Sunday, August 9

ದೇಶ

ನೀಟ್ ವಿವಾದ: ಎನ್‌ಟಿಎ 47 ಅಧಿಕಾರಿಗಳ ವಜಾ; ಪೇಪರ್ ಲೀಕ್ ತಡೆ ಮಸೂದೆಗೆ ಸಂಪುಟ ಅನುಮೋದನೆ

ನೀಟ್ ವಿವಾದ: ಎನ್‌ಟಿಎ 47 ಅಧಿಕಾರಿಗಳ ವಜಾ; ಪೇಪರ್ ಲೀಕ್ ತಡೆ ಮಸೂದೆಗೆ ಸಂಪುಟ ಅನುಮೋದನೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ನೀಟ್-ಯುಜಿ ಪರೀಕ್ಷೆ ಅಕ್ರಮ ಆರೋಪಗಳ ನಡುವೆಯೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಎನ್‌ಟಿಎಯ ಕಾರ್ಯವೈಖರಿಯನ್ನು ಸಂಪೂರ್ಣವಾಗಿ ಸುಧಾರಿಸುವ ಪ್ರಕ್ರಿಯೆಯ ಭಾಗವಾಗಿ ಇನ್ನೂ ಕೆಲವು ಅಧಿಕಾರಿಗಳ ವಿರುದ್ಧವೂ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಬಳಿಕ ಎನ್‌ಟಿಎ ತೀವ್ರ ಟೀಕೆಗೆ ಗುರಿಯಾಗಿದ್ದು, ಸಂಸ್ಥೆಯ ಪುನರ್‌ರಚನೆಗೆ ಆಗ್ರಹಗಳು ಕೇಳಿಬಂದಿದ್ದವು. ಆದರೆ, ಎನ್‌ಟಿಎಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.ಇದೇ ವೇಳೆ, ನೀಟ್ ಪರೀಕ್ಷೆ ಅಕ್ರಮವನ್ನು ವಿರೋಧಿಸಿ ದೆಹಲಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಸೇರಿದಂತೆ ಕೆಲವು ಸಂಘಟನೆಗಳು ಪ್ರತಿಭಟನೆ ಮುಂದುವರಿಸಿವೆ. ಇನ್ನೊಂದೆಡೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಠಿಣ ಶಿಕ್ಷೆಗೆ ಅವಕಾಶ ಕ...
ಸಂಸತ್ತಿನಲ್ಲಿ ನೀಟ್ ಕೋಲಾಹಲ; ಸಂಸತ್ ನಲ್ಲಿ ‘ಇಂಡಿಯಾ’ ಕೋಲಾಹಲ

ಸಂಸತ್ತಿನಲ್ಲಿ ನೀಟ್ ಕೋಲಾಹಲ; ಸಂಸತ್ ನಲ್ಲಿ ‘ಇಂಡಿಯಾ’ ಕೋಲಾಹಲ

ದೇಶ, ಪ್ರಮುಖ ಸುದ್ದಿ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಶುಕ್ರವಾರವೂ ಸಂಸತ್ ಆವರಣದಲ್ಲಿ ಪ್ರತಿಭಟನೆ ಮುಂದುವರಿಸಿವೆ. ಇಂಡಿಯಾ ಒಕ್ಕೂಟ ಹಾಗೂ ಕಾಂಗ್ರೆಸ್ ಸಂಸದರು ಸಂಸತ್ ಭವನದ ಮಕರ ದ್ವಾರದಲ್ಲಿ ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ, ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಕರೆ ನೀಡಿದೆ. ವಿದ್ಯಾರ್ಥಿಗಳು ಮೆಟ್ರೋ ಹಾಗೂ ಬಸ್ ನಿಲ್ದಾಣಗಳಿಂದ ಜಂತರ್ ಮಂತರ್‌ಗೆ ತೆರಳಿದ ದೃಶ್ಯಗಳು ಕಂಡುಬಂದವು.ಪ್ರತಿಪಕ್ಷಗಳ ನಿರಂತರ ಗದ್ದಲದಿಂದ ಸಂಸತ್ ಮುಂಗಾರು ಅಧಿವೇಶನದ ಐದನೇ ದಿನವೂ ಲೋಕಸಭೆಯಲ್ಲಿ ಯಾವುದೇ ಮಹತ್ವದ ಕಲಾಪ ನಡೆಯದೆ ಸದನವನ್ನು ಸೋಮವಾರದವರೆಗೆ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ಗದ್ದಲದ ವಾತಾವರಣ ಮುಂದುವರಿಯಿತು. ಪ್ರತಿಭಟನೆಗೂ ಮುನ್ನ ಕಾಂಗ್ರೆಸ್ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಪುನರುಚ್ಚರಿಸಿತು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ವಿದ್ಯಾರ...
ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ; ಭಾಗಿಯಾದವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ, ಪ್ರಧಾನಿ ಭರವಸೆ

ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ; ಭಾಗಿಯಾದವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ, ಪ್ರಧಾನಿ ಭರವಸೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಅನುಭವಿಸಿರುವ ನೋವು ಹಾಗೂ ಆತಂಕವನ್ನು ಸರ್ಕಾರ ಅರ್ಥಮಾಡಿಕೊಂಡಿದೆ ಎಂದು ಹೇಳಿದ್ದಾರೆ.ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ ಹೊಸ ಕಾನೂನು ತರಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ಈ ಕುರಿತು ಕರಡು ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗುವುದು ಎಂದು ಅವರು ಹೇಳಿದ್ದಾರೆ.More strict actions against paper leaks to come in tomorrow’s Cabinet! pic.twitter.com/NRysBukk5U — Narendra Modi (@narendramodi) July 23, 2026ಪ್ರಧಾನಿ ಮೋದ...
ಕೇಂದ್ರದ ಭರವಸೆ ಹಿನ್ನೆಲೆ; 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್

ಕೇಂದ್ರದ ಭರವಸೆ ಹಿನ್ನೆಲೆ; 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್

ದೇಶ, ಪ್ರಮುಖ ಸುದ್ದಿ
ನವದೆಹಲಿ: ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರು 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಅಂತ್ಯಗೊಳಿಸಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶದಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು ತರಲಾಗುವುದು ಎಂದು ಘೋಷಿಸಿದ್ದರು. ಹೊಸ ಮಸೂದೆಯಲ್ಲಿ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳು ಇರಲಿವೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ, ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಿದರು...
ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

ದೇಶ, ಪ್ರಮುಖ ಸುದ್ದಿ
ನವದೆಹಲಿ: ಕಾಶಿ, ಅಯೋಧ್ಯೆ ಹಾಗೂ ಮಥುರಾದಲ್ಲಿ ತೀರ್ಥಯಾತ್ರಿಗಳ ಅನುಭವವನ್ನು ಸುಧಾರಿಸುವ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಉದ್ದೇಶದಿಂದ ಹಲವು ಪ್ರವಾಸೋದ್ಯಮ ಮೂಲಸೌಕರ್ಯ ಯೋಜನೆಗಳನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ ಎಂದು ರಾಜ್ಯಸಭೆಗೆ ತಿಳಿಸಲಾಗಿದೆ. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲಿಖಿತ ಉತ್ತರದಲ್ಲಿ, ಪ್ರಸಾದ್ (PRASHAD), ಸ್ವದೇಶ್ ದರ್ಶನ, ಸ್ವದೇಶ್ ದರ್ಶನ 2.0, ಸವಾಲು ಆಧಾರಿತ ಗಮ್ಯಸ್ಥಾನ ಅಭಿವೃದ್ಧಿ (CBDD), ಕೇಂದ್ರ ಸಂಸ್ಥೆಗಳಿಗೆ ನೆರವು (ACA) ಹಾಗೂ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು (SASCI) ಯೋಜನೆಗಳಡಿ ವಿವಿಧ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಲ್ಲಿಸುವ ಪ್ರಸ್ತಾವನೆಗಳು, ಯೋಜನಾ ಮಾರ್ಗಸೂಚಿಗಳು ಹಾಗೂ ನಿಧಿಯ ಲಭ್ಯತೆಯನ್ನು ಆಧರಿಸಿ ಯೋಜನೆಗಳಿಗೆ ಅನುಮೋದನೆ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.ಈ ಯೋಜನೆಗಳ ಮೂಲಕ ಕಾಶಿ, ಅಯೋಧ್ಯೆ ಮತ್ತು ಮಥುರಾದ ವಾಸ್ತುಶಿಲ್ಪ, ಸಾಂಸ್ಕೃತಿಕ ಹಾಗೂ ಆಧ್ಯ...
ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಭಾರತದ ವಾಯು ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಗುರುವಾರ ದೇಶೀಯವಾಗಿ ಅಭಿವೃದ್ಧಿಪಡಿಸಿರುವ 'ಕುಶಾ' (Kusha) ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿಯ (LRSAM) ಮೊದಲ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಒಡಿಶಾದ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ನಡೆದ ಪರೀಕ್ಷೆಯಲ್ಲಿ, ಹೆಚ್ಚಿನ ವೇಗ ಮತ್ತು ಎತ್ತರದಲ್ಲಿ ಸಂಚರಿಸುವ ವೈಮಾನಿಕ ಗುರಿಯನ್ನು ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಕುಶಾ ಕ್ಷಿಪಣಿ ವ್ಯವಸ್ಥೆಯನ್ನು ಯುದ್ಧ ವಿಮಾನಗಳು, ಕ್ಷಿಪಣಿಗಳು, ಮಾನವರಹಿತ ವೈಮಾನಿಕ ವಾಹನಗಳು (UAV), ಹಾಗೂ ಇತರ ವೈಮಾನಿಕ ಬೆದರಿಕೆಗಳನ್ನು ದೂರದ ವ್ಯಾಪ್ತಿಯಲ್ಲೇ ತಡೆಯುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾಗಿದೆ. ಈ ವ್ಯವಸ್ಥೆಯ ಕ್ಷಿಪಣಿಗಳು, ರಾಡಾರ್‌ಗಳು ಮತ್ತು ಕಮಾಂಡ್-ಅಂಡ್-ಕಂಟ್ರೋಲ್ ಜಾಲವನ್ನು ಡಿಆರ್‌ಡಿಒದ ವಿವಿಧ ಪ್ರಯೋಗಾಲಯಗಳು ಹಾಗೂ ಭಾರತೀಯ ಕೈಗಾರಿಕಾ ಪಾಲುದಾರರ ಸಹಯೋಗದಲ್ಲಿ ಅಭಿವೃದ್ಧಿಪಡಿಸಿವೆ.ಯಶಸ್ವಿ ಪರೀಕ...
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ನೀಟ್‌ (NEET) ಸೇರಿದಂತೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ತ್ವರಿತ ನ್ಯಾಯಾಲಯ (ಫಾಸ್ಟ್‌-ಟ್ರ್ಯಾಕ್ ಕೋರ್ಟ್‌) ಸ್ಥಾಪಿಸಲು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ದೇಶದ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಆರೋಪಿಗಳಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.Nothing is more important than the welfare and future of our youth! We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this… — Narendra Modi (@narendramodi) July 23...
ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

ಐಸಿಎಂಆರ್‌ನಿಂದ HPV ಚಿಕಿತ್ಸೆ, ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನ ಭಾರತೀಯ ಕಂಪನಿಗಳಿಗೆ ಹಸ್ತಾಂತರ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಅಗ್ಗದ ಆರೋಗ್ಯ ಸೇವೆ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮೂರು ಸ್ವದೇಶಿ ಜೈವವೈದ್ಯಕೀಯ ತಂತ್ರಜ್ಞಾನಗಳನ್ನು ಭಾರತೀಯ ಔಷಧ ಮತ್ತು ಲಸಿಕೆ ಉತ್ಪಾದನಾ ಸಂಸ್ಥೆಗಳಿಗೆ ವಾಣಿಜ್ಯೀಕರಣಕ್ಕಾಗಿ ಹಸ್ತಾಂತರಿಸಿದೆ. ಮೆಡಿಕಲ್ ಇನೋವೇಷನ್ಸ್ ಪೇಟೆಂಟ್ ಮಿತ್ರ ಯೋಜನೆಯಡಿ, ಗರ್ಭಕಂಠದ ಪೂರ್ವ-ಕ್ಯಾನ್ಸರ್ ಸ್ಥಿತಿ (CIN) ಚಿಕಿತ್ಸೆಗೆ ಬಳಸಬಹುದಾದ SHetA2 ಎಂಬ ಹೊಸ HPV ವಿರೋಧಿ ಚಿಕಿತ್ಸಾ ತಂತ್ರಜ್ಞಾನವನ್ನು ಎಂಕ್ಯೂರ್ ಫಾರ್ಮಾಸ್ಯೂಟಿಕಲ್ಸ್ ಲಿಮಿಟೆಡ್‌ಗೆ ಹಸ್ತಾಂತರಿಸಲಾಗಿದೆ. ಜೊತೆಗೆ, ಕರುಳಿನ ಬ್ಯಾಕ್ಟೀರಿಯಾ ಸೋಂಕುಗಳ ವಿರುದ್ಧ ಅಭಿವೃದ್ಧಿಪಡಿಸಲಾದ ಎರಡು ಹೊಸ ತಲೆಮಾರಿನ ಲಸಿಕೆ ತಂತ್ರಜ್ಞಾನಗಳನ್ನು ಬಯಾಲಾಜಿಕಲ್ ಇ ಲಿಮಿಟೆಡ್‌ಗೆ ಪರವಾನಗಿ ನೀಡಲಾಗಿದೆ. ಐಸಿಎಂಆರ್ ಮಾಹಿತಿ ಪ್ರಕಾರ, SHetA2 ಅನ್ನು ಐಸಿಎಂಆರ್–ರಾಷ್ಟ್ರೀಯ ಕ್ಯಾನ್ಸರ್ ತಡೆ ಮತ್ತು ಸಂಶೋಧನಾ ಸಂಸ್ಥೆ (ICMR-NICPR) ಹಾಗೂ ಅಮೆರಿಕದ ಒಕ್ಲಹೊಮಾ ವಿಶ್ವವಿದ್ಯಾಲಯದ ಸ್ಟೀಫನ್ಸನ್ ಕ್ಯಾನ್ಸರ್ ಸೆಂಟರ್ ಸಹಯೋಗದಲ್ಲಿ ಅಭಿವೃದ್ಧಿ...
ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

ಐದು ವರ್ಷಗಳಲ್ಲಿ ಒಳಚರಂಡಿ ಶುಚಿಗೊಳಿಸುವ ವೇಳೆ 332 ಕಾರ್ಮಿಕರ ಸಾವು; 193 ಎಫ್‌ಐಆರ್ ದಾಖಲು

ದೇಶ, ಪ್ರಮುಖ ಸುದ್ದಿ
ನವದೆಹಲಿ: 2021ರ ಜನವರಿ 1ರಿಂದ 2026ರ ಜೂನ್ 30ರವರೆಗೆ ದೇಶದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್‌ಗಳನ್ನು ಅಪಾಯಕಾರಿ ರೀತಿಯಲ್ಲಿ ಸ್ವಚ್ಛಗೊಳಿಸುವ ವೇಳೆ 332 ನೈರ್ಮಲ್ಯ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಲಿಖಿತ ಉತ್ತರದಲ್ಲಿ, 'ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯ್ದೆ–2013' ಜಾರಿಗೆ ಸರ್ಕಾರ ಬದ್ಧವಾಗಿದ್ದು, ಕೈಯಿಂದ ಶುಚಿಗೊಳಿಸುವ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಯಾಂತ್ರೀಕೃತ ಸ್ವಚ್ಛತಾ ವ್ಯವಸ್ಥೆ ಮತ್ತು ಪುನರ್ವಸತಿ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಕಾಯ್ದೆಯಡಿ ಕೈಯಿಂದ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವುದು ಹಾಗೂ ಅದಕ್ಕೆ ವ್ಯಕ್ತಿಗಳು ಅಥವಾ ಸಂಸ್ಥೆಗಳನ್ನು ನೇಮಿಸುವುದು ಕಾನೂನುಬಾಹಿರವಾಗಿದೆ. ನಿಯಮ ಉಲ್ಲಂಘಿಸಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ, ₹1 ಲಕ್ಷದವರೆಗೆ ದಂಡ ಅಥವಾ ಎರಡನ್ನೂ ವಿಧಿ...
ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

ಚಾಲಕ-ಮಾಲೀಕತ್ವದ ‘ಭಾರತ್ ಟ್ಯಾಕ್ಸಿ’ಗೆ ಉತ್ತಮ ಸ್ಪಂದನೆ; ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಸಹಕಾರಿ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕ-ಮಾಲೀಕತ್ವದ ರೈಡ್-ಹೇಲಿಂಗ್ ವೇದಿಕೆ ‘ಭಾರತ್ ಟ್ಯಾಕ್ಸಿ’ಯನ್ನು ದೇಶದ ಇನ್ನಷ್ಟು ರಾಜ್ಯಗಳಿಗೆ ಹಂತ ಹಂತವಾಗಿ ವಿಸ್ತರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಸ್ತುತ ಈ ಸೇವೆ ದೆಹಲಿ-ಎನ್‌ಸಿಆರ್ ಮತ್ತು ಗುಜರಾತ್ನಲ್ಲಿ ಲಭ್ಯವಿದೆ. ಲೋಕಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಸಹಕಾರ್ ಟ್ಯಾಕ್ಸಿ ಕೋಆಪರೇಟಿವ್ ಲಿಮಿಟೆಡ್ ನಿರ್ವಹಿಸುತ್ತಿರುವ ಈ ವೇದಿಕೆ ಚಾಲಕ-ಮಾಲೀಕತ್ವದ ಸಹಕಾರಿ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪಾರದರ್ಶಕ ಮತ್ತು ಪರಿಣಾಮಕಾರಿ ಸಾರಿಗೆ ಸೇವೆ ಒದಗಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಸರ್ಕಾರದ ಮಾಹಿತಿ ಪ್ರಕಾರ, ಇದುವರೆಗೆ 7.76 ಲಕ್ಷ ಚಾಲಕರು (ಸಾರಥಿಗಳು) ಮತ್ತು 40.84 ಲಕ್ಷ ಗ್ರಾಹಕರು ಭಾರತ್ ಟ್ಯಾಕ್ಸಿ ವೇದಿಕೆಯಲ್ಲಿ ನೋಂದಾಯಿಸಿಕೊಂಡಿದ್ದಾರೆ.ಹೊಸ ನಗರಗಳು ಮತ್ತು ರಾಜ್ಯಗಳಿಗೆ ಸೇವೆ ವಿಸ್ತರಿಸುವುದು ಕಾರ್ಯಾಚರಣೆಯ ಸಿದ್ಧತೆ, ಚಾಲಕರ ಲಭ್ಯತೆ, ಕಾನೂನುಬದ್ಧ ಅನುಮತಿಗಳು ಹಾಗೂ ರಾಜ್ಯ ಸರ್ಕಾರಗಳು, ಸಹಕಾರಿ ಸಂಸ್ಥೆಗಳು ಮತ್ತು ಇತ...