“ಮತ್ತೊಂದು ಗೌರವ ಡಾಕ್ಟರೇಟ್ ಪದವಿಗಾಗಿ ಸಿಎಂ ವಿರುದ್ದ ಟೀಕೆ?” ಸಾಹಿತಿ ಬೈರಪ್ಪ ಬಗ್ಗೆ ರಮೇಶ್ ಬಾಬು ಟೀಕೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಬೆಂಬಲಿಸಿರುವ ಸಾಹಿತಿ ವಿರುದ್ದ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದಿಂದ ಪಡೆದಿರುವ 6 ಪ್ರಶಸ್ತಿಗಳಲ್ಲಿ 5 ಪ್ರಶಸ್ತಿಗಳು ಬಿಜೆಪಿ ಕಾರಣದಿಂದಲೇ ದೊರಕಿದ್ದು, ಅದರ ಋಣ ಸಂದಾಯದ ಕಾರಣಕ್ಕಾಗಿ ಸಾಹಿತಿ ಎಸ್. ಎಲ್. ಬೈರಪ್ಪನವರು ರಾಜ್ಯ ಸರ್ಕಾರವನ್ನು ಟೀಕಿಸಿ ರಾಜ್ಯಪಾಲರನ್ನು ಸಮರ್ಥಿಸಿ ಅರೆ ಸಂವಿಧಾನ ತಜ್ಞರಾಗಲು ಹೊರಟಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ.
ಕರ್ನಾಟಕದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಪ್ರಕರಣ ನ್ಯಾಯಾಂಗದ ಅಂಗಳದಲ್ಲಿ ಇರುತ್ತದೆ. ಸಾಹಿತಿ ಎಸ್. ಎಲ್. ಬೈರಪ್ಪನವರು ತಮ್ಮ ಎಂದಿನಂತೆ ರಾಜ್ಯಪಾಲರ ಕ್ರಮವನ್ನು ಸಮರ್ಥಿಸಲು ಹೊರಟಿರುವುದು ಅವರ ಮನಸ್ಥಿತಿಗೆ ಹಿಡಿದ ಕನ್ನಡಿಯಂತಿದೆ ಎಂದು ರಮೇಶ್ ಬಾಬು ವೇಳೆ ವಿಶ್ಲೇಷಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯ ರಿಟ್ ಪಿಟಿಷನ್ ನಂ. 1224/2023 ಪ್ರಕರಣದಲ್ಲಿ ಇತ್ತೀಚಿಗೆ ಆದೇಶವನ್...