Tuesday, January 27

ಆಧ್ಯಾತ್ಮ

ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

Focus, ಆಧ್ಯಾತ್ಮ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ ಅವರು ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿಕೆಗಳನ್ನು ತೋರಿಸಲಾಗಿದೆ. ಧರ್ಮ ಪಾಲಿಸುವವರ ಕೈಯಲ್ಲಿ ಧರ್ಮ ಇದ್ದರೆ ಮಾತ್ರ ಎಲ್ಲರಿಗೂ ಒಳಿತಾಗುತ್ತದೆ. ಅಧರ್ಮೀಯರ ಕೈಯಲ್ಲಿ ವಿಜ್ಞಾನ ಸಿಕ್ಕಿದರೆ ಅದರಿಂದ ದೊಡ್ಡ ಅನಾಹುತವಾಗುತ್ತದೆ. ಇಂದು ರೈಲು, ವಿಮಾನದ ಮೂಲಕ ವೇಗವಾಗಿ ದೂರದ ಸ್ಥಳಗಳನ್ನು ತಲುಪಬಹುದು. ಧರ್ಮ ಪಾಲನೆ ಮಾಡುವವರು ಇಂತಹ ವಿಜ್ಞಾನ-ತಂತ್ರಜ್ಞಾನದ ಸಾಧನ ಬಳಸಿದರೆ ಏನೂ ಆಗಲ್ಲ. ಅದರೆ ಅಧರ್ಮೀಯರು ಬಳಸಿದರೆ ಅಪಾಯವಾಗುತ್ತದೆ. ವಿಮಾನವನ್ನು ಬಳಸಿಯೇ ಅಮೆರಿಕದ ವರ್ಲ್ಡ್‌ ಟ್ರೇಡ್‌ ಸೆಂಟರ್‌ ಕಟ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ನಡೆಸಿದ ಸಚಿವರು, ಹೊಸದಾಗಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3  ಸದಸ್ಯರನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ. 15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ‌ ಕೆಳಕಂಡ ತೀರ್ಮಾನಗಳನ್ನು‌ ತೆಗೆದುಕೊಳ್ಳಲಾಗಿದೆ. ಮುಜರಾಯಿ ಇಲಾಖೆ ಆಯುಕ್ತರು ಈ ಸಮಿತಿಗೆ...
ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ

ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗರಾಜ್: ಹಿಂದೂಗಳ ಪವಿತ್ರ ಆಚರಣೆಯಾಗಿ ಹೆಗ್ಗುರುತಾಗಿರುವ ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ 50 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದು ಜಾಗತಿಕ ದಾಖಲೆಯಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನವರಿ 13ರಂದು ಪ್ರಾರಂಭವಾಗಿರುವ ಮಹಾಕುಂಭ ಮೇಳವು ಫೆಬ್ರವರಿ 26ರವರೆಗೆ ನಡೆಯಲಿದೆ. ಹಿಂದೂಗಳು ಪವಿತ್ರವೆಂದು ಪರಿಗಣಿಸುವ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದ ದಡದಲ್ಲಿ ಮಹಾಕುಂಭ ನಡೆಯುತ್ತಿದೆ.ಈ ಮಹಾಕುಂಭಮೇಳದ ಸಂದರ್ಭದಲ್ಲಿ ಈವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದ್ದಾರೆ....
ಅಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶ

ಅಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಅಯೋಧ್ಯೆ: ಅಯೋಧ್ಯೆಯಲ್ಲಿರುವ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶರಾಗಿದ್ದಾರೆ. ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ..  Ayodhya Ram Temple’s chief priest Acharya Satyendra Das passes away ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯುವಿಗೆ ಒಳಗಾಗಿದ್ದು ಅನಂತರ ಅವರ ಆರೋಗ್ಯ ಕ್ಷೀಣಿಸಿತ್ತೆನ್ನಲಾಗಿದೆ. 85 ವರ್ಷ ವಯಸ್ಸಿನ ಆಚಾರ್ಯ ಸತ್ಯೇಂದ್ರ ದಾಸ್ ಅವರು, 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು. ಭವ್ಯ ರಾಮ ಮಂದಿರ ನಿರ್ಮಾಣ ನಂತರವೂ ಶ್ರೀರಾಮನ ಕೈಂಕರ್ಯದಲ್ಲಿ ಮುಂಚೂಣಿಯಲ್ಲಿದ್ದರು.‌...
ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ: ರಾಮಲಿಂಗಾ ರೆಡ್ಡಿ

ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ: ರಾಮಲಿಂಗಾ ರೆಡ್ಡಿ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ ಸರ್ಕಾರವು ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ ಮಾಡಿದೆ. ಈ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸುಮಾರು ಮೂರೂವರೆ ದಶಕದಿಂದಲೂ ಮೂರು ವರ್ಷಗಳಿಗೊಮ್ಮೆ ಕುಂಭಮೇಳವನ್ನು ತಿನರಸೀಪುರದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಟಿ.ನರಸೀಪುರದ ತ್ರಿವೇಣಿ ಸಂಗಮ ದಕ್ಷಿಣಕಾಶಿಯಲ್ಲಿ ನಡೆಯುವ ಕುಂಭಮೇಳ ಭಾರತೀಯರಿಗೆ ಸನಾತನ ಸಂಸ್ಕೃತಿ ಮತ್ತು ದಿವ್ಯ ಜೀವನ ಧರ್ಮವನ್ನು ಸಾರುವ ಧಾರ್ಮಿಕ ಕಾರ್ಯಕ್ರಮವಾಗಿದೆ. ದಕ್ಷಿಣ ಭಾರತದಲ್ಲಿ ಈ‌ ಪುಣ್ಯಸ್ನಾನವನ್ನು ಪ್ರಾರಂಭಿಸಲು ಪ್ರಮುಖರಾದವರು ಆದಿಚುಂಚನಗಿರಿಯ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಕೈಲಾಸಾಶ್ರಮ ತಿರುಚ್ಚಿ ಮಹಾಸಂಸ್ಥಾನ ಮಠದ ಶ್ರೀ ಜಯೇಂದ್ರಪುರಿ ಮಹಾ ಸ್ವಾಮಿ. ದಕ್ಷಿಣ ಭಾ...
ಪ್ರಯಾಗ್ ರಾಜ್ ಮಹಾಕುಂಭ ಮೇಳ: ಈ ವರೆಗೂ 35 ಕೋಟಿ ಆಸ್ತಿಕರಿಂದ ಪುಣ್ಯ ಸ್ನಾನ

ಪ್ರಯಾಗ್ ರಾಜ್ ಮಹಾಕುಂಭ ಮೇಳ: ಈ ವರೆಗೂ 35 ಕೋಟಿ ಆಸ್ತಿಕರಿಂದ ಪುಣ್ಯ ಸ್ನಾನ

Focus, ಆಧ್ಯಾತ್ಮ, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗ್ ರಾಜ್: ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಈ ವರೆಗೂ ಸುಮಾರು 35 ಕೋಟಿ ಆಸ್ತಿಕರು ಸ್ನಾನ ಮಾಡಿದ್ದಾರೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಸ್ಥಳದಲ್ಲಿ ಕೋಟ್ಯಂತರ ಜನರು ಸಮಾಗಮವಾಗಿದ್ದು, ವಸಂತ ಪಂಚಮಿಯ ಅಮೃತ ಸ್ನಾನದ ಶುಭ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರವು ಅಂಕಿ ಅಂಶ ಬಿಡುಗಡೆ ಮಾಡಿದೆ. ಮಹಾಕುಂಭ ಪ್ರಾರಂಭವಾದಾಗಿನಿಂದ ಈವರೆಗೂ 35 ಕೋಟಿಗೂ ಅಧಿಕ ಜನರು ಸ್ನಾನ ಮಾಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಇನ್ನೂ 23 ದಿನ ಮಹಾಕುಂಭ ಮೇಳ ನಡೆಯಲಿದ್ದು, 50 ಕೋಟಿ ಅಧಿಕ ಜನರು ಸ್ನಾನ ಮಾಡುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ....
ಮಂಗಳೂರು: ಮೊಗರ್ನಾಡು ಲಕ್ಷ್ಮಿ ನರಸಿಂಹ ದೇವರಿಗೆ ನೂತನ ಬ್ರಹ್ಮ ರಥ ಸಮರ್ಪಣೆ

ಮಂಗಳೂರು: ಮೊಗರ್ನಾಡು ಲಕ್ಷ್ಮಿ ನರಸಿಂಹ ದೇವರಿಗೆ ನೂತನ ಬ್ರಹ್ಮ ರಥ ಸಮರ್ಪಣೆ

Focus, ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ
ಚಿತ್ರ: ಮಂಜು ನೀರೇಶ್ವಾಲ್ಯ.. ಮಂಗಳೂರು : ಮೊಗರ್ನಾಡು ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ ಇದರ ನೂತನ ಬ್ರಹ್ಮ ರಥೋತ್ಸವ ಸಮರ್ಪಣಾ ಕಾರ್ಯಕ್ರಮ ಶ್ರೀ ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು . ನೂತನ ಬ್ರಹ್ಮ ರಥದ ಸೇವಾದಾರರಾದ ಪಾಣೆಮಂಗಳೂರು ರಘುವೀರ್ ಭಂಡಾರ್ಕಾರ್ ಕುಟುಂಭಸ್ಥರಿಂದ ಈ ಸೇವೆ ನೆರವೇರಿದ್ದು , ಈ ಸಂದರ್ಭದಲ್ಲಿ ನೂರಾರು ಭಜಕರು ಉಪಸ್ಥಿತರಿದ್ದರು....
ಇಸ್ರೋ ಶತಕದ ಯಶೋಗಾಥೆ; ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

ಇಸ್ರೋ ಶತಕದ ಯಶೋಗಾಥೆ; ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

Focus, Update Videos, ಆಧ್ಯಾತ್ಮ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್'ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು ಬುಧವಾರ ಯಶಸ್ವಿಯಾಗಿ ನಡೆಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಬುಧವಾರ ಬೆಳಿಗ್ಗೆ 6.23ರ ಸುಮಾರಿಗೆ ಎನ್'ವಿಎಸ್-02 ಉಪಗ್ರಹ ಹೊತ್ತ ಜಿಎಸ್ಎಲ್'ವಿ ನಭಕ್ಕೆ ಜಿಗಿದಿದೆ. ಸ್ವದೇಶಿ ಜಿಪಿಎಸ್ ಯೋಜನೆಯ ಭಾಗವಾಗಿ ಎನ್'ವಿಎಸ್-02 ಉಪಗ್ರಹವನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. 1963ರ ನ.21ರಂದು ಅಮೆರಿಕಾದ ರಾಕೆಟ್ ಬಳಸಿ ಮೊದಲ ಬಾರಿಗೆ ಉಪಗ್ರಹ ಮಾಡಿದ್ದ ಇಸ್ರೋ, ಬುಧವಾರ ತನ್ನ 100ನೇ ಉಡ್ಡಯನದೊಂದಿಗೆ ಇತಿಹಾಸ ಸೃಷ್ಟಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇಸ್ರೋ, ಬಾಹ್ಯಾಕಾಶ ನ್ಯಾವಿಗೇಷನ್‌ನಲ್ಲಿ ಭಾರತ ಹೊಸ ಎತ್ತರಕ್ಕೆ ತಲುಪಿದೆ ಎಂದು ಸಂತಸ ವ್ಯಕ್ತಪಡಿಸಿದೆ....
ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನ: ‘ಚಂದ್ರ ಮಂಡಲ’ ಆಕರ್ಷಣೆ

ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನ: ‘ಚಂದ್ರ ಮಂಡಲ’ ಆಕರ್ಷಣೆ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಗಮನಸೆಳೆಯಿತು. ಭಾನುವಾರ ಕುಂಭಾಶಿಯಲ್ಲಿರುವ ವಿಶ್ವಕರ್ಮ ಕರಕುಶಲ ಕೇಂದ್ರದಲ್ಲಿ ವಿಶೇಷ ಕೈಂಕರ್ಯ ನೆರವೇರಿತು. ಶ್ರೀ ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ , ​ಸತೀಶ್ ಪ್ರಭು, ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತಿಯಲ್ಲಿ ಈ ಸೇವೆ ನೆರವೇರಿತು. 20.01.2025 ಸೋಮವಾರ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಪಾದುಕಾ ಪುರಪ್ರವೇಶ, ನೂತನ ಚಂದ್ರ ಮಂಡಲ ವಾಹನ ಪುರಪ್ರವೇಶ, ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಪುರಪ್ರವೇಶ ನಡೆಯಲಿದೆ. ಶ್ರೀ ವೀರ ವೆಂಕಟೇಶ ದೇವರ ಉತ್ಸವ ಕಾರ್ಯಕ್ರಮ ಉದ್ಧಿಶ್ಯ ನೂತನವಾಗಿ ನಿರ್ಮಿಸಲಾದ ಚಂದ್ರಮಂಡಲ ವಾಹನದ ಪುರಪ್ರವೇಶ ಕಾರ್ಯಕ್ರಮ ಜೊತೆಗೆ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಾಬ್ದಿ ಕಾರ್ಯಕ್ರಮ ಪ್ರಯುಕ್ತ ಆಯೋಜಿಸಲಾದ ಶ್ರೀ ಗುರು ಪಾದುಕಾ ಯಾತ್ರೆಯ ಪುರಪ್ರವೇಶ ಹಾಗೂ ಮಂಗಳೂರು ರಥೋತ್ಸವ ಪ್ರಯು...
ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ

ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಉತ್ತರಾಯಣ ಪರ್ವಕಾಲವನ್ನು ಸ್ವಾಗತಿಸುವ ಕೈಂಕರ್ಯ ಎಲ್ಲೆಡೆ ಸಾಗಿದೆ. ಎಲ್ಲೆಲ್ಲೂ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಅದರಲ್ಲೂ ಅಯ್ಯಪ್ಪ ದೇಗುಲಗಳಲ್ಲಿ ಮಕರ ಸಂಕ್ರಾಂತಿಯನ್ನು ವಿಶೇಷ ವೈಭವ ರೀತಿಯಲ್ಲಿ ಅಕ್ಕಿಗರಿಸಲಾಗುತ್ತಿದೆ. ಬೆಂಗಳೂರಿನ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿದ್ದು ಇಂದು ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭೀಷೇಕ, ನೆರವೇರಿದ್ದು, ದೇಗುಲಗಳು ಭಕ್ತಸಮೂಹದಿಂದ ತುಂಬಿವೆ....