
ಸೋಮಾವತಿ ಅಮಾವಾಸ್ಯೆ; ಹರಿವಾದಲ್ಲಿ ಯಾಕಿಷ್ಟು ಜನಸಾಗರ?
ಹರಿದ್ವಾರ: ಸೋಮವತಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಉತ್ತರಾಖಂಡದ ಹರಿದ್ವಾರದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿದೆ. ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಹಾಗೂ ಪ್ರಾರ್ಥನೆಗಾಗಿ ಸೋಮವಾರ ಲಕ್ಷಾಂತರ ಭಕ್ತರು ಹರ್ ಕಿ ಪೌರಿ ಸೇರಿದಂತೆ ಪ್ರಮುಖ ಘಾಟ್ಗಳಿಗೆ ಆಗಮಿಸಿದರು.
ಸೋಮವತಿ ಅಮಾವಾಸ್ಯೆಯಂದು ಗಂಗಾ ಸ್ನಾನ, ದಾನ ಹಾಗೂ ಪೂರ್ವಜರಿಗೆ ತರ್ಪಣ ಸಲ್ಲಿಸುವುದು ವಿಶೇಷ ಮಹತ್ವ ಹೊಂದಿದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಯಾತ್ರಿಕರು ಹರಿದ್ವಾರಕ್ಕೆ ಆಗಮಿಸಿದರು.
ಭಕ್ತರ ಭಾರಿ ಸಂಖ್ಯೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿತ್ತು. ಪ್ರಮುಖ ಘಾಟ್ಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು. ಎಸ್ಡಿಆರ್ಎಫ್, ಎನ್ಡಿಆರ್ಎಫ್ ಹಾಗೂ ಇತರ ಭದ್ರತಾ ತಂಡಗಳನ್ನು ನಿಯೋಜಿಸಲಾಗಿತ್ತು.ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭಕ್ತರ ಸಂಚಾರ, ಸುರಕ್ಷತೆ ಮತ್ತು ಸ್ನಾನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಲವು ಹಂತಗಳಲ್ಲಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಧಾರ್ಮಿಕ...









