Sunday, September 7

ರಾಜ್ಯ

‘ಮುಡಾ’ ವಿಷಯದಲ್ಲಿ, ಸಿದ್ದರಾಮಯ್ಯ ತಪ್ಪಿತಸ್ಥರು, ಪ್ರಮುಖ ವಿಷಯಗಳನ್ನು ಮುಚ್ಚಿತ್ತು ಕ್ಲೀನ್ ಚಿಟ್ ನೀಡಲಾಗಿದೆ: ಬಿಜೆಪಿ ಆರೋಪ

‘ಮುಡಾ’ ವಿಷಯದಲ್ಲಿ, ಸಿದ್ದರಾಮಯ್ಯ ತಪ್ಪಿತಸ್ಥರು, ಪ್ರಮುಖ ವಿಷಯಗಳನ್ನು ಮುಚ್ಚಿತ್ತು ಕ್ಲೀನ್ ಚಿಟ್ ನೀಡಲಾಗಿದೆ: ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಏಕಸದಸ್ಯ ಆಯೋಗವು ಕ್ಲೀನ್ ಚಿಟ್ ನೀಡಿದ ಬೆಳವಣಿಗೆಯನ್ನು ಬಿಜೆಪಿ ಆಕ್ಷೇಪಿಸಿದೆ. ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಹೊರಹಾಕಿದೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಕ್ಷಣೆ ಒದಗಿಸಲು ಆಯೋಗದ ವರದಿಯನ್ನು ತಿರುಚಲಾಗಿದೆ. ವಾಸ್ತವದಲ್ಲಿ ಅವರು ಶೇ. 100ರಷ್ಟು ತಪ್ಪಿತಸ್ಥರು” ಎಂದು ಆರೋಪಿಸಿದರು. “60 ಕೋಟಿ ರೂ. ಪಾವತಿಸಿದರೆ ನಿವೇಶನಗಳನ್ನು ಹಿಂತಿರುಗಿಸಲಾಗುತ್ತದೆ ಎಂದು ಸಿಎಂ ಸ್ವತಃ ಹೇಳಿದ್ದರು. ನಂತರ ಅವರು ಮಾತು ತಪ್ಪಿದರು. ಕ್ಲೀನ್ ಚಿಟ್‌ನಲ್ಲಿ ಹಲವು ಅಂಶಗಳನ್ನು ಮುಚ್ಚಿಡಲಾಗಿದೆ. ಇದು ಭ್ರಷ್ಟಾಚಾರದ ಉದಾಹರಣೆ” ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆಯ ನಿರ್ಧಾರವನ್ನು ಟೀಕಿಸಿದ ಅವರು, “ಇವಿಎಂ ಬಿಟ್ಟು ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸುವುದು ರಾಜ್ಯವನ್ನು ಹಿಂದ...
ಸ್ಥಳೀಯ ಚುನಾವಣೆ: ಮತಪತ್ರ ಬಳಕೆಯ ನಿರ್ಧಾರಕ್ಕೆ ಬಿಜೆಪಿಯ ವಿರೋಧ ಏಕೆ? ಡಿಕೆಶಿ ಪ್ರಶ್ನೆ

ಸ್ಥಳೀಯ ಚುನಾವಣೆ: ಮತಪತ್ರ ಬಳಕೆಯ ನಿರ್ಧಾರಕ್ಕೆ ಬಿಜೆಪಿಯ ವಿರೋಧ ಏಕೆ? ಡಿಕೆಶಿ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂ ಬದಲಿಗೆ ಮತಪತ್ರಗಳ ಮೂಲಕ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ನಿಲುವನ್ನು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸರ್ಕಾರದ ನಿರ್ಧಾರ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ಕಾನೂನಿನಲ್ಲಿ ಸ್ಪಷ್ಟವಾಗಿಯೇ — ಇವಿಎಂ ಅಥವಾ ಮತಪತ್ರ ಬಳಸಬಹುದು ಎಂದು ಹೇಳಿದೆ. ಆ ಕಾನೂನು ತಂದದ್ದು ಬಿಜೆಪಿ ಸರ್ಕಾರವೇ. ಹೀಗಿರುವಾಗ ಏಕೆ ಅಸಮಾಧಾನ? ಎಂದು ಪ್ರಶ್ನಿಸಿದರು. ರೈತ ಭೂಸ್ವಾಧೀನ ಪ್ರತಿಭಟನೆ, ತಮ್ಮ ವಿರುದ್ಧ ಹಾಗೂ ಸಹೋದ್ಯೋಗಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ಹಿಂಪಡೆಯುವ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಅನೇಕ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ. ರಾಜಕೀಯ ಒತ್ತಡದಿಂದ ಬಿಜೆಪಿ ಸರ್ಕಾರವೇ ಹಲವಾರು ಪ್ರಕರಣಗಳನ್ನು ದಾಖಲಿಸಿತ್ತು. ಭಾಷೆ, ನೀರಿನ ಹಕ್ಕು, ರೈತರ ಹೋರಾಟವನ್ನು ನ...
ಸಿದ್ದು ಸರ್ಕಾರದಲ್ಲಿ ಕಮೀಷನ್ ತಲ್ಲಣ; ಭೋವಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ

ಸಿದ್ದು ಸರ್ಕಾರದಲ್ಲಿ ಕಮೀಷನ್ ತಲ್ಲಣ; ಭೋವಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪದ ನಡುವೆಯೇ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರೆಂಬ ಸುದ್ದಿ ಕುತೂಹಲ ಕೆರಳಿಸಿದೆ. ಕಮಿಷನ್ ವಸೂಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರಿಂದ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. ಸುಮಾರು ₹15 ಕೋಟಿ ವೆಚ್ಚದಲ್ಲಿ ಜಾರಿಗೊಂಡ ಭೂಒಡೆತನ ಯೋಜನೆಯಡಿ 60 ಎಕರೆ ಭೂಮಿ ಖರೀದಿ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿ, ಶೇಕಡ 60ರಷ್ಟು ಕಮಿಷನ್ ವಸೂಲಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಹೊರಬಿದ್ದಿತ್ತು. ಈ ಸಂಬಂಧಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಷಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದರೆ, ರವಿಕುಮಾರ್ ಅವರು ಆರೋಪಗಳನ್ನು ತಳ್ಳಿಹಾಕಿದ್ದರು. ಆದಾಗ್ಯೂ ಪಕ್ಷಕ್ಕೆ ಮುಜುಗರ ಉಂಟಾಗದಂತೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳ...
ಮೆಟ್ರೋ ಪ್ರಯಾಣ ದುಬಾರಿ: ತೇಜಸ್ವಿ ಸೂರ್ಯ ಆಕ್ಷೇಪ

ಮೆಟ್ರೋ ಪ್ರಯಾಣ ದುಬಾರಿ: ತೇಜಸ್ವಿ ಸೂರ್ಯ ಆಕ್ಷೇಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
<p data-start="203" data-end="309">ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಪ್ರಯಾಣ ದರ ಏರಿಕೆಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರವಾಗಿ ಆಕ್ಷೇಪಿಸಿದ್ದಾರೆ.</p> <p data-start="311" data-end="552">ನಗರದ ಮೆಟ್ರೋದಲ್ಲಿ ದಿನವೂ ಸರಾಸರಿ 10 ಲಕ್ಷ ಜನರು – ವಿದ್ಯಾರ್ಥಿಗಳು, ಸಾಮಾನ್ಯ ಉದ್ಯೋಗಿಗಳು, ಐಟಿ-ಬಿಟಿ ವಲಯದವರು – ಪ್ರಯಾಣಿಸುತ್ತಾರೆ. ಆದರೆ ಇತ್ತೀಚಿನ ದರ ಏರಿಕೆಯಿಂದ ಸಾಮಾನ್ಯ ಬಳಕೆದಾರರಿಗೆ ಮೆಟ್ರೋ ದುಬಾರಿಯಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p> <p data-start="554" data-end="748">“ದರ ಏರಿಕೆಯಿಂದ ಬೆಂಗಳೂರು ಮೆಟ್ರೋ ದೇಶದಲ್ಲೇ ಅತಿ ದುಬಾರಿ ಮೆಟ್ರೋ ಆಗಿದೆ. ಡೆಲ್ಲಿ ಮೆಟ್ರೋ ದರ ಏರಿಕೆ ಗರಿಷ್ಠ ₹4ಕ್ಕೆ ಮಿತವಾಗಿದ್ದರೆ, ಬೆಂಗಳೂರಿನಲ್ಲಿ ಪ್ರತಿ ಪ್ರಯಾಣಕ್ಕೂ ಅತಿಯಾದ ಭಾರವಾಗಿದೆ” ಎಂದು ಅವರು ಹೋಲಿಕೆ ಮಾಡಿದ್ದಾರೆ.</p> <p data-start="750" data-end="980">25 ಕಿ.ಮೀ. ಗಿಂತ ಹೆಚ್ಚು ದೂರ ಕೆಲಸಕ್ಕೆ ಪ್ರಯಾಣಿಸುವವರು ಪ್ರತಿ ಸಾರಿ ₹90 ಪ...
33 ಕ್ಯಾನ್ಸರ್, ಅಪರೂಪದ ಕಾಯಿಲೆ ಔಷಧಿಗಳಿಗೆ ಜಿಎಸ್‌ಟಿ ವಿನಾಯಿತಿ – ಜೀವ ರಕ್ಷಕ ಔಷಧಿಗಳ ಬೆಲೆ ಇಳಿಕೆ

33 ಕ್ಯಾನ್ಸರ್, ಅಪರೂಪದ ಕಾಯಿಲೆ ಔಷಧಿಗಳಿಗೆ ಜಿಎಸ್‌ಟಿ ವಿನಾಯಿತಿ – ಜೀವ ರಕ್ಷಕ ಔಷಧಿಗಳ ಬೆಲೆ ಇಳಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಜೀವ ರಕ್ಷಕ ಔಷಧಿಗಳನ್ನು ಸಾಮಾನ್ಯ ಜನತೆಗೆ ಇನ್ನಷ್ಟು ಕೈಗೆಟುಕುವಂತೆ ಮಾಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ, 33 ಕ್ಯಾನ್ಸರ್ ಹಾಗೂ ಅಪರೂಪದ ಕಾಯಿಲೆಗಳಿಗೆ ಬಳಸುವ ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 12ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಜೀವ ಉಳಿಸುವ ಔಷಧಿಗಳಿಗೆ ಶೂನ್ಯ ತೆರಿಗೆ ಕ್ಯಾನ್ಸರ್, ಅಪರೂಪದ ಕಾಯಿಲೆಗಳು ಹಾಗೂ ಇತರ ಗಂಭೀರ ದೀರ್ಘಕಾಲದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳು ಜಿಎಸ್‌ಟಿ ವಿನಾಯಿತಿಗೆ ಒಳಪಡಲಿವೆ. ಹಲವಾರು ಔಷಧಿಗಳು ಶೇಕಡಾ 12ರಿಂದ 5ಕ್ಕೆ ಇಳಿಯುತ್ತವೆ. ದೃಷ್ಟಿ ಸರಿಪಡಿಸುವ ಕನ್ನಡಕ, ಫ್ರೇಮ್‌ಗಳು ಶೇಕಡಾ 28ರಿಂದ 5ಕ್ಕೆ ಇಳಿಯುತ್ತವೆ. ಆರೋಗ್ಯ ಸೇವೆಗೂ ರಿಲೀಫ್ ವೈಯಕ್ತಿಕ ಆರೋಗ್ಯ ಹಾಗೂ ಜೀವ ವಿಮೆ ಪ್ರೀಮಿಯಂಗಳ ಮೇಲಿನ ಜಿಎಸ್‌ಟಿ (18%) ಶೂನ್ಯಕ್ಕೆ ಇಳಿಕೆ. ವೈದ್ಯಕೀಯ ಆಮ್ಲಜನಕ, ರೋಗನಿರ್ಣಯ ಕಿಟ್‌ಗಳು, ಶಸ್ತ್ರಚಿಕಿತ್ಸಾ ಮತ್ತು ಪಶುವೈದ್ಯಕೀಯ ಉಪಕರಣಗಳ ತೆರಿಗೆ ಶೇಕಡಾ 18ರಿಂದ 5...
ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಂದಣಿ ಪ್ರಕ್ರಿಯೆ ಇನ್ನಷ್ಟು ಸರಳ

ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಂದಣಿ ಪ್ರಕ್ರಿಯೆ ಇನ್ನಷ್ಟು ಸರಳ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಸಣ್ಣ ಹಾಗೂ ಕಡಿಮೆ ಅಪಾಯದ ವ್ಯವಹಾರಗಳಿಗೆ ಜಿಎಸ್‌ಟಿ ನೋಂದಣಿ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಇನ್ನಷ್ಟು ಸುಲಭಗೊಳಿಸಿದೆ. ವ್ಯಾಪಾರ ಮಾಡುವ ಸುಲಭ ಸುಧಾರಣೆಗಳ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬುಧವಾರ ಸರ್ಕಾರ ತಿಳಿಸಿದೆ. ಹೊಸ ವ್ಯವಸ್ಥೆಯಡಿ, ಅರ್ಹ ಅರ್ಜಿದಾರರಿಗೆ ಕೇವಲ ಮೂರು ಕೆಲಸದ ದಿನಗಳಲ್ಲಿ ನೋಂದಣಿ ಲಭ್ಯವಾಗಲಿದೆ. ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಅಧ್ಯಕ್ಷ ಸಂಜಯ್ ಕುಮಾರ್ ಅಗರ್ವಾಲ್ ಹೇಳುವಂತೆ, ₹2.5 ಲಕ್ಷಕ್ಕಿಂತ ಹೆಚ್ಚು ಇನ್‌ಪುಟ್ ತೆರಿಗೆ ಕ್ರೆಡಿಟ್ ಪಡೆಯದ ಸಣ್ಣ ವ್ಯವಹಾರಗಳು ಈ ಸರಳೀಕೃತ ನೋಂದಣಿಯನ್ನು ಆಯ್ಕೆ ಮಾಡಬಹುದು. ಮುಂದಿನ ದಿನಗಳಲ್ಲಿ ಅವರು ವಿಸ್ತಾರಗೊಂಡು ಸಾಮಾನ್ಯ ನೋಂದಣಿಗೆ ಬಯಸಿದರೆ, ಅಪಾಯ ಮೌಲ್ಯಮಾಪನದ ಆಧಾರದ ಮೇಲೆ ಸಾಮಾನ್ಯ ವರ್ಗಕ್ಕೆ ಪರಿವರ್ತಿಸಬಹುದಾಗಿದೆ. ಮರುಪಾವತಿ ಪ್ರಕ್ರಿಯೆಗೂ ಸುಧಾರಣೆ ಮರುಪಾವತಿಗೆ ಸಂಬಂಧಿಸಿದಂತೆ ಈಗಿರುವ ವ್ಯವಸ್ಥೆಯಲ್ಲಿ ತಿದ್ದುಪಡಿ ಮಾಡಲು ಜಿಎಸ್‌ಟಿ ಕೌನ್ಸಿಲ್ ಶಿಫಾರಸು ಮಾಡಿದೆ. ತಾತ್ಕಾಲಿಕ ಆಧಾರದ ಮೇಲೆ 90% ಮೊತ್ತವನ್ನು ಏಳು ದಿನಗಳಲ್ಲಿ ...
ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ

ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಅಭಿಮಾನಿಗಳಿಗೆ ಖುಷಿಯ ಸುದ್ದಿ. ಈಗಾಗಲೇ 11 ಸೀಸನ್‌ಗಳನ್ನು ಯಶಸ್ವಿಯಾಗಿ ಮುಗಿಸಿರುವ ಈ ಶೋ, ಶೀಘ್ರದಲ್ಲೇ 12ನೇ ಸೀಸನ್ ಪ್ರೇಕ್ಷಕರ ಮುಂದೆ ಬರಲಿದೆ. ಸೆಪ್ಟೆಂಬರ್ 28, ಭಾನುವಾರದಂದು ಗ್ರ್ಯಾಂಡ್ ಓಪನಿಂಗ್ ನಡೆಯಲಿದ್ದು, ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವ ಸ್ಪರ್ಧಿಗಳು ಯಾರು ಎಂಬ ಕುತೂಹಲ ಉಂಟಾಗಿದೆ. View this post on Instagram A post shared by Colors Kannada Official (@colorskannadaofficial) ಕಿಚ್ಚ ಸುದೀಪ್ ಅವರು ನಿರೂಪಣೆಗೆ ಸಜ್ಜಾಗಿದ್ದು, ಶೋವನ್ನು ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಪ್ರೋಮೋದಲ್ಲಿ – “ರಿಯಾಲಿಟಿ ಶೋಗಳ ಬಾಸ್, ರಿಯಲ್ ಎಂಟರ್‌ಟೈನ್‌ಮೆಂಟ್‌ಗೆ ಒಂದೇ ಅಡ್ರೆಸ್. ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 28ಕ್ಕೆ” ಎಂದು ಘೋಷಿಸಲಾಗಿದೆ. ಅದರಲ್ಲೇ ಸುದೀಪ್ ಅವರು “ನನ್ನ...
ಗ್ರೇಟರ್ ಬೆಂಗಳೂರು ಅಥಾರಿಟಿ; ಐದು ಪಾಲಿಕೆಗಳ ವ್ಯಾಪ್ತಿಗಳಿಗೆ ವಿಧಾನಸಭಾ ಕ್ಷೇತ್ರಗಳ ಹಂಚಿಕೆ

ಗ್ರೇಟರ್ ಬೆಂಗಳೂರು ಅಥಾರಿಟಿ; ಐದು ಪಾಲಿಕೆಗಳ ವ್ಯಾಪ್ತಿಗಳಿಗೆ ವಿಧಾನಸಭಾ ಕ್ಷೇತ್ರಗಳ ಹಂಚಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಜಧಾನಿ ಬೆಂಗಳೂರಿನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಜಾರಿಯಾಗಿದೆ. ರಾಜ್ಯ ಸರ್ಕಾರ ಬುಧವಾರದಿಂದಲೇ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಜಾರಿಗೆ ಬರುವಂತೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ಇನ್ನು ಮುಂದೆ ಬಿಬಿಎಂಪಿ ಬದಲು ಜಿಬಿಎ ನಗರದ ಆಡಳಿತವನ್ನು ನೋಡಿಕೊಳ್ಳಲಿದೆ. ಜಿಬಿಎ ಅಡಿಯಲ್ಲಿ . ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ಹೆಸರುಗಳಲ್ಲಿ ಐದು ಹೊಸ ನಗರ ಪಾಲಿಕೆಗಳು ಕಾರ್ಯನಿರ್ವಹಿಸಲಿವೆ. ಪ್ರಸ್ತುತ ಬಿಬಿಎಂಪಿಯ 198 ವಾರ್ಡ್‌ಗಳನ್ನು ಈ ಐದು ಪಾಲಿಕೆಗಳ ನಡುವೆ ಹಂಚಿಕೆ ಮಾಡಲಾಗಿದೆ. ಪ್ರತಿಯೊಂದು ಪಾಲಿಕೆಗೆ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ರಚಿಸಲಾಗಿದೆ. 'ಜಿಬಿಎ'ಗೆ ಸಿಎಂ ಸಿದ್ದರಾಮಯ್ಯ ಜಿಬಿಎ ಅಧ್ಯಕ್ಷರಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬೆಂಗಳೂರಿನ ಮೂವರು ಸಂಸದರು, ಹಾಗೂ ನಗರದ ಶಾಸಕರನ್ನು ಒಳಗೊಂಡಂತೆ 73 ಪದನಿಮಿತ್ತ ಸದಸ್ಯರನ್ನು ನೇಮಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು: ಬೆಂಗಳೂರು ಕೇಂದ್ರ ನಗರ ಪಾಲಿಕೆ: ಸಿವಿರಾಮನ್‌ನಗರ...
ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ

ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ನೀಡಬೇಕು: ಚಿತ್ರರಂಗದ ಮನವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಉನ್ನತ ಗೌರವ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಚಿತ್ರೋದ್ಯಮದ ಗಣ್ಯರು ಒತ್ತಾಯಿಸಿದ್ದಾರೆ. ಮಂಗಳವಾರ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಅಲ್ಲದೇ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರ ಹೆಸರನ್ನು, ಅವರು ವಾಸಿಸುತ್ತಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆ ಕೂಡ ಮನವಿ ಮಾಡಲಾಯಿತು. ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ… pic.twitter.com/n6sLjmSm0Z— Siddaramaiah (@siddaramaiah) September 2, 2025...
ಮುಡಿಪು ಬಳಿ ಬ್ರಹ್ಮಶ್ರೀ ನಿಲಯ ಉದ್ಘಾಟನೆ; ಆಮಂತ್ರಣ ಪತ್ರಿಕೆ ಬಿಡುಗಡೆ

ಮುಡಿಪು ಬಳಿ ಬ್ರಹ್ಮಶ್ರೀ ನಿಲಯ ಉದ್ಘಾಟನೆ; ಆಮಂತ್ರಣ ಪತ್ರಿಕೆ ಬಿಡುಗಡೆ

Focus, ಬೆಂಗಳೂರು, ರಾಜ್ಯ
ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮುಡಿಪು ವಲಯ ವತಿಯಿಂದ ಅಕ್ಟೊಬರ್ 12, ಭಾನುವಾರದಂದು ನಡೆಯಲಿರುವ ಬ್ರಹ್ಮಶ್ರೀ ನಿಲಯ ಉದ್ಘಾಟನೆ ಹಿನ್ನೆಲೆಯಲ್ಲಿ, ಪ್ರತಿಭಾವಂತ ಸಾಧಕರಿಗೆ ಸನ್ಮಾನ, ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್ 31 ರಂದು ಬಿಡುಗಡೆ ಮಾಡಲಾಯಿತು. ಮಂಗಳೂರು ಸಮೀಪದ ಹೂ ಹಾಕುವ ಕಲ್ಲು ಸನ್ನಿಧಿಯಲ್ಲಿ ಸಮಾರಂಭ ನೆರವೇರಿತು. ಸುಮಾರು 13 ವರ್ಷಗಳಿಂದ ಟಾರ್ಪಲ್ ಇನ್ ಹೊದಿಕೆಯ ಮನೆಯಲ್ಲಿ ಜೀವನ ನಡೆಸುತ್ತಿದ್ದ ಕಡುಕುಟುಂಬದ ಸಂಸಾರಕ್ಕೆ ಬಿಲ್ಲವ ವೇದಿಕೆ ಒಂದು ಸುಸಜ್ಜಿತ ಮನೆಯನ್ನು ನಿರ್ಮಾಣ ಮಾಡಿ ಕೊಟ್ಟಿತ್ತು. ಈ ಮನೆಯ ಹಸ್ತಾಂತರ ಕಾರ್ಯಕ್ರಮ ಕೂಡಾ12.10.2025 ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದಂತಹ ಬಿಕೆ ಹರಿಪ್ರಸಾದ್, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶಾಸಕರಾದ ಸುನಿಲ್ ಕುಮಾರ್ ಕಾರ್ಕಳ ಹಾಗೂ ವಿಧಾನಸಭಾಧ್ಯಕ್ಷ ಯುಟಿ ಖಾದರ್, ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷ ಜಯ ರಾಜ ಕುದ್ರೋಳಿ, ಕೋಶಾಧಿಕಾರಿ ಪದ್ಮರಾಜ್ ಆರ್., ಬಿಜೆಪಿಯ ಜಿಲ್ಲ...