Wednesday, June 25

Others

ಅಬಕಾರಿ ಲಂಚಾವತಾರ; ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ

ಅಬಕಾರಿ ಲಂಚಾವತಾರ; ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ

Others
ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ. ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್‌ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ 40 ಪರ್ಸೆಂಟ್‌ ಎಂದು ಆರೋಪ ಮಾಡಿದ್ದರೂ ಅದಕ್ಕೆ ಸೂಕ್ತ ದಾಖಲೆ ನೀಡಿಲ್ಲ. ...
‘KSRTCಯನ್ನು ಬಲಗೊಳಿಸಿದ ಸ್ತ್ರೀ ‘ಶಕ್ತಿ’ ನಿಲ್ಲಲ್ಲ.. ಸರ್ಕಾರದ ‘ಗ್ಯಾರೆಂಟಿ’ ಅಬಾಧಿತ

‘KSRTCಯನ್ನು ಬಲಗೊಳಿಸಿದ ಸ್ತ್ರೀ ‘ಶಕ್ತಿ’ ನಿಲ್ಲಲ್ಲ.. ಸರ್ಕಾರದ ‘ಗ್ಯಾರೆಂಟಿ’ ಅಬಾಧಿತ

Others
ಬೆಂಗಳೂರು: 'KSRTCಯನ್ನು ಬಲಗೊಳಿಸಿರುವ, ಸ್ತ್ರೀಯರ ಪಾಲಿಗೆ ಆಶಾಕಿರಣವಾಗಿರುವ 'ಶಕ್ತಿ' ಗ್ಯಾರೆಂಟಿ ನಿಲ್ಲಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ 'ಶಕ್ತಿ' ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿರುವ ಡಿಕೆಶಿ, 'ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ' ಎಂದು ಸ್ಪಷ್ಟಪಡಿಸಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನೂ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು ತಮ್ಮ ಹೇಳಿಕೆ ಬಗ್ಗೆ ವ್ಯಾಪಕ ಚರ್ಚೆ, ಟೀಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರಿಗೆ ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದರು. ಆರ್ಥಿಕವಾಗಿ ಸದೃಢವಾಗಿರುವವರನ್ನು ಉಲ್ಲೇಖಿಸಿದ್ದೆ. ಐಟಿಬಿಟಿ ಸಂಸ್ಥೆಯವರು, ಎಂಎನ್...
‘ಸಮೃದ್ಧ ಬೈಂದೂರು’: ಶಾಸಕ ಗುರುರಾಜ್ ಗಂಟಿಹೊಳೆ ಪರಿಕಲ್ಪನೆ.. ಹಳ್ಳಿ-ಹಳ್ಳಿಗಳಲ್ಲಿ ವೈದ್ಯಕೀಯ ಶಿಬಿರ

‘ಸಮೃದ್ಧ ಬೈಂದೂರು’: ಶಾಸಕ ಗುರುರಾಜ್ ಗಂಟಿಹೊಳೆ ಪರಿಕಲ್ಪನೆ.. ಹಳ್ಳಿ-ಹಳ್ಳಿಗಳಲ್ಲಿ ವೈದ್ಯಕೀಯ ಶಿಬಿರ

Others
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿ ಪ್ರದೇಶವಾದ ಗಂಗಾನಾಡು, ಕ್ಯಾರ್ತುರು ಭಾಗದಲ್ಲಿ ವೈದ್ಯಕೀಯ ಶಿಬಿರ ನೆಡೆಸಿ ಫಲಾನುಭವಿಗಳಿಗೆ ಉಚಿತ ತಪಾಸಣೆ, ಚಿಕಿತ್ಸೆಯ ಜತೆಗೆ ಔಷಧ ವಿತರಿಸಲಾಯಿತು. ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು. ಜತೆಗೆ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಇಂತಹ ಶಿಬಿರಗಳ ಪೂರ್ಣ ಉಪಯೋಗ ಪಡೆಯಬೇಕು. ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ ಹಲವು ಕಾಯಕ್ರಮ ನಡೆಸುತ್ತಿದ್ದೇವೆ ಎಂದರು. ಮುಂದೆಯೂ ಸತತವಾಗಿ ಪ್ರತೀ ತಿಂಗಳು ಸಮೃದ್ಧ ಬೈಂದೂರು ಹಳ್ಳಿ ಪ್ರದೇಶಗಳಲ್ಲಿ ಉಚಿತ ವೈದ್ಯಕೀಯ ಶಿಭಿರ ನೆಡೆಸಾಲಿದೆ ಹಳ್ಳಿಪ್ರದೇಶದ ಪ್ರತೀ ಗ್ರಾಮಸ್ಥರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ವೈದ್ಯಧಿಕಾರಿಗಳು ಮತ್ತು ಶಾಸಕರು ಸಾರ್ವಜನಿಕರೆ ಕರೆ ನೀಡಿದರು. ಸಮೃದ್ಧ ಬೈಂದೂರು ಟ್ರಸ್ಟ್‌ ಅಧ್ಯಕ್ಷರಾದ ಎಸ್.ಸುರೇಶ್ ಶೆಟ್ಟಿ, ಗಂಗನಾಡು ಶಾಲಾ ಮುಖ್ಯಶಿಕ್ಷಕರಾದ ಪ್ರಭಾಕರ್ ಬಿಲ್ಲವ, SDMC ಅಧ್ಯಕ್ಷರಾದ ರಾಜು ಮರಾಠಿ ಹಾಗೂ ತಾಲೂಕಿನ ಹಲವು ವೈದ್ಯರ ತಂಡ ಶಿಬಿರದಲ್ಲಿ...
ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಪ್ರತಿಮೆಗೆ ನಟಿ ಪೂಜಾಗಾಂಧಿ ದಂಪತಿ ಗೌರವ; ಮುಂಗಾರು ಮಳೆ ಬೆಡಗಿಗೆ ಸಾಗರೋತ್ತರ ಕನ್ನಡಿಗರ ಸನ್ಮಾನ

ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಪ್ರತಿಮೆಗೆ ನಟಿ ಪೂಜಾಗಾಂಧಿ ದಂಪತಿ ಗೌರವ; ಮುಂಗಾರು ಮಳೆ ಬೆಡಗಿಗೆ ಸಾಗರೋತ್ತರ ಕನ್ನಡಿಗರ ಸನ್ಮಾನ

Others
ಲಂಡನ್: ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ ಮತ್ತು ವಿಜಯ ಘೋರ್ಪಡೆ ದಂಪತಿ ಲಂಡನ್‌ನಲ್ಲಿ ಶ್ರೀ ಬಸವೇಶ್ವರ ವಿಗ್ರಹ ಸ್ಥಳಕ್ಕೆ ಭೇಟಿ ಕನ್ನಡಿಗರ ಜೊತೆ ಸಮಾಲೋಚನೆ ನಡೆಸಿ ಗಮನಸೆಳೆದರು. ಬ್ರಿಟಿಷ್ ಇಂಡಿಯನ್ ಮತ್ತು ಕನ್ನಡ ಸಮುದಾಯದ ಸದಸ್ಯರು ಕೂಡ ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಯುಕೆ ಮೂಲದ ಬಸವ ಸಮಿತಿ ಸಂಯುಕ್ತವಾಗಿ ಆಯೋಜಿಸಿ ಕಾರ್ಯಕ್ರಮದಲ್ಲಿ ನಟಿ ಪೂಜಾ ಗಾಂಧಿ ದಂಪತಿ ಭಾಗವಹಿಸಿದರು. UK ಕನ್ನಡ ಬಳಗ ಮತ್ತು ಕನ್ನಡಿಗರು UK ಸಂಸ್ಥೆಗಳೂ ಈ ಕಾರ್ಯಕ್ರಮದಲ್ಲಿ ಮಹತ್ವದ ಸಹಭಾಗಿಗಳಾಗಿದ್ದವು. ಲ್ಯಾಂಬೆತ್‌ನ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಅವರು ಪೂಜಾ ಗಾಂಧಿ ದಂಪತಿಯನ್ನು ಅಭಿನಂದಿಸಿದರು. 'ಕನ್ನಡಿಗರು UK' ಅಧ್ಯಕ್ಷ ಗಣಪತಿ ಭಟ್, ಯುಕೆ ಮೂಲದ ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿಜಿತ್ ಸಲೀಮತ್, ಮಿರ್ಗಿ ರಂಗನಾಥ್ ಮತ್ತು ಶರಣ್ ಭೇಮಳ್ಳಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಾಮಾಜಿಕ ಹರಿಕಾರ ಜಗಜ್ಯೋತಿ ಬಸವೇಶ್ವರರಿಗೆ ಗೌರವ ಸಮರ್ಪಿಸಿದ ನಟಿ ಪೂಜಾ ಗಾಂಧಿ, 12ನೇ ಶತಮಾನದಲ್ಲಿ ಬಸವಣ್ಣನವರು ಮಾನವ ಹಕ್ಕುಗಳು, ಲಿಂಗ ಸಮಾನತ...
ಆಸ್ಮಾಕಂ ಸಂಸ್ಕೃತಂ; ಹನೂರಿನಲ್ಲಿ ಹೀಗೊಂದು ವಿಶೇಷ ಕಾರ್ಯಕ್ರಮ

ಆಸ್ಮಾಕಂ ಸಂಸ್ಕೃತಂ; ಹನೂರಿನಲ್ಲಿ ಹೀಗೊಂದು ವಿಶೇಷ ಕಾರ್ಯಕ್ರಮ

Others
ಚಾಮರಾಜನಗರ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ಮಹದೇಶ್ವರ ಸಂಸ್ಕೃತ ಪಾಠಶಾಲೆ ಹೊಸಪಾಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಆಸ್ಮಕಂ ಸಂಸ್ಕೃತಂ ಕಾರ್ಯಕ್ರಮವನ್ನು ಬೈಲೂರಿನ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು. ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಮಹದೇವಸ್ವಾಮಿ ಮಾತನಾಡಿ ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವುದರಿಂದ ಜ್ಞಾನ ಶಕ್ತಿ ಹೆಚ್ಚಿಸುತ್ತದೆ ಕಲಿಕೆಯ ದೃಷ್ಠಿಯಿಂದ ಅನುಕೂಲವಾಗುವುದು , ಸಂಸ್ಕಾರ ಸಂಸ್ಕೃತಿಗಳ ಬಗ್ಗೆ ಹೆಚ್ಚು ಅರಿವು ಮೂಡುತ್ತದೆ ಎಂದರು. ಸಂಸ್ಕೃತ ಪಾಠಶಾಲೆಯ ಮುಖ್ಯ ಶಿಕ್ಷಕರಾದ ರವಿಕುಮಾರ್ ಮಾತನಾಡಿ ಯಾವುದೇ ಭಾಷೆಯಾದರೂ ಸಂವಹನದ ಮೂಲಕ ಬಳಕೆ ಮಾಡಿದಾಗ ಮಾತ್ರ ಆ ಭಾಷೆ ಬೆಳೆಯುತ್ತದೆ , ಸುಮಾರು 3000 ವರ್ಷಗಳ ಇತಿಹಾಸ ವನ್ನು ಸಂಸ್ಕೃತ ಭಾಷೆ ಹೊಂದಿದೆ ಸಂಸ್ಕೃತ ಭಾಷೆಯಲ್ಲಿ ವೇದ ಉಪನಿಷತ್ತುಗಳು, ಇತಿಹಾಸ ಪುರಾಣಗಳು ,ಅನೇಕ ಶಾಸ್ತ್ರಗಳು ರಚನೆಯಾಗಿದೆ. ಇಂದಿನ ವಿದ್ಯಾರ್ಥಿಗಳು ಸಂಸ್ಕೃತವನ್ನು ವೈಜ್ಞಾನಿಕ ದೃಷ್ಟಿಕೋನವಿಟ್ಟು ಅಧ್ಯಯನ ಮಾಡಿದರೆ ಆಧುನಿಕ ಭಾಷೆಯೊಂದಿಗೆ ಸಂವಹನ ಮೂಲಕ ಅಧ್ಯಯನಗ...
ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

Others
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ 'ಉಳಿಯ' ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ ಆದ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರು ಈ ದೂರನ್ನು ಸಲ್ಲಿಸಿದ್ದು, ಅಧಿಕಾರಿಗಳ ವಿರುದ್ಧವೇ ಆದ್ಯ ಕ್ರಮವಾಗಬೇಕಿದೆ ಎಂದು ಗಮನಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ನದಿಯನ್ನು ಆವರಿಸಿಕೊಂಡಿರುವ ಪ್ರದೇಶವಾಗಿದೆ. ಕುಮಾರಧಾರ, ನೇತ್ರಾವತಿ, ಫಲ್ಗುಣಿ, ನಂದಿನಿ ಸಹಿತ ಹಲವಾರು ನದಿಗಳು ಕರಾವಳಿ ಜನರ ಜೀವನಾಡಿಯಾಗಿದ್ದು, ಇದೀಗ ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಜಲಮೂಲಕ್ಕೆ ಸಂಚಕಾರ ಎದುರಾಗಿದೆ. ಕರ್ನಾಟಕ ಕರಾವಳಿಯ ದೊಡ್ಡ ನದಿಗಳಲ್ಲಿ ಒಂದಾಗಿರುವ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ವ್ಯಾಪಕ ಚರ್ಚೆಗಳು ನ...
ಸಿಎಂ ಸಹಿ ಫೋರ್ಜರಿ ಮಾಡಿರೋದು ಈ ಅಧಿಕಾರಿ? ರಾಜ್ಯಪಾಲರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ದೂರು

ಸಿಎಂ ಸಹಿ ಫೋರ್ಜರಿ ಮಾಡಿರೋದು ಈ ಅಧಿಕಾರಿ? ರಾಜ್ಯಪಾಲರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ದೂರು

Others
ಬೆಂಗಳೂರು: ಸಾವಿರಾರು ಕೋಟಿ ರೂ ಮೌಲ್ಯದ ಜಮೀನನ್ನು ಅಧಿಕಾರಿಗಳು ಮುಖ್ಯಮಂತ್ರಿ ಸಹಿ ಫೋರ್ಜರಿ ಮೂಲಕ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಬಗ್ಗೆ ಹೈಕೋರ್ಟ್ ಪರಿವೀಕ್ಷಣೆಯಲ್ಲಿ ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಿಟಿಜನ್ ರೈಟ್ಸ್ ಫೌಂಡೇಶನ್ ರಾಜ್ಯಪಾಲರಿಗೆ ದೂರು ನೀಡಿದೆ. ಸಾರ್ವಜನಿರ ಸಮಸ್ಯೆಗಳಿಗೆ ಸ್ಪಂಧಿಸುತ್ತಾ, ಜನರ ಹಿತಾಸಕ್ತಿ ಸಂಬಂಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ, ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಕಾನೂನು ಹೋರಾಟ ನಡೆಸುತ್ತಾ ಸಾಮಾಜಿಕ ಹಿತಾಸಕ್ತಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ 'ಸಿಟಿಜನ್ ರೈಟ್ಸ್ ಫೌಂಡೇಷನ್', ಇದೀಗ ರಾಜ್ಯ ಸರ್ಕಾರದ ಅಧಿಕಾರಿಗಳು ಮುಖ್ಯಮಂತ್ರಿಯ ಸಹಿಯನ್ನು ಫೋರ್ಜರಿ ಮಾಡಿದ್ದಾರೆ ಎಂಬ ಆರೋಪ ಕುರಿತಂತೆ ತಮ್ಮ ಗಮನಸೆಳೆಯಲು ಬಯಸಿದ್ದು, ಈ ಬಗ್ಗೆ ಉನ್ನತಮಟ್ಟದ ತನಿಖೆಗೆ ನಿರ್ದೇಶಿಸಲು ಕೋರಿ ಮನವಿ ಸಲ್ಲಿಸಿದೆ. ರಾಜ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಯಿ ವೆಂಕಟೇಶ್ವರ ಮಿನರಲ್ಸ್'ಗೆ ಅಕ್ರಮವಾಗಿ ಗಣಿ ಗುತ್ತಿಗೆ ನೀಡಿರುವ ಆರೋಪಗಳು ಕೇಳಿಬಂದಿದ್ದು, ಈ ಪ್ರಕರಣದಲ್ಲಿ ತಮ್ಮ ತಪ್ಪಿಲ್ಲ ಎಂದು ...
ಪರಪ್ಪನ ಅಗ್ರಹಾರದಲ್ಲಿ ಶಾಸಕ ಮುನಿರತ್ನ; ಜಾಮೀನು ನಿರೀಕ್ಷೆಯಲ್ಲಿ ಬಿಜೆಪಿ ಶಾಸಕ

ಪರಪ್ಪನ ಅಗ್ರಹಾರದಲ್ಲಿ ಶಾಸಕ ಮುನಿರತ್ನ; ಜಾಮೀನು ನಿರೀಕ್ಷೆಯಲ್ಲಿ ಬಿಜೆಪಿ ಶಾಸಕ

Others
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಒಡ್ಡಿರುವ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಪೊಲೀಸರು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಈ ನಡುವೆ, ಮುನಿರತ್ನ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಬುಧವಾರ ವಿಚಾರಣೆಗೆ ಬರಲಿದೆ....
KKRTC ಗುಂಪು ವಿಮೆ; ಮೃತ ನೌಕರರ ನಾಮನಿರ್ದೇಶಿತರಿಗೆ 1.4 ಕೋ.ರೂ ಪರಿಹಾರ ವಿತರಣೆ

KKRTC ಗುಂಪು ವಿಮೆ; ಮೃತ ನೌಕರರ ನಾಮನಿರ್ದೇಶಿತರಿಗೆ 1.4 ಕೋ.ರೂ ಪರಿಹಾರ ವಿತರಣೆ

Others
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೇಂದ್ರ ಕಚೇರಿಯಲ್ಲಿ ಆಂತರಿಕ ಗುಂಪು ವಿಮಾ ಯೋಜನೆ ಅಡಿ ಸದಸ್ಯರಾಗಿ ನಿಧನರಾಗಿರುವ ನೌಕರರ ನಾಮನಿರ್ದೇಶಿತರಿಗೆ ರೂ.1.40 ಕೋಟಿಗಳ ಪರಿಹಾರ ಮೊತ್ತ ವಿತರಣೆ ಮಾಡಲಾಯಿತು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ, ಕಲಬುರಗಿಯಲ್ಲಿ ಕರ್ನಾಟಕ ಸರ್ಕಾರದ ಸಾರಿಗೆ ಹಾಗೂ ಮುಜರಾಯಿ ಸಚಿವರು ಹಾಗೂ ಕ.ಕ.ರಾ.ಸಾ.ನಿಗಮದ ಅಧ್ಯಕ್ಷ ರಾಮಲಿಂಗರೆಡ್ಡಿ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ ಎಂ.ರಾಚಪ್ಪರವರು ನಿಗಮದ ಆಂತರಿಕ ಗುಂಪು ವಿಮಾ ಯೋಜನೆ ಅಡಿ ಸದಸ್ಯರಾಗಿ ಸೇವಾ ಅವಧಿಯಲ್ಲಿ ನಿಧನಗೊಂಡಿರುವ ಬೀದರ ವಿಭಾಗ-05, ವಿಜಯಪೂರ ವಿಭಾಗ-04, ಕಲಬುರಗಿ ವಿಭಾಗ-02 ಹಾಗೂ ರಾಯಚೂರು ವಿಭಾಗ-03, ಒಟ್ಟು 14 ಮೃತ ನೌಕರರ ನಾಮನಿರ್ದೇಶಿತರಿಗೆ ತಲಾ ರೂ.10.00ಲಕ್ಷಗಳಂತೆ ಒಟ್ಟು 14 ಜನರಿಗೆ ರೂ.1.40 ಕೋಟಿಗಳ ಪರಿಹಾರ ಮೊತ್ತದ ಧನಾದೇಶಗಳನ್ನು ವಿತರಿಸಿದರು. ಧನಾದೇಶಗಳನ್ನು ವಿತರಿಸಿ ಮಾತಾನಾಡಿದ ಸಾರಿಗೆ  ಸಚಿವ ರಾಮಲಿಂಗ ರೆಡ್ಡಿ, ಕ.ಕ.ರ.ಸಾ.ನಿಗಮವು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಂತರಿಕ ಗುಂಪು ವಿಮ ಯೋಜನೆ ಅಡಿ ಸದಸ್ಯರಾಗಿ ಸೇವಾ ...
ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?

Others
ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ ಮೊಳಗಿರುವ ಬಗ್ಗೆ ಬಿಜೆಪಿ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ. ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ.… pic.twitter.com/GmyxMyiZIZ — R. Ashoka (@RAshokaBJP) September 16, 2024 ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಾಮಾಜಿಕ ಜಾಲತಾಣ'X'ನಲ್ಲಿ ಪೋಸ್ಟ್ ಹಾಕಿದ್ದಾರೆ. ಚಿಕ್ಕಮಗಳೂರಲ್ಲಿ ಬೈಕ್ ನಲ...