಿದೆ.ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್‌ಗಳಲ್ಲಿ 255 ರನ್ ಕಲೆಹಾಕಿತು.ಬೃಹತ್ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್‌ಗಳಲ್ಲಿ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಪರಿಣಾಮ, ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ದಾಖಲಿಸಿತು.ಈ ಪಂದ್ಯದಲ್ಲಿ 255 ರನ್ ಸಿಡಿಸಿದ ಹೈದರಾಬಾದ್ ತಂಡ ಐಪಿಎಲ್ ಇತಿಹಾಸದಲ್ಲೇ ಒಂದೇ ತಂಡದ ವಿರುದ್ಧ ಎರಡು ಬಾರಿ 250ಕ್ಕೂ ಅಧಿಕ ಮೊತ್ತ ಪೇರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದೆ.ಇನ್ನೊಂದೆಡೆ, ಈ ಸೋಲಿನೊಂದಿಗೆ ಆರ್‌ಸಿಬಿ ತಂಡ ಹೀನಾಯ ದಾಖಲೆಯೊಂದನ್ನು ತನ್ನ ಹೆಸರಿಗೆ ಸೇರಿಸಿಕೊಂಡಿದೆ. ಆದರೂ ಅಂಕಪಟ್ಟಿಯಲ್ಲಿ ಆರ್‌ಸಿಬಿ ಅಗ್ರಸ್ಥಾನ ಕಾಯ್ದುಕೊಂಡಿದೆ.ಪ್ರಸ್ತುತ ಆರ್‌ಸಿಬಿ 18 ಅಂಕಗಳೊಂದಿಗೆ +0.783 ನೆಟ್ ರನ್‌ರೇಟ್ ಹ...

ಅನುದಾನರಹಿತ ಶಾಲೆಗಳಿಗೆ SMC ಮಾರ್ಗಸೂಚಿಗಳು ಅನ್ವಯಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳಿಂದ ಯಾವುದೇ ರೀತಿಯ ಹಣಕಾಸು ನೆರವು ಅಥವಾ ಅನುದಾನ ಪಡೆಯದ ಅನುದಾನರಹಿತ ಖಾಸಗಿ ಶಾಲೆಗಳಿಗೆ ಶಾಲಾ ನಿರ್ವಹಣಾ ಸಮಿತಿ (SMC) ಮಾರ್ಗಸೂಚಿಗಳು–2026 ಅನ್ವಯಿಸುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಸ್ಪಷ್ಟಪಡಿಸಿದೆ.ಶಿಕ್ಷಣ ಹಕ್ಕು ಕಾಯ್ದೆ (RTE Act), 2009ರ ಸೆಕ್ಷನ್ 21 ಅಡಿಯಲ್ಲಿ ಹೊಸ ಮಾರ್ಗಸೂಚಿಗಳ ಅನ್ವಯ ಕುರಿತಾಗಿ ವಿವಿಧ ವಲಯಗಳಿಂದ ವ್ಯಕ್ತವಾದ ಗೊಂದಲ ಮತ್ತು ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಸಚಿವಾಲಯ ಈ ಸ್ಪಷ್ಟೀಕರಣ ನೀಡಿದೆ.ಶಾಲಾ ಶಿಕ್ಷಣದಲ್ಲಿ ಸಮುದಾಯದ ಭಾಗವಹಿಸುವಿಕೆ ಹೆಚ್ಚಿಸಲು ಮತ್ತು ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಶಿಕ್ಷಣ ಸಚಿವಾಲಯ ಮೇ 6ರಂದು ಶಾಲಾ ನಿರ್ವಹಣಾ ಸಮಿತಿ (SMC) ಮಾರ್ಗಸೂಚಿಗಳು–2026 ಅನ್ನು ಪ್ರಕಟಿಸಿತ್ತು.ಸಚಿವಾಲಯದ ಪ್ರಕಾರ, ಶಾಲೆಗಳ ಕಾರ್ಯನಿರ್ವಹಣೆಯನ್ನು ಸುಧಾರಿಸುವುದು, ಸಮುದಾಯದ ಮಾಲೀಕತ್ವವನ್ನು ಖಚಿತಪಡಿಸುವುದು ಹಾಗೂ ಸಮಗ್ರ ಮತ್ತು ಬೆಂಬಲಿತ ಕಲಿಕಾ ವಾತಾವರಣ ನಿರ್ಮಿಸುವುದು ಈ ಮಾರ್ಗಸೂಚಿಗಳ ಪ್ರಮುಖ ಉದ್ದೇಶವಾಗಿದೆ.ಮೇ 20ರಂದು ಎಲ...
ಎಲೆಕ್ಟ್ರಿಕ್ ಬಸ್‌, ಟ್ರಕ್ ಬಳಕೆ ಹೆಚ್ಚಿಸಲು ಕೇಂದ್ರದ ಚಿಂತನೆ

ಎಲೆಕ್ಟ್ರಿಕ್ ಬಸ್‌, ಟ್ರಕ್ ಬಳಕೆ ಹೆಚ್ಚಿಸಲು ಕೇಂದ್ರದ ಚಿಂತನೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಮತ್ತು ಎಲೆಕ್ಟ್ರಿಕ್ ಟ್ರಕ್‌ಗಳ ಬಳಕೆಯನ್ನು ವೇಗಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ವಲಯದಲ್ಲಿ ಇವಿ ವಾಣಿಜ್ಯ ವಾಹನಗಳ ಅಳವಡಿಕೆಗೆ ಹಣಕಾಸು ನೆರವು ಮತ್ತು ಹೊಸ ವ್ಯವಸ್ಥೆಗಳ ಕುರಿತು ಚರ್ಚಿಸಲು ಭಾರೀ ಕೈಗಾರಿಕಾ ಸಚಿವಾಲಯ ಬುಧವಾರ ಉನ್ನತ ಮಟ್ಟದ ಸಭೆ ನಡೆಸಿತು.ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎಸ್‌ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ ಹಾಗೂ ಎಸ್‌ಐಡಿಬಿಐ ಸೇರಿದಂತೆ ಹಲವು ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು. ಸಾರಿಗೆ ಸಂಘಟನೆಗಳು ಮತ್ತು ಖಾಸಗಿ ಬಸ್‌, ಟ್ರಕ್ ನಿರ್ವಾಹಕರ ಪ್ರತಿನಿಧಿಗಳೂ ಉಪಸ್ಥಿತರಿದ್ದರು.ಎಲೆಕ್ಟ್ರಿಕ್ ವಾಣಿಜ್ಯ ವಾಹನ ಖರೀದಿಯಲ್ಲಿ ಎದುರಾಗುತ್ತಿರುವ ಹಣಕಾಸು ಸಮಸ್ಯೆಗಳು ಸಭೆಯ ಪ್ರಮುಖ ಚರ್ಚಾ ವಿಷಯವಾಗಿತ್ತು. ಸಾಲ ಮಂಜೂರಿಗೆ ಅನುಕೂಲವಾಗುವಂತೆ ಕ್ರೆಡಿಟ್ ಗ್ಯಾರಂಟಿ ಯೋಜನೆ ಹಾಗೂ ಬಡ್ಡಿದರ ಸಬ್ಸಿಡಿ ನೀಡುವ ಸಾಧ್ಯತೆಗ...
ಹಣದುಬ್ಬರ, ನಿರುದ್ಯೋಗ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

ಹಣದುಬ್ಬರ, ನಿರುದ್ಯೋಗ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

ದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಏರುತ್ತಿರುವ ಹಣದುಬ್ಬರ, ನಿರುದ್ಯೋಗ, ಇಂಧನ ದರ ಏರಿಕೆ ಮತ್ತು ಆರ್ಥಿಕ ಸಂಕಷ್ಟಗಳ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, “ಮೋದಿ ಸರ್ಕಾರದ ಲೂಟಿಯ ಸಂಕಷ್ಟದಲ್ಲಿದ್ದರೂ ಜನರು ಭಾಷಣಗಳ ಮಧುರವನ್ನು ಆನಂದಿಸಬೇಕು ಎಂದು ಪ್ರಧಾನಿ ಬಯಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.ಕಳೆದ 11 ವರ್ಷಗಳಲ್ಲಿ ಪ್ರತಿಯೊಬ್ಬ ಭಾರತೀಯನ ಮೇಲಿನ ಸರಾಸರಿ ಸಾಲದ ಹೊರೆ ಗಣನೀಯವಾಗಿ ಹೆಚ್ಚಿದೆಯಾದರೆ, ಮತ್ತೊಂದೆಡೆ ಕೋಟ್ಯಾಧಿಪತಿಗಳ ಸಂಪತ್ತು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಆರೋಪಿಸಿದರು.ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಪ್ರಸ್ತಾಪಿಸಿದ ಖರ್ಗೆ, 2014ರಿಂದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಶೇ.121ರಷ್ಟು ಹಾಗೂ ವಾಣಿಜ್ಯ ಎಲ್‌ಪಿಜಿ ದರ ಶೇ.154ರಷ್ಟು ಹೆಚ್ಚಾಗಿದೆ ಎಂದು ಹೇಳಿದರು. ಸಿಎನ್‌ಜಿ, ಹಾಲು, ಬ್ರೆಡ್ ಮತ್ತು ಔಷಧಿಗಳ ಬೆಲೆಯೂ ಭಾರೀ ಏರಿಕೆಯಾಗಿದೆ ಎಂದು ಆರೋಪಿಸಿದರು.ಪೆಟ್ರೋಲ್ ಮೇಲಿನ ತೆರಿಗೆ ಮತ್...
IOS SAGAR ಕಾರ್ಯಾಚರಣೆ ಯಶಸ್ವಿ; ಕೊಚ್ಚಿಗೆ ಮರಳಿದ ಐಎನ್‌ಎಸ್ ಸುನಯನ

IOS SAGAR ಕಾರ್ಯಾಚರಣೆ ಯಶಸ್ವಿ; ಕೊಚ್ಚಿಗೆ ಮರಳಿದ ಐಎನ್‌ಎಸ್ ಸುನಯನ

ದೇಶ, ಪ್ರಮುಖ ಸುದ್ದಿ
ಕೊಚ್ಚಿ: ಹಿಂದೂ ಮಹಾಸಾಗರ ಪ್ರದೇಶದಲ್ಲಿ ಬಹುರಾಷ್ಟ್ರೀಯ ಕಡಲ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ನೌಕಾಪಡೆಯ ಐಎನ್‌ಎಸ್ ಸುನಯನ ಯುದ್ಧನೌಕೆ ಮಂಗಳವಾರ ಕೊಚ್ಚಿಗೆ ಮರಳಿದೆ. ಇದರೊಂದಿಗೆ IOS SAGAR ನಿಯೋಜನೆ ಯಶಸ್ವಿಯಾಗಿ ಅಂತ್ಯಗೊಂಡಿದೆ.ಈ ಕಾರ್ಯಾಚರಣೆಯಲ್ಲಿ ಬಾಂಗ್ಲಾದೇಶ, ಇಂಡೋನೇಷ್ಯಾ, ಕೀನ್ಯಾ, ಮಲೇಷ್ಯಾ, ಮಾಲ್ಡೀವ್ಸ್, ಮಾರಿಷಸ್, ಮೊಜಾಂಬಿಕ್, ಮ್ಯಾನ್ಮಾರ್, ಸೀಶೆಲ್ಸ್, ಸಿಂಗಾಪುರ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಟಾಂಜಾನಿಯಾ, ಥೈಲ್ಯಾಂಡ್, ಟಿಮೋರ್ ಲೆಸ್ಟೆ ಹಾಗೂ ಯುಎಇ ಸೇರಿದಂತೆ 16 ರಾಷ್ಟ್ರಗಳ 38 ಸಿಬ್ಬಂದಿ ಭಾಗವಹಿಸಿದ್ದರು.ಭಾರತದ SAGAR ಮತ್ತು MAHASAGAR ಉಪಕ್ರಮಗಳಡಿ ಈ ಕಾರ್ಯಾಚರಣೆ ನಡೆದಿದ್ದು, ಪ್ರಾದೇಶಿಕ ಕಡಲ ಸಹಕಾರ ಮತ್ತು ಸಾಮೂಹಿಕ ಭದ್ರತೆಯನ್ನು ಬಲಪಡಿಸುವುದು ಇದರ ಉದ್ದೇಶವಾಗಿತ್ತು.ಕೊಚ್ಚಿ ಬಂದರಿಗೆ ಆಗಮಿಸಿದ ಐಎನ್‌ಎಸ್ ಸುನಯನಗೆ ನೀರಿನ ಫಿರಂಗಿ ವಂದನೆಯೊಂದಿಗೆ ಸ್ವಾಗತ ಕೋರಲಾಯಿತು. ದಕ್ಷಿಣ ನೌಕಾ ಕಮಾಂಡ್‌ನ ಮುಖ್ಯಸ್ಥ ವೈಸ್ ಅಡ್ಮಿರಲ್ ಸಮೀರ್ ಸಕ್ಸೇನಾ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು.ಕಾರ್ಯಾಚರಣೆ ...
ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

ದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಖಗೋಳಶಾಸ್ತ್ರ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮಹತ್ವದ ಸಾಧನೆ ಮಾಡಿದ್ದು, ಇದುವರೆಗೆ ಪತ್ತೆಯಾದ ಅತ್ಯಂತ ಕಡಿಮೆ ಕಕ್ಷಾ ಅವಧಿಯ ನಾಕ್ಷತ್ರಿಕ ಬೈನರಿ ಸಿಸ್ಟಮ್‌ಗಳಲ್ಲಿ ಒಂದನ್ನು ಗುರುತಿಸಿದ್ದಾರೆ.ಈ ಅಪರೂಪದ ವ್ಯವಸ್ಥೆಯಲ್ಲಿ ಕಂದು ಕುಬ್ಜ ಸಹಚರ ಹೊಂದಿರುವ ನೀಲಿ ಸ್ಟ್ರಾಗ್ಲರ್ ನಕ್ಷತ್ರವನ್ನು ಮೊದಲ ಬಾರಿಗೆ ದೃಢೀಕರಿಸಲಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.ಗುವಾಹಟಿ ವಿಶ್ವವಿದ್ಯಾಲಯ, ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ, ಆರ್ಯಭಟ್ಟ ಸಂಶೋಧನಾ ಸಂಸ್ಥೆ ಹಾಗೂ ಇಟಲಿಯ ಐಎನ್‌ಎಎಫ್-ಕ್ಯಾಟಾನಿಯಾ ಆಸ್ಟ್ರೋಫಿಸಿಕಲ್ ಅಬ್ಸರ್ವೇಟರಿ ವಿಜ್ಞಾನಿಗಳ ತಂಡ ಈ ಸಂಶೋಧನೆ ನಡೆಸಿದೆ.ಹೊಸದಾಗಿ ಪತ್ತೆಯಾದ ಈ ಬೈನರಿ ಸಿಸ್ಟಮ್ ಕೇವಲ 5.6 ಗಂಟೆಗಳ ಕಕ್ಷಾ ಅವಧಿ ಹೊಂದಿದ್ದು, ಇದನ್ನು ಅತ್ಯಂತ ಸಾಂದ್ರ ಬೈನರಿ ವ್ಯವಸ್ಥೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.ಈ ವ್ಯವಸ್ಥೆಯಲ್ಲಿರುವ ಕಂದು ಕುಬ್ಜವು ಗ್ರಹಕ್ಕಿಂತ ದೊಡ್ಡದಾಗಿದ್ದರೂ ಸಾಮಾನ್ಯ ನಕ್ಷತ್ರದಂತೆ ಹೈಡ್ರೋಜನ್ ಸಂಯೋಜನೆ ನಡೆಸಲು ಸಾಕಷ್ಟು ದ್ರವ್ಯರಾಶಿ ಹೊಂದಿಲ್ಲ. ಇದರ ದ್ರವ್ಯರಾಶಿ ಸೂರ್ಯನ ದ್ರವ್ಯರಾಶಿಗಿಂತ ಸ...