Saturday, August 8

ವಿಶೇಷ

ಬೆಳಗಾವಿಯಲ್ಲಿ ತಿರುಪತಿ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ಎಸ್‌ ನರೇಶ್‌ಕುಮಾರ್‌

ಬೆಳಗಾವಿಯಲ್ಲಿ ತಿರುಪತಿ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ಎಸ್‌ ನರೇಶ್‌ಕುಮಾರ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ
ಬೆಂಗಳೂರು: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯರಾದ ಎಸ್‌ ನರೇಶ್‌ ಕುಮಾರ್‌ ತಿಳಿಸಿದ್ದಾರೆ.ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದರು.16.09.2025 ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಲಾಯಿತು. ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಲ್ಲಿ ಇರುವಂತೆ ಬೆಳಗಾವಿಯಲ್ಲೂ ದೇವಸ್ಥಾನ ನಿರ್ಮಿಸುವುದರಿಂದ ಆಭಾಗದ ಭಕ್ತಾದಿಗಳಿಗೆ ಅನುಕೂಲವಾಗಲಿದೆ ಎಂದರು.ಪ್ರತಿ ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ, ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ...
ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ; ಸಿದ್ದು ಸರ್ಕಾರದ ವಿರುದ್ಧ ಆಕ್ರೋಶ ಸ್ಫೋಟ

ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ; ಸಿದ್ದು ಸರ್ಕಾರದ ವಿರುದ್ಧ ಆಕ್ರೋಶ ಸ್ಫೋಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ
ಬೆಂಗಳೂರು: ರಾಜ್ಯದ ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳ ಕುರಿತಂತೆ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ.ಗಣೇಶ ಚತುರ್ಥಿಯನ್ನು ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ ಈಗ ನವರಾತ್ರಿ, ದೀಪಾವಳಿಯ ಸಂಭ್ರಮವನ್ನೂ ಹಾಳು ಮಾಡಲು ಮುಂದಾಗಿದೆ. ʼಎʼ ದರ್ಜೆಯ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯ ದರವನ್ನು ಏರಿಸುವ ಮೂಲಕ ಹಿಂದೂ ಧರ್ಮೀಯರ ಮೇಲೆ ತನ್ನ ಅಸಹನೆಯನ್ನು ತೋರಿಸಿದೆ ಎಂದು ಬಿಜೆಪಿ ದೂರಿದೆ.ಹಿಂದೂಗಳು ಸುಮ್ಮನಿದ್ದಾರೆ, ಏನು ಮಾಡಿದರೂ ನಡೆಯುತ್ತದೆ ಎಂದು ಸಿದ್ದರಾಮಯ್ಯ ಸರ್ಕಾರ ಅಹಂಭಾವ ಪ್ರದರ್ಶಿಸುತ್ತಿದೆ. ಕಟೀಲು ದೇವಸ್ಥಾನವೊಂದರಲ್ಲೇ ಅತಿಹೆಚ್ಚು ಜನರು ಭಕ್ತಿಯಿಂದ ಸಮರ್ಪಿಸುವ ಹೂವಿನ ಪೂಜೆಯ ದರವನ್ನು ಬರೋಬ್ಬರಿ 184% ಹೆಚ್ಚಳ ಮಾಡಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಆಶ್ಲೇಷ ಪೂಜೆ, ನಾಗಪ್ರತಿಷ್ಠೆ ಸೇವೆಗಳ ಸೇವಾ ದರವನ್ನೂ ಹೆಚ್ಚಿಸಿರುವುದು ಸರ್ಕಾರದ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನ...
4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿಶೇಷ, ವೀಡಿಯೊ
ಕೊಪ್ಪಳ: ಗಂಗಾವತಿ ತಾಲೂಕಿನ ಶ್ರೀರಾಮನಗರದ ನಮ್ಮ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಗಣೇಶೋತ್ಸವದ ಅಂಗವಾಗಿ “4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ಗಾತ್ರದ ಗಣೇಶನ ಆಕೃತಿಯನ್ನು ರಚಿಸಿ ದೀಪಗಳನ್ನು ಬೆಳಗಿಸಿ ಗಣೇಶನಿಗೆ ವೈಶಿಷ್ಟ್ಯಪೂರ್ಣವಾದ ಅಹ್ವಾನವನ್ನು ನೀಡಲಾಯಿತು.5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ!! ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ಮಕ್ಕಳು ವಿನಾಯಕನ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸುವ ಮೂಲಕ ಗಮನ ಸೆಳೆದಿದ್ದಾರೆ.#Ballari #Koppala pic.twitter.com/big3vBbG7l— Ballari Tweetz (@TweetzBallari) August 25, 2025ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಸಂಭ್ರಮ ಸಂತೋಷದಿAದ ಪಾಲ್ಗೊಂಡು ವಿನಾಯಕನಿಗೆ ಜೈಕಾರವನ್ನು ಹಾಕಿ ದೀಪಗಳಿಂದ ಗಣೇಶನ ಆಕೃತಿಯನ್ನು ಮೂಡಿಸಿದರು.ಶಾಲೆಯ ಪೂರ್ವ ಪ್ರಾಥಮಿಕದಿಂದ ಎಂಟನೆಯ ತರಗತಿಯ ಸುಮಾರು 2000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಮಾಡಿಸಲಾಯಿತು. ವಿದ್ಯಾರ್ಥಿಗಳಲ...
ಒಂದೆಡೆ ರಕ್ಷಾ ಬಂಧನ, ಇನ್ನೊಂದೆಡೆ ‘ಸಮುದ್ರ ಪೂಜೆ’; ಕಾರ್ ಸ್ಟ್ರೀಟ್ ದೇವಾಲಯದಿಂದ ವಿಶೇಷ ಕೈಂಕರ್ಯ

ಒಂದೆಡೆ ರಕ್ಷಾ ಬಂಧನ, ಇನ್ನೊಂದೆಡೆ ‘ಸಮುದ್ರ ಪೂಜೆ’; ಕಾರ್ ಸ್ಟ್ರೀಟ್ ದೇವಾಲಯದಿಂದ ವಿಶೇಷ ಕೈಂಕರ್ಯ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿಶೇಷ
ಮಂಗಳೂರು: ಶ್ರಾವಣ ಶುಕ್ಲ ಪೂರ್ಣಿಮೆಯ ಸಂಭ್ರಮದಲ್ಲಿ ಮಂಗಳೂರು ಸಮುದ್ರ ತಡಿಯಲ್ಲಿ ನಡೆದ ‘ಸಮುದ್ರ ಪೂಜೆ’ ಕೈಂಕರ್ಯ ಭಕ್ತಿ ಭಾವದ ವಾತಾವರಣ ನಿರ್ಮಿಸಿತು. ನೂಲ ಹುಣ್ಣಿಮೆ, ರಕ್ಷಾಬಂಧನದೊಂದಿಗೆ ಸಮುದ್ರ ಪೂಜೆಯೂ ಕರಾವಳಿ ಜನರಿಗೆ ವಿಶೇಷ ಆಕರ್ಷಣೆಯಾಗಿದೆ.ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಾಲಯದ ವತಿಯಿಂದ ಭಾನುವಾರ ಸಮುದ್ರ ಪೂಜೆ ನೆರವೇರಿತು. ಶ್ರೀದೇವಳ ಹಾಗೂ ಸಮಾಜಭಾಂದವರಿಂದ ‘ಸ್ವರ್ಣ ತೆಂಗು’ ಹಾಗೂ ‘ಕ್ಷೀರ ಸಮರ್ಪಣೆ’ ನಡೆಯಿತು.ಕಾರ್ಯಕ್ರಮದಲ್ಲಿ ದೇವಾಲಯದ ಮೊಕ್ತೇಸರರು, ಧಾರ್ಮಿಕ ಮುಖಂಡರು ಹಾಗೂ ಸಮಾಜದ ಗಣ್ಯರು ಪಾಲ್ಗೊಂಡು ಭಕ್ತರೊಂದಿಗೆ ಪೂಜಾ ವಿಧಿಯಲ್ಲಿ ಭಾಗಿಯಾದರು....
ನಿಗದಿತ ದಿನಾಂಕಕ್ಕೆ ಒಂದು ವಾರ ಮೊದಲೇ ಅಮರನಾಥ ಯಾತ್ರೆ ಹಠಾತ್ ಸ್ಥಗಿತ

ನಿಗದಿತ ದಿನಾಂಕಕ್ಕೆ ಒಂದು ವಾರ ಮೊದಲೇ ಅಮರನಾಥ ಯಾತ್ರೆ ಹಠಾತ್ ಸ್ಥಗಿತ

ದೇಶ, ಪ್ರಮುಖ ಸುದ್ದಿ, ವಿಶೇಷ
ನವದೆಹಲಿ: ವಾರ್ಷಿಕ ಅಮರನಾಥ ಯಾತ್ರೆಯನ್ನು ಆಗಸ್ಟ್ 9 ರಂದು ಮುಕ್ತಾಯಗೊಳ್ಳುವ ಒಂದು ವಾರ ಮುಂಚಿತವಾಗಿ ಭಾನುವಾರದಿಂದ ಸ್ಥಗಿತಗೊಳಿಸಲಾಗಿದೆ.ನಿರಂತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಯಾತ್ರಾ ಹಾದಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಯಾತ್ರೆಯನ್ನು ಮೊದಲೇ ಸ್ಥಗಿತಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಮೂರು ದಿನಗಳ ಹಿಂದೆಯೇ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಶನಿವಾರ ಅಸುರಕ್ಷಿತ ಸ್ಥಿತಿ ಮತ್ತು ತುರ್ತು ದುರಸ್ತಿ ಕಾರ್ಯದ ಅಗತ್ಯದಿಂದಾಗಿ ಎರಡು ಸಾಂಪ್ರದಾಯಿಕ ಮಾರ್ಗಗಳಾದ ಬಾಲ್ಟಾಲ್ ಅಥವಾ ಪಹಲ್ಗಾಮ್‌ನಿಂದ ಯಾತ್ರೆ ಪುನರಾರಂಭಗೊಳ್ಳುವುದಿಲ್ಲ ಎಂದು ಅಧಿಕಾರಿಗಳು ಘೋಷಿಸಿದರು.ಕಾಶ್ಮೀರ ವಿಭಾಗೀಯ ಆಯುಕ್ತ ವಿಜಯ್ ಕುಮಾರ್ ಬಿಧುರಿ ಅವರ ಪ್ರಕಾರ, ಇತ್ತೀಚಿನ ಮಳೆಯಿಂದ ಭೂಪ್ರದೇಶವು ತೀವ್ರವಾಗಿ ಪರಿಣಾಮ ಬೀರಿದೆ. ಇದು ಯಾತ್ರಿಕರಿಗೆ ಮಾರ್ಗವನ್ನು ಅಸುರಕ್ಷಿತವಾಗಿಸಿದೆ. ಎರಡೂ ಮಾರ್ಗಗಳಿಗೆ ತಕ್ಷಣದ ದುರಸ್ತಿ ಮತ್ತು ನಿರ್ವಹಣೆ ಅಗತ್ಯವಿದ್ದು, ಆ ದುರಸ್ತಿಗಾಗಿ ಪುರುಷರು ಮತ್ತು ಯಂತ್ರೋಪಕರಣ...
‘ಮಹಾವತಾರ ನರಸಿಂಹ’: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಯ ಟ್ರೇಲರ್ ಬಿಡುಗಡೆ

‘ಮಹಾವತಾರ ನರಸಿಂಹ’: ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆಯ ಟ್ರೇಲರ್ ಬಿಡುಗಡೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿಶೇಷ, ವೀಡಿಯೊ, ಸಿನಿಮಾ
ವಿಷ್ಣುವಿನ ಚತುರ್ಥ ಅವತಾರವಾದ ನರಸಿಂಹನ ಕಥೆಯನ್ನು ಆಧರಿಸಿದ ಮಹತ್ವಾಕಾಂಕ್ಷೆಯ ಅನಿಮೇಟೆಡ್ ಚಲನಚಿತ್ರ 'ಮಹಾವತಾರ ನರಸಿಂಹ'ದ ಟ್ರೇಲರ್ ಬಿಡುಗಡೆ ಆಗಿದ್ದು, ಹಿರಣ್ಯಕಶ್ಯಪ ಮತ್ತು ಪ್ರಹ್ಲಾದ ನಡುವಿನ ಪೌರಾಣಿಕ ಸಂಘರ್ಷವನ್ನು ಆಧುನಿಕ ತಂತ್ರಜ್ಞಾನದಿಂದ ಜೀವಂತವಾಗಿ ತೆರೆಯ ಮೇಲೆ ತರುವ ಪ್ರಯತ್ನ ನಡೆದಿದೆ.ಚಿತ್ರದ ನಿರ್ಮಾಪಕರಾದ ಹೊಂಬಾಳೆ ಫಿಲ್ಮ್ಸ್ ಮತ್ತು ಕ್ಲೀಮ್ ಪ್ರೊಡಕ್ಷನ್ಸ್ ಈ ಪೌರಾಣಿಕ ಮಹಾಕಾವ್ಯವನ್ನು ಐದು ಭಾರತೀಯ ಭಾಷೆಗಳಲ್ಲಿ ಜುಲೈ 25, 2025ರಂದು ಬಿಡುಗಡೆ ಮಾಡುತ್ತಿದ್ದಾರೆ. 3D ರೂಪದಲ್ಲೂ ಚಿತ್ರ ಬಿಡುಗಡೆ ಆಗಲಿದೆ.ಭಗವಾನ್ ವಿಷ್ಣುವಿನ ನಾಲ್ಕನೇ ಅವತಾರ ನರಸಿಂಹ ರೂಪದಲ್ಲಿನ ಈ ಚಿತ್ರದಲ್ಲಿ, ತನ್ನ ನಾಸ್ತಿಕ ತಂದೆ ಹಿರಣ್ಯಕಶಿಪುವಿನ ವಿರುದ್ಧ ಧರ್ಮದ ಮೌಲ್ಯಗಳಿಗೆ ನಿಲುಕುವ ಪ್ರಹ್ಲಾದನ ಕಥೆಯನ್ನು ಹೊಸ ತಳಹದಿಯಲ್ಲಿ ಚಿತ್ರಿಸಲಾಗಿದೆ. ನರಸಿಂಹನ ಅವತಾರದ ದೃಶ್ಯಗಳು ಟ್ರೇಲರ್‌ನಲ್ಲಿಯೇ ಕಣ್ಣು ಸೆಳೆಯುತ್ತವೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ವಿಜಯ್ ಕಿರಗಂದೂರ್ 'ಈ ಮಹಾಕಾವ್ಯವನ್ನು ಅನಿಮೇಷನ್ ಮಾಧ್ಯಮದಲ್ಲಿ ಹೇಳಲು ಸಾಧ್ಯವಾಗಿದ್ದು ನಮಗೆ ಹೆಮ್ಮ...
ಅಮರನಾಥ ದರ್ಶನ: 2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಯಾತ್ರೆ

ಅಮರನಾಥ ದರ್ಶನ: 2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಯಾತ್ರೆ

ದೇಶ, ಪ್ರಮುಖ ಸುದ್ದಿ, ವಿಶೇಷ
ಶ್ರೀನಗರ: 6,979 ಯಾತ್ರಿಗಳ ಮತ್ತೊಂದು ತಂಡವು ಶನಿವಾರ ಜಮ್ಮುವಿನಿಂದ ಕಾಶ್ಮೀರಕ್ಕೆ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಅಮರನಾಥ ದೇಗುಲಕ್ಕೆ ತೀರ್ಥಯಾತ್ರೆ ಮಾಡಲು ಹೊರಟಿದ್ದು, ಕಳೆದ ಎರಡು ದಿನಗಳಲ್ಲಿ 26,800 ಕ್ಕೂ ಹೆಚ್ಚು ಯಾತ್ರಿಕರು 'ದರ್ಶನ' ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜುಲೈ 3 ರಂದು 38 ದಿನಗಳ ಅಮರನಾಥ ಯಾತ್ರೆ ಪ್ರಾರಂಭವಾದಾಗಿನಿಂದ ಕಳೆದ ಎರಡು ದಿನಗಳಲ್ಲಿ 26,800 ಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇವಾಲಯದ ಗುಹೆಯೊಳಗೆ 'ದರ್ಶನ' ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಭಗವತಿ ನಗರ ಯಾತ್ರಾ ನಿವಾಸದಿಂದ ಬೆಳಿಗ್ಗೆ 312 ವಾಹನಗಳ ಎರಡು ಬೆಂಗಾವಲು ಬೆಂಗಾವಲುಗಳಲ್ಲಿ ಕಣಿವೆಗೆ 6,979 ಯಾತ್ರಿಕರ ಮತ್ತೊಂದು ತಂಡ ಹೊರಟಿದೆ. ಈ ಪೈಕಿ 2,753 ಯಾತ್ರಿಕರು ಬಾಲ್ಟಾಲ್ ಬೇಸ್ ಕ್ಯಾಂಪ್‌ಗೆ ಹೋಗುತ್ತಿದ್ದರೆ, 4,226 ಯಾತ್ರಿಕರು ನುನ್ವಾನ್ (ಪಹಲ್ಗಾಮ್ ಬೇಸ್ ಕ್ಯಾಂಪ್) ಗೆ ಹೋಗುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶುಕ್ರವಾರ ಬಾಲ್ಟಾಲ್ ಬೇಸ್ ಕ್...
ಅಮರನಾಥ ಯಾತ್ರೆ ಆರಂಭ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

ಅಮರನಾಥ ಯಾತ್ರೆ ಆರಂಭ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

ಆಧ್ಯಾತ್ಮ, ದೇಶ, ಪ್ರಮುಖ ಸುದ್ದಿ, ವಿಶೇಷ
ಶ್ರೀನಗರ: ಬಿಗಿ ಭದ್ರತಾ ವ್ಯವಸ್ಥೆಯ ನಡುವೆ ಈ ವರ್ಷದ ಅಮರನಾಥ ಯಾತ್ರೆ ಜುಲೈ 3ರಿಂದ ಆರಂಭವಾಗಿದ್ದು, ಮೊದಲ ದಿನವೇ 12,300ಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇವಾಲಯದಲ್ಲಿ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಶುಕ್ರವಾರ, 6,411 ಯಾತ್ರಿಕರ ಮತ್ತೊಂದು ತಂಡ ಜಮ್ಮುವಿನ ಭಗವತಿ ನಗರ ಯಾತ್ರಾ ನಿವಾಸದಿಂದ ಕಣಿವೆಗೆ ಹೊರಟಿದೆ. ಈ ಪೈಕಿ 2,789 ಯಾತ್ರಿಕರು ಬಾಲ್ಟಾಲ್ ಮೂಲ ಶಿಬಿರಕ್ಕೆ, ಉಳಿದ 3,622 ಯಾತ್ರಿಕರು ನುನ್ವಾನ್ (ಪಹಲ್ಗಾಮ್ ಶಿಬಿರ) ಕಡೆಗೆ ಪ್ರಯಾಣ ಬೆಳೆಸಿದ್ದಾರೆ.ಏಪ್ರಿಲ್‌ನಲ್ಲಿ ಪಹಲ್ಗಾಮ್ ಸಮೀಪ ನಡೆದ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ, ಈ ಬಾರಿ ಯಾತ್ರೆಗೆ ಹಲವು ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಸೇನೆ, ಬಿಎಸ್‌ಎಫ್‌, ಸಿಆರ್‌ಪಿಎಫ್‌, ಎಸ್‌ಎಸ್‌ಬಿ ಮತ್ತು ಸ್ಥಳೀಯ ಪೊಲೀಸರ ಜೊತೆಗೆ 180 ಹೆಚ್ಚುವರಿ ಸಿಎಪಿಎಫ್‌ ಕಂಪನಿಗಳನ್ನು ನಿಯೋಜನೆ ಮಾಡಲಾಗಿದೆ.ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ಸಾರಿಗೆ ಶಿಬಿರಗಳು ಹಾಗೂ ಜಮ್ಮುವಿನಿಂದ ಪವಿತ್ರ ಗುಹಾ ದೇವಾಲಯದವರೆಗೆ ಎಲ್ಲ ಭದ್ರತಾ ವ್ಯವಸ್ಥೆಗಳನ್ನು ಶಕ್ತಿಗೊಳಿಸಲಾಗಿದೆ. ಪಹಲ್ಗಾ...
ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

ಆಧ್ಯಾತ್ಮ, ದೇಶ, ಪ್ರಮುಖ ಸುದ್ದಿ, ವಿಶೇಷ
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದ ಪಕ್ಕದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠ ನಿರ್ಮಾಣವಾಗಲಿದೆ.  ಅಯೋಧ್ಯೆಯ ಈ ಭವ್ಯ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.ಶ್ರೀ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಉಪಸ್ಥಿತಿಯಲ್ಲಿ ಈ ಕೈಂಕರ್ಯ ನೆರವೇರಿದೆ. ಶಿಲಾನ್ಯಾಸ ಕೈಂಕರ್ಯದಲ್ಲಿ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಪೂಜಾರಿ, ಮೀನುಗಾರಿಕಾ ಸಚಿವರಾದ ಮಾಂಕಾಳ ವೈದ್ಯ, ಶಿರಸಿ ಶಾಸಕ ಭೀಮಣ್ಣ ನಾಯ್ಕ ಹಾಗೂ ಅನೇಕ ಧಾರ್ಮಿಕ ಪ್ರಮುಖರು ಪಾಲ್ಗೊಂಡರು.ಇದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಪದ್ಮರಾಜ್ ಆರ್.ಪೂಜಾರಿ, ಧರ್ಮದ ನಡೆಯ ಮೂಲಕವಷ್ಟೇ ಧರ್ಮ ಉಳಿಯಬಹುದು. ಧರ್ಮ ಉಳಿದಲ್ಲಿ ಮಾತ್ರ ನಾವು ಉಳಿಯುವೆವು ಎಂದರು. ಜಾತಿಯ ವೈಷಮ್ಯ ಬಿಟ್ಟು ಎಲ್ಲರೂ ಒಂದೇ ಎಂಬುದೇ ನಿಜವಾದ ಧರ್ಮದ ಸಾರವಾಗಿದೆ ಎಂದು ಪ್ರತಿಪಾದಿಸಿದ ಅವರು, ಸಮಸ್ತ ಹಿಂದೂ ಧರ್ಮದ ...
‘ಆಪರೇಷನ್ ಸಿಂಧೂರ್’ ಹಿನ್ನೆಲೆ: ಅಮೀರ್ ಖಾನ್ ನಟನೆಯ ‘ಸೀತಾರೆ ಜಮೀನ್ ಪರ್’ ಬಿಡುಗಡೆ ಮುಂದಕ್ಕೆ

‘ಆಪರೇಷನ್ ಸಿಂಧೂರ್’ ಹಿನ್ನೆಲೆ: ಅಮೀರ್ ಖಾನ್ ನಟನೆಯ ‘ಸೀತಾರೆ ಜಮೀನ್ ಪರ್’ ಬಿಡುಗಡೆ ಮುಂದಕ್ಕೆ

ದೇಶ, ಪ್ರಮುಖ ಸುದ್ದಿ, ವಿಶೇಷ, ವೀಡಿಯೊ, ಸಿನಿಮಾ
ಮುಂಬೈ: ಅಮೀರ್ ಖಾನ್ ನಟಿಸಿರುವ ಮುಂಬರುವ ಚಿತ್ರ 'ಸೀತಾರೆ ಜಮೀನ್ ಪರ್' ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಚಿತ್ರವು ಈ ಹಿಂದೆ ಜೂನ್ 20 ರಂದು ಬಿಡುಗಡೆಯಾಗಬೇಕಿತ್ತು. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಚಿತ್ರ ತಂಡವು ಹೊಸ ಬಿಡುಗಡೆ ದಿನಾಂಕವನ್ನು ಇನ್ನೂ ನಿಗದಿಪಡಿಸಿಲ್ಲ.https://www.youtube.com/watch?v=dRyXGCzeV2E&ab_channel=SOUTHTRAILERFACTORY"ದೇಶದ ಗಡಿಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ರಾಷ್ಟ್ರವ್ಯಾಪಿ ಎಚ್ಚರಿಕೆಗೆ ಸಂಬಂಧಿಸಿದಂತೆ, ಅಮೀರ್ ಖಾನ್ ಪ್ರೊಡಕ್ಷನ್ಸ್ ತಮ್ಮ ಮುಂಬರುವ ಚಿತ್ರ 'ಸೀತಾರೆ ಜಮೀನ್ ಪರ್' ಟ್ರೇಲರ್ ಅನ್ನು ಮುಂದೂಡಲು ನಿರ್ಧರಿಸಿದೆ. ರಾಷ್ಟ್ರವನ್ನು ರಕ್ಷಿಸುವಲ್ಲಿ ದೃಢವಾಗಿ ಉಳಿಯುವ ನಮ್ಮ ಸಶಸ್ತ್ರ ಪಡೆಗಳ ಧೈರ್ಯಶಾಲಿ ಹೃದಯಗಳೊಂದಿಗೆ ನಮ್ಮ ಆಲೋಚನೆಗಳು ಇವೆ. ಜವಾಬ್ದಾರಿಯುತ ನಾಗರಿಕರಾಗಿ, ಈ ಸಮಯದಲ್ಲಿ ಏಕತೆ ಮತ್ತು ಸಂಯಮದಿಂದ ಪ್ರತಿಕ್ರಿಯಿಸುವುದು ಮುಖ್ಯ ಎಂದು ನಾವು ನಂಬುತ್ತೇವೆ" ಎಂದು ಚಿತ್...