Tuesday, January 27

Others

KSRTC ಬಳಗದಲ್ಲಿ ವನಿತೆಯರ ಕಮಾಲ್.. ಸ್ತ್ರೀ ಸಾಧನೆಗೆ ಸಚಿವರೂ ಸಲಾಂ.. ಅರ್ಥಪೂರ್ಣ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’

KSRTC ಬಳಗದಲ್ಲಿ ವನಿತೆಯರ ಕಮಾಲ್.. ಸ್ತ್ರೀ ಸಾಧನೆಗೆ ಸಚಿವರೂ ಸಲಾಂ.. ಅರ್ಥಪೂರ್ಣ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’

Others
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಕೇಂದ್ರ ಕಚೇರಿಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಮಾರಂಭದಲ್ಲಿ ಸ್ಫೂರ್ತಿಯಾದರು. ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ರವರು ಈ ಸಮಾರಂಭದಲ್ಲಿ ಕುತೂಹಲದ ಕೇಂದ್ರಬಿಂದುವಾದರೂ. ತಮ್ಮ ಗಾನಸುಧೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತುಂಬಿದ ಅವರಿಗೆ ಗೌರವ ಧನ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಈಗ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿ ಪುರುಷ ಸಿಬ್ಬಂದಿಯಷ್ಟೇ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು. ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮ...
80% ಕಮಿಷನ್ ದಂಧೆ..! “ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ”

80% ಕಮಿಷನ್ ದಂಧೆ..! “ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ”

Others
ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಾಮಗಾರಿಯ ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ಸರ್ಕಾರ ಎಂದು ಅಪಪ್ರಚಾರದ ಜಾಲ ವಿಸ್ತರಿಸಿ ಅಧಿಕಾರಕ್ಕೆ ಬಂದವರು ನೀವು. ನಿಮ್ಮ ಅವಧಿಯಲ್ಲಿ 80 % ಕಮಿಷನ್ ದಂಧೆ ನಡೆಯುತ್ತಿದೆ ಎಂದು ಸ್ವತಃ ಗುತ್ತಿಗೆದಾರರೇ ನಿಮ್ಮ ಮುಂದೆ ದೂರಿಕೊಂಡರೂ ಅದನ್ನು ಲಘುವಾಗಿ ಪರಿಗಣಿಸಿರುವ ನೀವು ಕಮಿಷನ್ ನೀವೇಕೆ ನೀಡುತ್ತೀರಿ? ಎಂದು ಗುತ್ತಿಗೆದಾರರನ್ನೇ ಬೆದರಿಸಿದ್ದೀರಿ.. - ಬಿ.ವೈ.ವಿಜಯೇಂದ್ರ. ಖಾಲಿಯಾಗಿರುವ ಸರ್ಕಾರದ ಖಜಾನೆಯಲ್ಲಿ ಅಭಿವೃದ್ಧಿಗಾಗಿ ಬಳಸಲು ಬಿಡಿಗಾಸೂ ಇಲ್ಲ, ಇನ್ನು ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸಲು ಹಣವಿಲ್ಲದ ಪರಿಸ್ಥಿತಿ ಇರುವುದು ಅಸಲಿ ಸತ್ಯ,ಆದಾಗ್ಯೂ ಕಮಿಷನ್ ಪಾವತಿಸಿದರೆ ಮಾತ್ರ ಹೇಗಾದರೂ ಮಾಡಿ ಬಿಲ್ ಕೊಡಿಸುವುದಾಗಿ ಅಧಿಕಾರಿಗಳ ಮೂಲಕ ಸಂಕಷ್ಟಿತ ಗೊತ್ತಿಗೆದಾರರ ಬೆನ್ನು ಹತ್ತಲಾಗಿದೆ, ಇದನ್ನು ನೇರಾ ನೇರ ನಿಮ್ಮ ಮುಂದೆಯೇ ಗುತ್ತಿಗೆದಾರರು ಅನಾವರಣ ಮಾಡುತ್ತಿದ್ದಾರೆ. ನಿಮ್ಮ...
ವಿದ್ಯಾರ್ಥಿ ನಾಪತ್ತೆ ಪ್ರಕರಣ: ಮಂಗಳೂರು ಹೊರವಲಯದಲ್ಲಿ VHP ಪ್ರತಿಭಟನೆ

ವಿದ್ಯಾರ್ಥಿ ನಾಪತ್ತೆ ಪ್ರಕರಣ: ಮಂಗಳೂರು ಹೊರವಲಯದಲ್ಲಿ VHP ಪ್ರತಿಭಟನೆ

Others
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಇಂದು ಭಾರೀ ಪ್ರತಿಭಟನೆಗೆ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಮಂಗಳೂರು ಹೊರವಲಯದ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿತ್ತು. ಬಾಲಕ ನಾಪತ್ತೆಯಾಗಿ ಐದು‌ ದಿನ ಕಳೆದರೂ ಆತನ ಸುಳಿವು ಸಿಕ್ಕಿಲ್ಲ. ನಾಪತ್ತೆಯಾದ ವಿದ್ಯಾರ್ಥಿ ದಿಗಂತ್​ನನ್ನು ಪತ್ತೆ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಹೋರಾಟಕ್ಕಿಳಿದಿವೆ. ವಿಶ್ವ ಹಿಂದೂ ಪರಿಷತ್ ನೀಡಿರುವ ಹೋರಾಟವನ್ನು ಬೆಂಬಲಿಸಿ ಹಲವು ಅಂಗಡಿ ಮಾಲೀಕರು ವಹಿವಾಟು ಸ್ಥಗಿತ ಗೊಳಿಸಿದ್ದರು. ಇದರಿಂದಾಗಿ ಶನಿವಾರ ಬೆಳಿಗ್ಗೆ ಫರಂಗಿಪೇಟೆ ಪಟ್ಟಣದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂತು. ಮಂಗಳೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ದಿಗಂತ್, ಫೆ.25ರಂದು ರಾತ್ರಿ 7 ಗಂಟೆ ಸುಮಾರಿಗೆ ಫರಂಗಿಪೇಟೆ ಅಂಜನೇಯ ವ್ಯಾಯಮ ಶಾಲೆಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದ. ಆದರೆ ಮತ್ತೆ ವಾಪಾಸ್ ಆಗಿಲ್ಲ. ಸಮೀಪದ ರೈಲ್ವೆ ಹಳಿಯಲ್ಲಿ ದಿಗಂತ್...
ಕಮಲ ಪಾಳಯದಲ್ಲಿ ತಳಮಳ: BJPಯನ್ನು ಇಬ್ಬಾಗ ಮಾಡುತ್ತಾ ನಾಯಕರ ಬಣ ಬಡಿದಾಟ

ಕಮಲ ಪಾಳಯದಲ್ಲಿ ತಳಮಳ: BJPಯನ್ನು ಇಬ್ಬಾಗ ಮಾಡುತ್ತಾ ನಾಯಕರ ಬಣ ಬಡಿದಾಟ

Others
ಬೆಂಗಳೂರು: ರಾಜ್ಯ ಕಮಲ ಪಾಳಯದಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಈ ವರೆಗೂ ಆಡಳಿತ ಪಕ್ಷದ ವಿರುದ್ಧ ರಣಕಹಳೆ ಮೊಳಗಿಸುತ್ತಿದ್ದ ಬಿಜೆಪಿಗರು ಇದೀಗ ತಮ್ಮ ಪಕ್ಷದೊಳಗೆ ಬಣ ಬಡಿದಾಟದಲ್ಲಿ ತೊಡಗಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಜನರೆದುರು ಕೊಂಡೊಯ್ದು ಜಿಲ್ಲಾ-ತಾಲೂಕು ಪಂಚಾಯ್ತಿ ಚುನಾವಣೆಗೆ ರಣತಂತ್ರ ರೂಪಿಸಬೇಕಿದ್ದ ನಾಯಕರು ತಮ್ಮ ಬಣದ ಬಲಪ್ರದರ್ಶನಕ್ಕೆ ಮುಂದಾಗುವ ಅನಿವಾರ್ಯತೆ ಸೃಷ್ಟಿಯಾಗಿರುವುದು ರಾಜ್ಯ ರಾಜಕಾರಣದ ಅಚ್ಚರಿ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬಣ ಪ್ರಯತ್ನ ನಡೆಸುತ್ತಿದೆ. ಬಿಜೆಪಿಯೊಳಗಿನ ಕುಟುಂಬ ರಾಜಕಾರಣದ ವಿರುದ್ಧ ಸಮರ ಸಾರಿರುವ ಯತ್ನಾಳ್ ಬಣ ನಿರಂತರ ಚಟುವಟಿಕೆಗಳಲ್ಲಿ ತೊಡಗಿದೆ. ಇದೇ ವೇಳೆ ಯತ್ನಾಳ್ ಬಣಕ್ಕೆ ಸೆಡ್ಡು ಹೊಡೆಯಲು ವಿಜಯೇಂದ್ರ ಬೆಂಬಲಿಗರು ನಡೆಸುತ್ತಿರುವ ಕಾರ್ಯತಂತ್ರವು ಪಕ್ಷವನ್ನೇ ಇಬ್ಬಾಗದತ್ತ ಕೊಂಡೊಯ್ದಿತೇ ಎಂಬ ಆತಂಕವನ್ನು ಹುಟ್ಟುಹಾಕಿದೆ. BSY ಬಣದಿಂದ ಪ್ರತ್ಯೇಕ ಲಿಂಗಾಯತ ಸಭೆ: BJPಯೊಳಗೆ ಶಕ್ತಿ ಪ್ರದರ್ಶನ ಯತ್ನಾಳ್ ಬಣಕ್ಕೆ ಸೆಡ್ಡುಹೊಡೆಯಲು ಮುಂದಾಗಿರುವ ವಿಜಯೇಂದ್ರ, ತಾನು ಲಿಂಗಾಯತ ನಾಯಕ, ...
ಕಟೀಲು, ಕಾಪು ಯಾತ್ರೆಯ ನಡುವೆ ‘ಶಿಲ್ಪ’ ಸುಂದರಿ.. ‘ತುಳು ನಾಡಿನ’ ಸೊಗಸಿಗೆ ಸಾಕ್ಷಿಯಾದ ಬಾಲಿವುಡ್ ತಾರೆ

ಕಟೀಲು, ಕಾಪು ಯಾತ್ರೆಯ ನಡುವೆ ‘ಶಿಲ್ಪ’ ಸುಂದರಿ.. ‘ತುಳು ನಾಡಿನ’ ಸೊಗಸಿಗೆ ಸಾಕ್ಷಿಯಾದ ಬಾಲಿವುಡ್ ತಾರೆ

Others
ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಂಗಳೂರು ಬಳಿಯ ಪ್ರಸಿದ್ಧ ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಉಡುಪಿ ಜಿಲ್ಲೆಯ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ತಮ್ಮ ಸಹೋದರಿ ಬಾಲಿವುಡ್ ನಟಿ ಶಮಿತಾ ಶೆಟ್ಟಿ ಸೇರಿದಂತೆ ಕುಟುಂಬದೊಂದಿಗೆ ಭೇಟಿ ನೀಡಿ ಎಲ್ಲರ ಕುತೂಹಲದ ಕೇಂದ್ರಬಿಂದುವಾದರು. ಶುಕ್ರವಾರ ಅವರು ಈ ಕ್ಷೇತ್ರ ಪರ್ಯಟನೆ ಕೈಗೊಂಡಿದ್ದು, ಈ ಕುರಿತ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ದೇವಾಲಯ ಭೇಟಿ ಸಮಯದಲ್ಲಿ ಶಿಲ್ಪಾ ಶೆಟ್ಟಿ, ಅವರ ತಾಯಿ ಸುನಂದಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್ ಮತ್ತು ಸಮಿಶಾ ಮತ್ತು ಅವರ ಸಹೋದರಿ ಶಮಿತಾ ಶೆಟ್ಟಿ ಪ್ರದರ್ಶಿಸಿದ ಸರಳತೆ ಮತ್ತು ಭಕ್ತಿ ಅಭಿಮಾನಿಗಳು ಮತ್ತು ಸ್ಥಳೀಯರ ಹೃದಯಗಳನ್ನು ಗೆದ್ದಿದೆ. ಶಿಲ್ಪಾ ಶೆಟ್ಟಿ ಕುಟುಂಬವು ಮೊದಲು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿತು. ಚೂಡಿದಾರ್ ಧರಿಸಿದ್ದ ನಟಿ ತನ್ನ ನೇಟಿವಿಟಿಗೆ ತಕ್ಕಂತೆ ಮಲ್ಲಿಗೆ ಹೂವು ಮುಡಿದು ಪಕ್ಕ ತುಳು ಸಂಪ್ರದಾಯ ಅನುಸರಿಸಿದರು. ಪೂಜಾ ಸಾಮಗ್ರಿಗಳೊಂದಿಗೆ ತಟ್ಟೆಯನ್ನು ಹೊತ್ತುಕೊಂಡು ದೇವಾಲಯವನ್ನು ಪ್ರವೇಶಿಸಿದ ವೈಖರಿಯೂ ...
ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರ

ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರ

Others
ತಿರುವನಂತಪುರಂ: ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಆದರೆ ಸ್ಥಿರವಾಗಿದೆ ಎಂದು ಕಾರ್ಡಿನಲ್ ತಿಳಿಸಿದ್ದಾರೆ. ಹೆಸರು ಬಹಿರಂಗಪಡಿಸಲು ಇಚ್ಛಿಸದ ಭಾರತೀಯ ಕಾರ್ಡಿನಲ್ ಒಬ್ಬರು ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದು, ಪೋಪ್ ಅವರು ಹಾಗೆಯೇ ಇದ್ದಾರೆ ಮತ್ತು ವಿಷಯಗಳು ಹಾಗೆಯೇ ಉಳಿದಿವೆ, ಮುಂದಿನ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಷ್ಠಿತ ಸುದ್ದಿ ಮಾಧ್ಯಮ 'ASIA POST' ವರದಿ ಪ್ರಕಟಿಸಿದೆ. "No word on future, as Pope critical but stable"  “ಪೋಪ್ ರಾಜೀನಾಮೆ ನೀಡಲು ನಿರ್ಧರಿಸಿದರೆ, ಅವರ ಪೂರ್ವವರ್ತಿ ಪೋಪ್ ಬೆನೆಡಿಕ್ಟ್ XVI 2013 ರಲ್ಲಿ ಮಾಡಿದಂತೆ, ಎಲ್ಲಾ ಕಾರ್ಡಿನಲ್‌ಗಳ ಸಭೆಯನ್ನು ಕರೆಯಲಾಗುತ್ತದೆ ಮತ್ತು ನಿವೃತ್ತಿ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ. ಇದು ಸಾಮಾನ್ಯ ರೂಢಿ ಎಂದು ನಾನು ಹೇಳಿದಾಗಲೂ, ಸಭೆಯಿಲ್ಲದೆಯೂ ಸಹ ಇದು ಸಂಭವಿಸಬಹುದು” ಎಂದು ಕಾರ್ಡಿನಲ್ ಅವ್ರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. “ಇಲ್ಲಿಯವರೆಗೆ ಅಂತಹ ಯಾವುದೇ ಸಭೆಯನ್ನು ಕರೆಯಲಾಗಿಲ್ಲ” ಎಂದು ಅ...
ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ; ಕೇಜ್ರಿವಾಲ್ ಮಣಿಸಿದ ಪರ್ವೇಶ್ ವರ್ಮಾಗೆ ಡಿಸಿಎಂ ಸ್ಥಾನ

ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ; ಕೇಜ್ರಿವಾಲ್ ಮಣಿಸಿದ ಪರ್ವೇಶ್ ವರ್ಮಾಗೆ ಡಿಸಿಎಂ ಸ್ಥಾನ

Others
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು. ಇದೇ ವೇಳೆ, ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಯಗಳಿದ್ದ ಪರ್ವೇಶ್ ವರ್ಮಾ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ದೆಹಲಿಯ ನೂತನ ಸಿಎಂ, ಡಿಸಿಎಂ ಹಾಗೂ ಸಂಪುಟ ಸಚಿವರು ಗುರುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ....
ನುಡಿದಂತೆ ನಡೆದ ಮೋದಿ: ಯಮುನಾ ನದಿಯನ್ನು ಸ್ವಚ್ಛ ಕಾರ್ಯಕ್ಕೆ ಮುನ್ನುಡಿ

ನುಡಿದಂತೆ ನಡೆದ ಮೋದಿ: ಯಮುನಾ ನದಿಯನ್ನು ಸ್ವಚ್ಛ ಕಾರ್ಯಕ್ಕೆ ಮುನ್ನುಡಿ

Others
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನೀಡಿದ ಯಮುನೆ ಶುದ್ಧಿ ಭರವಸೆಯನ್ನು ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕ್ರಿಯೆ ಆರಂಭಿಸಿದ್ದಾರೆ. ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಇದೀಗ ನುಡಿದಂತೆ ನಡೆಯುವ ಸಂಕಲ್ಪ ಮಾಡಿರುವ ಮೋದಿ, ರಾಜಧಾನಿಯಲ್ಲಿ ಹೊಸ ಸರ್ಕಾರ ರಚನೆಯಾಗುವ ಮೊದಲೇ ಈ ಯೋಜನೆಯ ಕೆಲಸ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಮೋದಿ ಅವರ ಸಲಹೆಯಂತೆ, ರಾಷ್ಟ್ರ ರಾಜಧಾನಿ ನಗರದಲ್ಲಿ ಭಾನುವಾರ ಯಮುನಾ ನದಿಯ ಶುಚಿಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಕಸದ ಸ್ಕಿಮ್ಮರ್‌ಗಳು, ಕಳೆ ಕೊಯ್ಲು ಯಂತ್ರಗಳು ಮತ್ತು ಡ್ರೆಡ್ಜಿಂಗ್ ಯುಟಿಲಿಟಿ ಕ್ರಾಫ್ಟ್‌ಗಳಂತಹ ಆಧುನಿಕ ಯಂತ್ರಗಳನ್ನು ಬಳಸಲಾಯಿತು. ಇದಕ್ಕೂ ಮೊದಲು, ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿ.ಕೆ. ಸಕ್ಸೇನಾ ಅವರು ಶನಿವಾರ ಮುಖ್ಯ ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನೀರಾವರಿ ಮತ್ತು ಪ್ರವಾಹ ನಿಯಂತ್ರಣ) ಅವರನ್ನು ಭೇಟಿ ಮಾಡಿ, ಶುಚಿಗೊಳಿಸುವ ಕಾರ್ಯವನ್ನು ತಕ್ಷಣ...
ಮೋದಿ ಸರ್ಕಾರದ ‘PAN 2.0’ ಪರಿಕಲ್ಪನೆ ಏನು? PAN ಕಾರ್ಡ್ ಪರಿವರ್ತನೆಗೆ ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

ಮೋದಿ ಸರ್ಕಾರದ ‘PAN 2.0’ ಪರಿಕಲ್ಪನೆ ಏನು? PAN ಕಾರ್ಡ್ ಪರಿವರ್ತನೆಗೆ ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

Others
ಭಾರತ ಸರ್ಕಾರವು 'PAN 2.0' ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿಡೇ. ಇದರ ಪ್ರಾಥಮಿಕ ಗುರಿ ತೆರಿಗೆದಾರರ ಗುರುತನ್ನು ಆಧುನೀಕರಿಸಿ ಭದ್ರತೆ ಮತ್ತು ದಕ್ಷತೆಯನ್ನು ಖಚಿತಪಡಿಸುವುದಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿರುವ 'PAN 2.0', ವರ್ಧಿತ ಕಾರ್ಯಕ್ಷಮತೆ ಮತ್ತು ದೃಢೀಕರಣಕ್ಕಾಗಿ QR ಕೋಡ್‌ಗಳನ್ನು ಸಂಯೋಜಿಸುತ್ತದೆ. 1,435 ಕೋಟಿ ರೂ.ಗಳ ಮೀಸಲಾದ ಬಜೆಟ್‌ನೊಂದಿಗೆ, ಈ ಯೋಜನೆಯು ತೆರಿಗೆ ಸಂಬಂಧಿತ ಕಾರ್ಯಗಳನ್ನು ಸುಗಮಗೊಳಿಸಲು ಮತ್ತು ಭಾರತದಲ್ಲಿ ಡಿಜಿಟಲ್ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಸಜ್ಜಾಗಿದೆ. 'PAN 2.0' ಯೋಜನೆ ಎಂದರೇನು? 'PAN 2.0' ಒಂದು ಹೊಸ ಮತ್ತು ಸುಧಾರಿತ ಇ-ಆಡಳಿತ ವ್ಯವಸ್ಥೆಯಾಗಿದೆ, ಇದು ತೆರಿಗೆದಾರರ ನೋಂದಣಿಯನ್ನು ಸರಳಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆ PAN (ಶಾಶ್ವತ ಖಾತೆ ಸಂಖ್ಯೆ) ಮತ್ತು TAN (ತೆರಿಗೆ ಕಡಿತ ಮತ್ತು ಸಂಗ್ರಹ ಖಾತೆ ಸಂಖ್ಯೆ) ವ್ಯವಸ್ಥೆಗಳನ್ನು ಏಕೀಕೃತ ಡಿಜ...
ಏಕಗವಾಕ್ಷಿ ಪೋರ್ಟಲ್: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ

ಏಕಗವಾಕ್ಷಿ ಪೋರ್ಟಲ್: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ

Others
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದ್ದಾರೆ. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದ್ದು, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇ...