Friday, May 1

Others

ಏಕಗವಾಕ್ಷಿ ಪೋರ್ಟಲ್: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ

ಏಕಗವಾಕ್ಷಿ ಪೋರ್ಟಲ್: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ

Others
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದ್ದಾರೆ.ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದ್ದು, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು.ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇ...
ಸನಾತನ ಬಗ್ಗೆ ಸಕಾರಾತ್ಮಕ ನಿಲುವು; ಮಹಾಕುಂಭ ಮೇಳದಲ್ಲಿಪವಿತ್ರ ಸ್ನಾನ ಮಾಡಿದ ಡಿಕೆಶಿ

ಸನಾತನ ಬಗ್ಗೆ ಸಕಾರಾತ್ಮಕ ನಿಲುವು; ಮಹಾಕುಂಭ ಮೇಳದಲ್ಲಿಪವಿತ್ರ ಸ್ನಾನ ಮಾಡಿದ ಡಿಕೆಶಿ

Others
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.ಜನವರಿ 13 ರಂದು ಪ್ರಾರಂಭವಾಗಿ ಫೆಬ್ರವರಿ 26 ರವರೆಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮವು ಈಗಾಗಲೇ ದೇಶಾದ್ಯಂತ ಮತ್ತು ಅದರಾಚೆಗಿನ ಲಕ್ಷಾಂತರ ಭಕ್ತರನ್ನು ಆಕರ್ಷಿಸಿದೆ.ಈ ಇಬ್ಬರೂ ನಾಯಕರು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು ಮತ್ತು ಭವ್ಯವಾದ ಆಧ್ಯಾತ್ಮಿಕ ಸಭೆಗಾಗಿ ಮಾಡಿದ ವ್ಯವಸ್ಥೆಗಳನ್ನು ಶ್ಲಾಘಿಸಿದರು.ತಮ್ಮ ಈ ಅಪೂರ್ವ ಕ್ಷಣ ಬಗ್ಗೆ ಅನುಭವ ಹಂಚಿಕೊಂಡ ಡಿ.ಕೆ.ಶಿವಕುಮಾರ್, 'ಇದು ಒಬ್ಬರ ಜೀವನದಲ್ಲಿ ಒಂದು ಐತಿಹಾಸಿಕ ಕ್ಷಣ. ಇಲ್ಲಿ ನೆರೆದಿರುವ ಕೋಟ್ಯಂತರ ಭಕ್ತರಿಗೆ ವ್ಯವಸ್ಥೆಗಳನ್ನು ನಿರ್ವಹಿಸುವಲ್ಲಿ ಸಂಘಟಕರು ಅದ್ಭುತ ಕೆಲಸ ಮಾಡಿದ್ದಾರೆ. ನನ್ನ ಕುಟುಂಬ ಮತ್ತು ನಾನು ಪವಿತ್ರ ಸ್ನಾನ ಮಾಡಿದ್ದಕ್ಕೆ ತುಂಬಾ ಸಂತೋಷವಾಗಿದೆ' ಎಂದು ಹೇಳಿದರು.ಗೃಹ ಸಚಿವರು, ಹಣಕಾ...
ಸಾಮಾಜಿಕ ಸ್ವಾಸ್ಥ್ಯದತ್ತ KSRTC ಚಿತ್ತ; ‘ಕ್ಯಾನ್ಸರ್ ಡೇ’ ಅರ್ಥಪೂರ್ಣ ಕಾರ್ಯಕ್ತಮ

ಸಾಮಾಜಿಕ ಸ್ವಾಸ್ಥ್ಯದತ್ತ KSRTC ಚಿತ್ತ; ‘ಕ್ಯಾನ್ಸರ್ ಡೇ’ ಅರ್ಥಪೂರ್ಣ ಕಾರ್ಯಕ್ತಮ

Others
ಬೆಂಗಳೂರು: ಸಾರಿಗೆ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮೂಲಕ ಜನಪ್ರಿಯ ನಿಗಮವೆನಿಸಿರುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸಮಾಜಿಕ ಸ್ವಾಸ್ಥ್ಯ ವಿಚಾರದಲ್ಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಬೆಂಗಳೂರಿನಲ್ಲಿರುವ KSRTC ಕೇಂದ್ರ ಸ್ಥಾನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮ ಗಮನಸೆಳೆಯಿತು.ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ ಆಯೋಜಿಲಾಯಿತು. 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು..ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ನಿಯಮಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿರುತ್ತದೆ. ನಿಗಮದ ಸಿಬ್ಬಂದಿಗಳು ಹಗಲಿರಳು ಎನ್ನದೆ, ಧೂಳು, ಮಾಲಿನ್ಯ ಮತ್ತು ಎಲ್ಲಾ ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್...
ಕೇಂದ್ರ ಬಜೆಟ್ 2025-26: ಶಿಪ್ಪಿಂಗ್ ಮತ್ತು ವಾಯುಯಾನ ಕ್ಷೇತ್ರಕ್ಕೆ ಉತ್ತೇಜನ

ಕೇಂದ್ರ ಬಜೆಟ್ 2025-26: ಶಿಪ್ಪಿಂಗ್ ಮತ್ತು ವಾಯುಯಾನ ಕ್ಷೇತ್ರಕ್ಕೆ ಉತ್ತೇಜನ

Others
ನವದೆಹಲಿ: ಕಡಲ ಉದ್ಯಮಕ್ಕೆ ದೀರ್ಘಾವಧಿಯ ಹಣಕಾಸಿಗಾಗಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು 25,000 ಕೋಟಿ ರೂಪಾಯಿಗಳ ಕಾರ್ಪಸ್‌ನೊಂದಿಗೆ ಸಮುದ್ರ ಅಭಿವೃದ್ಧಿ ನಿಧಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ್ದಾರೆ. ಸಂಸತ್ತಿನಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ಇದನ್ನು ಪ್ರಕಟಿಸಿದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಈ ಕಾರ್ಪಸ್ ಅನ್ನು ಕಡಲ ಉದ್ಯಮಕ್ಕೆ ಬೆಂಬಲ ಮತ್ತು ಸ್ಪರ್ಧೆಯನ್ನು ಉತ್ತೇಜಿಸಲು ವಿತರಿಸಲಾಗಿದೆ ಎಂದು ಹೇಳಿದರು. ನಿಧಿಯು ಸರ್ಕಾರದಿಂದ ಶೇಕಡಾ 49 ರಷ್ಟು ಕೊಡುಗೆಯನ್ನು ಹೊಂದಿರುತ್ತದೆ ಮತ್ತು ಬಾಕಿಯನ್ನು ಬಂದರುಗಳು ಮತ್ತು ಖಾಸಗಿ ವಲಯದಿಂದ ಕ್ರೋಢೀಕರಿಸಲಾಗುತ್ತದೆ ಎಂದರು.ವೆಚ್ಚದ ಅನಾನುಕೂಲಗಳನ್ನು ಪರಿಹರಿಸಲು ಹಡಗು ನಿರ್ಮಾಣ ಹಣಕಾಸು ನೆರವು ನೀತಿಯನ್ನು ಪರಿಷ್ಕರಿಸಲಾಗುವುದು. ಇದು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು ಭಾರತೀಯ ಯಾರ್ಡ್‌ಗಳಲ್ಲಿ ಹಡಗು ವಿಲೇವಾರಿಗೆ ಕ್ರೆಡಿಟ್ ಟಿಪ್ಪಣಿಗಳನ್ನು ಒಳಗೊಂಡಿರುತ್ತದೆ. ಇದಲ್ಲದೆ, ನಿಗದಿತ ಗಾತ್ರಕ್ಕಿಂತ ಹೆಚ್ಚಿನ ದೊಡ್ಡ ಹಡಗುಗಳನ್ನು ಮೂಲಸೌಕರ್ಯ ಸಾಮರಸ್ಯದ ಮಾಸ್ಟರ್ ಪ...
ಮುಂದಿನ 25 ವರ್ಷಗಳಲ್ಲಿ ಭಾರತ ಸಮೃದ್ಧ, ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ಮೋದಿ ವಿಶ್ವಾಸ

ಮುಂದಿನ 25 ವರ್ಷಗಳಲ್ಲಿ ಭಾರತ ಸಮೃದ್ಧ, ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ಮೋದಿ ವಿಶ್ವಾಸ

Others
ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಕ್ರವಾರ ಸಂಸತ್ತಿನ ಆವರಣದಲ್ಲಿ ಬಜೆಟ್ ಅಧಿವೇಶನ 2025 ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಸಮೃದ್ಧಿಯ ದೇವತೆ ಲಕ್ಷ್ಮಿ ದೇವಿಗೆ ನಮಿಸಿದ ಪ್ರಧಾನಿ, ಬಜೆಟ್ ಅಧಿವೇಶನ ಆರಂಭದ ಈ ಸಂದರ್ಭದಲ್ಲಿ ಇಂದು, ವಿವೇಕ, ಸಮೃದ್ಧಿ ಮತ್ತು ಕಲ್ಯಾಣವನ್ನು ನೀಡುವ ಲಕ್ಷ್ಮಿ ದೇವಿಯನ್ನು ಸ್ಮರಿಸುವುದು ವಾಡಿಕೆಯಾಗಿದೆ ಎಂದು ಹೇಳಿದರು. ದೇಶದ ಪ್ರತಿಯೊಬ್ಬ ಬಡ ಮತ್ತು ಮಧ್ಯಮ ವರ್ಗದ ಸಮುದಾಯದ ಮೇಲೆ ಲಕ್ಷ್ಮಿದೇವಿಯ ವಿಶೇಷ ಕೃಪೆ ಇರಲಿ ಅವರು ಪ್ರಾರ್ಥಿಸಿದರು.ಭಾರತವು ತನ್ನ 75ನೇ ಗಣರಾಜ್ಯೋತ್ಸವ ಪೂರ್ಣಗೊಳಿಸಿದೆ, ಇದು ಪ್ರತಿಯೊಬ್ಬ ಪ್ರಜೆಗೂ ಹೆಮ್ಮೆಯ ವಿಷಯ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಅಲ್ಲದೆ, ಪ್ರಜಾಪ್ರಭುತ್ವ ಜಗತ್ತಿನಲ್ಲಿ ಈ ಸಾಧನೆಯು ವಿಶೇಷ ಸ್ಥಾನವನ್ನು ಹೊಂದಿದ್ದು, ಭಾರತದ ಶಕ್ತಿ ಮತ್ತು ಮಹತ್ವವನ್ನು ಪ್ರದರ್ಶಿಸುತ್ತದೆ ಎಂದರು.Speaking at the start of the Budget Session of Parliament. https://t.co/IC4Sk4Ppub — Narendra Modi (@narendramodi) January 31, 2025ಮೂರನೇ ಬಾರ...
ಭವಿಷ್ಯದ ಆರ್ಥಿಕತೆಯನ್ನು ಯುವಜನರ ಮಾನಸಿಕ ಆರೋಗ್ಯ ಮುನ್ನಡೆಸಲಿದೆ: ಆರ್ಥಿಕ ಸಮೀಕ್ಷೆ 2024-25

ಭವಿಷ್ಯದ ಆರ್ಥಿಕತೆಯನ್ನು ಯುವಜನರ ಮಾನಸಿಕ ಆರೋಗ್ಯ ಮುನ್ನಡೆಸಲಿದೆ: ಆರ್ಥಿಕ ಸಮೀಕ್ಷೆ 2024-25

Others
ನವದೆಹಲಿ: ಮಾನಸಿಕ ಸೌಖ್ಯ ಎಂದರೆ ಜೀವನದ ಸವಾಲುಗಳನ್ನು ಎದುರಿಸುವ ಮತ್ತು ಫಲಪ್ರದವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ. ಮಾನಸಿಕ ಯೋಗಕ್ಷೇಮವು ನಮ್ಮ ಎಲ್ಲಾ ಮಾನಸಿಕ-ಭಾವನಾತ್ಮಕ, ಸಾಮಾಜಿಕ, ಅರಿವು ಮತ್ತು ದೈಹಿಕ ಸಾಮರ್ಥ್ಯಗಳನ್ನು ಒಳಗೊಂಡಿದೆ. ಇದನ್ನು ಮನಸ್ಸಿನ ಸಂಯೋಜಿತ ಆರೋಗ್ಯ ಎಂದೂ ಅರ್ಥೈಸಿಕೊಳ್ಳಬಹುದು ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಸಂಸತ್ತಿನಲ್ಲಿ ಮಂಡಿಸಿದ 2024-25ರ ಆರ್ಥಿಕ ಸಮೀಕ್ಷೆ ತಿಳಿಸಿದೆ.ಜೀವನಶೈಲಿಯ ಆಯ್ಕೆಗಳು, ಕಾರ್ಯ ಸ್ಥಳದ ಸಂಸ್ಕೃತಿ ಮತ್ತು ಕೌಟುಂಬಿಕ ಸನ್ನಿವೇಶಗಳು ಉತ್ಪಾದಕತೆಗೆ ನಿರ್ಣಾಯಕವಾಗಿವೆ ಮತ್ತು ಭಾರತದ ಆರ್ಥಿಕ ಮಹತ್ವಾಕಾಂಕ್ಷೆಗಳನ್ನು ಸಾಧಿಸಲು, ಬಾಲ್ಯ/ಯೌವನದಲ್ಲಿ ಮಾಡುವ ಜೀವನಶೈಲಿಯ ಹೆಚ್ಚಿನ ಆಯ್ಕೆಗಳಿಗೆ ತಕ್ಷಣ ಗಮನ ನೀಡಬೇಕು ಎಂದು ಆರ್ಥಿಕ ಸಮೀಕ್ಷೆಯು ವಿವರಿಸುತ್ತದೆ.ಅಂತರ್ಜಾಲದ ಅತಿಯಾದ ಅವಲಂಬನೆ ವಿಶೇಷವಾಗಿ ಸಾಮಾಜಿಕ ಮಾಧ್ಯಮದ ಅತಿಯಾದ ಬಳಕೆಯ ಕಾರಣದಿಂದ ಮಕ್ಕಳು ಮತ್ತು ಹದಿಹರೆಯದವರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ ಎಂದು ಆರ್ಥಿಕ ಸಮೀಕ್ಷೆಯು ...
ಬಿಗ್ ಬಾಸ್ ಕನ್ನಡ ಸೀಸನ್ 11: ಪ್ರಶಸ್ತಿ ಗೆದ್ದ ಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11: ಪ್ರಶಸ್ತಿ ಗೆದ್ದ ಹನುಮಂತ

Others
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಹಳ್ಳಿ ಹೈದ ಹನುಮಂತ ವಿಜೇತರಾಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಎಂಟ್ರಿಕೊಟ್ಟಿದ್ದ ಹನುಮಂತ ಪ್ರಶಸ್ತಿ ಗೆದ್ದು ಅಚ್ಚರಿ ಮೂಡಿಸಿದೆ.ಟಾಪ್ ಐವರ ಪೈಕಿ ಉಗ್ರಂ ಮಂಜು, ರಜತ್ ಮತ್ತು ಮೋಕ್ಷಿತ ಒಬ್ಬೊಬ್ಬರಾಗಿಯೇ ಹೊರನಡೆದರು. ಅಂತಿಮವಾಗಿ ತ್ರಿವಿಕ್ರಮ್ ಮತ್ತು ಹನುಮಂತ ನಡುವೆ ಪೈಪೋಟಿ ಏರ್ಪಟ್ಟಿತ್ತು. ಕಿಚ್ಚ ಸುದೀಪ್ ಅವರು ಹನುಮಂತ ಅವರ ಗೆಲುವನ್ನು ಪ್ರಕಟಿಸುವ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 11ರ ಕುತೂಹಲಕ್ಕೆ ತೆರೆ ಬಿದ್ದಿದೆ....
ತ್ರಿವರ್ಣ ಧ್ವಜ ವಂದನೆಯೊಂದಿಗೆ ಲಂಡನ್‌ನಲ್ಲಿ ಭಾರತದ ಗಣರಾಜ್ಯೋತ್ಸವ.. ಅನಿವಾಸಿ ಭಾರತೀಯರ ಸಮಾಗಮ

ತ್ರಿವರ್ಣ ಧ್ವಜ ವಂದನೆಯೊಂದಿಗೆ ಲಂಡನ್‌ನಲ್ಲಿ ಭಾರತದ ಗಣರಾಜ್ಯೋತ್ಸವ.. ಅನಿವಾಸಿ ಭಾರತೀಯರ ಸಮಾಗಮ

Others
ಲಂಡನ್: ಭಾರತದ 76 ನೇ ಗಣರಾಜ್ಯೋತ್ಸವವವನ್ನು ಬ್ರಿಟಿಷ್ ನೆಲದಲ್ಲಿ ವಿಶಿಷ್ಠವಾಗಿ ಆಚರಿಸಲಾಯಿತು. ಲಂಡನ್‌ನ ಹೃದಯಭಾಗದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಲಂಡನ್‌ನ ಐಕಾನಿಕ್ ಟೌನ್ ಹಾಲ್‌ನಲ್ಲಿ ಈ ಕಾರ್ಯಕ್ರಮ ಗಮನಸೆಳೆಯಿತು, ಲಂಡನ್‌ನ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಅವರು ಈ ಸಂಭ್ರಮಾಚರಣೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವನ್ನು ಆಯೋಜಿಸಿಸಿದ ಕೋವೆಂಟ್ರಿ ಲೇಬರ್ ಪಾರ್ಟಿಯ ಪ್ರಯತ್ನವನ್ನು ಅವರು ಶ್ಲಾಘಿಸಿದ್ದಾರೆ. ಟೌನ್ ಹಾಲ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲು ಕೋವೆಂಟ್ರಿ ಲೇಬರ್ ಪಾರ್ಟಿಯ ಪ್ರಯತ್ನಕ್ಕಾಗಿ ನಾವು ಶ್ಲಾಘಿಸುತ್ತೇವೆ ಎಂದು ಪಾಟೀಲ್ ಹೇಳಿದರು.ಈ ಕಾರ್ಯಮವು ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಸಂಬಂಧವನ್ನು ಬಲಗೊಳಿಸಿದೆ ಎಂದು ಡಾ.ನೀರಜ್ ಪಾಟೀಲ್ ಬಣ್ಣಿಸಿದ್ದಾರೆ. ಎರಡೂ ರಾಷ್ಟ್ರಗಳನ್ನು ಬಂಧಿಸುವ ಬಲವಾದ ಸಾಂಸ್ಕೃತಿಕ ಸಂಬಂಧವನ್ನು ಅವರು ಒತ್ತಿ ಹೇಳಿದರು. "ದೇವರು ಗ್ರೇಟ್ ಬ್ರಿಟನ್ ಮತ್ತು ಭಾರತವನ್ನು ಆಶೀರ್ವದಿಸಲಿ", ಎರಡು ರಾಷ್ಟ್ರಗಳ ನಡುವಿನ ಸಮೃದ್ಧ ಭವಿಷ್ಯದ ಹಂಚಿಕೆಯ ಭರವಸೆಯನ್ನು ಪ್...
ಮುಡಾ ಪ್ರಕರಣದಲ್ಲಿ ಒತ್ತಡಕ್ಕೆ ಮಣಿದು ಸಿಎಂಗೆ ಲೋಕಾಯುಕ್ತ ಕ್ಲೀನ್ ಚಿಟ್; ಬಿಜೆಪಿ ಆರೋಪ

ಮುಡಾ ಪ್ರಕರಣದಲ್ಲಿ ಒತ್ತಡಕ್ಕೆ ಮಣಿದು ಸಿಎಂಗೆ ಲೋಕಾಯುಕ್ತ ಕ್ಲೀನ್ ಚಿಟ್; ಬಿಜೆಪಿ ಆರೋಪ

Others
ಬೆಂಗಳೂರು: ಮುಡಾ ಪ್ರಕರಣದ ಕುರಿತು ಹೈಕೋರ್ಟ್‌ನಲ್ಲಿ ಇನ್ನೇನು ತೀರ್ಪು ಬರಬೇಕು ಎನ್ನುವಷ್ಟರಲ್ಲಿ ಲೋಕಾಯುಕ್ತ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ವರದಿ ಬಹಿರಂಗವಾಗಿದೆ. ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್ ಚಿಟ್ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ಯಾವುದೇ ತನಿಖೆ ಸಂಸ್ಥೆಗಳು ಆಧಾರ ರಹಿತವಾಗಿ ಮಾಹಿತಿ ನೀಡುವುದಿಲ್ಲ. ಮುಡಾ ಪ್ರಕರಣದಲ್ಲಿ ಆಧಾರ ಸಹಿತವಾಗಿ ಜಾರಿ ನಿರ್ದೇಶನಾಲಯ ವರದಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಸಂಸ್ಥೆಯು ಅತುರಾತುರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.ಮುಡಾ ಪ್ರಕರಣದ ಕುರಿತು ಹೈಕೋರ್ಟ್‌ನಲ್ಲಿ ಇನ್ನೇನು ತೀರ್ಪು ಬರಬೇಕು ಎನ್ನುವಷ್ಟರಲ್ಲಿ ಲೋಕಾಯುಕ್ತ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ವರದಿ ಬಹಿರಂಗವಾಗಿದೆ. ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್ ಚಿಟ್ ಕೊಡಲಾಗಿದೆ.ಯಾವುದೇ ತನಿಖೆ ಸಂಸ್ಥೆಗಳು ಆಧಾರ ರಹಿತವಾಗಿ ಮಾಹಿತಿ ನೀಡುವುದಿಲ್ಲ. ಮುಡಾ… pi...
ಮಹಾರಾಷ್ಟ್ರದಲ್ಲಿ ದಾರುಣ ಘಟನೆ; ರೈಲಿನಡಿ ಸಿಲುಕಿ 10 ಮಂದಿ ಸಾವು

ಮಹಾರಾಷ್ಟ್ರದಲ್ಲಿ ದಾರುಣ ಘಟನೆ; ರೈಲಿನಡಿ ಸಿಲುಕಿ 10 ಮಂದಿ ಸಾವು

Others
ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಬಳಿ ರೈಲು ಹರಿದು 10 ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ.ಜಲಗಾಂವ್ ಸಮೀಪದ ಪಚೋರಾ ರೈಲು ನಿಲ್ದಾಣದ ಬಳಿ ಸಂಜೆ 5 ಗಂಟೆ ಸುಮಾರಿಗೆ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹಬ್ಬಿತು. ಭಯಭೀತರಾದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದರು. ಆತುರದಲ್ಲೇ ರೈಲಿನಿಂದ ಇಳಿದು ಪಕ್ಕದ ಹಳಿಮೇಲೆ ಪ್ರಯಾಣಿಕರು ಜಮಾಯಿಸಿದ್ದರು. ಅದಾಗಲೇ ಮತ್ತೊಂದು ರೈಲು ಆ ಹಳಿ ಮೇಲೆ ಬಂದಿದ್ದು, ಎಕ್ಸ್ ಪ್ರೆಸ್ ರೈಲು ಹರಿದಿದೆ. ದುರ್ಘಟನೆಯಲ್ಲಿ ಕನಿಷ್ಠ10 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....