Wednesday, June 25

Others

ಕೇಂದ್ರ ಬಜೆಟ್ 2025-26: ಶಿಪ್ಪಿಂಗ್ ಮತ್ತು ವಾಯುಯಾನ ಕ್ಷೇತ್ರಕ್ಕೆ ಉತ್ತೇಜನ

ಕೇಂದ್ರ ಬಜೆಟ್ 2025-26: ಶಿಪ್ಪಿಂಗ್ ಮತ್ತು ವಾಯುಯಾನ ಕ್ಷೇತ್ರಕ್ಕೆ ಉತ್ತೇಜನ

Others
ನವದೆಹಲಿ: ಕಡಲ ಉದ್ಯಮಕ್ಕೆ ದೀರ್ಘಾವಧಿಯ ಹಣಕಾಸಿಗಾಗಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು 25,000 ಕೋಟಿ ರೂಪಾಯಿಗಳ ಕಾರ್ಪಸ್‌ನೊಂದಿಗೆ ಸಮುದ್ರ ಅಭಿವೃದ್ಧಿ ನಿಧಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ್ದಾರೆ. ಸಂಸತ್ತಿನಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ಇದನ್ನು ಪ್ರಕಟಿಸಿದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಈ ಕಾರ್ಪಸ್ ಅನ್ನು ಕಡಲ ಉದ್ಯಮಕ್ಕೆ ಬೆಂಬಲ ಮತ್ತು ಸ್ಪರ್ಧೆಯನ್ನು ಉತ್ತೇಜಿಸಲು ವಿತರಿಸಲಾಗಿದೆ ಎಂದು ಹೇಳಿದರು. ನಿಧಿಯು ಸರ್ಕಾರದಿಂದ ಶೇಕಡಾ 49 ರಷ್ಟು ಕೊಡುಗೆಯನ್ನು ಹೊಂದಿರುತ್ತದೆ ಮತ್ತು ಬಾಕಿಯನ್ನು ಬಂದರುಗಳು ಮತ್ತು ಖಾಸಗಿ ವಲಯದಿಂದ ಕ್ರೋಢೀಕರಿಸಲಾಗುತ್ತದೆ ಎಂದರು. ವೆಚ್ಚದ ಅನಾನುಕೂಲಗಳನ್ನು ಪರಿಹರಿಸಲು ಹಡಗು ನಿರ್ಮಾಣ ಹಣಕಾಸು ನೆರವು ನೀತಿಯನ್ನು ಪರಿಷ್ಕರಿಸಲಾಗುವುದು. ಇದು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು ಭಾರತೀಯ ಯಾರ್ಡ್‌ಗಳಲ್ಲಿ ಹಡಗು ವಿಲೇವಾರಿಗೆ ಕ್ರೆಡಿಟ್ ಟಿಪ್ಪಣಿಗಳನ್ನು ಒಳಗೊಂಡಿರುತ್ತದೆ. ಇದಲ್ಲದೆ, ನಿಗದಿತ ಗಾತ್ರಕ್ಕಿಂತ ಹೆಚ್ಚಿನ ದೊಡ್ಡ ಹಡಗುಗಳನ್ನು ಮೂಲಸೌಕರ್ಯ ಸಾಮರಸ್ಯದ ಮಾಸ್ಟರ್ ಪ...
ಮುಂದಿನ 25 ವರ್ಷಗಳಲ್ಲಿ ಭಾರತ ಸಮೃದ್ಧ, ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ಮೋದಿ ವಿಶ್ವಾಸ

ಮುಂದಿನ 25 ವರ್ಷಗಳಲ್ಲಿ ಭಾರತ ಸಮೃದ್ಧ, ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ಮೋದಿ ವಿಶ್ವಾಸ

Others
ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಕ್ರವಾರ ಸಂಸತ್ತಿನ ಆವರಣದಲ್ಲಿ ಬಜೆಟ್ ಅಧಿವೇಶನ 2025 ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಸಮೃದ್ಧಿಯ ದೇವತೆ ಲಕ್ಷ್ಮಿ ದೇವಿಗೆ ನಮಿಸಿದ ಪ್ರಧಾನಿ, ಬಜೆಟ್ ಅಧಿವೇಶನ ಆರಂಭದ ಈ ಸಂದರ್ಭದಲ್ಲಿ ಇಂದು, ವಿವೇಕ, ಸಮೃದ್ಧಿ ಮತ್ತು ಕಲ್ಯಾಣವನ್ನು ನೀಡುವ ಲಕ್ಷ್ಮಿ ದೇವಿಯನ್ನು ಸ್ಮರಿಸುವುದು ವಾಡಿಕೆಯಾಗಿದೆ ಎಂದು ಹೇಳಿದರು. ದೇಶದ ಪ್ರತಿಯೊಬ್ಬ ಬಡ ಮತ್ತು ಮಧ್ಯಮ ವರ್ಗದ ಸಮುದಾಯದ ಮೇಲೆ ಲಕ್ಷ್ಮಿದೇವಿಯ ವಿಶೇಷ ಕೃಪೆ ಇರಲಿ ಅವರು ಪ್ರಾರ್ಥಿಸಿದರು. ಭಾರತವು ತನ್ನ 75ನೇ ಗಣರಾಜ್ಯೋತ್ಸವ ಪೂರ್ಣಗೊಳಿಸಿದೆ, ಇದು ಪ್ರತಿಯೊಬ್ಬ ಪ್ರಜೆಗೂ ಹೆಮ್ಮೆಯ ವಿಷಯ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಅಲ್ಲದೆ, ಪ್ರಜಾಪ್ರಭುತ್ವ ಜಗತ್ತಿನಲ್ಲಿ ಈ ಸಾಧನೆಯು ವಿಶೇಷ ಸ್ಥಾನವನ್ನು ಹೊಂದಿದ್ದು, ಭಾರತದ ಶಕ್ತಿ ಮತ್ತು ಮಹತ್ವವನ್ನು ಪ್ರದರ್ಶಿಸುತ್ತದೆ ಎಂದರು. Speaking at the start of the Budget Session of Parliament. https://t.co/IC4Sk4Ppub — Narendra Modi (@narendramodi) January 31, 2025 ಮೂರನೇ ಬಾರ...
ಭವಿಷ್ಯದ ಆರ್ಥಿಕತೆಯನ್ನು ಯುವಜನರ ಮಾನಸಿಕ ಆರೋಗ್ಯ ಮುನ್ನಡೆಸಲಿದೆ: ಆರ್ಥಿಕ ಸಮೀಕ್ಷೆ 2024-25

ಭವಿಷ್ಯದ ಆರ್ಥಿಕತೆಯನ್ನು ಯುವಜನರ ಮಾನಸಿಕ ಆರೋಗ್ಯ ಮುನ್ನಡೆಸಲಿದೆ: ಆರ್ಥಿಕ ಸಮೀಕ್ಷೆ 2024-25

Others
ನವದೆಹಲಿ: ಮಾನಸಿಕ ಸೌಖ್ಯ ಎಂದರೆ ಜೀವನದ ಸವಾಲುಗಳನ್ನು ಎದುರಿಸುವ ಮತ್ತು ಫಲಪ್ರದವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ. ಮಾನಸಿಕ ಯೋಗಕ್ಷೇಮವು ನಮ್ಮ ಎಲ್ಲಾ ಮಾನಸಿಕ-ಭಾವನಾತ್ಮಕ, ಸಾಮಾಜಿಕ, ಅರಿವು ಮತ್ತು ದೈಹಿಕ ಸಾಮರ್ಥ್ಯಗಳನ್ನು ಒಳಗೊಂಡಿದೆ. ಇದನ್ನು ಮನಸ್ಸಿನ ಸಂಯೋಜಿತ ಆರೋಗ್ಯ ಎಂದೂ ಅರ್ಥೈಸಿಕೊಳ್ಳಬಹುದು ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಸಂಸತ್ತಿನಲ್ಲಿ ಮಂಡಿಸಿದ 2024-25ರ ಆರ್ಥಿಕ ಸಮೀಕ್ಷೆ ತಿಳಿಸಿದೆ. ಜೀವನಶೈಲಿಯ ಆಯ್ಕೆಗಳು, ಕಾರ್ಯ ಸ್ಥಳದ ಸಂಸ್ಕೃತಿ ಮತ್ತು ಕೌಟುಂಬಿಕ ಸನ್ನಿವೇಶಗಳು ಉತ್ಪಾದಕತೆಗೆ ನಿರ್ಣಾಯಕವಾಗಿವೆ ಮತ್ತು ಭಾರತದ ಆರ್ಥಿಕ ಮಹತ್ವಾಕಾಂಕ್ಷೆಗಳನ್ನು ಸಾಧಿಸಲು, ಬಾಲ್ಯ/ಯೌವನದಲ್ಲಿ ಮಾಡುವ ಜೀವನಶೈಲಿಯ ಹೆಚ್ಚಿನ ಆಯ್ಕೆಗಳಿಗೆ ತಕ್ಷಣ ಗಮನ ನೀಡಬೇಕು ಎಂದು ಆರ್ಥಿಕ ಸಮೀಕ್ಷೆಯು ವಿವರಿಸುತ್ತದೆ. ಅಂತರ್ಜಾಲದ ಅತಿಯಾದ ಅವಲಂಬನೆ ವಿಶೇಷವಾಗಿ ಸಾಮಾಜಿಕ ಮಾಧ್ಯಮದ ಅತಿಯಾದ ಬಳಕೆಯ ಕಾರಣದಿಂದ ಮಕ್ಕಳು ಮತ್ತು ಹದಿಹರೆಯದವರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ ಎಂದು ಆರ್ಥಿಕ ಸಮೀಕ್ಷೆಯು ...
ಬಿಗ್ ಬಾಸ್ ಕನ್ನಡ ಸೀಸನ್ 11: ಪ್ರಶಸ್ತಿ ಗೆದ್ದ ಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11: ಪ್ರಶಸ್ತಿ ಗೆದ್ದ ಹನುಮಂತ

Others
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಹಳ್ಳಿ ಹೈದ ಹನುಮಂತ ವಿಜೇತರಾಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಎಂಟ್ರಿಕೊಟ್ಟಿದ್ದ ಹನುಮಂತ ಪ್ರಶಸ್ತಿ ಗೆದ್ದು ಅಚ್ಚರಿ ಮೂಡಿಸಿದೆ. ಟಾಪ್ ಐವರ ಪೈಕಿ ಉಗ್ರಂ ಮಂಜು, ರಜತ್ ಮತ್ತು ಮೋಕ್ಷಿತ ಒಬ್ಬೊಬ್ಬರಾಗಿಯೇ ಹೊರನಡೆದರು. ಅಂತಿಮವಾಗಿ ತ್ರಿವಿಕ್ರಮ್ ಮತ್ತು ಹನುಮಂತ ನಡುವೆ ಪೈಪೋಟಿ ಏರ್ಪಟ್ಟಿತ್ತು. ಕಿಚ್ಚ ಸುದೀಪ್ ಅವರು ಹನುಮಂತ ಅವರ ಗೆಲುವನ್ನು ಪ್ರಕಟಿಸುವ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರ ಕುತೂಹಲಕ್ಕೆ ತೆರೆ ಬಿದ್ದಿದೆ....
ತ್ರಿವರ್ಣ ಧ್ವಜ ವಂದನೆಯೊಂದಿಗೆ ಲಂಡನ್‌ನಲ್ಲಿ ಭಾರತದ ಗಣರಾಜ್ಯೋತ್ಸವ.. ಅನಿವಾಸಿ ಭಾರತೀಯರ ಸಮಾಗಮ

ತ್ರಿವರ್ಣ ಧ್ವಜ ವಂದನೆಯೊಂದಿಗೆ ಲಂಡನ್‌ನಲ್ಲಿ ಭಾರತದ ಗಣರಾಜ್ಯೋತ್ಸವ.. ಅನಿವಾಸಿ ಭಾರತೀಯರ ಸಮಾಗಮ

Others
ಲಂಡನ್: ಭಾರತದ 76 ನೇ ಗಣರಾಜ್ಯೋತ್ಸವವವನ್ನು ಬ್ರಿಟಿಷ್ ನೆಲದಲ್ಲಿ ವಿಶಿಷ್ಠವಾಗಿ ಆಚರಿಸಲಾಯಿತು. ಲಂಡನ್‌ನ ಹೃದಯಭಾಗದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಲಂಡನ್‌ನ ಐಕಾನಿಕ್ ಟೌನ್ ಹಾಲ್‌ನಲ್ಲಿ ಈ ಕಾರ್ಯಕ್ರಮ ಗಮನಸೆಳೆಯಿತು, ಲಂಡನ್‌ನ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಅವರು ಈ ಸಂಭ್ರಮಾಚರಣೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವನ್ನು ಆಯೋಜಿಸಿಸಿದ ಕೋವೆಂಟ್ರಿ ಲೇಬರ್ ಪಾರ್ಟಿಯ ಪ್ರಯತ್ನವನ್ನು ಅವರು ಶ್ಲಾಘಿಸಿದ್ದಾರೆ. ಟೌನ್ ಹಾಲ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲು ಕೋವೆಂಟ್ರಿ ಲೇಬರ್ ಪಾರ್ಟಿಯ ಪ್ರಯತ್ನಕ್ಕಾಗಿ ನಾವು ಶ್ಲಾಘಿಸುತ್ತೇವೆ ಎಂದು ಪಾಟೀಲ್ ಹೇಳಿದರು. ಈ ಕಾರ್ಯಮವು ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಸಂಬಂಧವನ್ನು ಬಲಗೊಳಿಸಿದೆ ಎಂದು ಡಾ.ನೀರಜ್ ಪಾಟೀಲ್ ಬಣ್ಣಿಸಿದ್ದಾರೆ. ಎರಡೂ ರಾಷ್ಟ್ರಗಳನ್ನು ಬಂಧಿಸುವ ಬಲವಾದ ಸಾಂಸ್ಕೃತಿಕ ಸಂಬಂಧವನ್ನು ಅವರು ಒತ್ತಿ ಹೇಳಿದರು. "ದೇವರು ಗ್ರೇಟ್ ಬ್ರಿಟನ್ ಮತ್ತು ಭಾರತವನ್ನು ಆಶೀರ್ವದಿಸಲಿ", ಎರಡು ರಾಷ್ಟ್ರಗಳ ನಡುವಿನ ಸಮೃದ್ಧ ಭವಿಷ್ಯದ ಹಂಚಿಕೆಯ ಭರವಸೆಯನ್ನು ಪ್...
ಮುಡಾ ಪ್ರಕರಣದಲ್ಲಿ ಒತ್ತಡಕ್ಕೆ ಮಣಿದು ಸಿಎಂಗೆ ಲೋಕಾಯುಕ್ತ ಕ್ಲೀನ್ ಚಿಟ್; ಬಿಜೆಪಿ ಆರೋಪ

ಮುಡಾ ಪ್ರಕರಣದಲ್ಲಿ ಒತ್ತಡಕ್ಕೆ ಮಣಿದು ಸಿಎಂಗೆ ಲೋಕಾಯುಕ್ತ ಕ್ಲೀನ್ ಚಿಟ್; ಬಿಜೆಪಿ ಆರೋಪ

Others
ಬೆಂಗಳೂರು: ಮುಡಾ ಪ್ರಕರಣದ ಕುರಿತು ಹೈಕೋರ್ಟ್‌ನಲ್ಲಿ ಇನ್ನೇನು ತೀರ್ಪು ಬರಬೇಕು ಎನ್ನುವಷ್ಟರಲ್ಲಿ ಲೋಕಾಯುಕ್ತ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ವರದಿ ಬಹಿರಂಗವಾಗಿದೆ. ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್ ಚಿಟ್ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಯಾವುದೇ ತನಿಖೆ ಸಂಸ್ಥೆಗಳು ಆಧಾರ ರಹಿತವಾಗಿ ಮಾಹಿತಿ ನೀಡುವುದಿಲ್ಲ. ಮುಡಾ ಪ್ರಕರಣದಲ್ಲಿ ಆಧಾರ ಸಹಿತವಾಗಿ ಜಾರಿ ನಿರ್ದೇಶನಾಲಯ ವರದಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಸಂಸ್ಥೆಯು ಅತುರಾತುರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಮುಡಾ ಪ್ರಕರಣದ ಕುರಿತು ಹೈಕೋರ್ಟ್‌ನಲ್ಲಿ ಇನ್ನೇನು ತೀರ್ಪು ಬರಬೇಕು ಎನ್ನುವಷ್ಟರಲ್ಲಿ ಲೋಕಾಯುಕ್ತ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ವರದಿ ಬಹಿರಂಗವಾಗಿದೆ. ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್ ಚಿಟ್ ಕೊಡಲಾಗಿದೆ. ಯಾವುದೇ ತನಿಖೆ ಸಂಸ್ಥೆಗಳು ಆಧಾರ ರಹಿತವಾಗಿ ಮಾಹಿತಿ ನೀಡುವುದಿಲ್ಲ. ಮುಡಾ… pi...
ಮಹಾರಾಷ್ಟ್ರದಲ್ಲಿ ದಾರುಣ ಘಟನೆ; ರೈಲಿನಡಿ ಸಿಲುಕಿ 10 ಮಂದಿ ಸಾವು

ಮಹಾರಾಷ್ಟ್ರದಲ್ಲಿ ದಾರುಣ ಘಟನೆ; ರೈಲಿನಡಿ ಸಿಲುಕಿ 10 ಮಂದಿ ಸಾವು

Others
ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಬಳಿ ರೈಲು ಹರಿದು 10 ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ಜಲಗಾಂವ್ ಸಮೀಪದ ಪಚೋರಾ ರೈಲು ನಿಲ್ದಾಣದ ಬಳಿ ಸಂಜೆ 5 ಗಂಟೆ ಸುಮಾರಿಗೆ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹಬ್ಬಿತು. ಭಯಭೀತರಾದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದರು. ಆತುರದಲ್ಲೇ ರೈಲಿನಿಂದ ಇಳಿದು ಪಕ್ಕದ ಹಳಿಮೇಲೆ ಪ್ರಯಾಣಿಕರು ಜಮಾಯಿಸಿದ್ದರು. ಅದಾಗಲೇ ಮತ್ತೊಂದು ರೈಲು ಆ ಹಳಿ ಮೇಲೆ ಬಂದಿದ್ದು, ಎಕ್ಸ್ ಪ್ರೆಸ್ ರೈಲು ಹರಿದಿದೆ. ದುರ್ಘಟನೆಯಲ್ಲಿ ಕನಿಷ್ಠ10 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗೌರವಧನ, ಪೋರ್ಟಲ್ ಸುಧಾರಣೆ, ಆಶಾ ಕಾರ್ಯವನ್ನು ಅಭಿನಂದಿಸಿದ ಸಿಎಂ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗೌರವಧನ, ಪೋರ್ಟಲ್ ಸುಧಾರಣೆ, ಆಶಾ ಕಾರ್ಯವನ್ನು ಅಭಿನಂದಿಸಿದ ಸಿಎಂ

Others
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸೇವೆಯನ್ನು ಪ್ರಶಂಸಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ ಎಂದವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. ಪೋರ್ಟಲ್ ಸುಧಾರಣೆಗೆ ಸೂಚನೆ: ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಗೌರವಧನ ನಿಲ್ಲಿಸದೆ ರಜೆ: ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ...
ಕೋವಿಡ್‌ ಹಗರಣ: ಬಿಎಸ್‌ವೈ, ಶ್ರೀರಾಮುಲು ಬಗ್ಗೆ ತನಿಖೆಗೆ ಆಯೋಗ ಶಿಫಾರಸು; ಹೆಣ ಇಟ್ಟು ಹಣ ಮಾಡಿದ ಬಿಜೆಪಿ ನಾಯಕರು ಎಂದ ರಮೇಶ್ ಬಾಬು

ಕೋವಿಡ್‌ ಹಗರಣ: ಬಿಎಸ್‌ವೈ, ಶ್ರೀರಾಮುಲು ಬಗ್ಗೆ ತನಿಖೆಗೆ ಆಯೋಗ ಶಿಫಾರಸು; ಹೆಣ ಇಟ್ಟು ಹಣ ಮಾಡಿದ ಬಿಜೆಪಿ ನಾಯಕರು ಎಂದ ರಮೇಶ್ ಬಾಬು

Others
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ಸಂದರ್ಭ ಕೋವಿಡ್‌ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ ಕುನ್ಹಾ ಅವರ ನೇತೃತ್ವದಲ್ಲಿ ರಚಿಸಿದ್ದ ಆಯೋಗವು ಹಿಂದಿನ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಆಗಿನ ಆರೋಗ್ಯ ಸಚಿವರನ್ನು ತನಿಖೆ ನಡೆಸಲು ಶಿಫಾರಸ್ಸು ಮಾಡಿದೆ. ಏಪ್ರಿಲ್‌ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಪಿಪಿಇ ಕಿಟ್‌ ಖರೀದಿ ಪ್ರಕ್ರಿಯೆ ಸಂದರ್ಭ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್‌ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದೆ ಎಂದು ಮೂಲಗಳು ತಿಳಿಸಿವೆ. ಆಗ...
‘ನಿಮ್ಮ ಸರ್ಕಾರದ ಅವಧಿಯಲ್ಲಿ ನೋಟೀಸ್ ಕೊಟ್ಟಾಗ ಇವರೆಲ್ಲಾ ಬೆಟ್ಟು ಚೀಪುತ್ತಿದ್ದರಾ?’; ಬಿಜೆಪಿ ನಾಯಕರ ‘ಲ್ಯಾಂಡ್ ಜಿಹಾದ್’ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಎದಿರೇಟು

‘ನಿಮ್ಮ ಸರ್ಕಾರದ ಅವಧಿಯಲ್ಲಿ ನೋಟೀಸ್ ಕೊಟ್ಟಾಗ ಇವರೆಲ್ಲಾ ಬೆಟ್ಟು ಚೀಪುತ್ತಿದ್ದರಾ?’; ಬಿಜೆಪಿ ನಾಯಕರ ‘ಲ್ಯಾಂಡ್ ಜಿಹಾದ್’ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಎದಿರೇಟು

Others
ಬೆಂಗಳೂರು: ಹಾವೇರಿ ರೈತನ ಹೆಸರಲ್ಲೂ ಬಿಜೆಪಿಯವರು ಈಗ ರಾಜಕೀಯ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ವಕ್ಫ್ ವಿವಾದ ಕುರಿತಂತೆ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಗಳ ಬಗ್ಗೆ ಬೆಂಗಳೂರಿನಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕ್ ಖರ್ಗೆ, ಲ್ಯಾಂಡ್ ಜಿಹಾದ್ ಎಂದು ಹೇಳುತ್ತಿದ್ದಾರಲ್ಲ. ಅವರು ಈಗಲೇ ಯಾಕೆ ಮಾತನಾಡುತ್ತಿದ್ದಾರೆ? ನಿಮ್ಮ ಸರ್ಕಾರದ ಅವಧಿಯಲ್ಲಿ ನೋಟೀಸ್ ಕೊಟ್ಟಾಗ ಇವರೆಲ್ಲಾ ಬೆಟ್ಟು ಚೀಪುತ್ತಿದ್ದರಾ? ಶಶಿಕಲಾ ಜೊಲ್ಲೆ ಅವರ 2021ರಲ್ಲಿ ನೀಡಿರುವ ಹೇಳಿಕೆಯಲ್ಲಿ, 'ಅನ್ವರ್ ಮಾನ್ಪಡಿ ವರದಿ ನೀಡಿದ್ದು, ವರದಿ ನೀಡಿ 9 ವರ್ಷವಾಗಿದ್ದರೂ ಯಾವುದೇ ಕ್ರಮವಾಗಿಲ್ಲ. ಅದಕ್ಕೆ ಅಂದಿನ ಸಿಎಂ ಯಡಿಯೂರಪ್ಪ ಅವರು ಹಾಗೂ ಅವರ ಕುಟುಂಬದವರು ಕಾಂಗ್ರೆಸ್ ನಾಯಕರೊಂದಿಗೆ ಶಾಮೀಲಾಗಿರುವುದೇ ಕಾರಣ ಎಂದು ಅನ್ವರ್ ಮಾನ್ಪಡೆ ಅವರು ಆರೋಪ ಮಾಡಿದ್ದಾರೆ' ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಕುಟುಂಬ ಎಂದರೆ ಯಾರು, ಬಿಜ...